Homeಅಂಕಣಗಳು'ಅವರ ಅರಿವಿನ ಪಾದಕ್ಕೆ ಶರಣು'

‘ಅವರ ಅರಿವಿನ ಪಾದಕ್ಕೆ ಶರಣು’

- Advertisement -
- Advertisement -

 

ಅಂಕಿ ಅಂಶಗಳು ಯಾವಾಗಲೂ ಬೋರ್‍ಹೊಡೆಸುತ್ತವೆ. ಕ್ಷಮಿಸಿ, ಈ ಅಂಕಿಅಂಶಗಳನ್ನು ಹೇಳಲೇಬೇಕಾಗಿದೆ.

2017ರ ಫೆಬ್ರವರಿ ಮೊದಲ ವಾರದಲ್ಲಿ ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರ ನೀಡಿದ ಗೃಹಖಾತೆಯ ರಾಜ್ಯಸಚಿವ ಕಿರಣ್ ರಿಜಿಜು ಈ ಅಂಕಿ-ಅಂಶಗಳನ್ನು ನೀಡಿದರು. ಆ ಪ್ರಕಾರ ಉತ್ತರಪ್ರದೇಶದ ಕೋಮುಗಲಭೆಗಳ ಸಂಖ್ಯೆಯಲ್ಲಿ ಏರಿಕೆಯಾಗಿತ್ತು. 2015ರಲ್ಲಿ ನಡೆದ 155 ಗಲಭೆಗಳಲ್ಲಿ 22 ಜನರು ಬಲಿಯಾಗಿ, 419 ಮಂದಿ ಗಾಯಗೊಂಡಿದ್ದರು. 2016ರಲ್ಲಿ ಒಟ್ಟು 162 ಗಲಭೆಗಳು ನಡೆದು 29 ಮಂದಿ ಸತ್ತು, 488 ಮಂದಿ ಗಾಯಗೊಂಡಿದ್ದರು. 2017ರ ಅಧಿಕೃತ ಅಂಕಿಅಂಶಗಳ ಪ್ರಕಾರ 195 ಕೋಮುಗಲಭೆಗಳು ನಡೆದಿದ್ದು 44 ಮಂದಿ ಕೊಲೆಯಾಗಿ 452 ಮಂದಿ ಗಾಯಗೊಂಡಿದ್ದರು. ದೇಶದಾದ್ಯಂತ ಕೋಮುಗಲಭೆಗಳಲ್ಲಾದ ಸಾವುಗಳಲ್ಲಿ ಶೇ.40ರಷ್ಟು ಸಾವುಗಳು ಉತ್ತರಪ್ರದೇಶದಲ್ಲೇ ನಡೆದಿದ್ದವು.

ಈ ಸರಣಿ ಗಲಭೆಗಳನ್ನು ಅನುಸರಿಸುತ್ತಾ 2017ರ ಫೆಬ್ರವರಿ 11ರಿಂದ ಮಾರ್ಚ್ 8ರವರೆಗೆ ಅಲ್ಲಿ ಚುನಾವಣೆ ನಡೆಯಿತು. ಫಲಿತಾಂಶ ಹೊರಬಿದ್ದಾಗ ಒಟ್ಟು 403 ಸೀಟುಗಳ ವಿಧಾನಸಭೆಯಲ್ಲಿ 312 ಸೀಟುಗಳನ್ನು ಬಿಜೆಪಿ ಗೆದ್ದುಕೊಂಡಿತ್ತು. ಇದು ಕೇವಲ ಉತ್ತರಪ್ರದೇಶದ ಕತೆ ಮಾತ್ರವಲ್ಲ. ಇತ್ತೀಚಿನ ವರ್ಷಗಳಲ್ಲಿ ಚುನಾವಣೆಗಳ ಹೊಸ್ತಿಲಲ್ಲಿ ಕೋಮುಗಲಭೆಗಳು ನಡೆಯುವುದು ಒಂದು ವಾಡಿಕೆಯಂತಾಗಿ ಹೋಗಿದೆ.

