Homeಅಂಕಣಗಳುಶೇ.10ರಷ್ಟು ಮೀಸಲಾತಿಗೆ ಉದ್ಯೋಗಗಳೆಲ್ಲಿವೆ?

ಶೇ.10ರಷ್ಟು ಮೀಸಲಾತಿಗೆ ಉದ್ಯೋಗಗಳೆಲ್ಲಿವೆ?

- Advertisement -
- Advertisement -

ಅನು: ಶಿವಸುಂದರ್
ಕೃಪೆ: Economic and Political
Weekly, Jan 12, 2019. Vol. 54. No.2 |

ಕೇಂದ್ರ ಸರ್ಕಾರವು ಇತ್ತೀಚೆಗೆ ಘೋಷಿಸಿರುವ ಶೇ.10 ಮೀಸಲಾತಿಯೂ ಒಳಗೊಂಡಂತೆ ಕೈಗೊಂಡಿರುವ ಇತರ ಉದ್ಯೋಗ ರಕ್ಷಣಾ ಕ್ರಮಗಳು 19ನೇ ಶತಮಾನದ ಬಂಗಾಳಿ ದ್ವಿಪದಿಯೊಂದರಲ್ಲಿರುವ ಕಾಲ್ನಡಿಗೆ ಸಾಧನವೊಂದನ್ನು ನೆನಪಿಸುತ್ತದೆ. ಅ ಸಾಧನವು ತನ್ನನ್ನು ತೊಟ್ಟಿರುವ ಹೆಗಲಿಗೆ ಬೆಸೆದುಕೊಂಡು ಮುಂದೆ ಒಂದು ಕ್ಯಾರಟ್ಟನ್ನು ಇಳಿಬಿಟ್ಟಿರುತ್ತದೆ. ಇದರಿಂದಾಗಿ ಅದನ್ನು ಹೊತ್ತುಕೊಂಡಿರುವವರು ಕ್ಯಾರೆಟ್ಟನ್ನು ಪಡೆದುಕೊಳ್ಳುವ ಸಲುವಾಗಿ ಮೈಲುಗಟ್ಟಲೇ ದೂರವನ್ನು ನಿಮಿಷಗಳಲ್ಲಿ ಕ್ರಮಿಸುವಂತೆ ಮಾಡುತ್ತದೆ. ಆದರೆ ಎಷ್ಟೇ ವೇಗವಾಗಿ ನಡೆದರೂ ಆ ಕ್ಯಾರೆಟ್ಟು ಮಾತ್ರ ಆ ಸಾಧನವನ್ನು ಹೊತ್ತುಕೊಂಡವನಿಂದ ಸಮಾನ ದೂರದಲ್ಲೆ ಇರುತ್ತದೆಯೇ ವಿನಃ ಬಾಯಿಗೆಟುಕುವುದಿಲ್ಲ. ಉದಾಹರಣೆಗೆ ಉದ್ಯೋಗಗಳಲ್ಲಿ ಮತ್ತು ಶೈಕ್ಷಣಿಕ ಸಂಸ್ಥೆಗಳಲ್ಲಿ ಆರ್ಥಿಕವಾಗಿ ದುರ್ಬಲವಾಗಿರುವ ಮೇಲ್ಜಾತಿಗಳಿಗೆ ನೀಡಲಾದ ಶೇ.10 ಮೀಸಲಾತಿ ನೀತಿಯನ್ನೇ ಗಮನಿಸಿ. ಅದು ಹುಟ್ಟುಹಾಕಿರುವ ರಾಜಕೀಯ ಕೋಲಾಹಲವನ್ನು ಗಮನಿಸಿದಲ್ಲಿ ಒಂದು ರಾಜಕೀಯ ತಂತ್ರೋಪಾಯವಾಗಿ ಅದರ ಪರಿಣಾಮಕತೆಯನ್ನು ಯಾರೂ ನಿರಾಕರಿಸಲು ಸಾಧ್ಯವಿಲ್ಲ. ಅದೇ ಸಮಯದಲ್ಲಿ ಉದ್ಯೋಗಾವಕಾಶಗಳನ್ನು