Homeಅಂಕಣಗಳುಸಾಣೆಹಳ್ಳಿ ಶ್ರೀಗಳು ಸರಿಯಾದವರಿಗೆ ಪ್ರಶಸ್ತಿ ಕೊಡಿ ಎಂದರಲ್ಲಾ..

ಸಾಣೆಹಳ್ಳಿ ಶ್ರೀಗಳು ಸರಿಯಾದವರಿಗೆ ಪ್ರಶಸ್ತಿ ಕೊಡಿ ಎಂದರಲ್ಲಾ..

- Advertisement -
- Advertisement -

| ಯಾಹೂ |

ಹಾದರಕ್ಕೆ ಹುಟ್ಟಿದವರು ಯಾರಿಗೂ ಬೇಡವಾಗಿ ಅನಾಥಾಶ್ರಮ ಸೇರುವಂತೆ, ಅಡ್ನಾಡಿ ಕುಮಾರಣ್ಣನ ಕೊಟ್ಟಿಗೆಯಿಂದ ಕುಲಗೇಡಿ ಎಡೂರಪ್ಪನ ದೊಡ್ಡಿ ಸೇರಿದ್ದ ಅನರ್ಹ ಶಾಸಕರು ಈಗ ಎಡೂರಪ್ಪನಿಗೂ ಬೇಡವಾಗಿದ್ದಾರಂತಲ್ಲಾ. ಬಿಜೆಪಿ ಹುಟ್ಟಿದ ಕಾಲದಿಂದಲೂ ಅವುಗಳ ಹುಟ್ಟುಗುಣವೇನೆಂದರೆ, ನಂಬಿಸಿ ಮೋಸ ಮಾಡುವುದು. ನಿಮ್ಮ ಆಸ್ತಿ ನೋಡಿ ಹತ್ತಿರ ಬರುತ್ತವೆ. ಅದು ಖಾಲಿಯಾಗುತ್ತಿದ್ದಂತೆ ಜಾಗ ಖಾಲಿ ಮಾಡುತ್ತವೆ. ನಿಮ್ಮ ಖ್ಯಾತಿಯನ್ನು ನೋಡಿ ಹತ್ತಿರ ಬರುತ್ತವೆ. ಅಪಖ್ಯಾತಿ ಅಂಟಿಸಿ ಮಾಯವಾಗುತ್ತವೆ. ನಿಮ್ಮ ತುಂಬಿದ ಜೇಬನ್ನು ಗ್ರಹಿಸಿ ಜೊತೆಯಾಗುತ್ತವೆ. ಖಾಲಿ ಜೇಬಾದ ಕೂಡಲೇ ಮಾತು ಬಿಡುತ್ತವೆ. ಹಾದರ ಮಾಡುತ್ತವೆ ಪಾತಿವ್ರತ್ಯ ಬೋಧಿಸುತ್ತವೆ. ಭ್ರಷ್ಟ ಕೆಲಸ ಮಾಡುತ್ತಲೇ ಪ್ರಾಮಾಣಿಕತೆ ಬೋಧಿಸುತ್ತವೆ. ಪಾರ್ಟಿ ನಿಷ್ಠೆ ಬೋಧಿಸುತ್ತವೆ. ಬೇರೆ ಪಾರ್ಟಿಯಿಂದ ಬಾಡಿಗಳನ್ನ ಯಾಮಾರಿಸುತ್ತವೆ. ಈಗ ಸಂದಿಗ್ಧಕ್ಕೆ ಸಿಕ್ಕ ಇಂತಹ ಬಾಡಿಗಳು ಎಡೂರಪ್ಪನ ಮಾತಿಂದ ಯಕ್ಕ ಎದ್ದು ಹೋಗಲಿವೆಯಂತಲ್ಲಾ. ಎಡೂರಪ್ಪನ ಅಂತಹ ಮಾತೇನು ಎಂದರೆ, ಅನರ್ಹ ಶಾಸಕರಿಗೂ ನಮಗೂ ಯಾವ ಸಂಬಂಧವೂ ಇಲ್ಲ. ಅವರು ಎಲ್ಲಿಗಾದರೂ ಹೋಗಲಿ. ಯಾವ ಪಕ್ಷವನ್ನಾದರೂ ಸೇರಲಿ ಎಂಬುದಾಗಿದೆಯಲ್ಲ. ನಂಬಿಕೆದ್ರೋಹವೆಂದರೆ ಇದೇ ಅಲ್ಲವೆ, ಥೂತ್ತೇರಿ.

