Homeಪ್ರಪಂಚಸರ್ವಾಧಿಕಾರಿ ಘಟಸರ್ಪಗಳು: ಅಳಿಸಲೂ, ಉಳಿಸಲೂ ನೂರೆಂಟು ನೆಪ

ಸರ್ವಾಧಿಕಾರಿ ಘಟಸರ್ಪಗಳು: ಅಳಿಸಲೂ, ಉಳಿಸಲೂ ನೂರೆಂಟು ನೆಪ

- Advertisement -
- Advertisement -

ನಿಖಿಲ್ ಕೋಲ್ಪೆ |

ಹಲವಾರು ದೇಶಗಳಲ್ಲಿ ಸರ್ವಾಧಿಕಾರಿ ಆಡಳಿತಗಳು ಜನರನ್ನು ಹಿಂಡಿ ಹಿಪ್ಪೆ ಮಾಡಿರುವುದನ್ನು ನಾವು ನೋಡಿದ್ದೇವೆ. ಆದರೆ ಬಂಡವಾಳಶಾಹಿ ಸಿರಿವಂತ ರಾಷ್ಟ್ರಗಳು ಕೆಲವು ಕಡೆ ಕುರುಡುಗಣ್ಣು ಬೀರಿದರೆ, ಕೆಲವು ದೇಶಗಳಲ್ಲಿ ಮಿಲಿಟರಿ ಮಧ್ಯ ಪ್ರವೇಶ ಮಾಡಿ ಕೈಗೊಂಬೆ ಸರಕಾರಗಳನ್ನು ಸ್ಥಾಪಿಸಿದೆ ಇಲ್ಲವೇ ಅವುಗಳಲ್ಲಿ ಅರಾಜಕತೆಯನ್ನು ಪೋಷಿಸಿವೆ. ಇದಕ್ಕೆ ಇರುವ ಮಾನದಂಡವೇನು?

ಸೋವಿಯತ್ ಒಕ್ಕೂಟವು ಪ್ರಬಲವಾಗಿದ್ದಾಗ ಇದ್ದ ಮಾನದಂಡ ಒಂದೇ! ಅದೆಂದರೆ, ಕಮ್ಯೂನಿಸ್ಟ್ ಸರಕಾರಗಳು, ಎಡ ಚಿಂತನೆಯ ಸರಕಾರಗಳು ಅಧಿಕಾರಕ್ಕೆ ಬರದಂತೆ ನೋಡಿಕೊಳ್ಳುವುದು. ಇದ್ದಲ್ಲಿ ಅವುಗಳನ್ನು ಉರುಳಿಸಲು ಪ್ರಚೋದನೆ ಮತ್ತು ಬೆಂಬಲ ನೀಡುವುದು.

ಸಂಪತ್ತಿನ ನಿಯಂತ್ರಣಕ್ಕಾಗಿ ಮತ್ತು ಸ್ವಹಿತಾಸಕ್ತಿಯ ರಕ್ಷಣೆಗಾಗಿ ನೇರ ಮಿಲಿಟರಿ ಕಾರ್ಯಾಚರಣೆ ನಡೆಸುವ ಬಂಡವಾಳಶಾಹಿ ತನಗೆ ಲಾಭವಿಲ್ಲದ ಕಡೆಗಳಲ್ಲಿ ಎಂತಹ ದಮನಕಾರಿ ಸರಕಾರಗಳಿದ್ದರೂ ಕಣ್ಣುಮುಚ್ಚಿ ಕುಳಿತಿದೆ. ಯುಎಸ್‌ಎಯಂತಹ ದೇಶ ಮತ್ತು ದೊಡ್ಡಣ್ಣನ ತಮ್ಮಂದಿರಂತೆ ವರ್ತಿಸುವ ನ್ಯಾಟೋ ದೇಶಗಳು ಮಧ್ಯ ಪ್ರವೇಶ ಮಾಡದ ದೇಶಗಳೇ ಬಹುತೇಕ ಇಲ್ಲ ಎನ್ನಬಹುದು.