ಒದಗಿಸಲಾಗದ ಅದರ ಪೆÇಳ್ಳುತನವನ್ನೂ ಸಹ ಯಾರೂ ಅಲ್ಲಗಳೆಯಲು ಸಾಧ್ಯವಿಲ್ಲ. ಯಾವ ರೀತಿಯಲ್ಲಿ ಬಂಗಾಳಿ ದ್ವಿಪದಿಯಲ್ಲಿನ ಬಡಪಾಯಿಯು ಎದುರಿಗಿರುವ ಕ್ಯಾರೆಟ್ಟನ್ನು ಪಡೆದು ತನ್ನ ಹಸಿವನ್ನು ನೀಗಿಸಿಕೊಳ್ಳಲು ಸಾಧ್ಯವಾಗುವುದಿಲ್ಲವೋ ಅದೇ ರೀತಿಯಲ್ಲಿ ಇತ್ತೀಚಿನ ಈ ಶೇ.10 ಕೋಟಾ ಸಹ ಉದ್ಯೋಗವನ್ನು ಒದಗಿಸಲಾರದು.
ಉದ್ಯೋಗಾವಕಾಶಗಳು ಎಲ್ಲಿವೆ? ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ (ಸಿಎಂಐಇ) ಸಂಸ್ಥೆಯ ಇತ್ತೀಚಿನ ವರದಿಯ ಪ್ರಕಾರ ಭಾರತದ ಉದ್ಯೋಗ ಮಾರುಕಟ್ಟೆಯ ಪರಿಸ್ಥಿತಿ ನಿರಾಶಾದಾಯಕವಾಗಿದೆ; ಮೊದಲನೆಯದಾಗಿ 2018ರ ಡಿಸೆಂಬರ್ ವೇಳೆಗೆ ಭಾರತದ ನಿರುದ್ಯೋಗ ದರವು ಶೇ.7.4ಕ್ಕೇರಿದ್ದು ಕಳೆದ 15 ತಿಂಗಳಲ್ಲೇ ಅತಿ ಹೆಚ್ಚಿನ ಮಟ್ಟವನ್ನು ಮುಟ್ಟಿದೆ; ಎರಡನೆಯದಾಗಿ 2017 ಮತ್ತು 2018ರಲ್ಲಿ ಕೆಲಸ ಕಳೆದುಕೊಂಡ ಸುಮಾರು 1.1 ಕೋಟಿಯಷ್ಟು ಜನರು ಈ ನಿರುದ್ಯೋಗಿ ಪಡೆಯಲ್ಲಿ ಸೇರಿಕೊಂಡಿದ್ದಾರೆ; ಮತ್ತು ಮೂರನೆಯದಾಗಿ ನಿರುದ್ಯೋಗದ ಪ್ರಮಾಣವು ಆರ್ಥಿಕವಾಗಿ ತ್ರಾಣ ರಹಿತವಾಗುತ್ತಿರುವ ಕ್ಷೇತ್ರ ಮತ್ತಿದು ಸಮುದಾಯಗಳಲ್ಲಿ ಹೆಚ್ಚಾಗಿದೆ. ಉದಾಹರಣೆಗೆ ಈಗಾಗಲೇ ಕೃಷಿ ಬಿಕ್ಕಟ್ಟನ್ನು ಎದುರಿಸುತ್ತಿರುವ ಗ್ರಾಮೀಣ ಕ್ಷೇತ್ರದಲ್ಲಿ ಶೇ.82ರಷ್ಟು ಉದ್ಯೋಗಗಳು ನಷ್ಟವಾಗಿದ್ದು, ನಿರುದ್ಯೋಗದ ಶೇ.80ರಷ್ಟು ಹೊರೆ ಮಹಿಳೆಯರ ಮೇಲಿದೆ. ವಿಪರ್ಯಾಸವೆಂದರೆ ಭಾರತೀಯ ಜನತಾ ಪಕ್ಷದ ಹೊಸ “ಅತಂತ್ರರ” ರಾಜಕಾರಣದ ಮುಖ್ಯ ಗಮನವೂ ಇದೇ ಕ್ಷೇತ್ರ ಸಮುದಾಯಗಳ ಮೇಲಿದೆ.
