Homeಅಂಕಣಗಳುಶೇ.10ರಷ್ಟು ಮೀಸಲಾತಿಗೆ ಉದ್ಯೋಗಗಳೆಲ್ಲಿವೆ?

ಶೇ.10ರಷ್ಟು ಮೀಸಲಾತಿಗೆ ಉದ್ಯೋಗಗಳೆಲ್ಲಿವೆ?

- Advertisement -
- Advertisement -

ಅನು: ಶಿವಸುಂದರ್
ಕೃಪೆ: Economic and Political
Weekly, Jan 12, 2019. Vol. 54. No.2 |

ಕೇಂದ್ರ ಸರ್ಕಾರವು ಇತ್ತೀಚೆಗೆ ಘೋಷಿಸಿರುವ ಶೇ.10 ಮೀಸಲಾತಿಯೂ ಒಳಗೊಂಡಂತೆ ಕೈಗೊಂಡಿರುವ ಇತರ ಉದ್ಯೋಗ ರಕ್ಷಣಾ ಕ್ರಮಗಳು 19ನೇ ಶತಮಾನದ ಬಂಗಾಳಿ ದ್ವಿಪದಿಯೊಂದರಲ್ಲಿರುವ ಕಾಲ್ನಡಿಗೆ ಸಾಧನವೊಂದನ್ನು ನೆನಪಿಸುತ್ತದೆ. ಅ ಸಾಧನವು ತನ್ನನ್ನು ತೊಟ್ಟಿರುವ ಹೆಗಲಿಗೆ ಬೆಸೆದುಕೊಂಡು ಮುಂದೆ ಒಂದು ಕ್ಯಾರಟ್ಟನ್ನು ಇಳಿಬಿಟ್ಟಿರುತ್ತದೆ. ಇದರಿಂದಾಗಿ ಅದನ್ನು ಹೊತ್ತುಕೊಂಡಿರುವವರು ಕ್ಯಾರೆಟ್ಟನ್ನು ಪಡೆದುಕೊಳ್ಳುವ ಸಲುವಾಗಿ ಮೈಲುಗಟ್ಟಲೇ ದೂರವನ್ನು ನಿಮಿಷಗಳಲ್ಲಿ ಕ್ರಮಿಸುವಂತೆ ಮಾಡುತ್ತದೆ. ಆದರೆ ಎಷ್ಟೇ ವೇಗವಾಗಿ ನಡೆದರೂ ಆ ಕ್ಯಾರೆಟ್ಟು ಮಾತ್ರ ಆ ಸಾಧನವನ್ನು ಹೊತ್ತುಕೊಂಡವನಿಂದ ಸಮಾನ ದೂರದಲ್ಲೆ ಇರುತ್ತದೆಯೇ ವಿನಃ ಬಾಯಿಗೆಟುಕುವುದಿಲ್ಲ. ಉದಾಹರಣೆಗೆ ಉದ್ಯೋಗಗಳಲ್ಲಿ ಮತ್ತು ಶೈಕ್ಷಣಿಕ ಸಂಸ್ಥೆಗಳಲ್ಲಿ ಆರ್ಥಿಕವಾಗಿ ದುರ್ಬಲವಾಗಿರುವ ಮೇಲ್ಜಾತಿಗಳಿಗೆ ನೀಡಲಾದ ಶೇ.10 ಮೀಸಲಾತಿ ನೀತಿಯನ್ನೇ ಗಮನಿಸಿ. ಅದು ಹುಟ್ಟುಹಾಕಿರುವ ರಾಜಕೀಯ ಕೋಲಾಹಲವನ್ನು ಗಮನಿಸಿದಲ್ಲಿ ಒಂದು ರಾಜಕೀಯ ತಂತ್ರೋಪಾಯವಾಗಿ ಅದರ ಪರಿಣಾಮಕತೆಯನ್ನು ಯಾರೂ ನಿರಾಕರಿಸಲು ಸಾಧ್ಯವಿಲ್ಲ. ಅದೇ ಸಮಯದಲ್ಲಿ ಉದ್ಯೋಗಾವಕಾಶಗಳನ್ನು