ಆದರೆ ಕರ್ನಾಟಕದ ನೆಲದಲ್ಲಿ ಈ ಸ್ಟ್ರಾಟೆಜಿ ಫಲಿಸಲಿಲ್ಲ. ಮಾತ್ರವಲ್ಲ, ಕಳೆದ ಕೆಲವು ತಿಂಗಳ ವಿದ್ಯಮಾನಗಳನ್ನು ಅವಲೋಕಿಸಿದರೆ ಈ ಷಡ್ಯಂತ್ರ ಮತೀಯ ಶಕ್ತಿಗೆ ತಿರುಗುಬಾಣವಾಗಿ ಪರಿಣಮಿಸಿದೆ ಎಂಬುದು ವೇದ್ಯವಾಗುತ್ತದೆ.

ಹೆಣ ರಾಜಕಾರಣ..

ಚುನಾವಣೆಯ ಪೂರ್ವತಯಾರಿಯೆಂಬಂತೆ ಈ ವರ್ಷದ ಜನವರಿ ಮತ್ತು ಫೆಬ್ರವರಿ ತಿಂಗಳಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಕೋಮುಗಲಭೆಯ ಕಾರ್ಮೋಡಗಳು ಕವಿದುಕೊಂಡಿದ್ದು, ನಾಡಿನ ಸೌಹಾರ್ದಪ್ರಿಯ ಜನತೆಯಲ್ಲಿ ಸಹಜವಾಗಿಯೇ ಆತಂಕ ಸೃಷ್ಟಿಸಿತ್ತು. ಹೆಣಗಳನ್ನು ಮುಂದಿಟ್ಟುಕೊಂಡು ಕೋಮು ದಳ್ಳುರಿ ಎಬ್ಬಿಸಲು ಸ್ವತಃ ಶಾಸಕರು, ಸಂಸದರು, ಅಷ್ಟೇ ಏಕೆ? ಕೇಂದ್ರದ ಮಂತ್ರಿ ಅನಂತಕುಮಾರ್ ಹೆಗಡೆಯವರೇ ಅಖಾಡಕ್ಕಿಳಿದರು. ಜನರಿಂದ ಬಂದ ಸ್ಪಂದನೆ ಅವರ ಲೆಕ್ಕಾಚಾರಕ್ಕೆ ವಿರುದ್ಧವಾಗಿತ್ತು.

ಮಂಗಳೂರಿನಲ್ಲಿ ಕೊಲೆಯಾದ ನತದೃಷ್ಟ ಯುವಕ ದೀಪಕ್ ರಾವ್ ಕೆಲಸ ಮಾಡುತ್ತಿದ್ದ ಮೊಬೈಲ್ ಅಂಗಡಿಯ ಮಾಲಿಕ ಒಬ್ಬ ಮುಸ್ಲಿಂ. ಆತ ದೀಪಕ್‍ನ ಕುಟುಂಬದವರಂತೆಯೇ ದುಃಖಿತನಾಗಿದ್ದ. ಆ ಮಾಲಿಕನ ಹೆಂಡತಿ ದೀಪಕ್‍ನ ತಾಯಿಯನ್ನು ತಬ್ಬಿ ಸಂತೈಸಿದ್ದು, ತನ್ನ ಸ್ವಂತ ಮಗನೇ ಸತ್ತಂತೆ ಆ ತಾಯಿ ಹೃದಯ ರೋದಿಸಿದ್ದು ಬಹುಜನರ ಅಂತಃಕರಣವನ್ನು ಕಲಕಿತ್ತು. ಕೊಲೆಯಾದ ಶರತ್ ಮಡಿವಾಳ ರಕ್ತದ ಮಡುವಿನಲ್ಲಿ ಒದ್ದಾಡುತ್ತಿದ್ದಾಗ ಆತನ ನೆರವಿಗೆ ಧಾವಿಸಿ, ಆತನನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಿದವನು ಒಬ್ಬ ಮಸಲ್ಮಾನ ಆಟೋ ಚಾಲಕನಾಗಿದ್ದ. ಈ ಘಟನೆಗಳು ಒಟ್ಟಾರೆ ನಾಡಿನ ಜನಸ್ಪಂದನೆಯ ಕೆಲ ಬಿಡಿ ಚಿತ್ರಗಳಷ್ಟೆ.

