Homeರಾಜಕೀಯಸಾಧನೆಶೂನ್ಯ ಬಿಜೆಪಿಯಿಂದ ಮತ್ತೆ ರಾಮ ಮಂದಿರದ ಜಪ

ಸಾಧನೆಶೂನ್ಯ ಬಿಜೆಪಿಯಿಂದ ಮತ್ತೆ ರಾಮ ಮಂದಿರದ ಜಪ

- Advertisement -
- Advertisement -

ಪಿ.ಕೆ. ಮಲ್ಲನಗೌಡರ್ |

ರಾಮಮಂದಿರದ ಹೆಸರಲ್ಲಿ ಕೋಮು ಧ್ರುವೀಕರಣ ಮಾಡಿ, 2019ರ ಚುನಾವಣೆ ಗೆಲ್ಲಲು ಸಂಘಪರಿವಾರ ರೂಪಿಸಿರುವ ಜೀವದ್ವೇಷಿ ಕಾರ್ಯಕ್ರಮದ ರಿಹರ್ಸಲ್ ರವಿವಾರ ಯಾವುದೇ ಅಹಿತಕರ ಘಟನೆಗಳಿಲ್ಲದೇ ಮುಗಿದಿದೆ. ಆದರೆ ಅದು ಒಂದು ಅಪಾಯದ ಮುನ್ಸೂಚನೆಯನ್ನು ನೀಡಿದೆ. 1992ರಲ್ಲಾದಂತೆ ಮತ್ತೆ ಹಿಂಸಾಚಾರದ ಮೂಲಕ ಧ್ರುವೀಕರಣ ಮಾಡವ ಹುನ್ನಾರಕ್ಕೆ ಚಾಲನೆ ನೀಡಲಾಗಿದೆ.

ವಿಎಚ್‍ಪಿ, ಆರ್‍ಎಸ್‍ಎಸ್‍ಗಳ ಈ ಸರಣಿ ಕಾರ್ಯಕ್ರಮ ಬಿಜೆಪಿ ಸರ್ಕಾರದ ಮೇಲೆ ಒತ್ತಡ ಹೇರುವ ಉದ್ದೇಶದ್ದು ಎನಿಸುವಂತೆ ಬಿಂಬಿಸಲಾಗಿದೆ. ಆದರೆ ಈ ಕಾರ್ಯಕ್ರಮದ ಪ್ರಾಯೋಜಕ ಖುದ್ದು ಬಿಜೆಪಿಯೇ ಆಗಿದೆ. ಇನ್ನು ಸ್ಪಷ್ಟವಾಗಿ ನರೇಂದ್ರ ಮೋದಿ ಮತ್ತು ಅಮಿತ್‍ಶಾಗಳೇ ಆಗಿದ್ದಾರೆ.

ನೋಟು ಅಮಾನ್ಯೀಕರಣ, ಜಿಎಸ್‍ಟಿಗಳಿಂದ ಜರ್ಜರಿತಗೊಂಡ ಜನಸಾಮಾನ್ಯರನ್ನು ಒಲಿಸಿಕೊಳ್ಳಲು ಅದಕ್ಕೆ ಈಗ ಉಳಿದಿರುವ ದಾರಿ ಇದೇ ಆಗಿದೆ. 2014ರ ನಂತರ ನಡೆದ ಲೋಕಸಭಾ ಉಪಚುನಾವಣೆಗಳಲ್ಲಿ, ವಿಪಕ್ಷಗಳು ಒಮ್ಮತದ ಅಭ್ಯರ್ಥಿ ಹಾಕಿದರೆ ಬಿಜೆಪಿಗೆ ಹೀನಾಯ ಸೋಲು ಎಂಬುದು ಪಕ್ಕಾ ಆಗಿದೆ. ಒಟ್ಟು 16 ಉಪಚುನಾವಣೆಗಳಲ್ಲಿ ಸೋತಿರುವ ಬಿಜೆಪಿ, 2014ರಲ್ಲಿ ತಾನು ಗೆದ್ದಿದ್ದ 10 ಕ್ಷೇತ್ರಗಳನ್ನು ಕಳೆದುಕೊಂಡು, 282ರಿಂದ 272ಕ್ಕೆ ಕುಸಿದಿದೆ. ಭಾರಿ ಅಂತರದ ಸೋಲುಗಳು ಅದನ್ನು ಕಂಗೆಡಿಸಿವೆ.