ಒದಗಿಸಲಾಗದ ಅದರ ಪೆÇಳ್ಳುತನವನ್ನೂ ಸಹ ಯಾರೂ ಅಲ್ಲಗಳೆಯಲು ಸಾಧ್ಯವಿಲ್ಲ. ಯಾವ ರೀತಿಯಲ್ಲಿ ಬಂಗಾಳಿ ದ್ವಿಪದಿಯಲ್ಲಿನ ಬಡಪಾಯಿಯು ಎದುರಿಗಿರುವ ಕ್ಯಾರೆಟ್ಟನ್ನು ಪಡೆದು ತನ್ನ ಹಸಿವನ್ನು ನೀಗಿಸಿಕೊಳ್ಳಲು ಸಾಧ್ಯವಾಗುವುದಿಲ್ಲವೋ ಅದೇ ರೀತಿಯಲ್ಲಿ ಇತ್ತೀಚಿನ ಈ ಶೇ.10 ಕೋಟಾ ಸಹ ಉದ್ಯೋಗವನ್ನು ಒದಗಿಸಲಾರದು.
ಉದ್ಯೋಗಾವಕಾಶಗಳು ಎಲ್ಲಿವೆ? ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ (ಸಿಎಂಐಇ) ಸಂಸ್ಥೆಯ ಇತ್ತೀಚಿನ ವರದಿಯ ಪ್ರಕಾರ ಭಾರತದ ಉದ್ಯೋಗ ಮಾರುಕಟ್ಟೆಯ ಪರಿಸ್ಥಿತಿ ನಿರಾಶಾದಾಯಕವಾಗಿದೆ; ಮೊದಲನೆಯದಾಗಿ 2018ರ ಡಿಸೆಂಬರ್ ವೇಳೆಗೆ ಭಾರತದ ನಿರುದ್ಯೋಗ ದರವು ಶೇ.7.4ಕ್ಕೇರಿದ್ದು ಕಳೆದ 15 ತಿಂಗಳಲ್ಲೇ ಅತಿ ಹೆಚ್ಚಿನ ಮಟ್ಟವನ್ನು ಮುಟ್ಟಿದೆ; ಎರಡನೆಯದಾಗಿ 2017 ಮತ್ತು 2018ರಲ್ಲಿ ಕೆಲಸ ಕಳೆದುಕೊಂಡ ಸುಮಾರು 1.1 ಕೋಟಿಯಷ್ಟು ಜನರು ಈ ನಿರುದ್ಯೋಗಿ ಪಡೆಯಲ್ಲಿ ಸೇರಿಕೊಂಡಿದ್ದಾರೆ; ಮತ್ತು ಮೂರನೆಯದಾಗಿ ನಿರುದ್ಯೋಗದ ಪ್ರಮಾಣವು ಆರ್ಥಿಕವಾಗಿ ತ್ರಾಣ ರಹಿತವಾಗುತ್ತಿರುವ ಕ್ಷೇತ್ರ ಮತ್ತಿದು ಸಮುದಾಯಗಳಲ್ಲಿ ಹೆಚ್ಚಾಗಿದೆ. ಉದಾಹರಣೆಗೆ ಈಗಾಗಲೇ ಕೃಷಿ ಬಿಕ್ಕಟ್ಟನ್ನು ಎದುರಿಸುತ್ತಿರುವ ಗ್ರಾಮೀಣ ಕ್ಷೇತ್ರದಲ್ಲಿ ಶೇ.82ರಷ್ಟು ಉದ್ಯೋಗಗಳು ನಷ್ಟವಾಗಿದ್ದು, ನಿರುದ್ಯೋಗದ ಶೇ.80ರಷ್ಟು ಹೊರೆ ಮಹಿಳೆಯರ ಮೇಲಿದೆ. ವಿಪರ್ಯಾಸವೆಂದರೆ ಭಾರತೀಯ ಜನತಾ ಪಕ್ಷದ ಹೊಸ “ಅತಂತ್ರರ” ರಾಜಕಾರಣದ ಮುಖ್ಯ ಗಮನವೂ ಇದೇ ಕ್ಷೇತ್ರ ಸಮುದಾಯಗಳ ಮೇಲಿದೆ.