ಚುನಾವಣೆಗೆ ತಯಾರಿಯೆಂಬಂತೆ ಅನಾವರಣಗೊಳ್ಳಲಿದ್ದ ಮತೀಯ ಜ್ವಾಲೆಯ ಅಪಾಯದ ವಿರುದ್ದ ಹಲವಾರು ಸಂಘಟನೆಗಳು, ಸಾಹಿತಿ, ಕಲಾವಿದರು, ಚಿಂತಕರು ದನಿಯೆತ್ತಿದರು. ಜನಸಾಮಾನ್ಯರು ಕೂಡ ಈ ಷಡ್ಯಂತ್ರವನ್ನು ಮನಗಂಡು ಈ ಕೋಮುವ್ಯಾಧಿಗಳನ್ನು ಪ್ರಶ್ನಿಸಿದರು, ಅವರ ಮತೀಯ ಕರೆಗಳನ್ನು ತಿರಸ್ಕರಿಸಿದರು. ಬಹುಶಃ ಇದು ನಮ್ಮ ಮಣ್ಣಿನ ಗುಣ ಅನಿಸುತ್ತೆ.

ಅತ್ತ ಮೈಸೂರಿನಲ್ಲಿ ಸಂಸದ ಪ್ರತಾಪ ಸಿಂಹ ಇಂಥದೇ ಅಜೆಂಡಾ ಜಾರಿ ಮಾಡಲು ಹೊರಟಿದ್ದು, ಮೈಮೇಲೆ ದೆವ್ವ ಬಂದವನಂತೆ ಕೂಗಾಡಿ ಪೊಲೀಸರ ಬ್ಯಾರಿಕೇಡ್ ಮೇಲೆಯೇ ಕಾರು ಚಲಾಯಿಸಿ, ಪೊಲೀಸರನ್ನು ಗಾಯಗೊಳಿಸಿದ್ದೂ ಆಯ್ತು. ಈತನ ಈ ಗೂಂಡಾ ವರ್ತನೆಗೆ ಸ್ಪಷ್ಟೀಕರಣ ಎಂಬಂತೆ ತದನಂತರ ಒಂದು ವಾಟ್ಸಪ್ ವಿಡಿಯೋ ವೈರಲ್ ಆಗಿತ್ತು. ಅದು ಬಿಜೆಪಿಯ ಹುನ್ನಾರವನ್ನು ಬಟಾಬಯಲಾಗಿಸಿತ್ತು. ಕರ್ನಾಟಕದ ಬಿಜೆಪಿ ಕಾರ್ಯಕರ್ತರ ‘ದುರ್ಬಲ’ ಚಟುವಟಿಕೆಗಳನ್ನು ವಿಮರ್ಶಿಸಿದ ಅಮಿತ್ ಶಾ ‘ನೀವು ಎಷ್ಟು ಲಾಠಿ ಚಾರ್ಜ್ ಮಾಡಿಸಿದ್ದೀರಿ? ಎಷ್ಟು ಟಿಯರ್ ಗ್ಯಾಸ್ ಹೋರಾಟ ಮಾಡಿದ್ದೀರಿ? ಎಷ್ಟು ಕಫ್ರ್ಯೂ ಬೀಳುವ ಹೋರಾಟ ಮಾಡಿದ್ದೀರಿ?’ ಅಂತ ಪ್ರಶ್ನೆ ಮಾಡಿ, ಉಗ್ರವಾದ ಪ್ರತಿಭಟನೆಗಳನ್ನು ಹಮ್ಮಿಕೊಳ್ಳುವಂತೆ ಬೋಧಿಸಿದ್ದರೆಂದೂ, ಅದರ ಪ್ರಕಾರವೇ ನಾವು ಇಂತಹ ಹೋರಾಟ ನಡೆಸುತ್ತಿದ್ದೇವೆಂದೂ ಸ್ವತಃ ಪ್ರತಾಪ ಸಿಂಹ ವಿವರಣೆ ಕೊಟ್ಟಿದ್ದ! ಈ ವಿಡಿಯೋ ಬಹಿರಂಗವಾದ ನಂತರ ಈ ಸಿಮ್ಮ ತಲೆತಪ್ಪಿಸಿಕೊಂಡು ತಿರುಗಾಡಬೇಕಾಯ್ತು.