ಬಿಜೆಪಿಗಳ ಆಮಿಷ ಮತ್ತು ಕುತಂತ್ರಗಳಿಗೆ ಬಗ್ಗದ ಡಿ.ಕೆ. ಶಿವಕುಮಾರ್ ಇಡಿ ಟ್ರೀಟ್‌ಮೆಂಟುಗಳಿಗೆ ಒಳಗಾಗಿ ಜೈಲುವಾಸ ಅನುಭವಿಸಿ ಬಂದಾಗ ವಿಮಾನ ನಿಲ್ದಾಣದಿಂದ ಹೊರಬರುತ್ತಿದ್ದಂತೆ ಸಿಕ್ಕ ಭವ್ಯ ಸ್ವಾಗತ ನೋಡಿದ ಬಿಜೆಪಿಗಳು ಅಪರಾಧ ಮಾಡಿಬಂದವರನ್ನು ಹೀಗೆ ಸ್ವಾಗತಿಸುವುದೆ ಎಂದು ಉದ್ಘಾರ ತೆಗೆದವಲ್ಲಾ. ತಮ್ಮನ್ನು ತಾವು ಎಂದೂ ಬಗ್ಗಿ ನೋಡಿಕೊಳ್ಳದ ಚೆಡ್ಡಿಗಳು ತಮ್ಮವರು ಮಾಡಿದ ಎಲ್ಲ ಅಪರಾಧಗಳ ಸಮಯದಲ್ಲಿ ಪಟಾಕಿ ಹೊಡೆದು ಸಂಭ್ರಮಿಸಿವೆ. ಕೊಲೆಗಾರರು ಬಿಡುಗಡೆಯಾದಾಗ, ವಿಜಯೋತ್ಸವ ಆಚರಿಸಿವೆ. ಗಾಂಧಿ ಕೊಂದವನಿಗೆ ಗುಡಿ ಕಟ್ಟಲು ಹೊರಟಿವೆ. ಇದೆಲ್ಲಕ್ಕಿಂತಲೂ ಮುಖ್ಯವಾಗಿ ಜೈಲಿಗೆ ಹೋಗಿ ಬಂದ ಎಡೂರಪ್ಪನನ್ನು ಕಂಡ ಕೂಡಲೇ ಲಾಗಾ ಹೊಡೆದಿದ್ದವು. ಆಗ ಮನೆಗೆ ಬಂದ ಎಡೂರಪ್ಪನನ್ನ ನೋಡಿದ ಅವರ ಮೊಮ್ಮಗಳು ’ತಾತ ಜೈಲಿಂದ ಬಂತು ತಾತ ಜೈಲಿಂದ ಬಂತು’ ಎಂದು ಕೂಗಿಕೊಂಡಿತ್ತು. ಸಂಬಂಧಿಕರು ಸುಮ್ಮನಿರಿಸಲು ಯತ್ನಿಸಿದರೂ ಮಗು ಮುಗಿಲು ಮುಟ್ಟುವಂತೆ ಕೂಗುತ್ತ ಸಂಭ್ರಮಿಸಿತಂತಲ್ಲಾ ಥೂತ್ತೇರಿ.