ಸಿಎಂಐಇ ಸಂಸ್ಥೆಯು ತನ್ನ ಈ ಅಂಕಿಅಂಶಗಳು ತಾತ್ಕಾಲಿಕವಾದದ್ದೆಂದು ಹೇಳಿದ್ದರೂ ಅಂತಿಮ ವರದಿಯಲ್ಲು ದೇಶದ ಒಟ್ಟಾರೆ ಪರಿಸ್ಥಿತಿ ಇದಕ್ಕಿಂತ ಹೆಚ್ಚು ಭಿನ್ನವಾಗಿಲ್ಲ. ಸರ್ಕಾರಿ ಕ್ಷೇತ್ರದಲ್ಲಿನ ನೇಮಕಾತಿ ಆಮೆಗತಿಯಲ್ಲಿದೆ; ಅಷ್ಟಲ್ಲದೆ ಭರ್ತಿಯಾಗದೆ ಉಳಿದುಕೊಂಡಿರುವ ಬ್ಯಾಕ್‍ಲಾಗ್ ಹುದ್ದೆಗಳ ಮೂರನೇ ಒಂದು ಭಾಗದಷ್ಟು ಹುದ್ದೆಗಳು “ಮೀಸಲು”ವರ್ಗಕ್ಕೆ ಸೇರಿವೆ; ಅದೇ ಸಮಯದಲ್ಲಿ ಉದ್ಯೋಗಾವಕಾಶಗಳ ಪ್ರಮುಖ ಮೂಲವಾಗಿದ್ದ ಅಸಂಘಟಿತ ಮತ್ತು ಅನೌಪಚಾರಿಕ ಕ್ಷೇತ್ರಗಳು ನೋಟು ರದ್ಧತಿ ಮತ್ತು ಜಿಎಸ್‍ಟಿಯೆಂಬ ಅವಳಿ ಸರ್ಜಿಕಲ್ ದಾಳಿಯಿಂದ ಇನ್ನೂ ಚೇತರಿಸಿಕೊಂಡಿಲ್ಲ. ಇಂಥಾ ಸಂದರ್ಭದಲ್ಲಿ ಮೀಸಲಾತಿಯು ಶೇ. 50ರ ಮಿತಿ ಮೀರಬಾರದೆಂಬ ಸುಪ್ರೀಂ ಕೋರ್ಟಿನ ನಿರ್ದೇಶನಗಳನ್ನು ಉಲ್ಲಂಘಿಸಿ ಕೇಂದ್ರ ಸರ್ಕಾರವು ಘೋಷಿಸಿರುವ ಶೇ.10ರ ಮೀಸಲಾತಿಯು ಬಿಜೆಪಿಗೆ ತನ್ನ ಚುನಾವಣಾ ಮಿತ್ರರನ್ನು ಹೆಚ್ಚಿಸಿಕೊಳ್ಳಲು ಸಹಾಯವಾಗಬಹುದು. ಹಾಗೆಯೇ ಹಿಂದಿ ಹೃದಯಭಾಗದಲ್ಲಿ ನಡೆದ 2018ರ ಶಾಸನಾಸಭಾ ಚುನಾವಣೆಗಳಲ್ಲಿ ತಾನು ಕಳೆದುಕೊಂಡ “ದುರ್ಬಲ” ಮತದಾರರ ನಡುವೆ ತನ್ನ ಬಗ್ಗೆ ಒಂದಷ್ಟು ಸದಭಿಪ್ರಾಯವನ್ನು ಗಳಿಸಿಕೊಳ್ಳಬಹುದು. ಆದರೆ ವಾಸ್ತವದಲ್ಲಿ ಅದು ಅತಂತ್ರ ಮತ್ತು ನಿತ್ರಾಣ ಮತದಾರರ ಸಂಖ್ಯೆಯನ್ನು ಮತ್ತಷ್ಟು ಹೆಚ್ಚಿಸಲಿದೆ. ಮೀಸಲಾತಿಯಿಂದ ಹೊರಗುಳಿದ ಅರ್ಧಕ್ಕಿಂತ ಕಡಿಮೆ ಉದ್ಯೋಗಗಳಿಗಾಗಿ ಎಷ್ಟೋ ಪಟ್ಟು ಅಧಿಕ ಉದ್ಯೋಗಾಕಾಂಕ್ಷಿಗಳು ಸ್ಪರ್ಧಿಸುತ್ತಿದ್ದು ಮೀಸಲಾತಿಯ ಫಲಾನುಭವಿಗಳಿಗೆ ಅದರಿಂದ ಯಾವ ಲಾಭವೂ ಸಿಗುವುದಿಲ್ಲ.
ಇಂದಿನ ರಾಜಕೀಯ ಪರಿಭಾಷೆಗಳಲ್ಲಿ ಹೆಚ್ಚು ಬಳಕೆಯಾಗುವ “ಯುವಕರ ಆಶೋತ್ತರಗಳು” ಎಂಬ ಶಬ್ಧದ ಬಗೆಗೆ ರಾಜಕಾರಣಿಗಳಲ್ಲಿ ಅರೆಮನಸ್ಸಿನ ತಿಳವಳಿಕೆಯಿದೆ. ಮತ್ತದು ಉದ್ಯೋಗಾವಕಾಶಗಳ ಹೆಸರಲ್ಲಿ ಒಂದಷ್ಟು ಪಕೋಡಾಗಳನ್ನು ಎಸೆದರೆ, ಅಥವಾ ಒಂದಷ್ಟು ಹೀನಾಯ ಉದ್ಯೋಗವನ್ನು ನೀಡಿದರೆ ಯುವಜನರ ಬೆಂಬಲ ಪಡೆಯಬಹುದೆಂಬ ಸಂವೇದನಾ ರಹಿತ ಗ್ರಹಿಕೆಗಳಿವೆ. ಉದ್ಯೋಗ ಮಾರುಕಟ್ಟೆಯಲ್ಲಿ ಯುವಜನರ ಸಕ್ರಿಯ ಮತ್ತು ಸ್ವಕೀಯ ಪಾತ್ರವನ್ನು ಉದ್ದೇಶಪೂರ್ವಕವಾಗಿ ನಿರಾಕರಿಸುವ ಮೂಲಕ ವಾಸ್ತವದಲ್ಲಿರುವ ಅರೆಉದ್ಯೋಗದ ಸಮಸ್ಯೆಯ ಬಗ್ಗೆ ಕುರುಡು ಪ್ರದರ್ಶಿಸುತ್ತಿದೆ.