ಮೋದಿಯ ಭಾಷಣಗಳು ಈಗ ಜನರಿಂದ ಲೇವಡಿಗೆ ಒಳಗಾಗುತ್ತಿವೆ. ಅಭಿವೃದ್ಧಿ ಆಧಾರದಲ್ಲಿ ಮತ ಕೇಳುವೆವು ಎಂಬ ಸೋಗಲಾಡಿತನ ಮಾಡುತ್ತಲೇ ಅಡ್ಡ ಮಾರ್ಗಗಳನ್ನು ಹಿಡಿಯುತ್ತ ಸಾಗಿದೆ. ಉತ್ತರದಲ್ಲಿ ಈಗ ಚುನಾವಣಾ ಪ್ರಚಾರಗಳಲ್ಲಿ ಮೋದಿ ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿಯವರನ್ನು ವ್ಯಂಗ್ಯ ಮಾಡುವ ಕಸರತ್ತಿನಲ್ಲಿ ತೊಡಗಿದ್ದಾರೆ. ಇದು ಫಲ ಕೊಡಲಾರದು ಎಂದು ಸಂಶಯ ಬರತೊಡಗಿದ ಮೇಲೆ ಸಂಘ ಪರಿವಾರ ಅಖಾಡಕ್ಕೆ ಇಳಿದಿದೆ. ರಕ್ತಪಾತ ನಡೆಸಿಯಾದರೂ 2019ರ ಚುನಾವಣೆ ಗೆಲ್ಲುವ ಜೀವವಿರೋಧಿ, ದೇಶವಿರೋಧಿ ಕೃತ್ಯಕ್ಕೆ ಧರ್ಮಸಂಸದ್ ಎಂಬ ಅಧರ್ಮದ ಕಾರ್ಯಕ್ರಮಕ್ಕೆ ಈಗ ಖುಲ್ಲಂಖುಲ್ಲಂ ಕೈಹಾಕಿದೆ.

ಆದರೆ ಅನಧಿಕೃತವಾಗಿಇದು ಎಂದೋ ಶುರುವಾಗಿದೆ. ಉತ್ತರಪ್ರದೇಶದ ವಿಧಾನಸಭಾ ಚುನಾವಣೆಗಳನ್ನು ಅದು ಗೆದ್ದಿದ್ದು ಜನರ ಬದುಕಿಗೆ ಬೆಂಕಿ ಇಡುವ ಮೂಲಕವೇ. ಅಲ್ಲಿ ಯೋಗಿ ಆದಿತ್ಯನಾಥರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಕೂಡಿಸಿದ್ದು, ಹಿಂದೂ ಮತಗಳ ಧ್ರುವೀಕರಣಕ್ಕಾಗಿಯೇ. ಮೊದಲ ದಿನದಿಂದಲೂ ಯೋಗಿ ಇದಕ್ಕೆ ಪೂರಕವಾದ ಹುಚ್ಚಾಟವನ್ನೇ ನಡೆಸುತ್ತ ಬಂದಿದ್ದಾರೆ. ಕಳೆದ 2 ತಿಂಗಳಿಂದ ಈ ಪುಣ್ಯಾತ್ನ ಮುಖ್ಯಮಂತ್ರಿಯ ಅಜೆಂಡಾ ಅಯೋಧ್ಯಾ, ರಾಮಮಂದಿರವಷ್ಟೇ ಆಗಿದೆ.

