Homeರಾಜಕೀಯಸಾಧನೆಶೂನ್ಯ ಬಿಜೆಪಿಯಿಂದ ಮತ್ತೆ ರಾಮ ಮಂದಿರದ ಜಪ

ಸಾಧನೆಶೂನ್ಯ ಬಿಜೆಪಿಯಿಂದ ಮತ್ತೆ ರಾಮ ಮಂದಿರದ ಜಪ

- Advertisement -
- Advertisement -

ಪಿ.ಕೆ. ಮಲ್ಲನಗೌಡರ್ |

ರಾಮಮಂದಿರದ ಹೆಸರಲ್ಲಿ ಕೋಮು ಧ್ರುವೀಕರಣ ಮಾಡಿ, 2019ರ ಚುನಾವಣೆ ಗೆಲ್ಲಲು ಸಂಘಪರಿವಾರ ರೂಪಿಸಿರುವ ಜೀವದ್ವೇಷಿ ಕಾರ್ಯಕ್ರಮದ ರಿಹರ್ಸಲ್ ರವಿವಾರ ಯಾವುದೇ ಅಹಿತಕರ ಘಟನೆಗಳಿಲ್ಲದೇ ಮುಗಿದಿದೆ. ಆದರೆ ಅದು ಒಂದು ಅಪಾಯದ ಮುನ್ಸೂಚನೆಯನ್ನು ನೀಡಿದೆ. 1992ರಲ್ಲಾದಂತೆ ಮತ್ತೆ ಹಿಂಸಾಚಾರದ ಮೂಲಕ ಧ್ರುವೀಕರಣ ಮಾಡವ ಹುನ್ನಾರಕ್ಕೆ ಚಾಲನೆ ನೀಡಲಾಗಿದೆ.

ವಿಎಚ್‍ಪಿ, ಆರ್‍ಎಸ್‍ಎಸ್‍ಗಳ ಈ ಸರಣಿ ಕಾರ್ಯಕ್ರಮ ಬಿಜೆಪಿ ಸರ್ಕಾರದ ಮೇಲೆ ಒತ್ತಡ ಹೇರುವ ಉದ್ದೇಶದ್ದು ಎನಿಸುವಂತೆ ಬಿಂಬಿಸಲಾಗಿದೆ. ಆದರೆ ಈ ಕಾರ್ಯಕ್ರಮದ ಪ್ರಾಯೋಜಕ ಖುದ್ದು ಬಿಜೆಪಿಯೇ ಆಗಿದೆ. ಇನ್ನು ಸ್ಪಷ್ಟವಾಗಿ ನರೇಂದ್ರ ಮೋದಿ ಮತ್ತು ಅಮಿತ್‍ಶಾಗಳೇ ಆಗಿದ್ದಾರೆ.

ನೋಟು ಅಮಾನ್ಯೀಕರಣ, ಜಿಎಸ್‍ಟಿಗಳಿಂದ ಜರ್ಜರಿತಗೊಂಡ ಜನಸಾಮಾನ್ಯರನ್ನು ಒಲಿಸಿಕೊಳ್ಳಲು ಅದಕ್ಕೆ ಈಗ ಉಳಿದಿರುವ ದಾರಿ ಇದೇ ಆಗಿದೆ. 2014ರ ನಂತರ ನಡೆದ ಲೋಕಸಭಾ ಉಪಚುನಾವಣೆಗಳಲ್ಲಿ, ವಿಪಕ್ಷಗಳು ಒಮ್ಮತದ ಅಭ್ಯರ್ಥಿ ಹಾಕಿದರೆ ಬಿಜೆಪಿಗೆ ಹೀನಾಯ ಸೋಲು ಎಂಬುದು ಪಕ್ಕಾ ಆಗಿದೆ. ಒಟ್ಟು 16 ಉಪಚುನಾವಣೆಗಳಲ್ಲಿ ಸೋತಿರುವ ಬಿಜೆಪಿ, 2014ರಲ್ಲಿ ತಾನು ಗೆದ್ದಿದ್ದ 10 ಕ್ಷೇತ್ರಗಳನ್ನು ಕಳೆದುಕೊಂಡು, 282ರಿಂದ 272ಕ್ಕೆ ಕುಸಿದಿದೆ. ಭಾರಿ ಅಂತರದ ಸೋಲುಗಳು ಅದನ್ನು ಕಂಗೆಡಿಸಿವೆ.