ಸುಮ್ಮನೇ ಪ್ರಪಂಚದ ಕೆಲವು ದೇಶಗಳನ್ನು ಹೆಸರಿಸಿದರೂ ಸಾಕು ಅಲ್ಲಿ ದೊಡ್ಡಣ್ಣನ ಮಧ್ಯಪ್ರವೇಶ ನಡೆದಿದೆ; ಸರ್ವಾಧಿಕಾರಗಳಿಗೆ ಪ್ರಜಾಪ್ರಭುತ್ವದ ರಕ್ಷಕರೆನ್ನುವ ರಾಷ್ಟ್ರಗಳು ಬೆಂಬಲ ನೀಡಿವೆ. ಉದಾಹರಣೆಗೆ ಮಧ್ಯ ಅಮೇರಿಕಾದ ನಿಕರಾಗುವ, ಹೊಂಡುರಾಸ್, ಪನಾಮಾ, ಗ್ವಾಟೆಮಾಲಾ, ಮೆಕ್ಸಿಕೋ, ಎಲ್ ಸಾಲ್ವದೋರ್, ಲ್ಯಾಟಿನ್ ಅಮೇರಿಕಾದ ಚಿಲಿ, ಅರ್ಜೆಂಟೀನಾ, ಕ್ಯೂಬಾ, ಗ್ರೆನೆಡಾ, ಪೆರು, ಬೊಲಿವಿಯಾ, ವೆನಿಜ್ಯುವೆಲಾ… ಆಫ್ರಿಕಾ ಅಂಗೋಲ, ಕಾಂಗೋ, ನಮೀಬಿಯಾ, ಮೊಜಾಂಬಿಕ್, ಈಜಿಪ್ಟ್, ಲಿಬಿಯಾ… ಏಷ್ಯಾದ ವಿಯೆಟ್ನಾಂ, ಕಾಂಬೋಡಿಯ, ಫಿಲಿಪೈನ್ಸ್, ಫಿಜಿ, ಸಿರಿಯಾ, ಯೆಮೆನ್, ಇರಾನ್, ಇರಾಕ್, ಅಫ್ಘಾನಿಸ್ತಾನ… ಯುರೋಪಿನ ಯುಗೋಸ್ಲಾವಿಯಾ, ಜೆಕೋಸ್ಲಾವಾಕಿಯಾ…. ಹೀಗೆ ಯಾವುದೇ ದೇಶದ ಮಟ್ಟಿಗೆ ನೋಡಿದರೂ ಈ ಮಾತು ಸತ್ಯ.

ತನಗೆ ಲಾಭವಿಲ್ಲದ ದೇಶಗಳಲ್ಲಿ ನಡೆದ ರಕ್ತಪಾತಗಳಿಗೆ ಕುರುಡು ಕಿವುಡಾಗಿರುವುದಕ್ಕೆ ಉದಾಹರಣೆಯಾಗಿ ಉಗಾಂಡದ ಇದಿ ಅಮೀನನಂತಹ ನರರಾಕ್ಷಸನನ್ನು ಸಹಿಸಿಕೊಂಡು ಕುಳಿತದ್ದನ್ನು ನೆನಪಿಸಬಹುದು. ನಂತರದ ಉದಾಹರಣೆ ಬೇಕೆಂದರೆ ರುವಾಂಡದ ಹುಟು-ತುತ್ಸಿ ಬುಡಕಟ್ಟುಗಳ ಸಂಘರ್ಷದಲ್ಲಿ ಯುಎಸ್‌ಎ ಮತ್ತು ನ್ಯಾಟೋ ದೇಶಗಳ ಪಾತ್ರವನ್ನು ನೋಡಬಹುದು. ಹಿಂದೆ ಅಲ್ಲಿ ಅಲ್ಪಸಂಖ್ಯಾತ ತುತ್ಸಿಗಳ ಆಡಳಿತವಿತ್ತು. ನಂತರ ಹಲವಾರು ವರ್ಷಗಳ ಸಂಘರ್ಷದ ಬಳಿಕ ಬಹುಸಂಖ್ಯಾತ ಹುಟುಗಳ ಕೈಮೇಲಾಯಿತು. ನೆಪಮಾತ್ರಕ್ಕೆ ನ್ಯಾಟೋ ಒಂದು ಶಾಂತಿಪಾಲನಾ ಪಡೆ ಕಳಿಸಿತು. ಬಡದೇಶವಾದ ರುವಾಂಡದಲ್ಲಿ ಏನೇ ನಡೆದರೂ ಅದಕ್ಕೇನು ದೊಡ್ಡ ಆಸಕ್ತಿ ಇರಲಿಲ್ಲ. ತೊಂಬತ್ತರ ದಶಕದ ಮಧ್ಯ ಭಾಗದಲ್ಲಿ ಹುಟುಗಳು ಯೋಜಿತ ರೀತಿಯಲ್ಲಿ ಸರಕಾರಿ ಪ್ರಾಯೋಜಕತ್ವದಲ್ಲಿ ತುತ್ಸಿಗಳ ಹತ್ಯಾಕಾಂಡ ನಡೆಸಿದರು. ಒಂದೇ ವಾರದಲ್ಲಿ ಹೆಂಗಸರು ಮಕ್ಕಳೆನ್ನದೆ ಸುಮಾರು ಹತ್ತು ಲಕ್ಷದಷ್ಟು ತುತ್ಸಿಗಳನ್ನು ಹಾದಿಬೀದಿಗಳಲ್ಲಿ ಮಚ್ಚುಗಳಿಂದ ಕೊಚ್ಚಿ ಕೊಲ್ಲಲಾಯಿತು. ಇಂತಹ ಹತ್ಯಾಕಾಂಡದ ಪೂರ್ವಸೂಚನೆ ಇದ್ದರೂ ನ್ಯಾಟೋ ಆಗಲೀ ವಿಶ್ವಸಂಸ್ಥೆಯಾಗಲೀ ಏನೂ ಮಾಡದೆ ಮೂಲ ಪ್ರೇಕ್ಷಕರಂತೆ ಕುಳಿತವು. ಯಾವ ಪ್ರಜಾಪ್ರಭುತ್ವದ ಆತ್ಮಸಾಕ್ಷಿಯೂ ಕಲಕಲಿಲ್ಲ! ನಾಝಿಗಳ ಬಳಿಕ ಇಷ್ಟು ದೊಡ್ಡ ಹತ್ಯಾಕಾಂಡ ಬೇರೆ ನಡೆದಿಲ್ಲ! ಈ ಘಟನೆ ಹೆಚ್ಚಿನ ಪ್ರಚಾರಕ್ಕೂ ಬರಲಿಲ್ಲ. ‘ಹೊಟೇಲ್ ರುವಾಂಡ’ ಎಂಬ ಚಿತ್ರದಲ್ಲಿ ಇದರ ಕ್ರೂರ ಚಿತ್ರಣ ಸಿಗುತ್ತದೆ. ಅದರಂತೆ ವಜ್ರಗಳಿಗಾಗಿ ಸಿಯರಾ ಲಿಯೋನ್‌ನಲ್ಲಿ ನಡೆಯುತ್ತಿರುವ ಕ್ರೌರ್ಯವನ್ನು ಲಿಯೊನಾರ್ಡೊ ಡಿ ಕ್ಯಾಪ್ರಿಯೋ ನಟಿಸಿರುವ ‘ಬ್ಲಡ್ ಡೈಮಂಡ್’ ಚಿತ್ರದಲ್ಲಿ ನೋಡಬಹುದು.

