Homeಕರ್ನಾಟಕಸದನದಲ್ಲಿ ಮಿಂಚಿದ ಬಸವ ಪ್ರಣೀತ ಶಾಸಕ ನಾರಾಯಣರಾವ್

ಸದನದಲ್ಲಿ ಮಿಂಚಿದ ಬಸವ ಪ್ರಣೀತ ಶಾಸಕ ನಾರಾಯಣರಾವ್

- Advertisement -
- Advertisement -

ಬಸವ ಪ್ರಣೀತ ಲಿಂಗಾಯತನಾದ ಶಾಸಕ ನಾರಾಯಣರಾವ್

ಬಸವ ಕಲ್ಯಾಣದ ಶಾಸರ ಬಿ.ನಾರಾಯಣರಾವ್ ನಿನ್ನೆ ದಿನ ವಿಧಾನಸೌಧದಲ್ಲಿ ಆಡಿದ ಮನಪೂರ್ವಕವಾದ ಮಾತುಗಳಿಗೆ ಎಲ್ಲಿಲ್ಲದ ಪ್ರಶಂಸೆಯ ಸುರಿಮಳೆ ನಡೆದಿದೆ. ಮೂಲತಃ ಶರಣರ ಅಂಬಿಗರ ಚೌಡಯ್ಯನವರ ಚಾಟಿ ಏಟು, ಒಳ ಹೊಡೆತಗಳು ಅವರ ಮಾತುಗಳಲ್ಲಿ ನಾವು ಧಾರಾಳವಾಗಿ ಕಾಣಬಹುದು. ಶಾಸಕ ಬಿ.ನಾರಾಯಣರಾವ್ ಬಸವಕಲ್ಯಾಣದ ಜನತೆಯೆ ಬಲ್ಲಂತೆ ಸಾದಾ ಸೀದಾ ಜೀವನ ನಿರ್ವಹಿಸುವ, ನಿಗರ್ವಿ ಶಾಸಕ. ಯಾರಾದರೂ ಮಾತಾಡಿಸಬಹುದಾಗಿ, ಮತ್ತಾರಾದರೂ ತಕರಾರು ತೆಗೆಯಬಹುದಾದ ಸರಳತೆಯನ್ನು ಮೈಗೂಡಿಸಿಕೊಂಡವರು.

ಶರಣರ ವಿಚಾರಗಳೆ ಹಾಗೆ. ಒಂದು ಒಂದು ಸಲ ಅವುಗಳ ಸಮೀಪಕ್ಕೆ ಬರಬೇಕು ಅಷ್ಟೇ : ಅನಂತರ ಅವರಿಗೆ ಅರಿವಿಲ್ಲದೆ ಅವರೊಳಗೆ ಚಿಂತನೆ, ಸಾಮಾಜಿಕ ಕಾಳಜಿ, ನಿಜವಾದ ಧಾರ್ಮಿಕ ಪ್ರಜ್ಞೆಗಳು ಹುಟ್ಟಿಕೊಳ್ಳಲು ಆರಂಭವಾಗುತ್ತವೆ. ನಮಗೆ ಗೊತ್ತಿಲ್ಲದೆ ಪ್ರತಿಭಟಿಸುವ ಮನಸ್ಸು, ವಸ್ತು ಸ್ಥಿತಿಯನ್ನು ಅವಲೋಕಿಸಿ ಸೂಕ್ತ ಸಮಯದಲ್ಲಿ ಸರಿಯಾದ ಮಾತನಾಡುವ ಕಸುವು ತಂತಾನೆ ಉಂಟಾಗುತ್ತದೆ.

