Homeಕರ್ನಾಟಕಸದನದಲ್ಲಿ ಮಿಂಚಿದ ಬಸವ ಪ್ರಣೀತ ಶಾಸಕ ನಾರಾಯಣರಾವ್

ಸದನದಲ್ಲಿ ಮಿಂಚಿದ ಬಸವ ಪ್ರಣೀತ ಶಾಸಕ ನಾರಾಯಣರಾವ್

- Advertisement -
- Advertisement -

ಬಸವ ಪ್ರಣೀತ ಲಿಂಗಾಯತನಾದ ಶಾಸಕ ನಾರಾಯಣರಾವ್

ಬಸವ ಕಲ್ಯಾಣದ ಶಾಸರ ಬಿ.ನಾರಾಯಣರಾವ್ ನಿನ್ನೆ ದಿನ ವಿಧಾನಸೌಧದಲ್ಲಿ ಆಡಿದ ಮನಪೂರ್ವಕವಾದ ಮಾತುಗಳಿಗೆ ಎಲ್ಲಿಲ್ಲದ ಪ್ರಶಂಸೆಯ ಸುರಿಮಳೆ ನಡೆದಿದೆ. ಮೂಲತಃ ಶರಣರ ಅಂಬಿಗರ ಚೌಡಯ್ಯನವರ ಚಾಟಿ ಏಟು, ಒಳ ಹೊಡೆತಗಳು ಅವರ ಮಾತುಗಳಲ್ಲಿ ನಾವು ಧಾರಾಳವಾಗಿ ಕಾಣಬಹುದು. ಶಾಸಕ ಬಿ.ನಾರಾಯಣರಾವ್ ಬಸವಕಲ್ಯಾಣದ ಜನತೆಯೆ ಬಲ್ಲಂತೆ ಸಾದಾ ಸೀದಾ ಜೀವನ ನಿರ್ವಹಿಸುವ, ನಿಗರ್ವಿ ಶಾಸಕ. ಯಾರಾದರೂ ಮಾತಾಡಿಸಬಹುದಾಗಿ, ಮತ್ತಾರಾದರೂ ತಕರಾರು ತೆಗೆಯಬಹುದಾದ ಸರಳತೆಯನ್ನು ಮೈಗೂಡಿಸಿಕೊಂಡವರು.

ಶರಣರ ವಿಚಾರಗಳೆ ಹಾಗೆ. ಒಂದು ಒಂದು ಸಲ ಅವುಗಳ ಸಮೀಪಕ್ಕೆ ಬರಬೇಕು ಅಷ್ಟೇ : ಅನಂತರ ಅವರಿಗೆ ಅರಿವಿಲ್ಲದೆ ಅವರೊಳಗೆ ಚಿಂತನೆ, ಸಾಮಾಜಿಕ ಕಾಳಜಿ, ನಿಜವಾದ ಧಾರ್ಮಿಕ ಪ್ರಜ್ಞೆಗಳು ಹುಟ್ಟಿಕೊಳ್ಳಲು ಆರಂಭವಾಗುತ್ತವೆ. ನಮಗೆ ಗೊತ್ತಿಲ್ಲದೆ ಪ್ರತಿಭಟಿಸುವ ಮನಸ್ಸು, ವಸ್ತು ಸ್ಥಿತಿಯನ್ನು ಅವಲೋಕಿಸಿ ಸೂಕ್ತ ಸಮಯದಲ್ಲಿ ಸರಿಯಾದ ಮಾತನಾಡುವ ಕಸುವು ತಂತಾನೆ ಉಂಟಾಗುತ್ತದೆ.