ಸಿಎಂಐಇ ಸಂಸ್ಥೆಯು ತನ್ನ ಈ ಅಂಕಿಅಂಶಗಳು ತಾತ್ಕಾಲಿಕವಾದದ್ದೆಂದು ಹೇಳಿದ್ದರೂ ಅಂತಿಮ ವರದಿಯಲ್ಲು ದೇಶದ ಒಟ್ಟಾರೆ ಪರಿಸ್ಥಿತಿ ಇದಕ್ಕಿಂತ ಹೆಚ್ಚು ಭಿನ್ನವಾಗಿಲ್ಲ. ಸರ್ಕಾರಿ ಕ್ಷೇತ್ರದಲ್ಲಿನ ನೇಮಕಾತಿ ಆಮೆಗತಿಯಲ್ಲಿದೆ; ಅಷ್ಟಲ್ಲದೆ ಭರ್ತಿಯಾಗದೆ ಉಳಿದುಕೊಂಡಿರುವ ಬ್ಯಾಕ್‍ಲಾಗ್ ಹುದ್ದೆಗಳ ಮೂರನೇ ಒಂದು ಭಾಗದಷ್ಟು ಹುದ್ದೆಗಳು “ಮೀಸಲು”ವರ್ಗಕ್ಕೆ ಸೇರಿವೆ; ಅದೇ ಸಮಯದಲ್ಲಿ ಉದ್ಯೋಗಾವಕಾಶಗಳ ಪ್ರಮುಖ ಮೂಲವಾಗಿದ್ದ ಅಸಂಘಟಿತ ಮತ್ತು ಅನೌಪಚಾರಿಕ ಕ್ಷೇತ್ರಗಳು ನೋಟು ರದ್ಧತಿ ಮತ್ತು ಜಿಎಸ್‍ಟಿಯೆಂಬ ಅವಳಿ ಸರ್ಜಿಕಲ್ ದಾಳಿಯಿಂದ ಇನ್ನೂ ಚೇತರಿಸಿಕೊಂಡಿಲ್ಲ. ಇಂಥಾ ಸಂದರ್ಭದಲ್ಲಿ ಮೀಸಲಾತಿಯು ಶೇ. 50ರ ಮಿತಿ ಮೀರಬಾರದೆಂಬ ಸುಪ್ರೀಂ ಕೋರ್ಟಿನ ನಿರ್ದೇಶನಗಳನ್ನು ಉಲ್ಲಂಘಿಸಿ ಕೇಂದ್ರ ಸರ್ಕಾರವು ಘೋಷಿಸಿರುವ ಶೇ.10ರ ಮೀಸಲಾತಿಯು ಬಿಜೆಪಿಗೆ ತನ್ನ ಚುನಾವಣಾ ಮಿತ್ರರನ್ನು ಹೆಚ್ಚಿಸಿಕೊಳ್ಳಲು ಸಹಾಯವಾಗಬಹುದು. ಹಾಗೆಯೇ ಹಿಂದಿ ಹೃದಯಭಾಗದಲ್ಲಿ ನಡೆದ 2018ರ ಶಾಸನಾಸಭಾ ಚುನಾವಣೆಗಳಲ್ಲಿ ತಾನು ಕಳೆದುಕೊಂಡ “ದುರ್ಬಲ” ಮತದಾರರ ನಡುವೆ ತನ್ನ ಬಗ್ಗೆ ಒಂದಷ್ಟು ಸದಭಿಪ್ರಾಯವನ್ನು ಗಳಿಸಿಕೊಳ್ಳಬಹುದು. ಆದರೆ ವಾಸ್ತವದಲ್ಲಿ ಅದು ಅತಂತ್ರ ಮತ್ತು ನಿತ್ರಾಣ ಮತದಾರರ ಸಂಖ್ಯೆಯನ್ನು ಮತ್ತಷ್ಟು ಹೆಚ್ಚಿಸಲಿದೆ. ಮೀಸಲಾತಿಯಿಂದ ಹೊರಗುಳಿದ ಅರ್ಧಕ್ಕಿಂತ ಕಡಿಮೆ ಉದ್ಯೋಗಗಳಿಗಾಗಿ ಎಷ್ಟೋ ಪಟ್ಟು ಅಧಿಕ ಉದ್ಯೋಗಾಕಾಂಕ್ಷಿಗಳು ಸ್ಪರ್ಧಿಸುತ್ತಿದ್ದು ಮೀಸಲಾತಿಯ ಫಲಾನುಭವಿಗಳಿಗೆ ಅದರಿಂದ ಯಾವ ಲಾಭವೂ ಸಿಗುವುದಿಲ್ಲ.
ಇಂದಿನ ರಾಜಕೀಯ ಪರಿಭಾಷೆಗಳಲ್ಲಿ ಹೆಚ್ಚು ಬಳಕೆಯಾಗುವ “ಯುವಕರ ಆಶೋತ್ತರಗಳು” ಎಂಬ ಶಬ್ಧದ ಬಗೆಗೆ ರಾಜಕಾರಣಿಗಳಲ್ಲಿ ಅರೆಮನಸ್ಸಿನ ತಿಳವಳಿಕೆಯಿದೆ. ಮತ್ತದು ಉದ್ಯೋಗಾವಕಾಶಗಳ ಹೆಸರಲ್ಲಿ ಒಂದಷ್ಟು ಪಕೋಡಾಗಳನ್ನು ಎಸೆದರೆ, ಅಥವಾ ಒಂದಷ್ಟು ಹೀನಾಯ ಉದ್ಯೋಗವನ್ನು ನೀಡಿದರೆ ಯುವಜನರ ಬೆಂಬಲ ಪಡೆಯಬಹುದೆಂಬ ಸಂವೇದನಾ ರಹಿತ ಗ್ರಹಿಕೆಗಳಿವೆ. ಉದ್ಯೋಗ ಮಾರುಕಟ್ಟೆಯಲ್ಲಿ ಯುವಜನರ ಸಕ್ರಿಯ ಮತ್ತು ಸ್ವಕೀಯ ಪಾತ್ರವನ್ನು ಉದ್ದೇಶಪೂರ್ವಕವಾಗಿ ನಿರಾಕರಿಸುವ ಮೂಲಕ ವಾಸ್ತವದಲ್ಲಿರುವ ಅರೆಉದ್ಯೋಗದ ಸಮಸ್ಯೆಯ ಬಗ್ಗೆ ಕುರುಡು ಪ್ರದರ್ಶಿಸುತ್ತಿದೆ.