ಹೀಗೆ ಬೆಂಕಿ ಹಚ್ಚಿ ಮತಗಳನ್ನು ದೃವೀಕರಣ ಮಾಡುವ ಅಮಿತ್ ಶಾನ ಈ ‘ಮಾಸ್ಟರ್ ಸ್ಟ್ರಾಟೆಜಿ’ಗಳು ಕರ್ನಾಟಕದಲ್ಲಿ ಮಕಾಡೆ ಬಿದ್ದಿವೆ. ಇವರು ಹೆಚ್ಚೆಚ್ಚು ಆಕ್ರಮಣಶಾಲಿಯಾಗಿ ವರ್ತಿಸಿದಷ್ಟೂ ಜನರು ಇವರಿಂದ ದೂರ ಸರಿದಿದ್ದು ಮಾತ್ರ ನಿಜ. ಹೀಗಾಗಿ ವಿಧಿಯಿಲ್ಲದೆ ಇವರು ಪ್ಲೇಟು ಬದಲಿಸಬೇಕಾಯ್ತು. ನಂತರ ಜನಪ್ರಿಯ ಯೋಜನೆಗಳಾದ ಅನ್ನ ಭಾಗ್ಯದ ಯಶಸ್ಸು ಮೋದಿಯದು ಎಂದರು. ನುಡಿದಂತೆ ನಡೆದಿದ್ದೇವೆ ಎಂಬ ಕಾಂಗ್ರೆಸ್ ಘೋಷಣೆಯನ್ನೇ ಹೈಜಾಕ್ ಮಾಡುವ ಹತಾಶ ಪ್ರಯತ್ನ ಮಾಡಿದರು. ಊಹೂಂ, ಯಾವುದೂ ವರ್ಕ್‍ಔಟ್ ಆಗುತ್ತಿಲ್ಲ.