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ, ಆಹಾರಧಾನ್ಯಗಳ ಬೆಲೆ ಏರಿಕೆಯನ್ನು ನಿಯಂತ್ರಿಸಲು ಅಸಮರ್ಥವಾಗಿರುವ ಸರ್ಕಾರ, ಈಗ ರಫೇಲ್ ರಾಡಿಯಲ್ಲಿ ಸಿಕ್ಕಿ ಹಾಕಿಕೊಂಡಿದೆ. ಇದೆಲ್ಲಕ್ಕೂ ಮುಖ್ಯವಾಗಿ ರೈತಾಪಿ ಸಮುದಾಯದ ಕಷ್ಟಗಳಿಗೆ ಸ್ಪಂದಿಸುವ ಒಂದೇಒಂದು ಕಾರ್ಯಕ್ರಮವನ್ನೂ ರೂಪಿಸದ ಸರ್ಕಾರ, ಉದ್ಯಮಿಗಳ ಹಿತ ಕಾಯುತ್ತ ದೇಶದ ಆರ್ಥಿಕತೆಯನ್ನೇ ಡೋಲಾಯಮಾನ ಮಾಡಿದೆ.

ನ್ಯಾಯಾಲಯಕ್ಕೇ ಸವಾಲು

ಹೊರಮಾತಿನಲ್ಲಿ ನ್ಯಾಯಾಲಯದ ತೀರ್ಪಿಗೆ ಬದ್ಧ ಎಂದು 4 ವರ್ಷ ಕಾಲ ಹಾಕಿದ ಬಿಜೆಪಿ, ಈಗ ತನ್ನ ಮಾನ ಮುಚ್ಚಿಕೊಳ್ಳಲು ಸಂಘ ಪರಿವಾರದ ಇತರ ಅಂಗಗಳ ಮೂಲಕ ಕಾನೂನು ಅಥವಾ ಸುಗ್ರಿವಾಜ್ಞೆಯ ಬೇಡಿಕೆಯನ್ನು ಮುನ್ನೆಲೆಗೆ ತಂದಿದೆ. ನ್ಯಾಯಾಲಯ ವಿಚಾರಣೆಯನ್ನು ಈಗಲೇ ಆರಂಭಿಸಿದ್ದರೂ ಅದರ ನಿಲುವೇನೂ ಬದಲಾಗುತ್ತಿರಲಿಲ್ಲ. ಕಳೆದ ಚುನಾವಣೆಯಲ್ಲಿ ಪ್ರಣಾಳಿಕೆಯಲ್ಲಿ ಮಂದಿರದ ಭರಸ ನೀಡಿ, ‘ರಾಮಭಕ್ತರಿಗೇ’ ವಂಚಿಸಿದ ನಡೆಯ ಲಾಭವನ್ನು ಶಿವಸೇನಾ ಪಡೆಯಲು ಕಣಕ್ಕೆ ಇಳಿದ ಮೇಲಂತೂ ಸಂಘಕ್ಕೆ ಹಿಂದೂತ್ವದ ಹಾದಿಯನ್ನು ಇನ್ನಷ್ಟು ಗಟ್ಟಿಗೊಳಿಸಿಕೊಳ್ಳುವ ಅನಿವಾರ್ಯತೆಯೂ ಸೃಷ್ಟಿಯಾಗಿದೆ.

