Homeಕರ್ನಾಟಕಹೆಬ್ಬಾರ್ ಹಿಕಮತ್ತಿನ ಹಕೀಕತ್!!

ಹೆಬ್ಬಾರ್ ಹಿಕಮತ್ತಿನ ಹಕೀಕತ್!!

- Advertisement -
- Advertisement -

| ನಹುಷ |

ಉತ್ತರ ಕನ್ನಡದ ರಾಜಕಾರಣದ ರಂಗು ಬದಲಾಗುತ್ತಿದೆ. ಕಾರಣವಿಷ್ಟೆ ಆಪರೇಷನ್ ಕಮಲಕ್ಕೆ ಬಿಕರಿಗೊಂಡು ರಾಜೀನಾಮೆ ಕೊಟ್ಟಿರುವ ಯಲ್ಲಾಪುರ-ಮುಂಡಗೋಡ ಶಾಸಕ ಶಿವರಾಮ ಹೆಬ್ಬಾರ್ ಒಬ್ಬರೇ ಅಲ್ಲದೆ ಮಿನಿಸ್ಟರ್ ಆರ್.ವಿ.ದೇಶ್‍ಪಾಂಡೆಯೂ ಬಿಜೆಪಿ ಸೆಳೆತಕ್ಕೆ ಸಿಲುಕಿದ್ದಾರೆಂಬ ಸುದ್ದಿ ದೊಡ್ಡ ಚರ್ಚೆಗೀಡಾಗಿ ಹೋಗಿದೆ. ಮಜಾ ಎಂದರೆ, ಕಾಂಗ್ರೆಸಲ್ಲಿದ್ದರೆ ತನ್ನ ಆಸೆಗೆಲ್ಲ ದೇಶಪಾಂಡೆ ಕಲ್ಲು ಹಾಕುತ್ತಾರೆಂಬ ಸಿಟ್ಟಿಂದ ಬಿಜೆಪಿ ಪಾಳೆಯಕ್ಕೆ ಎಂಟ್ರಿ ಹೊಡೆದಿದ್ದ ಹೆಬ್ಬಾರ್ ಅದೇ ಹಿತಶತ್ರು ದೇಶಪಾಂಡೆ ತನ್ನ ಬೆನ್ನಟ್ಟಿ ಬರುತ್ತಿರುವುದು ಕೇಳಿ ಬೆಚ್ಚಿಬಿದ್ದಿದ್ದಾರೆ!!

ಕಾಂಗ್ರೆಸ್‍ನಿಂದಲೇ ಸ್ಪರ್ಧಿಸಿ ಏದುಸಿರು ಬಿಡುತ್ತಲೇ ಗೆಲ್ಲುತ್ತಿದ್ದಂತೆಯೇ ಹೆಬ್ಬಾರ್, ದೇಶಪಾಂಡೆಗೆ ಸೆಡ್ಡು ಹೊಡೆದು ಮಂತ್ರಿಗಿರಿಗೆ ಲಾಬಿ ಮಾಡಿದರು. ಮತ್ತೊಂದೆಡೆ ಬಿಜೆಪಿಯವರಿಂದ ಆಪರೇಷನ್ ಮಾಡಿಸಿಕೊಳ್ಳಲು ಪ್ರಯತ್ನಿಸಿದರು. ಯಡ್ಡಿ ಮಗ ಹೆಬ್ಬಾರ್ ಹೆಂಡತಿಯೊಂದಿಗೆ ಲೇವಾದೇವಿ ವ್ಯವಹಾರಕ್ಕಿಳಿದ ಆಡಿಯೋ ಕೂಡ ಆಗ ಹೊರಬಂದಿತ್ತು. ಹೆಬ್ಬಾರ್ ಪರಿವಾರ ಮಾನ ಹರಾಜಾದರೂ ಇದೇ ಸಾಹಸ ಎಂಬಂತೆ ಬೀಗಿದರು. ಮಂತ್ರಿಗಿರಿಗಾಗಿ ಕಾಂಗ್ರೆಸ್ ಹೈಕಮಾಂಡನ್ನು ಬ್ಲಾಕ್‍ಮೇಲ್ ಮಾಡುತ್ತಲೇ ಇದ್ದರು. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಉಪಾಧ್ಯಕ್ಷತೆ ಕೊಟ್ಟರೂ ಬೇಡವೆನ್ನಲಿಲ್ಲ ಈ ಆಸೆಬುರುಕ!!