ಅಂತರರಾಷ್ಟ್ರೀಯ ಕಾರ್ಮಿಕ ಸಂಘಟನೆ (ಐಎಲ್‍ಒ)ಯು 2018ರಲ್ಲಿ ಹೊರತಂದಿರುವ “ವರ್ಲ್ಡ್ ಎಂಪ್ಲಾಯ್‍ಮೆಂಟ್ ಅಂಡ್ ಸೋಷಿಯಲ್ ಔಟ್‍ಲುಕ್” (ಜಾಗತಿಕ ಉದ್ಯೋಗ ಮತ್ತು ಸಾಮಾಜಿಕ ದರ್ಶನ) ವರದಿಯು ಭಾರತದ ಶೇ.80ರಷ್ಟು ಉದ್ಯೋಗಗಳನ್ನು ಅಭದ್ರವೆಂದು ಪರಿಗಣಿಸಿದೆ. ಅದರಲ್ಲಿ ಕೇವಲ ಶೇ.20 ಭಾಗದಷ್ಟು ಉದ್ಯೋಗಿಗಳು ಮಾತ್ರ ನಿಯಮಿತವಾಗಿ ಸಂಬಳ ಪಡೆಯುವ ಉದ್ಯೋಗಿಗಳಾಗಿದ್ದು ಇನ್ನುಳಿದ ಶೇ.40ರಷ್ಟು ಉದ್ಯೋಗಿಗಳು ಕಡಿಮೆ ಸಂಬಳಕ್ಕೆ ಕೆಲಸ ಮಾಡುತ್ತಿದ್ದೇವೆಂಬ ಅಭಿಪ್ರಾಯವನ್ನೇ ಹೊಂದಿದ್ದಾರೆ. 2018ರಲ್ಲಿ ಅಜೀಂ ಪ್ರೇಂಜಿ ವಿಶ್ವವಿದ್ಯಾಲಯವು ಹೊರತಂದಿರುವ “ಸ್ಟೇಟ್ ಆಫ್ ವರ್ಕಿಂಗ್ ಇನ್ ಇಂಡಿಯಾ” (ಭಾರತದ ಕೆಲಸ ಮಾಡುವ ಪರಿಸ್ಥಿತಿ) ವರದಿಯು ಸೌಲಭ್ಯರಹಿತ ಕೆಲಸಗಾರರ ತುಲನಾತ್ಮಕ ವರದಿಯನ್ನು ನೀಡಿದ್ದು ಅಸಂಘಟಿತ ಕ್ಷೇತ್ರದಲ್ಲಿನ ಕಡಿಮೆ ವೇತನದ ಸಮಸ್ಯೆ ಹೇಳತೀರದಾಗಿದ್ದರೂ ಸಂಘಟಿತ ಕ್ಷೇತ್ರದಲ್ಲೂ ಸಹ ಆ ಸಮಸ್ಯೆ ಮುಂದುವರೆದಿದೆ ಎಂಬ ಸಂಗತಿಯನ್ನು ಹೊರಹಾಕಿದೆ. ಶೇ.3ರಷ್ಟು ಹಣದುಬ್ಬರದ ಏರಿಕೆಯ ಲೆಕ್ಕಾಚಾರಕ್ಕೆ ತಕ್ಕಂತೆ ಕೂಲಿ ದರವನ್ನು ಹೊಂದಾಣಿಕೆ ಮಾಡಿ ನೋಡಿದಾಗಲೂ, 2015ರಲ್ಲಿ ವಿಶೇಷವಾಗಿ ಸರ್ಕಾರೇತರ ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತಿರುವ ಶೇ.82ರಷ್ಟು ಪುರುಷರೂ ಮತ್ತು ಶೇ.92ರಷ್ಟು ಮಹಿಳೆಯರು ಏಳನೇ ವೇತನ ಅಯೋಗ ನಿಗದಿಗೊಳಿಸಿದ ಕನಿಷ್ಟ ವೇತನಕ್ಕಿಂತ ಶೇ.40ರಷ್ಟು ಕಡಿಮೆ ವೇತನವನ್ನು ಪಡೆಯುತ್ತಿದ್ದರು. ಅದೆರ ಜೊತೆಜೊತೆಗೆ ಕಾರ್ಮಿಕ ಉತ್ಪಾದಕತೆಗೂ ಮತ್ತು ವೇತನಕ್ಕೂ ಇರುವ ಅಂತರ ಹೆಚ್ಚಾಗುತ್ತಲೇ ಇದೆ. ಉದಾಹರಣೆಗೆ ಕಳೆದ ಮೂರು ದಶಕಗಳಲ್ಲಿ ಸಂಘಟಿತ ಉತ್ಪಾದಕ ಕ್ಷೇತ್ರದಲ್ಲಿನ ಕಾರ್ಮಿಕ ಉತ್ಪಾದಕತೆಯು ಆರು ಪಟ್ಟು ಹೆಚ್ಚಾಗಿದ್ದರೆ ಕೂಲಿ ದರವು ಮಾತ್ರ ಕೇವಲ ಒಂದೂವರೆ ಪಟ್ಟು ಮಾತ್ರ ಹೆಚ್ಚಾಗಿದೆ.
