Homeರಾಜಕೀಯಸಾಧನೆಶೂನ್ಯ ಬಿಜೆಪಿಯಿಂದ ಮತ್ತೆ ರಾಮ ಮಂದಿರದ ಜಪ

ಸಾಧನೆಶೂನ್ಯ ಬಿಜೆಪಿಯಿಂದ ಮತ್ತೆ ರಾಮ ಮಂದಿರದ ಜಪ

- Advertisement -
- Advertisement -

ಪಿ.ಕೆ. ಮಲ್ಲನಗೌಡರ್ |

ರಾಮಮಂದಿರದ ಹೆಸರಲ್ಲಿ ಕೋಮು ಧ್ರುವೀಕರಣ ಮಾಡಿ, 2019ರ ಚುನಾವಣೆ ಗೆಲ್ಲಲು ಸಂಘಪರಿವಾರ ರೂಪಿಸಿರುವ ಜೀವದ್ವೇಷಿ ಕಾರ್ಯಕ್ರಮದ ರಿಹರ್ಸಲ್ ರವಿವಾರ ಯಾವುದೇ ಅಹಿತಕರ ಘಟನೆಗಳಿಲ್ಲದೇ ಮುಗಿದಿದೆ. ಆದರೆ ಅದು ಒಂದು ಅಪಾಯದ ಮುನ್ಸೂಚನೆಯನ್ನು ನೀಡಿದೆ. 1992ರಲ್ಲಾದಂತೆ ಮತ್ತೆ ಹಿಂಸಾಚಾರದ ಮೂಲಕ ಧ್ರುವೀಕರಣ ಮಾಡವ ಹುನ್ನಾರಕ್ಕೆ ಚಾಲನೆ ನೀಡಲಾಗಿದೆ.

ವಿಎಚ್‍ಪಿ, ಆರ್‍ಎಸ್‍ಎಸ್‍ಗಳ ಈ ಸರಣಿ ಕಾರ್ಯಕ್ರಮ ಬಿಜೆಪಿ ಸರ್ಕಾರದ ಮೇಲೆ ಒತ್ತಡ ಹೇರುವ ಉದ್ದೇಶದ್ದು ಎನಿಸುವಂತೆ ಬಿಂಬಿಸಲಾಗಿದೆ. ಆದರೆ ಈ ಕಾರ್ಯಕ್ರಮದ ಪ್ರಾಯೋಜಕ ಖುದ್ದು ಬಿಜೆಪಿಯೇ ಆಗಿದೆ. ಇನ್ನು ಸ್ಪಷ್ಟವಾಗಿ ನರೇಂದ್ರ ಮೋದಿ ಮತ್ತು ಅಮಿತ್‍ಶಾಗಳೇ ಆಗಿದ್ದಾರೆ.

ನೋಟು ಅಮಾನ್ಯೀಕರಣ, ಜಿಎಸ್‍ಟಿಗಳಿಂದ ಜರ್ಜರಿತಗೊಂಡ ಜನಸಾಮಾನ್ಯರನ್ನು ಒಲಿಸಿಕೊಳ್ಳಲು ಅದಕ್ಕೆ ಈಗ ಉಳಿದಿರುವ ದಾರಿ ಇದೇ ಆಗಿದೆ. 2014ರ ನಂತರ ನಡೆದ ಲೋಕಸಭಾ ಉಪಚುನಾವಣೆಗಳಲ್ಲಿ, ವಿಪಕ್ಷಗಳು ಒಮ್ಮತದ ಅಭ್ಯರ್ಥಿ ಹಾಕಿದರೆ ಬಿಜೆಪಿಗೆ ಹೀನಾಯ ಸೋಲು ಎಂಬುದು ಪಕ್ಕಾ ಆಗಿದೆ. ಒಟ್ಟು 16 ಉಪಚುನಾವಣೆಗಳಲ್ಲಿ ಸೋತಿರುವ ಬಿಜೆಪಿ, 2014ರಲ್ಲಿ ತಾನು ಗೆದ್ದಿದ್ದ 10 ಕ್ಷೇತ್ರಗಳನ್ನು ಕಳೆದುಕೊಂಡು, 282ರಿಂದ 272ಕ್ಕೆ ಕುಸಿದಿದೆ. ಭಾರಿ ಅಂತರದ ಸೋಲುಗಳು ಅದನ್ನು ಕಂಗೆಡಿಸಿವೆ.