ಕೇವಲ ಒಂದು ಸಾವಿರದ ನಾಲ್ಕುನೂರು ಮತಗಳಂತರದಿಂದ ಬಚಾವಾಗಿರುವ ಹೆಬ್ಬಾರ್‍ಗೆ ಮತ್ತೆ ಅದೇ ಕಾಂಗ್ರೆಸ್‍ನಿಂದ ಗೆಲ್ಲುತ್ತೇನೆಂಬ ಧೈರ್ಯ ಉಳಿದಿಲ್ಲ. ಎಲ್ಲಕ್ಕಿಂತ ಹೆಚ್ಚಾಗಿ ಬಳ್ಳಾರಿಯ ಕಬ್ಬಿಣದ ಅದಿರು ಕದ್ದು ವಿದೇಶಕ್ಕೆ ರಪ್ತು ಮಾಡಿದ ಕೇಸಲ್ಲಿ ಸಿಬಿಐ ವಿಚಾರಣೆ ಎದುರಿಸುತ್ತಿರುವ ಹೆಬ್ಬಾರ್ ಹಾಗೂ ಆತನ ಕುಲೋದ್ಧಾರಕ ವಿವೇಕ್ ಹೆಬ್ಬಾರ್ ಆ ಕುಣಿಕೆಯಿಂದ ಪಾರಾಗಲು ಬಲಾಢ್ಯ ಬಿಜೆಪಿ ಸೇರುವುದು ಅನಿವಾರ್ಯವಾಗಿದೆ. ಒಂದು ಕಾಲದಲ್ಲಿ ಪ್ರಾಥಮಿಕ ಶಿಕ್ಷಣವೂ ಮುಗಿಸಲಾಗದೆ ಲಾರಿ ಡ್ರೈವರಿಕೆ ಮಾಡಿಕೊಂಡಿದ್ದ ಹೆಬ್ಬಾರ್ ಇವತ್ತು ಕೋಟಿ-ಕೋಟಿ ತೂಗುವ ಅದಿರು ಉದ್ಯಮಿಯಾಗಿ, ರಾಜ್ಯ ಸರ್ಕಾರವನ್ನೇ ಉರುಳಿಸುವ ಪ್ರಭಲ ಶಾಸಕ ಸಾಹೇಬನಾಗಿ ಬೆಳೆದಿರುವುದು ಪ್ರಜಾಪ್ರಭುತ್ವದ ದುರಂತವೇ ಸರಿ!

ಹೆಬ್ಬಾರ್‍ಗೆ ಬಿಜೆಪಿ “ಸಂಸ್ಕೃತಿ” ಹೊಸತೇನೂ ಅಲ್ಲ. 1990ರ ದಶಕದ ಅಂತ್ಯದಲ್ಲಿ ಆತ ಜಿಲ್ಲಾ ಬಿಜೆಪಿ ಅಧ್ಯಕ್ಷತೆ ನಿಭಾಯಿಸಿದ್ದ. ಆದರೆ ಬಿಜೆಪಿಯಲ್ಲಿ ಆತನಿಗೆ ಕಾಗೇರಿ ಮಾಣಿ, ಅನಂತ್ಮಾಣಿ ಜತೆ ಏಗಲಾಗಲಿಲ್ಲ. ಸಂಸದ ಅನಂತ್ಮಾಣಿ ಶಿರಸಿಯಲ್ಲಿರುವ ಜಿಲ್ಲಾ ಬಿಜೆಪಿ ಕಚೇರಿಯಲ್ಲೇ ಈ ಹೆಬ್ಬಾರ್‍ಗೆ ಅಂದು ಕೆನ್‍ಕೆನ್ನೆಗೆ ಬಾರಿಸಿದ್ದ. ತಾನು ಬಿಜೆಪಿಯಲ್ಲಿನ್ನೂ ಬಚಾವಾಗಲಾರೆನೆಂದು ಅರಿತ ಹೆಬ್ಬಾರ್ ಕಾಂಗ್ರೆಸ್‍ನ ಪವರ್‍ಫುಲ್ ನಾಯಕಿಯಾಗಿದ್ದ ಮ್ಯಾಗಿಯ ಸೆರಗು ಹಿಡಿದು ಕಾಂಗ್ರೆಸ್‍ಗೆ ನುಸುಳಿದ್ದ. ಬಂದವನೇ ಡಬಲ್‍ಗೇಮ್ ಶುರುಹಚ್ಚಿಕೊಂಡಿದ್ದ. ಹಗಲು ಮ್ಯಾಗಿ ಬಿಡಾರದಲ್ಲಿದ್ದರೆ ರಾತ್ರಿ ದೇಶ್‍ಪಾಂಡೆ ಕ್ಯಾಂಪಿನಲ್ಲಿ ಕಾಣಿಸುತ್ತಿದ್ದ. ಇದರಿಂದ ಕೆರಳಿದ ದೇಶಪಾಂಡೆ ಆತನ ಬಾಲ ಕಟ್ ಮಾಡಲು ಮುಂದಾದರು. ಮ್ಯಾಗಿ ಕಾಂಗ್ರೆಸಲ್ಲಿ ಕಾವು ಕಳಕೊಳ್ಳುತ್ತಿದ್ದಂತೆಯೇ ಹೆಬ್ಬಾರ್ ದೇಶಪಾಂಡೆಗೆ ಆಹಾರವಾಗಿ ಹೋದ!!
ಕಳೆದ ಅಸೆಂಬ್ಲಿ ಇಲೆಕ್ಷನ್‍ನಲ್ಲಿ ಹೆಬ್ಬಾರ್ ಎದುರು ಬಿಜೆಪಿಯಿಂದ ಸ್ಪರ್ಧಿಸಿದ್ದ ವಿ.ಎಸ್.ಪಾಟೀಲ್ ತಲೆ ಕಂಡರೆ ಸಂಸದ ಮಾಣಿಗೆ ಆಗದು. ಹಾಗಾಗಿ ಆತ ಹಳೆ ವೈರತ್ವ ಮರೆತು ಸ್ವ-ಜಾತಿಯ ಹೆಬ್ಬಾರ್‍ಗೆ ಸಹಕರಿಸಿದ್ದ. ಈ ಹವ್ಯಕ ಹಿತಾಸಕ್ತಿಯ ರಾಜಕಾರಣದಲ್ಲಿ ಸ್ವರ್ಣವಲ್ಲಿ ಸ್ವಾಮಿಯ “ಮಂತ್ರಾಕ್ಷತೆ”ಯೂ ಕೆಲಸ ಮಾಡಿತ್ತು.