ರಾಜ್ಯೋತ್ಸವದಂದು ಕೊಡಮಾಡುವ ಪ್ರಶಸ್ತಿಗಳನ್ನು ಫಲಾನುಭವಿಗಳು ಪಡೆದಾಗಿದೆ. ಇನ್ನೇನಿದ್ದರೂ ಸರಕಾರದ ಚೆಕ್ಕುಗಳು ಕ್ಯಾಷಾಗಬೇಕಷ್ಟೆ. ಇಂತಿರುವಾಗ ಸಾಣೇಹಳ್ಳಿಯ ಪಂಡಿತಾರಾಧ್ಯ ಶ್ರೀಗಳು ಪ್ರಶಸ್ತಿಗಳನ್ನ ಕೊಡುವಾಗ ವ್ಯಕ್ತಿಯ ನೈತಿಕ ಜೀವನ ಅಳೆದುಕೊಡಬೇಕೆಂದು ಹೇಳಿದ್ದಾರಲ್ಲಾ. ಈ ಮಾತಿನ ಜಾಡನ್ನ ಹಿಡಿದು ನೋಡಿದಾಗ, ಸಿದ್ಧರಾಮಯ್ಯನವರ ಸರಕಾರ ನೇಮಿಸಿದ ನಾಗಮೋಹನದಾಸ್ ರಚಿಸಿ ಕೊಟ್ಟ ಗೈಡ್‌ಲೈನಿನ ಗಡಿ ಮೀರಿದಂತೆ ಕಾಣುತ್ತಿದೆಯಲ್ಲಾ. ಇದಕ್ಕೆ ಸಾಕ್ಷಾಧಾರವಾಗಿ, ಆಯ್ಕೆ ಕಮಿಟಿಯಲ್ಲಿದ್ದ ನಿರುಪಮಾ ಎಂಬುವವರು ನಾನು ಹಗಲುರಾತ್ರಿ ಎಡೂರಪ್ಪನ ಮನೆಗೂ ಸಿ.ಟಿ. ರವಿ ಮನೆಗೂ ಓಡಾಡಿ ಐದು ಜನರಿಗೆ ಪ್ರಶಸ್ತಿ ಕೊಡಿಸಿದೆ ಎಂದಿದ್ದಾರಲ್ಲಾ. ನಿಜಕ್ಕೂ ಇದೊಂದು ಧೀರೋದಾತ್ತ ಸಾಹಸ. ಮುಖ್ಯಮಂತ್ರಿ, ಸಂಸ್ಕೃತಿ ಸಚಿವ ಹಾಗೂ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಕಮಿಟಿ ಮೀರಿ ಐದು ಜನರಿಗೆ ಪ್ರಶಸ್ತಿ ಕೊಡಿಸಿದ ನಿರುಪಮಾ ಖಂಡಿತ ನಿರುಪಯುಕ್ತ ಮಹಿಳೆಯಲ್ಲ. ಮುಂದಿನ ವರ್ಷ ಪ್ರಶಸ್ತಿ ಬೇಕಾದವರು ನಿರುಪಮಾನನ್ನು ಹಿಡಿದು ನಿಯತ್ತಿನಿಂದ ನೋಡಿಕೊಂಡರೆ, ನಿಮಗೂ ಪ್ರಶಸ್ತಿ ಗ್ಯಾರಂಟಿ ಎಂದು ಫಲಾನುಭವಿಗಳು ಹೇಳಿಲ್ಲವಂತಲ್ಲಾ, ಥೂತ್ತೇರಿ.

ತನಗೇನೇ ಇನ್ನೂ ರಾಜ್ಯೋತ್ಸವ ಪ್ರಶಸ್ತಿ ಕೊಟ್ಟಿಲ್ಲ ಎಂದು ಪ್ರತಿಭಟಿಸಿದ ಸತ್ಯನಾರಾಯಣ ಎಂಬ ಆಸಾಮಿ, ಸರಕಾರಕ್ಕೆ ತರಾಟೆ ತೆಗೆದುಕೊಂಡಿದ್ದಲ್ಲದೆ, ಕೋರ್ಟಿಗೂ ಹೋಗಿದ್ದರಲ್ಲಾ. ಆ ಕಾರಣವಾಗಿ ನಾಗಮೋಹನ ದಾಸ್ ಕಮಿಟಿ ನೇಮಕವಾಗಿ ಪ್ರಶಸ್ತಿ ಸಂಖ್ಯೆ ರಾಜ್ಯೋತ್ಸವ ವರ್ಷದ ಸಂಖ್ಯೆಗೆ ಇಳಿದಿದ್ದು ಮತ್ತು ಅರವತ್ತು ವರ್ಷ ತುಂಬಿರಬೇಕೆಂಬ ನಿಯಮ ಬಂದಿದ್ದು. ಇದಿಲ್ಲದಿದ್ದರೆ, ಈ ಬಿಜೆಪಿಗಳು ಪ್ರತಿ ಜಿಲ್ಲೆಯ ಕನಿಷ್ಟ ಹತ್ತು ಚಡ್ಡಿಗಳಿಗೆ ಪ್ರಶಸ್ತಿ ಕೊಟ್ಟು ಗಬ್ಬೆಬ್ಬಿಸುತ್ತಿದ್ದರು. ಕಳೆದ ಬಾರಿ ಪ್ರಶಸ್ತಿ ವಿಜೇತರ ಪಟ್ಟಿ ತರಿಸಿಕೊಂಡ ಡಿ.ಕೆ. ಶಿವಕುಮಾರ್, ಅತ್ಯಂತ ಯೋಗ್ಯರಾದ ಹತ್ತು ಜನರನ್ನು ತೆಗೆದು ಬಿಸಾಡಿ, ತನ್ನ ಕಡೆಯ ಹತ್ತು ಹೆಸರನ್ನ ಸೇರಿಸಿ ಪ್ರಕಟಿಸಿದ್ದರು. ಇದರಲ್ಲಿ ರಸ್ತೆ ಮಾಡಿದವರು, ಡಿಕೆಶಿಗೆ ಪಾಠ ಹೇಳಿದವರು ಇದ್ದರು. ಈಗ ಸಿ.ಟಿ. ರವಿ ಇನ್ನೂ ಮುಂದೆಹೋಗಿ ತನಗೆ ಹೊಟೇಲಿನಲ್ಲಿ ರೂಮು ಕೊಟ್ಟವನಿಗೊಂದು ಪ್ರಶಸ್ತಿ ಕೊಟ್ಟಿದ್ದಾನಂತಲ್ಲ. ಮುಂದಿನ ವರ್ಷ ರವಿ ಹೆಂಡತಿಯನ್ನು ತುಂಬಾ ಸಮಾರಂಭಗಳಿಗೆ ಅತಿಥಿಯಾಗಿ ಕರೆದವನನ್ನು ಕರೆದು ರಾಜ್ಯೋತ್ಸವ ಪ್ರಶಸ್ತಿ ಕೊಡುವುದು ಗ್ಯಾರಂಟಿ ಎಂದು ಚಿಕ್ಕಮಗಳೂರು ಜನ ಚಿಕ್ಕದಾಗಿ ಬಾಯಿ ತೆರೆದು ದೊಡ್ಡದಾಗಿ ನಕ್ಕರಂತಲ್ಲಾ, ಥೂತ್ತೇರಿ.