ಮೋದಿಯ ಭಾಷಣಗಳು ಈಗ ಜನರಿಂದ ಲೇವಡಿಗೆ ಒಳಗಾಗುತ್ತಿವೆ. ಅಭಿವೃದ್ಧಿ ಆಧಾರದಲ್ಲಿ ಮತ ಕೇಳುವೆವು ಎಂಬ ಸೋಗಲಾಡಿತನ ಮಾಡುತ್ತಲೇ ಅಡ್ಡ ಮಾರ್ಗಗಳನ್ನು ಹಿಡಿಯುತ್ತ ಸಾಗಿದೆ. ಉತ್ತರದಲ್ಲಿ ಈಗ ಚುನಾವಣಾ ಪ್ರಚಾರಗಳಲ್ಲಿ ಮೋದಿ ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿಯವರನ್ನು ವ್ಯಂಗ್ಯ ಮಾಡುವ ಕಸರತ್ತಿನಲ್ಲಿ ತೊಡಗಿದ್ದಾರೆ. ಇದು ಫಲ ಕೊಡಲಾರದು ಎಂದು ಸಂಶಯ ಬರತೊಡಗಿದ ಮೇಲೆ ಸಂಘ ಪರಿವಾರ ಅಖಾಡಕ್ಕೆ ಇಳಿದಿದೆ. ರಕ್ತಪಾತ ನಡೆಸಿಯಾದರೂ 2019ರ ಚುನಾವಣೆ ಗೆಲ್ಲುವ ಜೀವವಿರೋಧಿ, ದೇಶವಿರೋಧಿ ಕೃತ್ಯಕ್ಕೆ ಧರ್ಮಸಂಸದ್ ಎಂಬ ಅಧರ್ಮದ ಕಾರ್ಯಕ್ರಮಕ್ಕೆ ಈಗ ಖುಲ್ಲಂಖುಲ್ಲಂ ಕೈಹಾಕಿದೆ.

ಆದರೆ ಅನಧಿಕೃತವಾಗಿಇದು ಎಂದೋ ಶುರುವಾಗಿದೆ. ಉತ್ತರಪ್ರದೇಶದ ವಿಧಾನಸಭಾ ಚುನಾವಣೆಗಳನ್ನು ಅದು ಗೆದ್ದಿದ್ದು ಜನರ ಬದುಕಿಗೆ ಬೆಂಕಿ ಇಡುವ ಮೂಲಕವೇ. ಅಲ್ಲಿ ಯೋಗಿ ಆದಿತ್ಯನಾಥರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಕೂಡಿಸಿದ್ದು, ಹಿಂದೂ ಮತಗಳ ಧ್ರುವೀಕರಣಕ್ಕಾಗಿಯೇ. ಮೊದಲ ದಿನದಿಂದಲೂ ಯೋಗಿ ಇದಕ್ಕೆ ಪೂರಕವಾದ ಹುಚ್ಚಾಟವನ್ನೇ ನಡೆಸುತ್ತ ಬಂದಿದ್ದಾರೆ. ಕಳೆದ 2 ತಿಂಗಳಿಂದ ಈ ಪುಣ್ಯಾತ್ನ ಮುಖ್ಯಮಂತ್ರಿಯ ಅಜೆಂಡಾ ಅಯೋಧ್ಯಾ, ರಾಮಮಂದಿರವಷ್ಟೇ ಆಗಿದೆ.