ರಾಮಕೃಷ್ಣ ಹೆಗಡೆ ಕಾಲದಿಂದ ನಿರಂತರವಾಗಿ ಒಂದಿಲ್ಲೊಂದು ಅಧಿಕಾರ ಅನುಭವಿಸುತ್ತಿರುವ ದೇಶಪಾಂಡೆ ಈಗ ಹಣ್ಣಾಗಿದ್ದಾರೆ. ಈ ಮುದಿ ಕಾಲದಲ್ಲಿ ಎರಡು ಆಸೆ ಆತನಲ್ಲಿದೆ. ಒಂದು ತಾನು ಮುಖ್ಯಮಂತ್ರಿ ಆಗಬೇಕೆಂಬುದು. ಮತ್ತೊಂದು, ತನ್ನ ಸುಪುತ್ರ ಪ್ರಶಾಂತನನ್ನು ಎಂಪಿ ಅಥವಾ ಎಮ್ಮೆಲ್ಲೆ ಮಾಡಬೇಕೆಂಬುದು. ಬಿಜೆಪಿ ಸೇರಿದರೆ ಸಿಎಂ ಆಗುವುದು ಕಷ್ಟ. ಹಾಗೆಯೇ ಕಾಂಗ್ರೆಸಲ್ಲುಳಿದರೆ ಮಗನ ಭವಿಷ್ಯಕ್ಕೆ ಮಾರಕ. ಹೀಗಾಗಿ ದೇಶಪಾಂಡೆ ಎರಡು ದೋಣಿಯ ಮೇಲೆ ಕಾಲಿಟ್ಟು ಹೊಯ್ದಾಡುತ್ತಿದ್ದಾರೆ. ಈಗೀಗ ಕಾಂಗ್ರೆಸಲ್ಲೂ ದೇಶಪಾಂಡೆಗೆ ಅಂಥ ಪ್ರಾಮುಖ್ಯತೆ ಸಿಗುತ್ತಿಲ್ಲ. ಆದರೂ ತಾನೇನಾದರೂ ರಾಜಿ ಅಭ್ಯರ್ಥಿಯಾಗಿ ಸಮ್ಮಿಶ್ರದ ಸಿಎಂ ಆಗಬಹುದೆಂಬ ಯೋಚನೆಯಿಂದ ದೇಶಪಾಂಡೆ ಗಡಿಬಿಡಿಗೆ ಬಿದ್ದಿದ್ದಾರೆ. ದೇವೇಗೌಡರ ಮನೆಗೆ ಹೋಗಿ ಗಂಟೆಗಟ್ಟಲೆ ಮಾತಾಡುತ್ತಿದ್ದಾರೆ. ಅತ್ತ ಕಾಂಗ್ರೆಸ್ ಹೈಕಮಾಂಡ್‍ಗೆ ತನ್ನನ್ನು ಸಿಎಂ ಕ್ಯಾಂಡಿಡೇಟ್ ಮಾಡಿದರೆ ಓಡಿಹೋಗಿರುವ ಶಾಸಕರಲ್ಲಿ ಕೆಲವರನ್ನಾದರೂ ಖರೀದಿಸಿ ತರುತ್ತೇನೆಂದು ಭರವಸೆ ಕೊಡುತ್ತಿದ್ದಾರೆ.