ಮೋದಿಯ ಭಾಷಣಗಳು ಈಗ ಜನರಿಂದ ಲೇವಡಿಗೆ ಒಳಗಾಗುತ್ತಿವೆ. ಅಭಿವೃದ್ಧಿ ಆಧಾರದಲ್ಲಿ ಮತ ಕೇಳುವೆವು ಎಂಬ ಸೋಗಲಾಡಿತನ ಮಾಡುತ್ತಲೇ ಅಡ್ಡ ಮಾರ್ಗಗಳನ್ನು ಹಿಡಿಯುತ್ತ ಸಾಗಿದೆ. ಉತ್ತರದಲ್ಲಿ ಈಗ ಚುನಾವಣಾ ಪ್ರಚಾರಗಳಲ್ಲಿ ಮೋದಿ ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿಯವರನ್ನು ವ್ಯಂಗ್ಯ ಮಾಡುವ ಕಸರತ್ತಿನಲ್ಲಿ ತೊಡಗಿದ್ದಾರೆ. ಇದು ಫಲ ಕೊಡಲಾರದು ಎಂದು ಸಂಶಯ ಬರತೊಡಗಿದ ಮೇಲೆ ಸಂಘ ಪರಿವಾರ ಅಖಾಡಕ್ಕೆ ಇಳಿದಿದೆ. ರಕ್ತಪಾತ ನಡೆಸಿಯಾದರೂ 2019ರ ಚುನಾವಣೆ ಗೆಲ್ಲುವ ಜೀವವಿರೋಧಿ, ದೇಶವಿರೋಧಿ ಕೃತ್ಯಕ್ಕೆ ಧರ್ಮಸಂಸದ್ ಎಂಬ ಅಧರ್ಮದ ಕಾರ್ಯಕ್ರಮಕ್ಕೆ ಈಗ ಖುಲ್ಲಂಖುಲ್ಲಂ ಕೈಹಾಕಿದೆ.

ಆದರೆ ಅನಧಿಕೃತವಾಗಿಇದು ಎಂದೋ ಶುರುವಾಗಿದೆ. ಉತ್ತರಪ್ರದೇಶದ ವಿಧಾನಸಭಾ ಚುನಾವಣೆಗಳನ್ನು ಅದು ಗೆದ್ದಿದ್ದು ಜನರ ಬದುಕಿಗೆ ಬೆಂಕಿ ಇಡುವ ಮೂಲಕವೇ. ಅಲ್ಲಿ ಯೋಗಿ ಆದಿತ್ಯನಾಥರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಕೂಡಿಸಿದ್ದು, ಹಿಂದೂ ಮತಗಳ ಧ್ರುವೀಕರಣಕ್ಕಾಗಿಯೇ. ಮೊದಲ ದಿನದಿಂದಲೂ ಯೋಗಿ ಇದಕ್ಕೆ ಪೂರಕವಾದ ಹುಚ್ಚಾಟವನ್ನೇ ನಡೆಸುತ್ತ ಬಂದಿದ್ದಾರೆ. ಕಳೆದ 2 ತಿಂಗಳಿಂದ ಈ ಪುಣ್ಯಾತ್ನ ಮುಖ್ಯಮಂತ್ರಿಯ ಅಜೆಂಡಾ ಅಯೋಧ್ಯಾ, ರಾಮಮಂದಿರವಷ್ಟೇ ಆಗಿದೆ.