ಈ ಎಲ್ಲಾ ಸಾಕ್ಷ್ಯಗಳನ್ನು ಮುಂದಿಟ್ಟುಕೊಂಡು ಭಾರತದಲ್ಲಿನ ಹಾಲಿ ನಿರುದ್ಯೋಗವು ಅದರಲ್ಲೂ ಯುವಜನರ ನಿರುದ್ಯೋಗದ ಪ್ರಮಾಣವು “ಭಾವಿ” ಪ್ರಮಾಣವೇ ಹೊರತು “ಹಾಲಿ”ಯಲ್ಲವೆಂದು ಕೆಲವರು ವಾದಿಸಬಹುದು. ಅಂದರೆ, ಈಗ ಹಾಲಿ ಇರುವ ಉದ್ಯೋಗಾವಕಾಶಗಳು ತಮ್ಮ ಆಶೋತ್ತರಗಳಿಗೆ ಪೂರಕವಾದ ವೇತನ ಮತ್ತು ಸೌಲಭ್ಯಗಳನ್ನು ನೀಡುವುದಿಲ್ಲ ಎಂದು ಭಾವಿಸುತ್ತಿರುವುದರಿಂದ ಯುವಜನರು ಉದ್ಯೋಗ ಅರಸುತ್ತಿಲ್ಲ ಎಂಬುದು ಆ ವಾದದ ಸಾರಾಂಶ. ಹೀಗೆ, ನಿಗದಿತ ವೇತನವಿರುವ ಅದರಲ್ಲೂ ಸರ್ಕಾರಿ ಉದ್ಯೋಗಗಳಿಗಾಗಿ ಯುವಜನರು ತೋರುವ ಆದ್ಯತೆಯೇ ನಿರುದ್ಯೋಗಕ್ಕೆ ಕಾರಣವೆಂದು ಹೇಳುತ್ತಾ ನಿರುದ್ಯೋಗದ ಹೊಣೆಗಾರಿಕೆಯನ್ನು ನಿರುದ್ಯೋಗಿಗಳ ಹೆಗಲಿಗೇ ವರ್ಗಾಯಿಸಿಬಿಡಬಹುದು. ಆದರೆ ಈ ವಾದದಿಂದ ವಾಸ್ತವದಲ್ಲಿರುವ ನಿರುದ್ಯೋಗ, ಅರೆ ಉದ್ಯೋಗ ಅಥವಾ ಭಾವಿ ನಿರುದ್ಯೋಗಗಳಿಗೂ ಮತ್ತು ಉದ್ಯೋಗ ಸೃಷ್ಟಿಯಾಗದಿರುವುದಕ್ಕೂ ಇರುವ ಬಲವಾದ ಸಂಬಂಧಗಳನ್ನು ತಳ್ಳಿಹಾಕಲು ಸಾಧ್ಯವಿಲ್ಲ. ಅಲ್ಲದೆ ಆರ್ಥಿಕ ಅಭಿವೃದ್ಧಿಗೂ ಮತ್ತು ಉದ್ಯೋಗ ಸೃಷ್ಟಿಗೂ ಇರುವ ಸಂಬಂಧಗಳನ್ನು ದುರ್ಬಲಗೊಳಿಸುತ್ತಿರುವ ರಾಚನಿಕ ಕಾರಣಗಳನ್ನು ಗುರುತಿಸುವ ಮತ್ತು ಅದನ್ನು ನಿವಾರಿಸುವ ಹೊಣೆಗಾರಿಕೆ ಸರ್ಕಾರದ್ದೇ ಆಗಿದೆ. ಅದರ ಜೊತೆಜೊತೆಗೆ ಈಗಾಗಲೇ ನಿತ್ರಾಣಗೊಂಡು