ಅಂತರರಾಷ್ಟ್ರೀಯ ಕಾರ್ಮಿಕ ಸಂಘಟನೆ (ಐಎಲ್‍ಒ)ಯು 2018ರಲ್ಲಿ ಹೊರತಂದಿರುವ “ವರ್ಲ್ಡ್ ಎಂಪ್ಲಾಯ್‍ಮೆಂಟ್ ಅಂಡ್ ಸೋಷಿಯಲ್ ಔಟ್‍ಲುಕ್” (ಜಾಗತಿಕ ಉದ್ಯೋಗ ಮತ್ತು ಸಾಮಾಜಿಕ ದರ್ಶನ) ವರದಿಯು ಭಾರತದ ಶೇ.80ರಷ್ಟು ಉದ್ಯೋಗಗಳನ್ನು ಅಭದ್ರವೆಂದು ಪರಿಗಣಿಸಿದೆ. ಅದರಲ್ಲಿ ಕೇವಲ ಶೇ.20 ಭಾಗದಷ್ಟು ಉದ್ಯೋಗಿಗಳು ಮಾತ್ರ ನಿಯಮಿತವಾಗಿ ಸಂಬಳ ಪಡೆಯುವ ಉದ್ಯೋಗಿಗಳಾಗಿದ್ದು ಇನ್ನುಳಿದ ಶೇ.40ರಷ್ಟು ಉದ್ಯೋಗಿಗಳು ಕಡಿಮೆ ಸಂಬಳಕ್ಕೆ ಕೆಲಸ ಮಾಡುತ್ತಿದ್ದೇವೆಂಬ ಅಭಿಪ್ರಾಯವನ್ನೇ ಹೊಂದಿದ್ದಾರೆ. 2018ರಲ್ಲಿ ಅಜೀಂ ಪ್ರೇಂಜಿ ವಿಶ್ವವಿದ್ಯಾಲಯವು ಹೊರತಂದಿರುವ “ಸ್ಟೇಟ್ ಆಫ್ ವರ್ಕಿಂಗ್ ಇನ್ ಇಂಡಿಯಾ” (ಭಾರತದ ಕೆಲಸ ಮಾಡುವ ಪರಿಸ್ಥಿತಿ) ವರದಿಯು ಸೌಲಭ್ಯರಹಿತ ಕೆಲಸಗಾರರ ತುಲನಾತ್ಮಕ ವರದಿಯನ್ನು ನೀಡಿದ್ದು ಅಸಂಘಟಿತ ಕ್ಷೇತ್ರದಲ್ಲಿನ ಕಡಿಮೆ ವೇತನದ ಸಮಸ್ಯೆ ಹೇಳತೀರದಾಗಿದ್ದರೂ ಸಂಘಟಿತ ಕ್ಷೇತ್ರದಲ್ಲೂ ಸಹ ಆ ಸಮಸ್ಯೆ ಮುಂದುವರೆದಿದೆ ಎಂಬ ಸಂಗತಿಯನ್ನು ಹೊರಹಾಕಿದೆ. ಶೇ.3ರಷ್ಟು ಹಣದುಬ್ಬರದ ಏರಿಕೆಯ ಲೆಕ್ಕಾಚಾರಕ್ಕೆ ತಕ್ಕಂತೆ ಕೂಲಿ ದರವನ್ನು ಹೊಂದಾಣಿಕೆ ಮಾಡಿ ನೋಡಿದಾಗಲೂ, 2015ರಲ್ಲಿ ವಿಶೇಷವಾಗಿ ಸರ್ಕಾರೇತರ ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತಿರುವ ಶೇ.82ರಷ್ಟು ಪುರುಷರೂ ಮತ್ತು ಶೇ.92ರಷ್ಟು ಮಹಿಳೆಯರು ಏಳನೇ ವೇತನ ಅಯೋಗ ನಿಗದಿಗೊಳಿಸಿದ ಕನಿಷ್ಟ ವೇತನಕ್ಕಿಂತ ಶೇ.40ರಷ್ಟು ಕಡಿಮೆ ವೇತನವನ್ನು ಪಡೆಯುತ್ತಿದ್ದರು. ಅದೆರ ಜೊತೆಜೊತೆಗೆ ಕಾರ್ಮಿಕ ಉತ್ಪಾದಕತೆಗೂ ಮತ್ತು ವೇತನಕ್ಕೂ ಇರುವ ಅಂತರ ಹೆಚ್ಚಾಗುತ್ತಲೇ ಇದೆ. ಉದಾಹರಣೆಗೆ ಕಳೆದ ಮೂರು ದಶಕಗಳಲ್ಲಿ ಸಂಘಟಿತ ಉತ್ಪಾದಕ ಕ್ಷೇತ್ರದಲ್ಲಿನ ಕಾರ್ಮಿಕ ಉತ್ಪಾದಕತೆಯು ಆರು ಪಟ್ಟು ಹೆಚ್ಚಾಗಿದ್ದರೆ ಕೂಲಿ ದರವು ಮಾತ್ರ ಕೇವಲ ಒಂದೂವರೆ ಪಟ್ಟು ಮಾತ್ರ ಹೆಚ್ಚಾಗಿದೆ.