ಕುಂಡಲಿ ಬಂದು ಕೀಡಿಯನು ಕುಂಡಲಿಯ ಮಾಡಿತ್ತಯ್ಯಾ

ಅಗ್ನಿ ಬಂದು ಕಾಷ್ಠವ ಅಗ್ನಿಯ ಮಾಡಿತ್ತಯ್ಯಾ

ಮಹೇಶ ಬಂದು ಭಕ್ತನ ಮಹೇಶನ ಮಾಡಿ

ಗಮನಿಸಿದನಯ್ಯಾ ಕಪಿಸಿದ್ಧ ಮಲ್ಲಿಕಾರ್ಜುನಾ

ಎಂಬಂತೆ ಒಂದೆ ಒಂದು ಸಲ ಶರಣರ ವಿಚಾರಧಾರೆಯತ್ತ ಇಣುಕಿ ನೋಡಿದರೂ ಸಾಕು. ಖಂಡಿತವಾಗಿ ಕೀಡೆ ಕುಂಡಲಿಯಾಗುತ್ತದೆ. ಬೆಂಕಿ ಕಟ್ಟಿಗೆಯ ಸಮೀಪ ಬಂದು ಕಟ್ಟಿಗೆಯನ್ನು ಹೇಗೆ ಬೆಂಕಿ ಮಾಡಬಲ್ಲುದೋ ಹಾಗೆ. ಮಹೇಶ ಬಂದು ಭಕ್ತನ ಮಹೇಶ ಸ್ಥಲಕ್ಕೆ ಕರೆದುಕೊಂಡು ಹೋಗುವಂತೆ ಎಂಬ ಸೊನ್ನಲಾಪುರದ ಶರಣ ಸಿದ್ಧರಾಮಯ್ಯನ ಮಾತಿನಲ್ಲಿ ಬಹುದೊಡ್ಡ ಇತಿಹಾಸವಿದೆ.

ಬಸವರಾಜ ಪಾಟೀಲ ಅಷ್ಟೂರೆ, ಖೂಬಾ ಅವರ ನಡುವೆ ಗೆದ್ದು ಬರುವುದು ಅಷ್ಟು ಸುಲಭದ ಮಾತಲ್ಲ. ಶಾಸಕ ನಾರಾಣಯರಾವ್ ರಾಜಕೀಯ ಘಟಾನು ಘಟಿಗಳ ನಡುವೆಯೂ ಗೆದ್ದು ಬರುವ ಛಾತಿಯನ್ನು ಇಟ್ಟುಕೊಳ್ಳಲು ಸಾಧ್ಯವಾದುದು ಅವರ ಬದ್ಧತೆಗೆ. ಜನ ಸಾಮಾನ್ಯನೊಂದಿಗೆ ಬೆರೆತು ಅವರೊಳಗೆ ಒಂದಾಗುವ ಕ್ರಿಯೆಗೆ. ಬಹುತೇಕ ರಾಜಕಾರಣಿಗಳಿಗೆ ವಿಚಾರವೆಂಬುದು ಇರುವುದಿಲ್ಲ. ಆ ವಿಚಾರಗಳನ್ನು ಅವರಲ್ಲಿ ದೀಪ ಹಚ್ಚಿ ಹುಡುಕಬೇಕು. ಆದರೆ ಈ ನಾರಾಯಣರಾವ್ ಮಾತ್ರ ಬಸವಾದಿ ಶಿವಶರಣರ ವಿಚಾರಗಳನ್ನು ಅರಿತುಕೊಂಡು ಅವುಗಳನ್ನು ಆಚರಿಸುವತ್ತ ಆಸಕ್ತಿ ತೋರಿಸಿದ್ದಾರೆ.

ಹೀಗಾಗಿಯೇ ವಿಧಾನಸೌಧದಲ್ಲಿ ಎಲ್ಲಾ ಸದಸ್ಯರಿಗೂ ಅರಿವು ಮೂಡಿಸುವ ಅನುಭಾವದ ಮಾತುಗಳನ್ನು ಹೇಳಿದ್ದಾರೆ. ಜಗತ್ತಿಗೆ ಮೊಟ್ಟ ಮೊದಲು ಪ್ರಜಾಪ್ರಭುತ್ವದ ಆಡಳಿತ ತಂದದ್ದು ಬ್ರಿಟನ್ ದೇಶ ಅಲ್ಲ, ನಮ್ಮ ರಾಜ್ಯದ ಬಸವ ಕಲ್ಯಾಣ ಎಂಬುದುನ್ನು ಅವರು ಒತ್ತಿ ಒತ್ತಿ ಹೇಳಿದ್ದಾರೆ. ತನ್ನ ರಾಜ್ಯದಲ್ಲಿ ಯಾರೂ ಹಸಿವಿನಿಂದ ಕಂಗಾಲಾಗಿ ಸಾಯಬಾರದು ಎಂದು ಅರಿತುಕೊಂಡ ಬಸವಣ್ಣನವರು ದಾಸೋಹ ಪರಿಕಲ್ಪನೆಯನ್ನು ಜಾರಿಗೆ ತಂದರು ಎಂದು ನೆನಪಿಸಿಕೊಂಡಿದ್ದಾರೆ. ಜಾತಿ ಮತ ಪಂಥವೆನ್ನದೆ, ಗಂಡು ಹೆಣ್ಣು ಎಂಬ ತರತಮಭಾವನೆ ಇಟ್ಟುಕೊಳ್ಳದೆ ಅಂದು ಕಲ್ಯಾಣದಲ್ಲಿ ಬಸವಣ್ಣ ಅನುಭವ ಮಂಟಪ ಕಟ್ಟಿದರು. ಈ ಅನುಭವ ಮಂಟಪವನ್ನು ಮತ್ತೆ ಪುನರ್ ನಿರ್ಮಿಸುವ ಮೂಲಕ ಜನ ಸಾಮಾನ್ಯರಿಗೆ ಪ್ರೇರಣೆ ಒದಗಿಸುವುದು ಸರಕಾರದ ಕರ್ತವ್ಯ ಎಂದು ನಾರಾಯಣರಾವ್ ಒತ್ತಿ ಹೇಳಿದರು.