ಗತಿಯಿಲ್ಲದೆ ಈಗ ಸಮ್ಮಿಶ್ರ ಸರ್ಕಾರದ ಸಾಧ್ಯತೆಯನ್ನು ವರ್ಕ್‍ಔಟ್ ಮಾಡುತ್ತಿದ್ದಾರೆ. ಈ ಬಗ್ಗೆ ರಾಜಕೀಯ ವಲಯದಲ್ಲಿ ನಾನಾ ಸುದ್ದಿಗಳು ಹರಿದಾಡುತ್ತಿವೆ. ಸದ್ಯ ಯಾವ ಸ್ಥಿತಿಗೆ ದೂಡಲ್ಪಟ್ಟಿದ್ದಾರೆಂದರೆ ತಮ್ಮ ಉಡುಪಿಯ ಸಮಾವೇಶದಲ್ಲಿ ಸ್ವತಃ ಪ್ರಧಾನಿ ಮೋದಿಯೇ ದೇವೇಗೌಡರನ್ನು ಯದ್ವಾತದ್ವಾ ಹೊಗಳಿದ್ದಾರೆ. ‘ದೇವೇಗೌಡರು ವೃದ್ಧಾಶ್ರಮ ಸೇರಿಕೊಳ್ಳಲಿ’ ಎಂದು ಹೀಯಾಳಿಸಿ ಇದೇ ಮೋದಿ ಮಾತಾಡಿದ್ದರೆಂಬುದನ್ನು ಮರೆಮಾಚಿದ ದೊಡ್ಡಗೌಡರು ಮೋದಿಯ ‘ಮುತ್ಸದ್ದಿತನ’ ಮೆಚ್ಚಿ ಹೇಳಿಕೆ ಕೊಟ್ಟಿದ್ದಾರೆ. ಬಿಜೆಪಿ ಭ್ರಷ್ಟಾಚಾರಕ್ಕೆ ವಿರುದ್ಧ ಎಂದು ತೋರಿಸಿಕೊಳ್ಳಲು ಅವರು ನಡೆಸುತ್ತಿರುವ ಹತಾಶ ಕಸರತ್ತುಗಳು ಜನರಿಗೆ ಪುಕ್ಕಟ್ಟೆ ಮನರಂಜನೆ ಒದಗಿಸುತ್ತಿವೆಯಷ್ಟೆ. ಒಂದೆಡೆ ಅಕ್ರಮ ಗಣಿದಣಿ ‘ಜನಾರ್ಧನರೆಡ್ಡಿಗೂ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ’ವೆಂದು ರಾಜ್ಯ ಉಸ್ತುವಾರಿ ಮುರಳೀಧರ್ ರಾವ್ ಹೇಳುತ್ತಿದ್ದರೆ, ಅದರ ಬೆನ್ನಿಗೇ ಯಡ್ಯೂರಪ್ಪನವರು ‘ರೆಡ್ಡಿ ನಮ್ಮ ಪಕ್ಷದ ದೊಡ್ಡ ಶಕ್ತಿ, ಅವರನ್ನು ಪ್ರಚಾರಕ್ಕೆ ಬಳಸಿಕೊಳ್ಳಲು ಅಮಿತ್‍ಶಾ ಅವರೇ ಹೇಳಿದ್ದಾರೆ’ ಅಂದುಬಿಡೋದೇ? ಇವರ ಇಂಥಾ ಗೋಸುಂಬೆ ಬಣ್ಣ ಆಡಿಕೊಳ್ಳುವವರಿಗೆ ಸರಕಾಗಿದೆ.

ಫೆಬ್ರವರಿ 19ರಂದು ಶ್ರವಣಬೆಳಗೊಳದಲ್ಲಿ ಮಾತಾಡಿದ ಮೋದಿ ‘ಸಮಾಜದಲ್ಲಿ ಅನಾಚಾರ ವ್ಯಾಪಿಸಿದಾಗ ಸಂತರು, ಮುನಿಗಳು ಜನ್ಮತಾಳಿ ಸಮಾಜವನ್ನು ಸರಿದಾರಿಗೆ ತಂದಿದ್ದಾರೆ. ಅನಾಗರಿಕತೆಯಿಂದ ನಾಗರಿಕತೆಯ ಕಡೆ ಬದುಕಲು ಪ್ರೇರಣೆ ನೀಡಿದ್ದಾರೆ’ ಎಂದು ಭರ್ಜರಿ ಭಾಷಣ ಮಾಡಿ ಚಪ್ಪಾಳೆ ಗಿಟ್ಟಿಸಿದ್ದರು. ಮೊನ್ನೆಯ ದಿನ ಸಚಿವ ಅನಂತಕುಮಾರ್ ಹೆಗಡೆ, ರಾಹುಲ್‍ಗಾಂಧಿಯನ್ನು ಟೀಕಿಸುವ ಭರದಲ್ಲಿ ಶ್ರವಣಬೆಳಗೊಳದ ಬಾಹುಬಲಿಯನ್ನು ಅಪಹಾಸ್ಯ ಮಾಡಿ ತನ್ನ ನಿಜ ಬಣ್ಣ ತೋರಿಸಿಯೇಬಿಟ್ಟರು. ಇದರಿಂದ ಆಕ್ರೋಶಗೊಂಡ ಜೈನರು ಈ ಹರಕುಬಾಯಿ ಸಚಿವನ ಪ್ರತಿಕೃತಿಗೆ ಚಪ್ಪಲಿ ಹಾರ ಹಾಕಿ ಪ್ರತಿಭಟಿಸಿದ್ದಾರೆ.