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ, ಆಹಾರಧಾನ್ಯಗಳ ಬೆಲೆ ಏರಿಕೆಯನ್ನು ನಿಯಂತ್ರಿಸಲು ಅಸಮರ್ಥವಾಗಿರುವ ಸರ್ಕಾರ, ಈಗ ರಫೇಲ್ ರಾಡಿಯಲ್ಲಿ ಸಿಕ್ಕಿ ಹಾಕಿಕೊಂಡಿದೆ. ಇದೆಲ್ಲಕ್ಕೂ ಮುಖ್ಯವಾಗಿ ರೈತಾಪಿ ಸಮುದಾಯದ ಕಷ್ಟಗಳಿಗೆ ಸ್ಪಂದಿಸುವ ಒಂದೇಒಂದು ಕಾರ್ಯಕ್ರಮವನ್ನೂ ರೂಪಿಸದ ಸರ್ಕಾರ, ಉದ್ಯಮಿಗಳ ಹಿತ ಕಾಯುತ್ತ ದೇಶದ ಆರ್ಥಿಕತೆಯನ್ನೇ ಡೋಲಾಯಮಾನ ಮಾಡಿದೆ.

ನ್ಯಾಯಾಲಯಕ್ಕೇ ಸವಾಲು

ಹೊರಮಾತಿನಲ್ಲಿ ನ್ಯಾಯಾಲಯದ ತೀರ್ಪಿಗೆ ಬದ್ಧ ಎಂದು 4 ವರ್ಷ ಕಾಲ ಹಾಕಿದ ಬಿಜೆಪಿ, ಈಗ ತನ್ನ ಮಾನ ಮುಚ್ಚಿಕೊಳ್ಳಲು ಸಂಘ ಪರಿವಾರದ ಇತರ ಅಂಗಗಳ ಮೂಲಕ ಕಾನೂನು ಅಥವಾ ಸುಗ್ರಿವಾಜ್ಞೆಯ ಬೇಡಿಕೆಯನ್ನು ಮುನ್ನೆಲೆಗೆ ತಂದಿದೆ. ನ್ಯಾಯಾಲಯ ವಿಚಾರಣೆಯನ್ನು ಈಗಲೇ ಆರಂಭಿಸಿದ್ದರೂ ಅದರ ನಿಲುವೇನೂ ಬದಲಾಗುತ್ತಿರಲಿಲ್ಲ. ಕಳೆದ ಚುನಾವಣೆಯಲ್ಲಿ ಪ್ರಣಾಳಿಕೆಯಲ್ಲಿ ಮಂದಿರದ ಭರಸ ನೀಡಿ, ‘ರಾಮಭಕ್ತರಿಗೇ’ ವಂಚಿಸಿದ ನಡೆಯ ಲಾಭವನ್ನು ಶಿವಸೇನಾ ಪಡೆಯಲು ಕಣಕ್ಕೆ ಇಳಿದ ಮೇಲಂತೂ ಸಂಘಕ್ಕೆ ಹಿಂದೂತ್ವದ ಹಾದಿಯನ್ನು ಇನ್ನಷ್ಟು ಗಟ್ಟಿಗೊಳಿಸಿಕೊಳ್ಳುವ ಅನಿವಾರ್ಯತೆಯೂ ಸೃಷ್ಟಿಯಾಗಿದೆ.