ಹಾಗೆ ನೋಡಿದರೆ ಸಾಣೆಹಳ್ಳಿ ಶ್ರೀಗಳು ಹೇಳಿದ್ದಕ್ಕೆ ಸಾಕ್ಷಾಧಾರಗಳು ದಾವಣಗೆರೆ ಜಿಲ್ಲೆಯಲ್ಲೇ ಸಿಗುತ್ತದಂತಲ್ಲಾ. ದಾವಣಗೆರೆ ಜಿಲ್ಲೆಯ ಚನ್ನಪ್ಪನವರಿಗೆ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ಲಭ್ಯವಾಗಿದೆ. ಸದಾ ಸಮಾಜ ಸೇವೆಗಾಗಿ ದುಡಿಯುವ ಚನ್ನಪ್ಪನವರಿಗೆ ರಾಜ್ಯೋತ್ಸವ ಪ್ರಶಸ್ತಿ ಎಂದೊ ಹುಡುಕಿಕೊಂಡು ಬರಬೇಕಿತ್ತು. ಈ ಚೆನ್ನಪ್ಪನವರ ಸಮಾಜ ಸೇವೆಯಲ್ಲಿ ಪ್ರಶಸ್ತಿಗೆ ಯೋಗ್ಯವಾದ ಸಾಧನೆಯಾವುದೆಂದರೆ, ಯಾರದ್ದೊ ಮನೆಯಲ್ಲಿ ಸಂತಾನಭಾಗ್ಯವಿಲ್ಲ. ಆಗ ಹೋರಿ ಕರುವಿನಂತೆ ಓಡಾಡುತ್ತಿದ್ದ ಚನ್ನಪ್ಪನನ್ನು ಕರೆದ ಅಜ್ಜಿ ’ಚನ್ನಪ್ಪ ನನ್ನ ಮೊಮ್ಮಗಳಿಗೆ ಮಗು ಇಲ್ಲ ಕಣಪ್ಪ. ಅದರ ಹೊಟ್ಟೇಲಿ ಯಂತದಾರ ಹುಳ ನೋಡಿ ಸಾಯಬೇಕು ಅನ್ನಿಸಿದೆ. ಮಾಡಿಕೊಡಪ್ಪ’ ಎಂದಿತಂತೆ. ಕರಗಿಹೋದ ಚನ್ನಪ್ಪ ನಮ್ಮ ಎಸ್ಸೆಲ್ ಭೈರಪ್ಪ ಹೇಳಿದಂತಹ ನಿಯೋಗ ಸಾಧನೆಯಿಂದ ಅಜ್ಜಿ ಮನೆ ವಂಶ ಬೆಳೆಸಿದರಂತೆ. ಇದನ್ನು ನಾವು ಚನ್ನಪ್ಪನವರ ಆತ್ಮಕತೆಯಿಂದ ತೆಗೆದು ದಾಖಲಿಸುತ್ತಿದ್ದೇವೆಯೇ ಹೊರತು, ನಮ್ಮ ಕಿಡಿಗೇಡಿತನದಿಂದಲ್ಲ. ಅಂತೂ ಚಡ್ಡಿಗಳು ಹಂಚುವ ಪ್ರಶಸ್ತಿಗಳು ಚೆಡ್ಡಿ ಸಮಸ್ಯೆಯನ್ನು ಪರಿಗಣಿಸುತ್ತಿವೆಯಲ್ಲಾ, ಥೂತ್ತೇರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ (82 ವರ್ಷ) ಅವರು ಬುಧವಾರ (ಜನವರಿ 7, 2026) ತಡರಾತ್ರಿ ಪುಣೆಯಲ್ಲಿರುವ ತಮ್ಮ ಮನೆಯಲ್ಲಿ ಅಲ್ಪಕಾಲದ ಅನಾರೋಗ್ಯದ ನಂತರ ನಿಧನರಾದರು. ಈ ಕುರಿತು ಗಾಡ್ಗೀಳ್ ಅವರ...