ಹಾಗೆಯೇ ಕನ್ನಡ ಸೆಂಟಿಮೆಂಟನ್ನು ಎನ್‍ಕ್ಯಾಷ್ ಮಾಡಿಕೊಳ್ಳಲು ಹೋದ ಮೋದಿ ಮಹಾಶಯ ‘ನಾನೊಬ್ಬ ಕನ್ನಡಿಗ’ ಎಂದು ಹೇಳಿದ್ದು ಇನ್ನಷ್ಟು ಪೀಕಲಾಟಕ್ಕೆ ಇಟ್ಟುಕೊಂಡಿದೆ. ‘ನೀವು ನಿಜವಾದ ಕನ್ನಡಿಗನೇ ಆಗಿದ್ದರೆ ಕನ್ನಡ ನಾಡ ದ್ವಜಕ್ಕೆ ಮಾನ್ಯತೆ ಕೊಡಿ’ ಎಂದರೆ ಅವರಲ್ಲಿ ಉತ್ತರವಿಲ್ಲ. ಹೀಗೆ ಅವರ ಪ್ರತಿಯೊಂದು ತಂತ್ರವೂ ಬೂಮರಾಂಗ್ ಆಗುತ್ತಿದೆ; ಉಗ್ರ ಆಟಾಟೋಪ ದಿನೇದಿನೇ ಕ್ಷೀಣವಾಗುತ್ತಿದೆ. ಸ್ವತಃ ಮೋದಿಯ ಮಾತುಗಳೇ ಆಕರ್ಷಣೆ ಕಳೆದುಕೊಂಡಿವೆ.

ಹೀಗೆ ಕರ್ನಾಟಕದಲ್ಲಿ ಸೋ ಕಾಲ್ಡ್ ಚಾಣಕ್ಯ ಅಮಿತ್ ಶಾ ಹೆಣೆಯುತ್ತಿರುವ ತಂತ್ರಗಳು ಒಂದೊಂದಾಗಿ ಫ್ಲಾಪ್ ಆಗಿದ್ದು ನಾಡಿನ ಶಾಂತಿ, ಸೌಹಾರ್ದ ಪರಂಪರೆ ಸದ್ಯಕ್ಕೆ ಮೇಲುಗೈ ಸಾಧಿಸಿದಂತೆ ಕಾಣುತ್ತದೆ. ಇದು ಬಸವಣ್ಣನ ನಾಡು, ಶರೀಫಜ್ಜ, ಕುವೆಂಪು ಅವರ ನಾಡು. ಇಲ್ಲಿ ಸೌಹಾರ್ದ ಪರಂಪರೆಗೆ ದೊಡ್ಡ ಇತಿಹಾಸವೇ ಇದೆ. ನಮ್ಮ ಸೌಹಾರ್ದ ಪರಂಪರೆಯನ್ನು ಉಳಿಸಿ, ಬೆಳೆಸಲಿಕ್ಕಾಗಿ ಅನೇಕ ಚೇತನಗಳು ದುಡಿಯುತ್ತಿವೆ. ಅವರೆಲ್ಲರ ಅರಿವಿನ ಪಾದಕ್ಕೆ ಶರಣು ಎನ್ನೋಣ.

  • ಸಂಪಾದಕೀಯ ತಂಡದ ಪರವಾಗಿ
    ದೊಡ್ಡಿಪಾಳ್ಯ ನರಸಿಂಹಮೂರ್ತಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...