ಈ ನೈಚ್ಯಾನುಸಂಧಾನದಲ್ಲಿ ಸೋತರೆ ದೇಶಪಾಂಡೆಗೆ ಮಗನ ಭವಿಷ್ಯ ಮುಖ್ಯವಾಗುತ್ತಿದೆ. ಅಂದರೆ ಆತ ಬಿಜೆಪಿ ಪಾಲಾಗುವುದು ಪಕ್ಕಾ. ಅಮಿತ್ ಶಾ ಈಚೆಗೆ ಗೋವಾಕ್ಕೆ ಬಂದಾಗ ದೇಶಪಾಂಡೆ ರಹಸ್ಯವಾಗಿ ಸಂಧಿಸಿ ಬಂದಿದ್ದಾರೆ. ಸಮ್ಮಿಶ್ರ ಸರ್ಕಾರ ಪತನವಾಗುತ್ತಲೇ ಆತ ಬಿಜೆಪಿಗೆ ಅಧಿಕೃತವಾಗಿ ಪ್ರವೇಶ ಪಡೆಯುತ್ತಾರೆ. ಯಾವ ಪಕ್ಷ ಅಧಿಕಾರಕ್ಕೆ ಬಂದರೂ ಮಂತ್ರಿಯಾಗುವ ಯೋಗದ ದೇಶಪಾಂಡೆ ಈ ಬಾರಿ ಬಿಜೆಪಿಯಲ್ಲಿ ಮಂತ್ರಿಗಿರಿ ಕೇಳುತ್ತಿಲ್ಲ. ಬದಲಿಗೆ ತನ್ನ ಮಗ ಪ್ರಶಾಂತನಿಗೆ ಎಂಪಿ ಅಥವಾ ಹಳಿಯಾಳದ ಎಮ್ಮೆಲ್ಲೆ ಟಿಕೆಟ್ ಕೇಸರಿ ಪಕ್ಷದಿಂದ ಬಯಸುತ್ತಿದ್ದಾರೆ. ಹಳಿಯಾಳದಲ್ಲಿ ಬಗಲಲ್ಲಿರುವವ ದುಷ್ಮನ್-ಎಮ್ಮೆಲ್ಲೆ ಎಸ್.ಎಲ್.ಘೋಟನೇಕರ್ ತಿರುಗಿ ಬಿದ್ದರೆ ಬಿಜೆಪಿಯಿಂದಲೂ ತನ್ನ ಮಗ ಗೆಲುವು ಕಷ್ಟವೆಂಬ ಲೆಕ್ಕಾಚಾರವೂ ಆತ ಹಾಕಿದ್ದಾರೆ. ಬಹುಸಂಖ್ಯಾತ ಮರಾಠ ಸಮಾಜದ ಘೋಟನೇಕರ್ ತನ್ನ ಮಗನನ್ನು ಹಳಿಯಾಳದ ಭಾವಿ ಎಮ್ಮೆಲ್ಲೆ ಎಂದೇ ದೃಢವಾಗಿ ನಂಬಿದ್ದಾರೆ. ಹೀಗಾಗಿ ದೇಶಪಾಂಡೆ ತನ್ನ ಬೀಗ, ಪ್ರಶಾಂತನಿಗೆ ಹೆಣ್ಣುಕೊಟ್ಟು ಮಾವ ಮುಂಬೈನ ಪ್ರಭಾವಿ ರಾಜಕಾರಣಿ ಪ್ರಫುಲ್ ಪಟೇಲ್ ಬಲವೂ ಸೇರಿಸಿಕೊಂಡು ಮಗನಿಗೆ ಎಂಪಿ ಮಾಡುವ ಯೋಜನೆ ಹಾಕಿಕೊಂಡಿದ್ದಾರೆ.
ದೇಶಪಾಂಡೆ ಬಿಜೆಪಿ ಸೇರಿದರೆ ಏನಾಗುತ್ತದೆ? ಆತನ ಮಗನ ಭವಿಷ್ಯ ಬೆಳಗುತ್ತದೆ. ಶಿವರಾಮ ಹೆಬ್ಬಾರನ ಗ್ರಹಚಾರ ಮತ್ತೆ ಕೆಡುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....