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...

ಬಾಂಗ್ಲಾದೇಶ: ಗುಂಪು ದಾಳಿಯಿಂದ ತಪ್ಪಿಸಿಕೊಳ್ಳಲು ಕಾಲುವೆಗೆ ಹಾರಿದ ಹಿಂದೂ ವ್ಯಕ್ತಿ ಸಾವು

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ಸುದ್ದಿಗಳು ನಿರಂತರವಾಗಿ ವರದಿಯಾಗುತ್ತಿರುವ ನಡುವೆಯೇ, ನೌಗಾಂವ್ ಜಿಲ್ಲೆಯ ಮೊಹದೇವ್‌ಪುರ ಉಪಜಿಲ್ಲಾದಲ್ಲಿ ದರೋಡೆ ಆರೋಪ ಹೊರಿಸಿದ ಗುಂಪಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ 25 ವರ್ಷದ ಹಿಂದೂ ವ್ಯಕ್ತಿ ಕಾಲುವೆಗೆ ಹಾರಿ...

ಹೋರಾಟಗಾರ್ತಿ ಕಾಮ್ರೇಡ್ ಪದ್ಮಕ್ಕ ಶ್ರದ್ಧಾಂಜಲಿ ಸಭೆ

ಬೆಂಗಳೂರಿನ ಆಶೀರ್ವಾದ್ ಸೆಂಟರ್ ನಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಪದ್ಮಾರವರ ಕುಟುಂಬ, ಸಹ ಹೋರಾಟಗಾರು, ಚಿಂತಕರು, ಸಾಹಿತಿಗಳು ಪಾಲ್ಗೊಂಡಿದ್ದರು. ಸಭೆಯಲ್ಲಿ ಪದ್ಮಾರವರ ಜೊತೆಗಿನ ಒಡನಾಟವನ್ನು ನೆನೆಯಲಾಯಿತು. ಡಿಸೆಂಬರ್ 25 ರಂದು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ...

‘ನಾಯಿಗಳ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲ’: ರಸ್ತೆಗಳು, ನಾಯಿಗಳಿಂದ ಮುಕ್ತವಾಗಿರಬೇಕು: ಸುಪ್ರೀಂ ಕೋರ್ಟ್

ನವದೆಹಲಿ: ನಾಯಿ ಕಚ್ಚುವ ಮನಸ್ಥಿತಿಯಲ್ಲಿರುವಾಗ ಅದರ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲವಾದ್ದರಿಂದ, ರಸ್ತೆಗಳು ಅಥವಾ ಬೀದಿಗಳು ನಾಯಿಗಳಿಂದ ಮುಕ್ತವಾಗುವಂತೆ ನೋಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.  ಬೀದಿ ನಾಯಿಗಳಿಗೆ ಸಂಬಂಧಿಸಿದ ಸ್ವಯಂಪ್ರೇರಿತ ಪ್ರಕರಣವನ್ನು...

‘ಮಜಾ ನಾ ಕರಾಯಾ ತೋ..ಪೈಸೆ ವಾಪಸ್’: ಭಾರತಕ್ಕೆ ನೇರ ಬೆದರಿಕೆ ಹಾಕಿದ ಪಾಕಿಸ್ತಾನ ಸೇನಾಧಿಕಾರಿ ಅಹ್ಮದ್ ಷರೀಫ್ ಚೌಧರಿ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR) ನ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ, ಕಾಬೂಲ್ ಜೊತೆಗಿನ ಇಸ್ಲಾಮಾಬಾದ್‌ನ ನಡೆಯುತ್ತಿರುವ ಸಂಘರ್ಷದೊಂದಿಗೆ ಭಾರತವನ್ನು ಜೋಡಿಸುವ ಮೂಲಕ ಮತ್ತೊಮ್ಮೆ ವಿವಾದವನ್ನು ಹುಟ್ಟುಹಾಕಿದ್ದಾರೆ.  ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ...