Homeಕರ್ನಾಟಕಸದನದಲ್ಲಿ ಮಿಂಚಿದ ಬಸವ ಪ್ರಣೀತ ಶಾಸಕ ನಾರಾಯಣರಾವ್

ಸದನದಲ್ಲಿ ಮಿಂಚಿದ ಬಸವ ಪ್ರಣೀತ ಶಾಸಕ ನಾರಾಯಣರಾವ್

- Advertisement -
- Advertisement -

ಬಸವ ಪ್ರಣೀತ ಲಿಂಗಾಯತನಾದ ಶಾಸಕ ನಾರಾಯಣರಾವ್

ಬಸವ ಕಲ್ಯಾಣದ ಶಾಸರ ಬಿ.ನಾರಾಯಣರಾವ್ ನಿನ್ನೆ ದಿನ ವಿಧಾನಸೌಧದಲ್ಲಿ ಆಡಿದ ಮನಪೂರ್ವಕವಾದ ಮಾತುಗಳಿಗೆ ಎಲ್ಲಿಲ್ಲದ ಪ್ರಶಂಸೆಯ ಸುರಿಮಳೆ ನಡೆದಿದೆ. ಮೂಲತಃ ಶರಣರ ಅಂಬಿಗರ ಚೌಡಯ್ಯನವರ ಚಾಟಿ ಏಟು, ಒಳ ಹೊಡೆತಗಳು ಅವರ ಮಾತುಗಳಲ್ಲಿ ನಾವು ಧಾರಾಳವಾಗಿ ಕಾಣಬಹುದು. ಶಾಸಕ ಬಿ.ನಾರಾಯಣರಾವ್ ಬಸವಕಲ್ಯಾಣದ ಜನತೆಯೆ ಬಲ್ಲಂತೆ ಸಾದಾ ಸೀದಾ ಜೀವನ ನಿರ್ವಹಿಸುವ, ನಿಗರ್ವಿ ಶಾಸಕ. ಯಾರಾದರೂ ಮಾತಾಡಿಸಬಹುದಾಗಿ, ಮತ್ತಾರಾದರೂ ತಕರಾರು ತೆಗೆಯಬಹುದಾದ ಸರಳತೆಯನ್ನು ಮೈಗೂಡಿಸಿಕೊಂಡವರು.

ಶರಣರ ವಿಚಾರಗಳೆ ಹಾಗೆ. ಒಂದು ಒಂದು ಸಲ ಅವುಗಳ ಸಮೀಪಕ್ಕೆ ಬರಬೇಕು ಅಷ್ಟೇ : ಅನಂತರ ಅವರಿಗೆ ಅರಿವಿಲ್ಲದೆ ಅವರೊಳಗೆ ಚಿಂತನೆ, ಸಾಮಾಜಿಕ ಕಾಳಜಿ, ನಿಜವಾದ ಧಾರ್ಮಿಕ ಪ್ರಜ್ಞೆಗಳು ಹುಟ್ಟಿಕೊಳ್ಳಲು ಆರಂಭವಾಗುತ್ತವೆ. ನಮಗೆ ಗೊತ್ತಿಲ್ಲದೆ ಪ್ರತಿಭಟಿಸುವ ಮನಸ್ಸು, ವಸ್ತು ಸ್ಥಿತಿಯನ್ನು ಅವಲೋಕಿಸಿ ಸೂಕ್ತ ಸಮಯದಲ್ಲಿ ಸರಿಯಾದ ಮಾತನಾಡುವ ಕಸುವು ತಂತಾನೆ ಉಂಟಾಗುತ್ತದೆ.

ಕುಂಡಲಿ ಬಂದು ಕೀಡಿಯನು ಕುಂಡಲಿಯ ಮಾಡಿತ್ತಯ್ಯಾ

ಅಗ್ನಿ ಬಂದು ಕಾಷ್ಠವ ಅಗ್ನಿಯ ಮಾಡಿತ್ತಯ್ಯಾ

ಮಹೇಶ ಬಂದು ಭಕ್ತನ ಮಹೇಶನ ಮಾಡಿ

ಗಮನಿಸಿದನಯ್ಯಾ ಕಪಿಸಿದ್ಧ ಮಲ್ಲಿಕಾರ್ಜುನಾ

ಎಂಬಂತೆ ಒಂದೆ ಒಂದು ಸಲ ಶರಣರ ವಿಚಾರಧಾರೆಯತ್ತ ಇಣುಕಿ ನೋಡಿದರೂ ಸಾಕು. ಖಂಡಿತವಾಗಿ ಕೀಡೆ ಕುಂಡಲಿಯಾಗುತ್ತದೆ. ಬೆಂಕಿ ಕಟ್ಟಿಗೆಯ ಸಮೀಪ ಬಂದು ಕಟ್ಟಿಗೆಯನ್ನು ಹೇಗೆ ಬೆಂಕಿ ಮಾಡಬಲ್ಲುದೋ ಹಾಗೆ. ಮಹೇಶ ಬಂದು ಭಕ್ತನ ಮಹೇಶ ಸ್ಥಲಕ್ಕೆ ಕರೆದುಕೊಂಡು ಹೋಗುವಂತೆ ಎಂಬ ಸೊನ್ನಲಾಪುರದ ಶರಣ ಸಿದ್ಧರಾಮಯ್ಯನ ಮಾತಿನಲ್ಲಿ ಬಹುದೊಡ್ಡ ಇತಿಹಾಸವಿದೆ.

ಬಸವರಾಜ ಪಾಟೀಲ ಅಷ್ಟೂರೆ, ಖೂಬಾ ಅವರ ನಡುವೆ ಗೆದ್ದು ಬರುವುದು ಅಷ್ಟು ಸುಲಭದ ಮಾತಲ್ಲ. ಶಾಸಕ ನಾರಾಣಯರಾವ್ ರಾಜಕೀಯ ಘಟಾನು ಘಟಿಗಳ ನಡುವೆಯೂ ಗೆದ್ದು ಬರುವ ಛಾತಿಯನ್ನು ಇಟ್ಟುಕೊಳ್ಳಲು ಸಾಧ್ಯವಾದುದು ಅವರ ಬದ್ಧತೆಗೆ. ಜನ ಸಾಮಾನ್ಯನೊಂದಿಗೆ ಬೆರೆತು ಅವರೊಳಗೆ ಒಂದಾಗುವ ಕ್ರಿಯೆಗೆ. ಬಹುತೇಕ ರಾಜಕಾರಣಿಗಳಿಗೆ ವಿಚಾರವೆಂಬುದು ಇರುವುದಿಲ್ಲ. ಆ ವಿಚಾರಗಳನ್ನು ಅವರಲ್ಲಿ ದೀಪ ಹಚ್ಚಿ ಹುಡುಕಬೇಕು. ಆದರೆ ಈ ನಾರಾಯಣರಾವ್ ಮಾತ್ರ ಬಸವಾದಿ ಶಿವಶರಣರ ವಿಚಾರಗಳನ್ನು ಅರಿತುಕೊಂಡು ಅವುಗಳನ್ನು ಆಚರಿಸುವತ್ತ ಆಸಕ್ತಿ ತೋರಿಸಿದ್ದಾರೆ.

ಹೀಗಾಗಿಯೇ ವಿಧಾನಸೌಧದಲ್ಲಿ ಎಲ್ಲಾ ಸದಸ್ಯರಿಗೂ ಅರಿವು ಮೂಡಿಸುವ ಅನುಭಾವದ ಮಾತುಗಳನ್ನು ಹೇಳಿದ್ದಾರೆ. ಜಗತ್ತಿಗೆ ಮೊಟ್ಟ ಮೊದಲು ಪ್ರಜಾಪ್ರಭುತ್ವದ ಆಡಳಿತ ತಂದದ್ದು ಬ್ರಿಟನ್ ದೇಶ ಅಲ್ಲ, ನಮ್ಮ ರಾಜ್ಯದ ಬಸವ ಕಲ್ಯಾಣ ಎಂಬುದುನ್ನು ಅವರು ಒತ್ತಿ ಒತ್ತಿ ಹೇಳಿದ್ದಾರೆ. ತನ್ನ ರಾಜ್ಯದಲ್ಲಿ ಯಾರೂ ಹಸಿವಿನಿಂದ ಕಂಗಾಲಾಗಿ ಸಾಯಬಾರದು ಎಂದು ಅರಿತುಕೊಂಡ ಬಸವಣ್ಣನವರು ದಾಸೋಹ ಪರಿಕಲ್ಪನೆಯನ್ನು ಜಾರಿಗೆ ತಂದರು ಎಂದು ನೆನಪಿಸಿಕೊಂಡಿದ್ದಾರೆ. ಜಾತಿ ಮತ ಪಂಥವೆನ್ನದೆ, ಗಂಡು ಹೆಣ್ಣು ಎಂಬ ತರತಮಭಾವನೆ ಇಟ್ಟುಕೊಳ್ಳದೆ ಅಂದು ಕಲ್ಯಾಣದಲ್ಲಿ ಬಸವಣ್ಣ ಅನುಭವ ಮಂಟಪ ಕಟ್ಟಿದರು. ಈ ಅನುಭವ ಮಂಟಪವನ್ನು ಮತ್ತೆ ಪುನರ್ ನಿರ್ಮಿಸುವ ಮೂಲಕ ಜನ ಸಾಮಾನ್ಯರಿಗೆ ಪ್ರೇರಣೆ ಒದಗಿಸುವುದು ಸರಕಾರದ ಕರ್ತವ್ಯ ಎಂದು ನಾರಾಯಣರಾವ್ ಒತ್ತಿ ಹೇಳಿದರು.