2017ರಲ್ಲಿ ಸುಪ್ರಿಂ ತೀರ್ಪ ಉಲ್ಲಂಘನೆ

ಬಿಜೆಪಿ ಮತ್ತೆ ಧ್ವಂಸ ರಾಜಕಾರಣಕ್ಕೆ ಇಳಿಯುವ ಸುಳಿವು 2017ರಲ್ಲಿಯೇ ಸಿಕ್ಕಿತ್ತು. ವಿಎಚ್‍ಪಿ ಮುಖಡ ರಾಮ ವಿಲಾಸ್ ವೇದಾಂತಿ, ಅಭಯ ಚೈತನ್ಯ ಸ್ವಾಮಿಯ ನೇತೃತ್ವದಲ್ಲಿ ಸಾಧುಸಂತರ ಗುಂಪೊಂದು ರಾಮಲಲ್ಲಾ ದೇಗುಲಕ್ಕೆ ತ್ರಿಶೂಲ ಹಿಡಿದು ಪ್ರವೇಶಿಸುವ ಮೂಲಕ ಸುಪ್ರಿಂ ಕೋರ್ಟ್‍ನ 2002ರ ಆದೇಶವನ್ನು ಉಲ್ಲಂಘಿಸಿತ್ತು. ಯಾವುದೇ ಆಯುಧ, ಧರ್ಮದ ಸಂಕೇತಗಳನ್ನು ಈ ನಿಷೇಧಿತ ಪ್ರದೇಶದಲ್ಲಿ ತರಬಾರದು ಎಂಬ ಆದೇಶವನ್ನು ಉಲ್ಲಂಘಿಸಲು ಯೋಗಿ ಆದಿತ್ಯನಾಥ ಸರ್ಕಾರ ಕುಮ್ಮಕ್ಕು ನೀಡಿತ್ತು. ಫೈಜಾಬಾದ್‍ನ ಜಿಲ್ಲಾಧಿಕಾರಿ, ಹೆಚ್ಚುವರಿ ಜಿಲ್ಲಾಧಿಕಾರಿ ವಿಎಚ್‍ಪಿಯ ನಡೆಯನ್ನು ಬೆಂಬಲಿಸಿ ಮಾತಾಡಿದ್ದರು.

2014ರಿಂದ ಕಲ್ಲು ಸಂಗ್ರಹ

2014ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ವಿಎಚ್‍ಪಿ ದೇಶಾದ್ಯಂತ ಕಲ್ಲು ಸಂಗ್ರಹ ಕೆಲಸವನ್ನು ಆರಂಭಿಸಿತ್ತು. ಅಯೋಧ್ಯೆಯಲ್ಲಿರುವ ತನ್ನ ವರ್ಕ್‍ಶಾಪ್‍ನಲ್ಲಿ ಕಲ್ಲು ಕೆತ್ತನೆಯ ಕೆಲಸಕ್ಕೆ ವೇಗ ನೀಡಲಾರಂಭಿಸಿತು. 2017ರಲ್ಲಿ ಮುಖ್ಯ ನ್ಯಾಯಮೂರ್ತಿ ಜೆ.ಎಸ್. ಖೇಹರ್‍ಮಂದಿರ ನಿರ್ಮಾಣಕ್ಕೆ ಕೋರ್ಟ್ ಸಂಧಾನ ವಹಿಸಲು ಸಿದ್ದವೆಂದಾಗ, ಇನ್ನಷ್ಟು ಚುರುಕುಗೊಂಡ ವಿಎಚ್‍ಪಿ, ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ ಆಕ್ಷೇಪಣಾ ಅರ್ಜಿಗಳನ್ನು ಹಿಂದಕ್ಕೆ ಪಡೆಯಲು ಒತ್ತಾಯಿಸಿತ್ತು. ಆದರೆ ಆ ವರ್ಷ ಅಪೆಕ್ಸ್ ಕೋರ್ಟ್ ಬಿಜೆಪಿಯ ಲಾಲ ಕೃಷ್ಣ ಅದ್ವಾನಿ, ಮುರಳಿ ಮನೋಹರ ಜೋಶಿ ಮತ್ತು ಉಮಾ ಭಾರತಿಯವರ ಮೇಲೆ ಹೊರಿಸಿದ್ದ ಕ್ರಿಮಿನಲ್‍ಸಂಚಿನ ಆರೋಪಗಳನ್ನು ಮಾನ್ಯ ಮಾಡಿತು.ಹೀಗಾಗಿ ಖೇಹರ್ ಸಾಹೇಬರ ‘ಸಂಧಾನ’ ಶುರುವೇ ಆಗಲಿಲ್ಲ.