ಕುಂಡಲಿ ಬಂದು ಕೀಡಿಯನು ಕುಂಡಲಿಯ ಮಾಡಿತ್ತಯ್ಯಾ

ಅಗ್ನಿ ಬಂದು ಕಾಷ್ಠವ ಅಗ್ನಿಯ ಮಾಡಿತ್ತಯ್ಯಾ

ಮಹೇಶ ಬಂದು ಭಕ್ತನ ಮಹೇಶನ ಮಾಡಿ

ಗಮನಿಸಿದನಯ್ಯಾ ಕಪಿಸಿದ್ಧ ಮಲ್ಲಿಕಾರ್ಜುನಾ

ಎಂಬಂತೆ ಒಂದೆ ಒಂದು ಸಲ ಶರಣರ ವಿಚಾರಧಾರೆಯತ್ತ ಇಣುಕಿ ನೋಡಿದರೂ ಸಾಕು. ಖಂಡಿತವಾಗಿ ಕೀಡೆ ಕುಂಡಲಿಯಾಗುತ್ತದೆ. ಬೆಂಕಿ ಕಟ್ಟಿಗೆಯ ಸಮೀಪ ಬಂದು ಕಟ್ಟಿಗೆಯನ್ನು ಹೇಗೆ ಬೆಂಕಿ ಮಾಡಬಲ್ಲುದೋ ಹಾಗೆ. ಮಹೇಶ ಬಂದು ಭಕ್ತನ ಮಹೇಶ ಸ್ಥಲಕ್ಕೆ ಕರೆದುಕೊಂಡು ಹೋಗುವಂತೆ ಎಂಬ ಸೊನ್ನಲಾಪುರದ ಶರಣ ಸಿದ್ಧರಾಮಯ್ಯನ ಮಾತಿನಲ್ಲಿ ಬಹುದೊಡ್ಡ ಇತಿಹಾಸವಿದೆ.

ಬಸವರಾಜ ಪಾಟೀಲ ಅಷ್ಟೂರೆ, ಖೂಬಾ ಅವರ ನಡುವೆ ಗೆದ್ದು ಬರುವುದು ಅಷ್ಟು ಸುಲಭದ ಮಾತಲ್ಲ. ಶಾಸಕ ನಾರಾಣಯರಾವ್ ರಾಜಕೀಯ ಘಟಾನು ಘಟಿಗಳ ನಡುವೆಯೂ ಗೆದ್ದು ಬರುವ ಛಾತಿಯನ್ನು ಇಟ್ಟುಕೊಳ್ಳಲು ಸಾಧ್ಯವಾದುದು ಅವರ ಬದ್ಧತೆಗೆ. ಜನ ಸಾಮಾನ್ಯನೊಂದಿಗೆ ಬೆರೆತು ಅವರೊಳಗೆ ಒಂದಾಗುವ ಕ್ರಿಯೆಗೆ. ಬಹುತೇಕ ರಾಜಕಾರಣಿಗಳಿಗೆ ವಿಚಾರವೆಂಬುದು ಇರುವುದಿಲ್ಲ. ಆ ವಿಚಾರಗಳನ್ನು ಅವರಲ್ಲಿ ದೀಪ ಹಚ್ಚಿ ಹುಡುಕಬೇಕು. ಆದರೆ ಈ ನಾರಾಯಣರಾವ್ ಮಾತ್ರ ಬಸವಾದಿ ಶಿವಶರಣರ ವಿಚಾರಗಳನ್ನು ಅರಿತುಕೊಂಡು ಅವುಗಳನ್ನು ಆಚರಿಸುವತ್ತ ಆಸಕ್ತಿ ತೋರಿಸಿದ್ದಾರೆ.

ಹೀಗಾಗಿಯೇ ವಿಧಾನಸೌಧದಲ್ಲಿ ಎಲ್ಲಾ ಸದಸ್ಯರಿಗೂ ಅರಿವು ಮೂಡಿಸುವ ಅನುಭಾವದ ಮಾತುಗಳನ್ನು ಹೇಳಿದ್ದಾರೆ. ಜಗತ್ತಿಗೆ ಮೊಟ್ಟ ಮೊದಲು ಪ್ರಜಾಪ್ರಭುತ್ವದ ಆಡಳಿತ ತಂದದ್ದು ಬ್ರಿಟನ್ ದೇಶ ಅಲ್ಲ, ನಮ್ಮ ರಾಜ್ಯದ ಬಸವ ಕಲ್ಯಾಣ ಎಂಬುದುನ್ನು ಅವರು ಒತ್ತಿ ಒತ್ತಿ ಹೇಳಿದ್ದಾರೆ. ತನ್ನ ರಾಜ್ಯದಲ್ಲಿ ಯಾರೂ ಹಸಿವಿನಿಂದ ಕಂಗಾಲಾಗಿ ಸಾಯಬಾರದು ಎಂದು ಅರಿತುಕೊಂಡ ಬಸವಣ್ಣನವರು ದಾಸೋಹ ಪರಿಕಲ್ಪನೆಯನ್ನು ಜಾರಿಗೆ ತಂದರು ಎಂದು ನೆನಪಿಸಿಕೊಂಡಿದ್ದಾರೆ. ಜಾತಿ ಮತ ಪಂಥವೆನ್ನದೆ, ಗಂಡು ಹೆಣ್ಣು ಎಂಬ ತರತಮಭಾವನೆ ಇಟ್ಟುಕೊಳ್ಳದೆ ಅಂದು ಕಲ್ಯಾಣದಲ್ಲಿ ಬಸವಣ್ಣ ಅನುಭವ ಮಂಟಪ ಕಟ್ಟಿದರು. ಈ ಅನುಭವ ಮಂಟಪವನ್ನು ಮತ್ತೆ ಪುನರ್ ನಿರ್ಮಿಸುವ ಮೂಲಕ ಜನ ಸಾಮಾನ್ಯರಿಗೆ ಪ್ರೇರಣೆ ಒದಗಿಸುವುದು ಸರಕಾರದ ಕರ್ತವ್ಯ ಎಂದು ನಾರಾಯಣರಾವ್ ಒತ್ತಿ ಹೇಳಿದರು.