ಜೊತೆಗೆ ಇಂದಿನ ರಾಜಕೀಯ ತೀರಾ ಬಗ್ಗಡಗೊಂಡು ಹೋಗಿದೆ. ಕೋಟಿ ಕೋಟಿಗಳನ್ನು ಖರ್ಚು ಮಾಡಿ ಗೆದ್ದು ಬರುವ ಸ್ಥಿತಿ ನಿರ್ಮಾಣವಾಗಿದೆ. ಶ್ರೀಸಾಮಾನ್ಯ ಹೀಗೆ ಗೆದ್ದು ಬರಲು ಸಾಧ್ಯವೆ ? ಎಂಬ ಆತ್ಮಾವಲೋಕನದ ನುಡಿಗಳನ್ನು ಆಡುವ ಮೂಲಕ ವಿಧಾನಸಭೆಯ ಸದಸ್ಯರ ಮನವನ್ನು ಅಲ್ಲಾಡಿಸಿಬಿಟ್ಟಿದ್ದಾರೆ.

ಬಸವಣ್ಣನವರ ಬಗೆಗೆ ಮಾತಾಡುವುದೆ ಒಂದು ಸಾಹಸ ಎಂದು ಜಾತಿ ಲಿಂಗಾಯತರು ಅವಲತ್ತುಕೊಳ್ಳುವ ಈ ಸಂದರ್ಭದಲ್ಲಿ ನಿಜವಾದ ಬಸವ ಪ್ರಣೀತ ಲಿಂಗಾಯತನಾದ ನಾರಾಣರಾವ್ ಮಾತಾಡುವುದು ಹೆಚ್ಚು ಸೂಕ್ತವಾಗಿದೆ. ಇದಲ್ಲದೆ ಇತಿಹಾಸದ ಪುಟಗಳನ್ನು ತೆಗೆದು ನೋಡಿದಾಗಲೂ ಸಹ ಬಸವಾದಿ ಶರಣರ ಕುರಿತು, ಅವರ ವಚನಗಳ ಕುರಿತು ಆಸಕ್ತಿ ತಳೆದವರು ಅನ್ಯ ಮತದವರು. ಹರ್ಡೇಕರ ಮಂಜಪ್ಪ, ಫ.ಗು. ಹಳಕಟ್ಟಿ, ಅನಕೃ, ಆರ್.ಆರ್.ದಿವಾಕರ್, ಎಂ.ಆರ್.ಶ್ರೀನಿವಾಸ ಮೂರ್ತಿ ಮೊದಲಾದವರು ಆಸಕ್ತಿ ತಳೆದರೆಂದೆ ನಮಗಿಂದು ವಚನ ಸಾಹಿತ್ಯವೆಂಬ ಸಕಲ ಜೀವಪ್ರೇಮದ, ವಿಶ್ವ ಹೃದಯಿಯಾದ ವಚನ ಸಾಹಿತ್ಯ ದಕ್ಕಿದೆ.

ನಾರಾಯಣರಾವ್‍ರ ಕೌಟುಂಬಿಕ ಕಲಹಗಳೇನೇ ಇದ್ದರೂ ಸಾಮಾಜಿಕವಾಗಿ ಅವರ ಬದ್ಧತೆ, ವೈಚಾರಿಕ ನಿಲುವುಗಳನ್ನು ಕರ್ನಾಟಕದ ಜನತೆ ಭರವಸೆಯಿಂದ ನೋಡುತ್ತಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Basavaraj patil ashture alla. Basavaraj patil attur. Dr Basavaraj patil ashtur ennuva mattobba BJP leader. In last assembly election he (ashture) contested from Bidar (south) constituency on BJP ticket. Attur is ex minister.

  2. Basavaraj patil ashture alla. Basavaraj patil attur. Dr Basavaraj patil ashtur ennuva mattobba BJP leader. In last assembly election he (ashture) contested from Bidar (south) constituency on BJP ticket. Attur is ex minister.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...