ಅದರೆ, ತನಗೆ ಲಾಭ ಇರುವ ಕಡೆ ಬಂಡವಾಳಶಾಹಿಗಳು ಹೇಗೆ ಮಧ್ಯಪ್ರವೇಶ ಮಾಡುತ್ತಾರೆ ಎಂಬುದನ್ನು ತೈಲಸಂಪನ್ನ ರಾಷ್ಟ್ರಗಳಲ್ಲಿ ನೋಡಬಹುದು. ದಶಕಗಳ ಹಿಂದೆ ಇರಾನಿನ ಲೋಲುಪ ಸರ್ವಾಧಿಕಾರಿ ಶಾನನ್ನು ಪಾಶ್ಚಾತ್ಯರು ತೈಲಕ್ಕಾಗಿ ಬೆಂಬಲಿಸಿದ್ದರು. ಆಗ ಪ್ರಜಾಪ್ರಭುತ್ವ ಅವರಿಗೆ ಮುಖ್ಯವೆನಿಸಲಿಲ್ಲ. ನಂತರ ಅಯಾತೊಲ್ಲಾ ಖೊಮೇನಿ ನೇತೃತ್ವದಲ್ಲಿ ಇಸ್ಲಾಮಿಕ್ ಕ್ರಾಂತಿ ನಡೆದಾಗ ಮಾತ್ರ ಅದು ನೆನಪಿಗೆ ಬಂತು. ಇದು ಮುಂದೆ ಇರಾಕ್, ಲಿಬಿಯಾ, ಈಜಿಪ್ಟ್, ಯೆಮೆನ್, ಆಫಘಾನಿಸ್ತಾನ ಮುಂತಾದ ದೇಶಗಳಲ್ಲಿ ಮರುಕಳಿಸಿತು. ಇರಾನ್- ಇರಾಕ್ ಯುದ್ಧದಲ್ಲಿ ಯುಎಸ್‌ಎಯ ಪಾತ್ರವೇನು ಎಂಬುದು ಎಲ್ಲರಿಗೂ ಗೊತ್ತು. ಕಾರಣ ಅಥವಾ ನೆಪ ಪ್ರಜಾಪ್ರಭುತ್ವವೂ ಅಲ್ಲ ಸರ್ವಾಧಿಕಾರವೂ ಅಲ್ಲ. ಬದಲಾಗಿ ತೈಲ ಸಂಪತ್ತು.

ಈ ರೀತಿಯಾಗಿ ದೊಡ್ಡಣ್ಣನ ಮೂಗು ತೂರಿಸುವ ಕೆಲಸವೇ ಜಾಗತಿಕ ಭಯೋತ್ಪಾದನೆಗೆ ಮೂಲಕಾರಣ ಎಂದು ಎಲ್ಲರಿಗೂ ಗೊತ್ತು. ಈಗ ಶ್ರೀಮಂತ ದೇಶವಾಗಿರುವ ಸೌದಿ ಅರೇಬಿಯಾದಲ್ಲಿ ತೈಲ ಪತ್ತೆಯಾಗುವ ತನಕ ಅದು ಬಡ ರಾಷ್ಟ್ರವೇ ಆಗಿತ್ತು. ಯುಎಇ ಕತೆಯೂ ಅಷ್ಟೇ. ಆಗ ಲಾಭಕ್ಕಾಗಿ ತನ್ನ ತಂvಜ್ಞಾನದ ಬಲ ಉಪಯೋಗಿಸಿದ ಯುಎಸ್‌ಎ ಅಲ್ಲಿ ಬಹುರಾಷ್ಟ್ರೀಯ ಕಂಪೆನಿ ‘ಅರ್ಮಾಕೋ’ವನ್ನು ಸ್ಥಾಪಿಸಿತು. ಇಂತಹ ವ್ಯಾಪಾರಿ ಹಿತಾಸಕ್ತಿಗಳೇ ಪ್ರಜಾಪ್ರಭುತ್ವ ಇರಲಿ, ಸರ್ವಾಧಿಕಾರ ಇರಲಿ, ರಾಜಸತ್ತೆಯೇ ಇರಲಿ ಎಲ್ಲಾ ಪ್ರಭುತ್ವಗಳನ್ನು ಬಂಡವಾಳಶಾಹಿಯೇ ನಿಯಂತ್ರಿಸುತ್ತಾ ಬಂದಿದೆ. ಇದೇ ಸ್ವಯಂಘೋಷಿತ ಪ್ರಜಾಪ್ರಭುತ್ವದ ಕಾವಲುನಾಯಿಗಳು ಕೊಲ್ಲಿ ರಾಷ್ಟ್ರಗಳಲ್ಲಿ ರಾಜಸತ್ತೆಗಳನ್ನು ಬೆಂಬಲಿಸುತ್ತಾ ಬಂದಿಲ್ಲವೇ. ಇಂತಹ ಸಂಘರ್ಷಗಳ ಕಾರಣದಿಂದಲೇ ಸೌದಿ ಸಂಜಾತ ಒಸಾಮಾ ಬಿನ್ ಲಾದೆನ್‌ನಂತಹ ಸರ್ವಾಧಿಕಾರಿ ಭಯೋತ್ಪಾದಕನ ಹುಟ್ಟಿಗೆ ಕಾರಣವಾಯಿತು ಎಂಬುದು ಸತ್ಯವಲ್ಲವೇ?