ಸಂಕಟ ಬಂದಾಗ ರಾಮರಮಣ!

ಜನಪರ ಆಡಳಿತ ನೀಡುವ ಯಾವ ಪ್ರಯತ್ನವನ್ನೂ ಇಲ್ಲಿವರೆಗಿನ ಬಿಜೆಪಿ ಸರ್ಕಾರಗಳು (ಕೇಂದ್ರ ಮತ್ತು ರಾಜ್ಯ ಸರ್ಕಾರಗಳು) ನೀಡಿಲ್ಲ. ಸಂಘ ಪರಿವಾರದ ತಲೆಯಲ್ಲಿ ಹಿಂದೂರಾಷ್ಟ್ರ ಎಂಬ ಗೊಬ್ಬರ ಬಿಟ್ಟರೆ ಮತ್ತೇನಿಲ್ಲ. ಗೋಳ್ವಾಲ್ಕರ್ ಎಂಬ ಜೀವವಿರೋಧಿಯ ‘ಸಿದ್ದಾಂತ’ವೇ ಅದಕ್ಕೆ ಸಂವಿಧಾನ. ಗಾಂಧಿ, ಅಂಬೇಡ್ಕರ್, ಪಟೇಲರ ಹೆಸರನ್ನು ಕೇವಲ ಲಾಭಕ್ಕಷ್ಟೇ ಅದು ಬಳಸಿಕೊಳ್ಳುತ್ತದೆ. ಈಗ ಮೋದಿ ಮಾಡುತ್ತಿರುವುದೂ ಅದನ್ನೇ. ಮೋದಿಯ ‘ಅಭಿವೃದ್ಧಿ’ ಎಂದರೆ ಖದೀಮ ಉದ್ಯಮಿಗಳಿಗಾಗಿ ಯೋಜನೆ ರೂಪಿಸುವುದು, ಹಣ ಕೊಳ್ಳೆ ಹೊಡೆದು, ಅದನ್ನು ಹಿಂದೂತ್ವದ ಉದ್ಯಮದಲ್ಲಿ ಹೂಡುವುದು.

ಜನರ ನಿತ್ಯ ಬವಣೆಗಳ ಬಗ್ಗೆ ಯೋಚಿಸದ ಬಿಜೆಪಿಗೆ ಚುನಾವಣೆ ಬಂದಾಗ ರಾಮ ನೆನಪಾಗುತ್ತಾನೆ. ಆದರೆ ಈ ಸಲ ಮಾಧ್ಯಮಗಳ ಭಾರಿಬೆಂಬಲದ ಹೊರತಾಗಿಯೂ 2019ರ ಚುನಾವಣೆಯ ಭಯ ಶುರುವಾಗಿರುವುದರಿಂದ ಮತ್ತೆ ಅದು ಧ್ರುವೀಕರಣಕ್ಕೆ ಕೈ ಹಾಕಿದೆ.

ಮೊನ್ನೆ ದೇಶಾದ್ಯಂತ ನಡೆಸಿದ ಸಭೆಗಳ ಸ್ವರೂಪ, ಧಾಟಿ ನೋಡಿದರೆ 1992 ಮತ್ತು 2002ರ ಹತ್ಯಾಕಾಂಡಗಳಿಗಿಂತಲೂ ಭೀಕರವಾದ ಕೋಮುಗಲಭೆಗೆ ಅದು ಸಿದ್ಧತೆ ನಡೆಸಿರುವ ಸೂಚನೆಗಳು ಕಾಣುತ್ತಿವೆ. ಅಯೋಧ್ಯೆಯಲ್ಲಿ ನಡೆದ ಧರ್ಮಸಂಸದ್ ಬರೀ ಆರಂಭ ಮತ್ತು ರಿಹರ್ಸಲ್ ಮಾತ್ರ…..

