Homeಮುಖಪುಟಫೇಸ್ಬುಕ್, ಟ್ವಿಟ್ಟರ್ ಖಾತೆಗಳಿಗೆ ಆಧಾರ್ ಕಡ್ಡಾಯ ಮಾಡಿ ಎಂದವರ ಅರ್ಜಿಯನ್ನೇ ವಜಾಗೊಳಿಸಿತು ಸುಪ್ರೀಂ ಕೋರ್ಟ್

ಫೇಸ್ಬುಕ್, ಟ್ವಿಟ್ಟರ್ ಖಾತೆಗಳಿಗೆ ಆಧಾರ್ ಕಡ್ಡಾಯ ಮಾಡಿ ಎಂದವರ ಅರ್ಜಿಯನ್ನೇ ವಜಾಗೊಳಿಸಿತು ಸುಪ್ರೀಂ ಕೋರ್ಟ್

- Advertisement -
- Advertisement -

12 ಅಂಕಿಗಳ ಆಧಾರ್ ಸಂಖ್ಯೆಯನ್ನು ಸಾಮಾಜಿಕ ಜಾಲತಾಣಗಳ ಅವರವರ ಖಾತೆಗೆ ಕಡ್ಡಾಯವಾಗಿ ಲಿಂಕ್ ಮಾಡಲು ನಿರ್ದೇಶನ ನೀಡಬೇಕೆಂದು ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಆಧಾರ್ ನಂಬರನ್ನು ಸಾಮಾಜಿಕ ಜಾಲತಾಣಗಳ ಖಾತೆಗೆ ಲಿಂಕ್ ಮಾಡುವ ವಿಚಾರದ ಬಗ್ಗೆ ಈಗಾಗಲೇ ಮದ್ರಾಸ್ ಹೈಕೋರ್ಟ್ ವಿಚಾರಣೆ ನಡೆಸುತ್ತಿದೆ. ಹಾಗಾಗಿ ಅಂತದ್ದೇ ಪ್ರಕರಣವನ್ನು ನಾನು ಮತ್ತೆ ಕೈಗೆತ್ತಿಕೊಳ್ಳಲಾರೆ. ನೀವು ಮದ್ರಾಸ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿ ಎಂದು ದೂರುದಾರರಿಗೆ ಸುಪ್ರೀಂಕೋರ್ಟ್ ನಿರ್ದೇಶಿಸಿದೆ.

ಬಹು ದಿನಗಳಿಂದ ಸಾಮಾಜಿಕ ಜಾಲತಾಣಗಳ ಖಾತೆಗೆ ಆಧಾರ್ ನಂಬರ್ ಲಿಂಕ್ ವಿಚಾರ ಸುದ್ದಿಯಲ್ಲಿದೆ. ಆನ್ ಲೈನ್ ಕಿರುಕುಳ, ನಿಂದನೆ, ಸುಳ್ಳು ಸುದ್ದಿ ಹಾಗೂ ಸಂದೇಶಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದು, ಸಮಾಜದ ಸ್ವಾಸ್ಥ್ಯ ಕೆಡಿಸುವ ಪೋಸ್ಟ್ ಹಾಕುವುದನ್ನು ತಡೆಯಲು ಫೇಸ್ ಬುಕ್ ಸೇರಿದಂತೆ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಆಧಾರ್ ಲಿಂಕ್ ಮಾಡಬೇಕೆಂಬುದು ಅರ್ಜಿದಾರರಾದ ಅಶ್ವಿನಿ ಉಪಾಧ್ಯಾಯ ಅವರ ವಾದವಾಗಿತ್ತು.

`ಎಲ್ಲಾ ಕೇಸ್ ಗಳು, ವಿಷಯಗಳನ್ನು ಸುಪ್ರೀಂಕೋರ್ಟ್ ಗೆ ತರಬೇಕು ಎಂದೇನಿಲ್ಲ. ಆಧಾರ್ ವಿಚಾರವಾಗಿ ಮದ್ರಾಸ್ ಹೈಕೋರ್ಟ್ ವಿಚಾರಣೆ ನಡೆಸುತ್ತಿದೆ. ನೀವು ಅಲ್ಲಿಗೆ ಹೋಗಿ’ ಎಂದು ಅರ್ಜಿದಾರರಿಗೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ.