ಲಿಬಿಯಾದ ಸರ್ವಾಧಿಕಾರಿ ಮುಹಮ್ಮದ್ ಗದ್ದಾಫಿ, ಇರಾಕಿನ ಸರ್ವಾಧಿಕಾರಿ ಸದ್ದಾಂ ಹುಸೇನ್ ಇವರನ್ನು ಅಷ್ಟೇ ಏಕೆ, ವೆನೆಜುವೆಲಾದಂತಹ ತೈಲ ಸಂಪನ್ನ ರಾಷ್ಟ್ರವನ್ನೇ ಕೊಂದವರು ಯಾರು? ಪ್ತಾಲೆಸ್ತೀನ್ ಸಮಸ್ಯೆಗಳಿಗೆ ಕಾರಣರು ಯಾರು? ಇಸ್ರೇಲಿನಂತಹ ದೇಶಗಳನ್ನು ಬೆಂಬಲಿಸುತ್ತಾ ಬಂದಿರುವವರು ಯಾರು? ಇಸ್ರೇಲಿನಂತೆಯೇ ಕಾಶ್ಮೀರದ ಸಮಸ್ಯೆಯನ್ನು ಸೃಷ್ಟಿಸಿದವರು ಯಾರು? ತಾವೇ ಭಯೋತ್ಪಾದಕ ಎಂದು ಕರೆದ ಪ್ಯಾಲೆಸ್ತೀನ್ ಲಿಬರೇಷನ್ ಆರ್ಗನೈಸೇಶನ್ ನಾಯಕ ಯಾಸರ್ ಅರಾಫತ್ ಅವರಿಗೆ ಮತ್ತು ಇಸ್ರೇಲ್ ವಿದೇಶ ಮಂತ್ರಿಯಾಗಿದ್ದ ಇಸಾಕ್ ರಬಿನ್ ಅವರಿಗೆ ನೋಬೆಲ್ ಪ್ರಶಸ್ತಿ ಕೊಟ್ಟವರು ಯಾರು?