ಈ ದೇಶದ ರೈತರು, ದಲಿತರು ಮತ್ತು ಎಲ್ಲ ಶ್ರಮಜೀವಿಗಳು ಈ ಹುನ್ನಾರವನ್ನು ಚಿವುಟಿ ಹಾಕಲು ಜನಾಂದೋಲನ ರೂಪಿಸಬೇಕಿದೆ.

ನಂಬುಗೆ, ಪುರಾಣ ಮತ್ತು ನ್ಯಾಯ!

2010ರಲ್ಲಿ ಅಲಹಾಬಾದ್ ಹೈಕೋರ್ಟ್ ಬಾಬ್ರಿ ಮಸೀದಿಯ ಜಾಗವನ್ನು ಮೂವರೂ ದಾವೆದಾರರಿಗೆ ಸರಿಸಮವಾಗಿ ಹಂಚಿ ನೀಡಿದ ತೀರ್ಪಿಗೆ ಆಗ ಜನಸಾಮಾನ್ಯರು ಸ್ವಾಗತಿಸಿದ್ದರು. ಮತ್ತೆ 1992ರ ದುಸ್ವಪ್ನ ಕಾಡಲಾರದು ಎಂಬ ಆಶಾಭಾವನೆಯೇ ಅದಕ್ಕೆ ಕಾರಣವಾಗಿತ್ತು.

ಆದರೆ ಪುರಾಣ ಮತ್ತು ದೇಶದ ಬಹುಸಂಖ್ಯಾತರ ನಂಬುಗೆಗಳನ್ನು ಆಧರಿಸಿ ಆ ವಿಲಕ್ಷಣ ತೀರ್ಪನ್ನು ನೀಡಲಾಗಿತ್ತು. ಆಶಿಶ್ ನಂದಿಯವರಂತಹ ದೇಸಿ ಚಿಂತಕರು ಕೂಡ, ನ್ಯಾಯದ ಚೌಕಟ್ಟನ್ನು ಮೀರಿ, ದೇಶದ ಜನರ ನಂಬಿಕೆಗಳನ್ನು ಆಧರಿಸಿ ತೀರ್ಪು ನೀಡುವ ಮೂಲಕ ಕೋರ್ಟ್ ಇತಿಹಾಸ ಸೃಷ್ಟಿಸಲು ಯತ್ನಿಸಿದೆ ಎಂದು ಕೊಂಡಾಡಿದ್ದರು! ಕನ್ನಡದ ‘ದೇಸಿ’ ಚಿಂತಕರಲ್ಲಿ ಒಬ್ಬರಾದ ಕೆ.ವಿ. ಅಕ್ಷರ ಕೂಡ ಸಂಭ್ರಮಪಟ್ಟಿದ್ದರು.

ಈ ದೇಶದ ಬಹುಸಂಖ್ಯಾತ ಶ್ರಮಿಕರಿಗೆ ರಾಮ ಆರಾಧ್ಯ ದೈವವೇ ಅಲ್ಲ. ರಾಮನ್ನು ಆರಾಧಿಸುವ ಬಹುಪಾಲು ಜನರು ‘ರಾಮ ಅಯೋಧ್ಯೆಯಲ್ಲಿ ಹುಟ್ಟಿದ್ದ’ ಎಂಬುದರ ಬಗ್ಗೆ ತಲೆ ಕೆಡಿಸಿಕೊಂಡಿಯೇ ಇಲ್ಲ. ಮಾಧ್ಯಮಗಳ ನೆರವಿನಿಂದ ಸಂಘಪರಿವಾರ ಅಂತಹ ನಂಬಿಕೆಯನ್ನು ಸೃಷಿಸಲು ಯತ್ನಿಸುತ್ತ ಬಂದಿದೆಯಷ್ಟೇ. ಸುಪ್ರಿಂಕೋರ್ಟ್ ವಿಚಾರಣೆ ಈ ಬಿಂಬಿತ ‘ಸತ್ಯ’ಗಳನ್ನು ದಾಟಿ ನ್ಯಾಯ ನೀಡುತ್ತದೆ ಎಂದು ಆಶಿಸೋಣ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...