ಈ ಎಲ್ಲಾ ಸಾಕ್ಷ್ಯಗಳನ್ನು ಮುಂದಿಟ್ಟುಕೊಂಡು ಭಾರತದಲ್ಲಿನ ಹಾಲಿ ನಿರುದ್ಯೋಗವು ಅದರಲ್ಲೂ ಯುವಜನರ ನಿರುದ್ಯೋಗದ ಪ್ರಮಾಣವು “ಭಾವಿ” ಪ್ರಮಾಣವೇ ಹೊರತು “ಹಾಲಿ”ಯಲ್ಲವೆಂದು ಕೆಲವರು ವಾದಿಸಬಹುದು. ಅಂದರೆ, ಈಗ ಹಾಲಿ ಇರುವ ಉದ್ಯೋಗಾವಕಾಶಗಳು ತಮ್ಮ ಆಶೋತ್ತರಗಳಿಗೆ ಪೂರಕವಾದ ವೇತನ ಮತ್ತು ಸೌಲಭ್ಯಗಳನ್ನು ನೀಡುವುದಿಲ್ಲ ಎಂದು ಭಾವಿಸುತ್ತಿರುವುದರಿಂದ ಯುವಜನರು ಉದ್ಯೋಗ ಅರಸುತ್ತಿಲ್ಲ ಎಂಬುದು ಆ ವಾದದ ಸಾರಾಂಶ. ಹೀಗೆ, ನಿಗದಿತ ವೇತನವಿರುವ ಅದರಲ್ಲೂ ಸರ್ಕಾರಿ ಉದ್ಯೋಗಗಳಿಗಾಗಿ ಯುವಜನರು ತೋರುವ ಆದ್ಯತೆಯೇ ನಿರುದ್ಯೋಗಕ್ಕೆ ಕಾರಣವೆಂದು ಹೇಳುತ್ತಾ ನಿರುದ್ಯೋಗದ ಹೊಣೆಗಾರಿಕೆಯನ್ನು ನಿರುದ್ಯೋಗಿಗಳ ಹೆಗಲಿಗೇ ವರ್ಗಾಯಿಸಿಬಿಡಬಹುದು. ಆದರೆ ಈ ವಾದದಿಂದ ವಾಸ್ತವದಲ್ಲಿರುವ ನಿರುದ್ಯೋಗ, ಅರೆ ಉದ್ಯೋಗ ಅಥವಾ ಭಾವಿ ನಿರುದ್ಯೋಗಗಳಿಗೂ ಮತ್ತು ಉದ್ಯೋಗ ಸೃಷ್ಟಿಯಾಗದಿರುವುದಕ್ಕೂ ಇರುವ ಬಲವಾದ ಸಂಬಂಧಗಳನ್ನು ತಳ್ಳಿಹಾಕಲು ಸಾಧ್ಯವಿಲ್ಲ. ಅಲ್ಲದೆ ಆರ್ಥಿಕ ಅಭಿವೃದ್ಧಿಗೂ ಮತ್ತು ಉದ್ಯೋಗ ಸೃಷ್ಟಿಗೂ ಇರುವ ಸಂಬಂಧಗಳನ್ನು ದುರ್ಬಲಗೊಳಿಸುತ್ತಿರುವ ರಾಚನಿಕ ಕಾರಣಗಳನ್ನು ಗುರುತಿಸುವ ಮತ್ತು ಅದನ್ನು ನಿವಾರಿಸುವ ಹೊಣೆಗಾರಿಕೆ ಸರ್ಕಾರದ್ದೇ ಆಗಿದೆ. ಅದರ ಜೊತೆಜೊತೆಗೆ ಈಗಾಗಲೇ ನಿತ್ರಾಣಗೊಂಡು