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ, ಆಹಾರಧಾನ್ಯಗಳ ಬೆಲೆ ಏರಿಕೆಯನ್ನು ನಿಯಂತ್ರಿಸಲು ಅಸಮರ್ಥವಾಗಿರುವ ಸರ್ಕಾರ, ಈಗ ರಫೇಲ್ ರಾಡಿಯಲ್ಲಿ ಸಿಕ್ಕಿ ಹಾಕಿಕೊಂಡಿದೆ. ಇದೆಲ್ಲಕ್ಕೂ ಮುಖ್ಯವಾಗಿ ರೈತಾಪಿ ಸಮುದಾಯದ ಕಷ್ಟಗಳಿಗೆ ಸ್ಪಂದಿಸುವ ಒಂದೇಒಂದು ಕಾರ್ಯಕ್ರಮವನ್ನೂ ರೂಪಿಸದ ಸರ್ಕಾರ, ಉದ್ಯಮಿಗಳ ಹಿತ ಕಾಯುತ್ತ ದೇಶದ ಆರ್ಥಿಕತೆಯನ್ನೇ ಡೋಲಾಯಮಾನ ಮಾಡಿದೆ.

ನ್ಯಾಯಾಲಯಕ್ಕೇ ಸವಾಲು

ಹೊರಮಾತಿನಲ್ಲಿ ನ್ಯಾಯಾಲಯದ ತೀರ್ಪಿಗೆ ಬದ್ಧ ಎಂದು 4 ವರ್ಷ ಕಾಲ ಹಾಕಿದ ಬಿಜೆಪಿ, ಈಗ ತನ್ನ ಮಾನ ಮುಚ್ಚಿಕೊಳ್ಳಲು ಸಂಘ ಪರಿವಾರದ ಇತರ ಅಂಗಗಳ ಮೂಲಕ ಕಾನೂನು ಅಥವಾ ಸುಗ್ರಿವಾಜ್ಞೆಯ ಬೇಡಿಕೆಯನ್ನು ಮುನ್ನೆಲೆಗೆ ತಂದಿದೆ. ನ್ಯಾಯಾಲಯ ವಿಚಾರಣೆಯನ್ನು ಈಗಲೇ ಆರಂಭಿಸಿದ್ದರೂ ಅದರ ನಿಲುವೇನೂ ಬದಲಾಗುತ್ತಿರಲಿಲ್ಲ. ಕಳೆದ ಚುನಾವಣೆಯಲ್ಲಿ ಪ್ರಣಾಳಿಕೆಯಲ್ಲಿ ಮಂದಿರದ ಭರಸ ನೀಡಿ, ‘ರಾಮಭಕ್ತರಿಗೇ’ ವಂಚಿಸಿದ ನಡೆಯ ಲಾಭವನ್ನು ಶಿವಸೇನಾ ಪಡೆಯಲು ಕಣಕ್ಕೆ ಇಳಿದ ಮೇಲಂತೂ ಸಂಘಕ್ಕೆ ಹಿಂದೂತ್ವದ ಹಾದಿಯನ್ನು ಇನ್ನಷ್ಟು ಗಟ್ಟಿಗೊಳಿಸಿಕೊಳ್ಳುವ ಅನಿವಾರ್ಯತೆಯೂ ಸೃಷ್ಟಿಯಾಗಿದೆ.

2017ರಲ್ಲಿ ಸುಪ್ರಿಂ ತೀರ್ಪ ಉಲ್ಲಂಘನೆ

ಬಿಜೆಪಿ ಮತ್ತೆ ಧ್ವಂಸ ರಾಜಕಾರಣಕ್ಕೆ ಇಳಿಯುವ ಸುಳಿವು 2017ರಲ್ಲಿಯೇ ಸಿಕ್ಕಿತ್ತು. ವಿಎಚ್‍ಪಿ ಮುಖಡ ರಾಮ ವಿಲಾಸ್ ವೇದಾಂತಿ, ಅಭಯ ಚೈತನ್ಯ ಸ್ವಾಮಿಯ ನೇತೃತ್ವದಲ್ಲಿ ಸಾಧುಸಂತರ ಗುಂಪೊಂದು ರಾಮಲಲ್ಲಾ ದೇಗುಲಕ್ಕೆ ತ್ರಿಶೂಲ ಹಿಡಿದು ಪ್ರವೇಶಿಸುವ ಮೂಲಕ ಸುಪ್ರಿಂ ಕೋರ್ಟ್‍ನ 2002ರ ಆದೇಶವನ್ನು ಉಲ್ಲಂಘಿಸಿತ್ತು. ಯಾವುದೇ ಆಯುಧ, ಧರ್ಮದ ಸಂಕೇತಗಳನ್ನು ಈ ನಿಷೇಧಿತ ಪ್ರದೇಶದಲ್ಲಿ ತರಬಾರದು ಎಂಬ ಆದೇಶವನ್ನು ಉಲ್ಲಂಘಿಸಲು ಯೋಗಿ ಆದಿತ್ಯನಾಥ ಸರ್ಕಾರ ಕುಮ್ಮಕ್ಕು ನೀಡಿತ್ತು. ಫೈಜಾಬಾದ್‍ನ ಜಿಲ್ಲಾಧಿಕಾರಿ, ಹೆಚ್ಚುವರಿ ಜಿಲ್ಲಾಧಿಕಾರಿ ವಿಎಚ್‍ಪಿಯ ನಡೆಯನ್ನು ಬೆಂಬಲಿಸಿ ಮಾತಾಡಿದ್ದರು.

2014ರಿಂದ ಕಲ್ಲು ಸಂಗ್ರಹ

2014ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ವಿಎಚ್‍ಪಿ ದೇಶಾದ್ಯಂತ ಕಲ್ಲು ಸಂಗ್ರಹ ಕೆಲಸವನ್ನು ಆರಂಭಿಸಿತ್ತು. ಅಯೋಧ್ಯೆಯಲ್ಲಿರುವ ತನ್ನ ವರ್ಕ್‍ಶಾಪ್‍ನಲ್ಲಿ ಕಲ್ಲು ಕೆತ್ತನೆಯ ಕೆಲಸಕ್ಕೆ ವೇಗ ನೀಡಲಾರಂಭಿಸಿತು. 2017ರಲ್ಲಿ ಮುಖ್ಯ ನ್ಯಾಯಮೂರ್ತಿ ಜೆ.ಎಸ್. ಖೇಹರ್‍ಮಂದಿರ ನಿರ್ಮಾಣಕ್ಕೆ ಕೋರ್ಟ್ ಸಂಧಾನ ವಹಿಸಲು ಸಿದ್ದವೆಂದಾಗ, ಇನ್ನಷ್ಟು ಚುರುಕುಗೊಂಡ ವಿಎಚ್‍ಪಿ, ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ ಆಕ್ಷೇಪಣಾ ಅರ್ಜಿಗಳನ್ನು ಹಿಂದಕ್ಕೆ ಪಡೆಯಲು ಒತ್ತಾಯಿಸಿತ್ತು. ಆದರೆ ಆ ವರ್ಷ ಅಪೆಕ್ಸ್ ಕೋರ್ಟ್ ಬಿಜೆಪಿಯ ಲಾಲ ಕೃಷ್ಣ ಅದ್ವಾನಿ, ಮುರಳಿ ಮನೋಹರ ಜೋಶಿ ಮತ್ತು ಉಮಾ ಭಾರತಿಯವರ ಮೇಲೆ ಹೊರಿಸಿದ್ದ ಕ್ರಿಮಿನಲ್‍ಸಂಚಿನ ಆರೋಪಗಳನ್ನು ಮಾನ್ಯ ಮಾಡಿತು.ಹೀಗಾಗಿ ಖೇಹರ್ ಸಾಹೇಬರ ‘ಸಂಧಾನ’ ಶುರುವೇ ಆಗಲಿಲ್ಲ.