ಜರ್ಝರಿತವಾಗಿರುವ ಉದ್ಯೋಗ ಮಾರುಕಟ್ಟೆಯಲ್ಲಿ ಮೀಸಲಾತಿಯನ್ನು, ಅಂದರೆ ಅತ್ಯಂತ ಅತಂತ್ರತೆಯ ಅಂಚಿನಲ್ಲಿರುವ ವ್ಯಕ್ತಿಯನ್ನು ರಕ್ಷಿಸುವ ಕ್ರಮವನ್ನು, ಹೆಚ್ಚಿಸುತ್ತಿರುವ ಕ್ರಮದ ಹಿಂದಿರುವ ಸರ್ಕಾರದ ಸೋಗಲಾಡಿತನವನ್ನೂ ಯಾರೂ ಅಲ್ಲಗಳೆಯಲು ಸಾಧ್ಯವಿಲ್ಲ್ಲ.
ಹೆಚ್ಚೆಚ್ಚು ವಿದ್ಯಾಭ್ಯಾಸವನ್ನು ಪಡೆದವರ ನಡುವೆ ಇರುವ ಅತಿ ಹೆಚ್ಚು ನಿರುದ್ಯೋಗ ದರಕ್ಕೆ ಅವರÀ ಆಯ್ಕೆ ಮತ್ತು ಆದ್ಯತೆಗಳೇ ಕಾರಣ ಎಂದು ಸರ್ಕಾರವು ವಿವರಿಸಿ ಕೈತೊಳೆದುಕೊಳ್ಳುವ ಪ್ರಯತ್ನ ಮಾಡುತ್ತದೆ. ಅದೇನೇ ಇದ್ದರೂ ಅವರ ಆಯ್ಕೆಗಳು ನಿರ್ದಿಷ್ಟ ಪಥವನ್ನೇ ಅವಲಂಬಿಸುವಂತೆ ಮಾಡಿರುವ ಹೊಣೆಗಾರಿಕೆಯಿಂದ ಸರ್ಕಾರವು ನುಣುಚಿಕೊಳ್ಳಲು ಸಾಧ್ಯವಿಲ್ಲ. ಸರ್ಕಾರವು ಮತದಾರರಿಗೆ ನೀಡುª ಮೀಸಲಾತಿಯಂಥ ಹುಸಿ ರಕ್ಷಣಾ ಕ್ರಮಗಳು ಭ್ರಮ ನಿರಸನಗಳನ್ನು ಹುಟ್ಟುಹಾಕುತ್ತದೆ. ಆದರೆ ಅದು ವ್ಯಗ್ರವಾಗದಂತೆ ನೋಡಿಕೊಳ್ಳಲು ಕೂಡಲೇ ದೊಡ್ಡ ದೊಡ್ಡ ಭರವಸೆಗಳನ್ನು ಘೋಷಿಸಲಾಗುತ್ತದೆ ಆದರೆ ಅದರೊಟ್ಟಿಗೆ ಜನರ ಅಭದ್ರತೆಯನ್ನು ಹೆಚ್ಚಿಸುವ ನೀತಿಗಳ ಬೆದರಿಕೆಯನ್ನೂ ಒಡ್ಡಲಾಗುತ್ತದೆ. ಇದು ಮತ್ತಷ್ಟು ಹುಸಿ ಭರವಸೆಗಳ ಘೋಷಣೆಗೆ ಜನರನ್ನು ಬಲಿ ಮಾಡುವ ರಾಜಕೀಯ ವಿಷಚಕ್ರಕ್ಕೆ ದೂಡುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...