ಕರಿಯರ ದಕ್ಷಿಣ ಆಫ್ರಿಕಾದಲ್ಲಿ ಮೊದಲು ಅಧಿಕಾರ ಸ್ಥಾಪಿಸಿದ ಬಿಳಿಯ ಡಚ್ಚರ ವಿರುದ್ದ ಬಿಳಿಯ ಬ್ರಿಟಿಷರೇ ಯುದ್ಧ ನಡೆಸಿದ್ದೇಕೆ? ಆಂಗ್ಲೋ- ಬೋಯೆರ್ ವಾರ್ ಎಂದು ಕುಖ್ಯಾತವಾದ ಯುದ್ಧ ಏಕೆ ನಡೆಯಿತು? ಅಲ್ಲಿಯ ಮೂಲ ನಿವಾಸಿಗಳನ್ನೇ ಏಕೆ ಗುಲಾಮರನ್ನಾಗಿ, ಎರಡನೇ ದರ್ಜೆ ಪ್ರಜೆಗಳಾಗಿ ವರ್ಣಭೇದ ನೀತಿಯನ್ನು ಅನುಸರಿಸುತ್ತಿದ್ದವರನ್ನು ಬೆಂಬಲಿಸುತ್ತಾ, ಸಹಿಸುತ್ತಾ ಪೋಷಿಸುತ್ತಾ ಬಂದವರ‍್ಯಾರು? ನೆಲ್ಸನ್ ಮಂಡೇಲಾರನ್ನು ಅಷ್ಟು ವರ್ಷ ಜೈಲಿಗೆ ತಳ್ಳಿದವರ‍್ಯಾರು? ನಂತರ ವರ್ಣಭೇದ ನೀತಿ ತೊಲಗಿದ ಬಳಿಕ ಮಂಡೇಲಾರ ಜೊತೆಗೇ ಪಿಕ್ ಬೋಥಾ ಅವರಿಗೆ ನೊಬೆಲ್ ಶಾಂತಿ ಪ್ರಶಸ್ತಿ ನೀಡಿದವರು ಯಾರು?

ಸರ್ವಾಧಿಕಾರಗಳು ಎಲ್ಲಾ ರೀತಿಯ ನಾಟಕಗಳನ್ನು ನಡೆಸಿಕೊಂಡು ತಮ್ಮನ್ನು ತಾವು ಪ್ರತಿಷ್ಟಾಪಿಸಿವೆ. ಎಲ್ಲವುಗಳ ಹಿಂದೆ ಇರುವ ಮತ್ತೆ ಶಕ್ತಿಗಳು ಯಾವುವು ಎಂಬುದನ್ನು ನಾವು ಗಮನಿಸಬೇಕು. ಇಷ್ಟೆಲ್ಲಾ ಒಂದು ಪೀಠಿಕೆ ಮಾತ್ರ. ಪ್ರಜಾಪ್ರಭುತ್ವದ ವೇಷದಲ್ಲೂ ಸರ್ವಾಧಿಕಾರ ಬರಬಹುದು. ಹಿಟ್ಲರ್ ಕೂಡಾ ಚುನಾವಣೆಯಲ್ಲಿ ಆಯ್ಕೆಯಾಗಿ ಬಂದವನೆಂಬುದು ನಮಗೆ ನೆನಪಿರಲಿ. ಪ್ರತಿಯೊಬ್ಬ ಸರ್ವಾಧಿಕಾರಿ ಜಾತಿ, ಧರ್ಮ, ಜನಾಂಗೀಯ ದ್ವೇಷವನ್ನು ಪ್ರಚೋದಿಸಿ, ಬೆಳೆಸಿ, ಬೆಳೆದರೆಂಬುದನ್ನು ನಾವು ಗಮನಿಸಬೇಕು. ನಮ್ಮಲ್ಲಿ, ನಮ್ಮ ಭಾರತದಲ್ಲಿ ನಡೆಯುತ್ತಿದೆಯೇ? ಏನಾದರೂ ಸಾಮ್ಯವಿದೆಯೇ? ನಾವೇನಾದರೂ ಎಚ್ಚರಿಕೆ ವಹಿಸಬೇಕೆ? ವ್ಯವಸ್ಥಿತ ಸಂಚಿಗೆ ವ್ಯವಸ್ಥಿತ ಪ್ರತಿಹೋರಾಟ ಅಗತ್ಯವಿದೆಯೇ, ಇದನ್ನು ಮುಂದಿನ ಸಂಚಿಕೆಗಳಲ್ಲಿ ಸೂಕ್ಷ್ಮವಾಗಿ ಪರಿಶೀಲಿಸೋಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...