ಮದ್ರಾಸ್ ಹೈಕೋರ್ಟಿನ ಮುಂದೆ ಇದೇ ವಿಷಯಕ್ಕೆ ಸಂಬಂಧಿಸಿದ ಎರಡು ಪ್ರಕರಣಗಳು ವಿಚಾರಣೆಯಲ್ಲಿವೆ. ಈಗಾಗಲೇ ‘ಸಾಮಾಜಿಕ ಜಾಲತಾಣಗಳ ಖಾತೆಗೆ ಆಧಾರ್ ಲಿಂಕ್ ಮಾಡುವ ಅಗತ್ಯವಿಲ್ಲ. ಆದರೆ ಕೆಲ ಸಂದೇಶಗಳ ಮೂಲಗಳನ್ನು ಪತ್ತೆ ಹಚ್ಚುವ ಸಂಭಾವ್ಯತೆಗೆ ಸಂಬಂಧಿಸಿದಂತೆ ಅರ್ಜಿಯನ್ನು ವಿಸ್ತರಿಸಬಹುದು’ ಎಂದು ಹೇಳಿರುವ ಹೈಕೋರ್ಟ್ ಆ ದಿಶೆಯಲ್ಲೇ ವಿಚಾರಣೆ ನಡೆಸುತ್ತಿದೆ. ಅಂದಹಾಗೆ, ಬಾಂಬೆ ಮತ್ತು ಮಧ್ಯಪ್ರದೇಶ ಹೈಕೋರ್ಟ್ ಗಳ ಮುಂದೆಯೂ ಇಂತಜಹ ಹಿತಾಸಕ್ತಿ ಅರ್ಜಿಗಳು ಸಲ್ಲಿಕೆಯಾಗಿವೆ.

ಇದಕ್ಕೆ ಪ್ರತಿಯಾಗಿ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದ ಫೇಸ್ ಬುಕ್ ಸಂಸ್ಥೆ `ಬೇರೆಬೇರೆ ಹೈಕೋರ್ಟುಗಳಲ್ಲಿ ಒಂದೇ ಬಗೆಯ ಪ್ರಕರಣಗಳು ವಿಚಾರಣೆ ನಡೆದು, ವ್ಯತಿರಿಕ್ತ ತೀರ್ಪುಗಳು ಬರುವುದರ ಬದಲು ಎಲ್ಲವನ್ನೂ ಒಟ್ಟುಗೂಡಿಸಿ ಸರ್ವೋಚ್ಛ ನ್ಯಾಯಾಲಯವೇ ಕೈಗೆತ್ತಿಕೊಳ್ಳಬೇಕು’ ಎಂಬ ಮನವಿ ಮಾಡಿಕೊಂಡಿತ್ತು. ಆದರೆ ಸುಪ್ರೀಂ ಕೋರ್ಟ್ ಅದನ್ನೂ ಪುರಸ್ಕರಿಸಿಲ್ಲ.

ಇನ್ನು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ನ್ಯಾಯಾಲಯದ ಮುಂದೆ ಹಾಜರಾಗಿ ಕೇಂದ್ರ ಸರ್ಕಾರದ ಮಾಹಿತಿ ಮತ್ತು ತಂತ್ರಜ್ಞಾನ ಇಲಾಖೆಯು ನಿಯಮಾವಳಿಗಳನ್ನು ರೂಪಿಸುತ್ತಿರುವ ಪ್ರಕ್ರಿಯೆಯನ್ನು ವಿವರಿಸಿದರು, ಆದರೆ ಅದನ್ನು ಅಂತಿಮಗೊಳಿಸಲು ಎಷ್ಟು ಕಾಲಾವಧಿ ಬೇಕಾಗುವುದು ಎಂಬುದನ್ನು ಈಗಲೇ ಹೇಳಲು ಸಾಧ್ಯವಾಗದು ಎಂದಿದ್ದಾರೆ. ಇತ್ತ ತಮಿಳುನಾಡು ಸರ್ಕಾರದ ಅಟಾರ್ನಿ ಜನರಲ್ ಕೆ.ಕೆ ವೇಣುಗೋಪಾಲ್ ಅವರು `ಹೈಕೋರ್ಟ್ ನ ಮುಂದೆ ನಡೆಯುತ್ತಿರುವ ವಿಚಾರಣೆಗೆ ಪದೇಪದೇ ಗೈರು ಹಾಜರಾಗುತ್ತಿರುವ ಸೋಶಿಯಲ್ ಮೀಡಿಯಾ ಕಂಪನಿಗಳು ಈಗ ಪ್ರಕರಣವನ್ನು ಸುಪ್ರೀಂ ಕೋರ್ಟಿಗೆ ವರ್ಗಾಯಿಸಬೇಕೆಂದು ಮನವಿ ಸಲ್ಲಿಸಿವೆ. ಆದರೆ  ಹೈಕೋರ್ಟ್ ಗಳೇ  ವಿಚಾರಣೆ ನಡೆಸಲು ಸರ್ವೋಚ್ಛ ನ್ಯಾಯಾಲಯ ಅನುವು ಮಾಡಿಕೊಡಬೇಕು’ ಎಂಬ ವಾದ ಮಂಡಿಸಿದ್ದರು. ಅವರ ವಾದವನ್ನು ಪುರಸ್ಕರಿಸಿರುವ ಸುಪ್ರೀಂ ಕೋರ್ಟ್ ಅರ್ಜಿದಾರರನ್ನು ಹೈಕೋರ್ಟುಗಳಿಗೇ ತೆರಳುವಂತೆ ನಿರ್ದೇಶನ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...