ಸಂಕಟ ಬಂದಾಗ ರಾಮರಮಣ!

ಜನಪರ ಆಡಳಿತ ನೀಡುವ ಯಾವ ಪ್ರಯತ್ನವನ್ನೂ ಇಲ್ಲಿವರೆಗಿನ ಬಿಜೆಪಿ ಸರ್ಕಾರಗಳು (ಕೇಂದ್ರ ಮತ್ತು ರಾಜ್ಯ ಸರ್ಕಾರಗಳು) ನೀಡಿಲ್ಲ. ಸಂಘ ಪರಿವಾರದ ತಲೆಯಲ್ಲಿ ಹಿಂದೂರಾಷ್ಟ್ರ ಎಂಬ ಗೊಬ್ಬರ ಬಿಟ್ಟರೆ ಮತ್ತೇನಿಲ್ಲ. ಗೋಳ್ವಾಲ್ಕರ್ ಎಂಬ ಜೀವವಿರೋಧಿಯ ‘ಸಿದ್ದಾಂತ’ವೇ ಅದಕ್ಕೆ ಸಂವಿಧಾನ. ಗಾಂಧಿ, ಅಂಬೇಡ್ಕರ್, ಪಟೇಲರ ಹೆಸರನ್ನು ಕೇವಲ ಲಾಭಕ್ಕಷ್ಟೇ ಅದು ಬಳಸಿಕೊಳ್ಳುತ್ತದೆ. ಈಗ ಮೋದಿ ಮಾಡುತ್ತಿರುವುದೂ ಅದನ್ನೇ. ಮೋದಿಯ ‘ಅಭಿವೃದ್ಧಿ’ ಎಂದರೆ ಖದೀಮ ಉದ್ಯಮಿಗಳಿಗಾಗಿ ಯೋಜನೆ ರೂಪಿಸುವುದು, ಹಣ ಕೊಳ್ಳೆ ಹೊಡೆದು, ಅದನ್ನು ಹಿಂದೂತ್ವದ ಉದ್ಯಮದಲ್ಲಿ ಹೂಡುವುದು.

ಜನರ ನಿತ್ಯ ಬವಣೆಗಳ ಬಗ್ಗೆ ಯೋಚಿಸದ ಬಿಜೆಪಿಗೆ ಚುನಾವಣೆ ಬಂದಾಗ ರಾಮ ನೆನಪಾಗುತ್ತಾನೆ. ಆದರೆ ಈ ಸಲ ಮಾಧ್ಯಮಗಳ ಭಾರಿಬೆಂಬಲದ ಹೊರತಾಗಿಯೂ 2019ರ ಚುನಾವಣೆಯ ಭಯ ಶುರುವಾಗಿರುವುದರಿಂದ ಮತ್ತೆ ಅದು ಧ್ರುವೀಕರಣಕ್ಕೆ ಕೈ ಹಾಕಿದೆ.

ಮೊನ್ನೆ ದೇಶಾದ್ಯಂತ ನಡೆಸಿದ ಸಭೆಗಳ ಸ್ವರೂಪ, ಧಾಟಿ ನೋಡಿದರೆ 1992 ಮತ್ತು 2002ರ ಹತ್ಯಾಕಾಂಡಗಳಿಗಿಂತಲೂ ಭೀಕರವಾದ ಕೋಮುಗಲಭೆಗೆ ಅದು ಸಿದ್ಧತೆ ನಡೆಸಿರುವ ಸೂಚನೆಗಳು ಕಾಣುತ್ತಿವೆ. ಅಯೋಧ್ಯೆಯಲ್ಲಿ ನಡೆದ ಧರ್ಮಸಂಸದ್ ಬರೀ ಆರಂಭ ಮತ್ತು ರಿಹರ್ಸಲ್ ಮಾತ್ರ…..