ಜರ್ಝರಿತವಾಗಿರುವ ಉದ್ಯೋಗ ಮಾರುಕಟ್ಟೆಯಲ್ಲಿ ಮೀಸಲಾತಿಯನ್ನು, ಅಂದರೆ ಅತ್ಯಂತ ಅತಂತ್ರತೆಯ ಅಂಚಿನಲ್ಲಿರುವ ವ್ಯಕ್ತಿಯನ್ನು ರಕ್ಷಿಸುವ ಕ್ರಮವನ್ನು, ಹೆಚ್ಚಿಸುತ್ತಿರುವ ಕ್ರಮದ ಹಿಂದಿರುವ ಸರ್ಕಾರದ ಸೋಗಲಾಡಿತನವನ್ನೂ ಯಾರೂ ಅಲ್ಲಗಳೆಯಲು ಸಾಧ್ಯವಿಲ್ಲ್ಲ.
ಹೆಚ್ಚೆಚ್ಚು ವಿದ್ಯಾಭ್ಯಾಸವನ್ನು ಪಡೆದವರ ನಡುವೆ ಇರುವ ಅತಿ ಹೆಚ್ಚು ನಿರುದ್ಯೋಗ ದರಕ್ಕೆ ಅವರÀ ಆಯ್ಕೆ ಮತ್ತು ಆದ್ಯತೆಗಳೇ ಕಾರಣ ಎಂದು ಸರ್ಕಾರವು ವಿವರಿಸಿ ಕೈತೊಳೆದುಕೊಳ್ಳುವ ಪ್ರಯತ್ನ ಮಾಡುತ್ತದೆ. ಅದೇನೇ ಇದ್ದರೂ ಅವರ ಆಯ್ಕೆಗಳು ನಿರ್ದಿಷ್ಟ ಪಥವನ್ನೇ ಅವಲಂಬಿಸುವಂತೆ ಮಾಡಿರುವ ಹೊಣೆಗಾರಿಕೆಯಿಂದ ಸರ್ಕಾರವು ನುಣುಚಿಕೊಳ್ಳಲು ಸಾಧ್ಯವಿಲ್ಲ. ಸರ್ಕಾರವು ಮತದಾರರಿಗೆ ನೀಡುª ಮೀಸಲಾತಿಯಂಥ ಹುಸಿ ರಕ್ಷಣಾ ಕ್ರಮಗಳು ಭ್ರಮ ನಿರಸನಗಳನ್ನು ಹುಟ್ಟುಹಾಕುತ್ತದೆ. ಆದರೆ ಅದು ವ್ಯಗ್ರವಾಗದಂತೆ ನೋಡಿಕೊಳ್ಳಲು ಕೂಡಲೇ ದೊಡ್ಡ ದೊಡ್ಡ ಭರವಸೆಗಳನ್ನು ಘೋಷಿಸಲಾಗುತ್ತದೆ ಆದರೆ ಅದರೊಟ್ಟಿಗೆ ಜನರ ಅಭದ್ರತೆಯನ್ನು ಹೆಚ್ಚಿಸುವ ನೀತಿಗಳ ಬೆದರಿಕೆಯನ್ನೂ ಒಡ್ಡಲಾಗುತ್ತದೆ. ಇದು ಮತ್ತಷ್ಟು ಹುಸಿ ಭರವಸೆಗಳ ಘೋಷಣೆಗೆ ಜನರನ್ನು ಬಲಿ ಮಾಡುವ ರಾಜಕೀಯ ವಿಷಚಕ್ರಕ್ಕೆ ದೂಡುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...