2017ರಲ್ಲಿ ಸುಪ್ರಿಂ ತೀರ್ಪ ಉಲ್ಲಂಘನೆ

ಬಿಜೆಪಿ ಮತ್ತೆ ಧ್ವಂಸ ರಾಜಕಾರಣಕ್ಕೆ ಇಳಿಯುವ ಸುಳಿವು 2017ರಲ್ಲಿಯೇ ಸಿಕ್ಕಿತ್ತು. ವಿಎಚ್‍ಪಿ ಮುಖಡ ರಾಮ ವಿಲಾಸ್ ವೇದಾಂತಿ, ಅಭಯ ಚೈತನ್ಯ ಸ್ವಾಮಿಯ ನೇತೃತ್ವದಲ್ಲಿ ಸಾಧುಸಂತರ ಗುಂಪೊಂದು ರಾಮಲಲ್ಲಾ ದೇಗುಲಕ್ಕೆ ತ್ರಿಶೂಲ ಹಿಡಿದು ಪ್ರವೇಶಿಸುವ ಮೂಲಕ ಸುಪ್ರಿಂ ಕೋರ್ಟ್‍ನ 2002ರ ಆದೇಶವನ್ನು ಉಲ್ಲಂಘಿಸಿತ್ತು. ಯಾವುದೇ ಆಯುಧ, ಧರ್ಮದ ಸಂಕೇತಗಳನ್ನು ಈ ನಿಷೇಧಿತ ಪ್ರದೇಶದಲ್ಲಿ ತರಬಾರದು ಎಂಬ ಆದೇಶವನ್ನು ಉಲ್ಲಂಘಿಸಲು ಯೋಗಿ ಆದಿತ್ಯನಾಥ ಸರ್ಕಾರ ಕುಮ್ಮಕ್ಕು ನೀಡಿತ್ತು. ಫೈಜಾಬಾದ್‍ನ ಜಿಲ್ಲಾಧಿಕಾರಿ, ಹೆಚ್ಚುವರಿ ಜಿಲ್ಲಾಧಿಕಾರಿ ವಿಎಚ್‍ಪಿಯ ನಡೆಯನ್ನು ಬೆಂಬಲಿಸಿ ಮಾತಾಡಿದ್ದರು.

2014ರಿಂದ ಕಲ್ಲು ಸಂಗ್ರಹ

2014ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ವಿಎಚ್‍ಪಿ ದೇಶಾದ್ಯಂತ ಕಲ್ಲು ಸಂಗ್ರಹ ಕೆಲಸವನ್ನು ಆರಂಭಿಸಿತ್ತು. ಅಯೋಧ್ಯೆಯಲ್ಲಿರುವ ತನ್ನ ವರ್ಕ್‍ಶಾಪ್‍ನಲ್ಲಿ ಕಲ್ಲು ಕೆತ್ತನೆಯ ಕೆಲಸಕ್ಕೆ ವೇಗ ನೀಡಲಾರಂಭಿಸಿತು. 2017ರಲ್ಲಿ ಮುಖ್ಯ ನ್ಯಾಯಮೂರ್ತಿ ಜೆ.ಎಸ್. ಖೇಹರ್‍ಮಂದಿರ ನಿರ್ಮಾಣಕ್ಕೆ ಕೋರ್ಟ್ ಸಂಧಾನ ವಹಿಸಲು ಸಿದ್ದವೆಂದಾಗ, ಇನ್ನಷ್ಟು ಚುರುಕುಗೊಂಡ ವಿಎಚ್‍ಪಿ, ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ ಆಕ್ಷೇಪಣಾ ಅರ್ಜಿಗಳನ್ನು ಹಿಂದಕ್ಕೆ ಪಡೆಯಲು ಒತ್ತಾಯಿಸಿತ್ತು. ಆದರೆ ಆ ವರ್ಷ ಅಪೆಕ್ಸ್ ಕೋರ್ಟ್ ಬಿಜೆಪಿಯ ಲಾಲ ಕೃಷ್ಣ ಅದ್ವಾನಿ, ಮುರಳಿ ಮನೋಹರ ಜೋಶಿ ಮತ್ತು ಉಮಾ ಭಾರತಿಯವರ ಮೇಲೆ ಹೊರಿಸಿದ್ದ ಕ್ರಿಮಿನಲ್‍ಸಂಚಿನ ಆರೋಪಗಳನ್ನು ಮಾನ್ಯ ಮಾಡಿತು.ಹೀಗಾಗಿ ಖೇಹರ್ ಸಾಹೇಬರ ‘ಸಂಧಾನ’ ಶುರುವೇ ಆಗಲಿಲ್ಲ.