ಈ ದೇಶದ ರೈತರು, ದಲಿತರು ಮತ್ತು ಎಲ್ಲ ಶ್ರಮಜೀವಿಗಳು ಈ ಹುನ್ನಾರವನ್ನು ಚಿವುಟಿ ಹಾಕಲು ಜನಾಂದೋಲನ ರೂಪಿಸಬೇಕಿದೆ.

ನಂಬುಗೆ, ಪುರಾಣ ಮತ್ತು ನ್ಯಾಯ!

2010ರಲ್ಲಿ ಅಲಹಾಬಾದ್ ಹೈಕೋರ್ಟ್ ಬಾಬ್ರಿ ಮಸೀದಿಯ ಜಾಗವನ್ನು ಮೂವರೂ ದಾವೆದಾರರಿಗೆ ಸರಿಸಮವಾಗಿ ಹಂಚಿ ನೀಡಿದ ತೀರ್ಪಿಗೆ ಆಗ ಜನಸಾಮಾನ್ಯರು ಸ್ವಾಗತಿಸಿದ್ದರು. ಮತ್ತೆ 1992ರ ದುಸ್ವಪ್ನ ಕಾಡಲಾರದು ಎಂಬ ಆಶಾಭಾವನೆಯೇ ಅದಕ್ಕೆ ಕಾರಣವಾಗಿತ್ತು.

ಆದರೆ ಪುರಾಣ ಮತ್ತು ದೇಶದ ಬಹುಸಂಖ್ಯಾತರ ನಂಬುಗೆಗಳನ್ನು ಆಧರಿಸಿ ಆ ವಿಲಕ್ಷಣ ತೀರ್ಪನ್ನು ನೀಡಲಾಗಿತ್ತು. ಆಶಿಶ್ ನಂದಿಯವರಂತಹ ದೇಸಿ ಚಿಂತಕರು ಕೂಡ, ನ್ಯಾಯದ ಚೌಕಟ್ಟನ್ನು ಮೀರಿ, ದೇಶದ ಜನರ ನಂಬಿಕೆಗಳನ್ನು ಆಧರಿಸಿ ತೀರ್ಪು ನೀಡುವ ಮೂಲಕ ಕೋರ್ಟ್ ಇತಿಹಾಸ ಸೃಷ್ಟಿಸಲು ಯತ್ನಿಸಿದೆ ಎಂದು ಕೊಂಡಾಡಿದ್ದರು! ಕನ್ನಡದ ‘ದೇಸಿ’ ಚಿಂತಕರಲ್ಲಿ ಒಬ್ಬರಾದ ಕೆ.ವಿ. ಅಕ್ಷರ ಕೂಡ ಸಂಭ್ರಮಪಟ್ಟಿದ್ದರು.

ಈ ದೇಶದ ಬಹುಸಂಖ್ಯಾತ ಶ್ರಮಿಕರಿಗೆ ರಾಮ ಆರಾಧ್ಯ ದೈವವೇ ಅಲ್ಲ. ರಾಮನ್ನು ಆರಾಧಿಸುವ ಬಹುಪಾಲು ಜನರು ‘ರಾಮ ಅಯೋಧ್ಯೆಯಲ್ಲಿ ಹುಟ್ಟಿದ್ದ’ ಎಂಬುದರ ಬಗ್ಗೆ ತಲೆ ಕೆಡಿಸಿಕೊಂಡಿಯೇ ಇಲ್ಲ. ಮಾಧ್ಯಮಗಳ ನೆರವಿನಿಂದ ಸಂಘಪರಿವಾರ ಅಂತಹ ನಂಬಿಕೆಯನ್ನು ಸೃಷಿಸಲು ಯತ್ನಿಸುತ್ತ ಬಂದಿದೆಯಷ್ಟೇ. ಸುಪ್ರಿಂಕೋರ್ಟ್ ವಿಚಾರಣೆ ಈ ಬಿಂಬಿತ ‘ಸತ್ಯ’ಗಳನ್ನು ದಾಟಿ ನ್ಯಾಯ ನೀಡುತ್ತದೆ ಎಂದು ಆಶಿಸೋಣ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...