ಜೊತೆಗೆ ಇಂದಿನ ರಾಜಕೀಯ ತೀರಾ ಬಗ್ಗಡಗೊಂಡು ಹೋಗಿದೆ. ಕೋಟಿ ಕೋಟಿಗಳನ್ನು ಖರ್ಚು ಮಾಡಿ ಗೆದ್ದು ಬರುವ ಸ್ಥಿತಿ ನಿರ್ಮಾಣವಾಗಿದೆ. ಶ್ರೀಸಾಮಾನ್ಯ ಹೀಗೆ ಗೆದ್ದು ಬರಲು ಸಾಧ್ಯವೆ ? ಎಂಬ ಆತ್ಮಾವಲೋಕನದ ನುಡಿಗಳನ್ನು ಆಡುವ ಮೂಲಕ ವಿಧಾನಸಭೆಯ ಸದಸ್ಯರ ಮನವನ್ನು ಅಲ್ಲಾಡಿಸಿಬಿಟ್ಟಿದ್ದಾರೆ.

ಬಸವಣ್ಣನವರ ಬಗೆಗೆ ಮಾತಾಡುವುದೆ ಒಂದು ಸಾಹಸ ಎಂದು ಜಾತಿ ಲಿಂಗಾಯತರು ಅವಲತ್ತುಕೊಳ್ಳುವ ಈ ಸಂದರ್ಭದಲ್ಲಿ ನಿಜವಾದ ಬಸವ ಪ್ರಣೀತ ಲಿಂಗಾಯತನಾದ ನಾರಾಣರಾವ್ ಮಾತಾಡುವುದು ಹೆಚ್ಚು ಸೂಕ್ತವಾಗಿದೆ. ಇದಲ್ಲದೆ ಇತಿಹಾಸದ ಪುಟಗಳನ್ನು ತೆಗೆದು ನೋಡಿದಾಗಲೂ ಸಹ ಬಸವಾದಿ ಶರಣರ ಕುರಿತು, ಅವರ ವಚನಗಳ ಕುರಿತು ಆಸಕ್ತಿ ತಳೆದವರು ಅನ್ಯ ಮತದವರು. ಹರ್ಡೇಕರ ಮಂಜಪ್ಪ, ಫ.ಗು. ಹಳಕಟ್ಟಿ, ಅನಕೃ, ಆರ್.ಆರ್.ದಿವಾಕರ್, ಎಂ.ಆರ್.ಶ್ರೀನಿವಾಸ ಮೂರ್ತಿ ಮೊದಲಾದವರು ಆಸಕ್ತಿ ತಳೆದರೆಂದೆ ನಮಗಿಂದು ವಚನ ಸಾಹಿತ್ಯವೆಂಬ ಸಕಲ ಜೀವಪ್ರೇಮದ, ವಿಶ್ವ ಹೃದಯಿಯಾದ ವಚನ ಸಾಹಿತ್ಯ ದಕ್ಕಿದೆ.

ನಾರಾಯಣರಾವ್‍ರ ಕೌಟುಂಬಿಕ ಕಲಹಗಳೇನೇ ಇದ್ದರೂ ಸಾಮಾಜಿಕವಾಗಿ ಅವರ ಬದ್ಧತೆ, ವೈಚಾರಿಕ ನಿಲುವುಗಳನ್ನು ಕರ್ನಾಟಕದ ಜನತೆ ಭರವಸೆಯಿಂದ ನೋಡುತ್ತಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Basavaraj patil ashture alla. Basavaraj patil attur. Dr Basavaraj patil ashtur ennuva mattobba BJP leader. In last assembly election he (ashture) contested from Bidar (south) constituency on BJP ticket. Attur is ex minister.

  2. Basavaraj patil ashture alla. Basavaraj patil attur. Dr Basavaraj patil ashtur ennuva mattobba BJP leader. In last assembly election he (ashture) contested from Bidar (south) constituency on BJP ticket. Attur is ex minister.

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...