ಸಂಕಟ ಬಂದಾಗ ರಾಮರಮಣ!

ಜನಪರ ಆಡಳಿತ ನೀಡುವ ಯಾವ ಪ್ರಯತ್ನವನ್ನೂ ಇಲ್ಲಿವರೆಗಿನ ಬಿಜೆಪಿ ಸರ್ಕಾರಗಳು (ಕೇಂದ್ರ ಮತ್ತು ರಾಜ್ಯ ಸರ್ಕಾರಗಳು) ನೀಡಿಲ್ಲ. ಸಂಘ ಪರಿವಾರದ ತಲೆಯಲ್ಲಿ ಹಿಂದೂರಾಷ್ಟ್ರ ಎಂಬ ಗೊಬ್ಬರ ಬಿಟ್ಟರೆ ಮತ್ತೇನಿಲ್ಲ. ಗೋಳ್ವಾಲ್ಕರ್ ಎಂಬ ಜೀವವಿರೋಧಿಯ ‘ಸಿದ್ದಾಂತ’ವೇ ಅದಕ್ಕೆ ಸಂವಿಧಾನ. ಗಾಂಧಿ, ಅಂಬೇಡ್ಕರ್, ಪಟೇಲರ ಹೆಸರನ್ನು ಕೇವಲ ಲಾಭಕ್ಕಷ್ಟೇ ಅದು ಬಳಸಿಕೊಳ್ಳುತ್ತದೆ. ಈಗ ಮೋದಿ ಮಾಡುತ್ತಿರುವುದೂ ಅದನ್ನೇ. ಮೋದಿಯ ‘ಅಭಿವೃದ್ಧಿ’ ಎಂದರೆ ಖದೀಮ ಉದ್ಯಮಿಗಳಿಗಾಗಿ ಯೋಜನೆ ರೂಪಿಸುವುದು, ಹಣ ಕೊಳ್ಳೆ ಹೊಡೆದು, ಅದನ್ನು ಹಿಂದೂತ್ವದ ಉದ್ಯಮದಲ್ಲಿ ಹೂಡುವುದು.

ಜನರ ನಿತ್ಯ ಬವಣೆಗಳ ಬಗ್ಗೆ ಯೋಚಿಸದ ಬಿಜೆಪಿಗೆ ಚುನಾವಣೆ ಬಂದಾಗ ರಾಮ ನೆನಪಾಗುತ್ತಾನೆ. ಆದರೆ ಈ ಸಲ ಮಾಧ್ಯಮಗಳ ಭಾರಿಬೆಂಬಲದ ಹೊರತಾಗಿಯೂ 2019ರ ಚುನಾವಣೆಯ ಭಯ ಶುರುವಾಗಿರುವುದರಿಂದ ಮತ್ತೆ ಅದು ಧ್ರುವೀಕರಣಕ್ಕೆ ಕೈ ಹಾಕಿದೆ.

ಮೊನ್ನೆ ದೇಶಾದ್ಯಂತ ನಡೆಸಿದ ಸಭೆಗಳ ಸ್ವರೂಪ, ಧಾಟಿ ನೋಡಿದರೆ 1992 ಮತ್ತು 2002ರ ಹತ್ಯಾಕಾಂಡಗಳಿಗಿಂತಲೂ ಭೀಕರವಾದ ಕೋಮುಗಲಭೆಗೆ ಅದು ಸಿದ್ಧತೆ ನಡೆಸಿರುವ ಸೂಚನೆಗಳು ಕಾಣುತ್ತಿವೆ. ಅಯೋಧ್ಯೆಯಲ್ಲಿ ನಡೆದ ಧರ್ಮಸಂಸದ್ ಬರೀ ಆರಂಭ ಮತ್ತು ರಿಹರ್ಸಲ್ ಮಾತ್ರ…..