ಜೊತೆಗೆ ಇಂದಿನ ರಾಜಕೀಯ ತೀರಾ ಬಗ್ಗಡಗೊಂಡು ಹೋಗಿದೆ. ಕೋಟಿ ಕೋಟಿಗಳನ್ನು ಖರ್ಚು ಮಾಡಿ ಗೆದ್ದು ಬರುವ ಸ್ಥಿತಿ ನಿರ್ಮಾಣವಾಗಿದೆ. ಶ್ರೀಸಾಮಾನ್ಯ ಹೀಗೆ ಗೆದ್ದು ಬರಲು ಸಾಧ್ಯವೆ ? ಎಂಬ ಆತ್ಮಾವಲೋಕನದ ನುಡಿಗಳನ್ನು ಆಡುವ ಮೂಲಕ ವಿಧಾನಸಭೆಯ ಸದಸ್ಯರ ಮನವನ್ನು ಅಲ್ಲಾಡಿಸಿಬಿಟ್ಟಿದ್ದಾರೆ.

ಬಸವಣ್ಣನವರ ಬಗೆಗೆ ಮಾತಾಡುವುದೆ ಒಂದು ಸಾಹಸ ಎಂದು ಜಾತಿ ಲಿಂಗಾಯತರು ಅವಲತ್ತುಕೊಳ್ಳುವ ಈ ಸಂದರ್ಭದಲ್ಲಿ ನಿಜವಾದ ಬಸವ ಪ್ರಣೀತ ಲಿಂಗಾಯತನಾದ ನಾರಾಣರಾವ್ ಮಾತಾಡುವುದು ಹೆಚ್ಚು ಸೂಕ್ತವಾಗಿದೆ. ಇದಲ್ಲದೆ ಇತಿಹಾಸದ ಪುಟಗಳನ್ನು ತೆಗೆದು ನೋಡಿದಾಗಲೂ ಸಹ ಬಸವಾದಿ ಶರಣರ ಕುರಿತು, ಅವರ ವಚನಗಳ ಕುರಿತು ಆಸಕ್ತಿ ತಳೆದವರು ಅನ್ಯ ಮತದವರು. ಹರ್ಡೇಕರ ಮಂಜಪ್ಪ, ಫ.ಗು. ಹಳಕಟ್ಟಿ, ಅನಕೃ, ಆರ್.ಆರ್.ದಿವಾಕರ್, ಎಂ.ಆರ್.ಶ್ರೀನಿವಾಸ ಮೂರ್ತಿ ಮೊದಲಾದವರು ಆಸಕ್ತಿ ತಳೆದರೆಂದೆ ನಮಗಿಂದು ವಚನ ಸಾಹಿತ್ಯವೆಂಬ ಸಕಲ ಜೀವಪ್ರೇಮದ, ವಿಶ್ವ ಹೃದಯಿಯಾದ ವಚನ ಸಾಹಿತ್ಯ ದಕ್ಕಿದೆ.

ನಾರಾಯಣರಾವ್‍ರ ಕೌಟುಂಬಿಕ ಕಲಹಗಳೇನೇ ಇದ್ದರೂ ಸಾಮಾಜಿಕವಾಗಿ ಅವರ ಬದ್ಧತೆ, ವೈಚಾರಿಕ ನಿಲುವುಗಳನ್ನು ಕರ್ನಾಟಕದ ಜನತೆ ಭರವಸೆಯಿಂದ ನೋಡುತ್ತಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Basavaraj patil ashture alla. Basavaraj patil attur. Dr Basavaraj patil ashtur ennuva mattobba BJP leader. In last assembly election he (ashture) contested from Bidar (south) constituency on BJP ticket. Attur is ex minister.

  2. Basavaraj patil ashture alla. Basavaraj patil attur. Dr Basavaraj patil ashtur ennuva mattobba BJP leader. In last assembly election he (ashture) contested from Bidar (south) constituency on BJP ticket. Attur is ex minister.

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...