ಈ ದೇಶದ ರೈತರು, ದಲಿತರು ಮತ್ತು ಎಲ್ಲ ಶ್ರಮಜೀವಿಗಳು ಈ ಹುನ್ನಾರವನ್ನು ಚಿವುಟಿ ಹಾಕಲು ಜನಾಂದೋಲನ ರೂಪಿಸಬೇಕಿದೆ.

ನಂಬುಗೆ, ಪುರಾಣ ಮತ್ತು ನ್ಯಾಯ!

2010ರಲ್ಲಿ ಅಲಹಾಬಾದ್ ಹೈಕೋರ್ಟ್ ಬಾಬ್ರಿ ಮಸೀದಿಯ ಜಾಗವನ್ನು ಮೂವರೂ ದಾವೆದಾರರಿಗೆ ಸರಿಸಮವಾಗಿ ಹಂಚಿ ನೀಡಿದ ತೀರ್ಪಿಗೆ ಆಗ ಜನಸಾಮಾನ್ಯರು ಸ್ವಾಗತಿಸಿದ್ದರು. ಮತ್ತೆ 1992ರ ದುಸ್ವಪ್ನ ಕಾಡಲಾರದು ಎಂಬ ಆಶಾಭಾವನೆಯೇ ಅದಕ್ಕೆ ಕಾರಣವಾಗಿತ್ತು.

ಆದರೆ ಪುರಾಣ ಮತ್ತು ದೇಶದ ಬಹುಸಂಖ್ಯಾತರ ನಂಬುಗೆಗಳನ್ನು ಆಧರಿಸಿ ಆ ವಿಲಕ್ಷಣ ತೀರ್ಪನ್ನು ನೀಡಲಾಗಿತ್ತು. ಆಶಿಶ್ ನಂದಿಯವರಂತಹ ದೇಸಿ ಚಿಂತಕರು ಕೂಡ, ನ್ಯಾಯದ ಚೌಕಟ್ಟನ್ನು ಮೀರಿ, ದೇಶದ ಜನರ ನಂಬಿಕೆಗಳನ್ನು ಆಧರಿಸಿ ತೀರ್ಪು ನೀಡುವ ಮೂಲಕ ಕೋರ್ಟ್ ಇತಿಹಾಸ ಸೃಷ್ಟಿಸಲು ಯತ್ನಿಸಿದೆ ಎಂದು ಕೊಂಡಾಡಿದ್ದರು! ಕನ್ನಡದ ‘ದೇಸಿ’ ಚಿಂತಕರಲ್ಲಿ ಒಬ್ಬರಾದ ಕೆ.ವಿ. ಅಕ್ಷರ ಕೂಡ ಸಂಭ್ರಮಪಟ್ಟಿದ್ದರು.

ಈ ದೇಶದ ಬಹುಸಂಖ್ಯಾತ ಶ್ರಮಿಕರಿಗೆ ರಾಮ ಆರಾಧ್ಯ ದೈವವೇ ಅಲ್ಲ. ರಾಮನ್ನು ಆರಾಧಿಸುವ ಬಹುಪಾಲು ಜನರು ‘ರಾಮ ಅಯೋಧ್ಯೆಯಲ್ಲಿ ಹುಟ್ಟಿದ್ದ’ ಎಂಬುದರ ಬಗ್ಗೆ ತಲೆ ಕೆಡಿಸಿಕೊಂಡಿಯೇ ಇಲ್ಲ. ಮಾಧ್ಯಮಗಳ ನೆರವಿನಿಂದ ಸಂಘಪರಿವಾರ ಅಂತಹ ನಂಬಿಕೆಯನ್ನು ಸೃಷಿಸಲು ಯತ್ನಿಸುತ್ತ ಬಂದಿದೆಯಷ್ಟೇ. ಸುಪ್ರಿಂಕೋರ್ಟ್ ವಿಚಾರಣೆ ಈ ಬಿಂಬಿತ ‘ಸತ್ಯ’ಗಳನ್ನು ದಾಟಿ ನ್ಯಾಯ ನೀಡುತ್ತದೆ ಎಂದು ಆಶಿಸೋಣ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...