Homeಮುಖಪುಟಫೇಸ್ಬುಕ್, ಟ್ವಿಟ್ಟರ್ ಖಾತೆಗಳಿಗೆ ಆಧಾರ್ ಕಡ್ಡಾಯ ಮಾಡಿ ಎಂದವರ ಅರ್ಜಿಯನ್ನೇ ವಜಾಗೊಳಿಸಿತು ಸುಪ್ರೀಂ ಕೋರ್ಟ್

ಫೇಸ್ಬುಕ್, ಟ್ವಿಟ್ಟರ್ ಖಾತೆಗಳಿಗೆ ಆಧಾರ್ ಕಡ್ಡಾಯ ಮಾಡಿ ಎಂದವರ ಅರ್ಜಿಯನ್ನೇ ವಜಾಗೊಳಿಸಿತು ಸುಪ್ರೀಂ ಕೋರ್ಟ್

- Advertisement -
- Advertisement -

12 ಅಂಕಿಗಳ ಆಧಾರ್ ಸಂಖ್ಯೆಯನ್ನು ಸಾಮಾಜಿಕ ಜಾಲತಾಣಗಳ ಅವರವರ ಖಾತೆಗೆ ಕಡ್ಡಾಯವಾಗಿ ಲಿಂಕ್ ಮಾಡಲು ನಿರ್ದೇಶನ ನೀಡಬೇಕೆಂದು ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಆಧಾರ್ ನಂಬರನ್ನು ಸಾಮಾಜಿಕ ಜಾಲತಾಣಗಳ ಖಾತೆಗೆ ಲಿಂಕ್ ಮಾಡುವ ವಿಚಾರದ ಬಗ್ಗೆ ಈಗಾಗಲೇ ಮದ್ರಾಸ್ ಹೈಕೋರ್ಟ್ ವಿಚಾರಣೆ ನಡೆಸುತ್ತಿದೆ. ಹಾಗಾಗಿ ಅಂತದ್ದೇ ಪ್ರಕರಣವನ್ನು ನಾನು ಮತ್ತೆ ಕೈಗೆತ್ತಿಕೊಳ್ಳಲಾರೆ. ನೀವು ಮದ್ರಾಸ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿ ಎಂದು ದೂರುದಾರರಿಗೆ ಸುಪ್ರೀಂಕೋರ್ಟ್ ನಿರ್ದೇಶಿಸಿದೆ.

ಬಹು ದಿನಗಳಿಂದ ಸಾಮಾಜಿಕ ಜಾಲತಾಣಗಳ ಖಾತೆಗೆ ಆಧಾರ್ ನಂಬರ್ ಲಿಂಕ್ ವಿಚಾರ ಸುದ್ದಿಯಲ್ಲಿದೆ. ಆನ್ ಲೈನ್ ಕಿರುಕುಳ, ನಿಂದನೆ, ಸುಳ್ಳು ಸುದ್ದಿ ಹಾಗೂ ಸಂದೇಶಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದು, ಸಮಾಜದ ಸ್ವಾಸ್ಥ್ಯ ಕೆಡಿಸುವ ಪೋಸ್ಟ್ ಹಾಕುವುದನ್ನು ತಡೆಯಲು ಫೇಸ್ ಬುಕ್ ಸೇರಿದಂತೆ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಆಧಾರ್ ಲಿಂಕ್ ಮಾಡಬೇಕೆಂಬುದು ಅರ್ಜಿದಾರರಾದ ಅಶ್ವಿನಿ ಉಪಾಧ್ಯಾಯ ಅವರ ವಾದವಾಗಿತ್ತು.

`ಎಲ್ಲಾ ಕೇಸ್ ಗಳು, ವಿಷಯಗಳನ್ನು ಸುಪ್ರೀಂಕೋರ್ಟ್ ಗೆ ತರಬೇಕು ಎಂದೇನಿಲ್ಲ. ಆಧಾರ್ ವಿಚಾರವಾಗಿ ಮದ್ರಾಸ್ ಹೈಕೋರ್ಟ್ ವಿಚಾರಣೆ ನಡೆಸುತ್ತಿದೆ. ನೀವು ಅಲ್ಲಿಗೆ ಹೋಗಿ’ ಎಂದು ಅರ್ಜಿದಾರರಿಗೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ.

ಮದ್ರಾಸ್ ಹೈಕೋರ್ಟಿನ ಮುಂದೆ ಇದೇ ವಿಷಯಕ್ಕೆ ಸಂಬಂಧಿಸಿದ ಎರಡು ಪ್ರಕರಣಗಳು ವಿಚಾರಣೆಯಲ್ಲಿವೆ. ಈಗಾಗಲೇ ‘ಸಾಮಾಜಿಕ ಜಾಲತಾಣಗಳ ಖಾತೆಗೆ ಆಧಾರ್ ಲಿಂಕ್ ಮಾಡುವ ಅಗತ್ಯವಿಲ್ಲ. ಆದರೆ ಕೆಲ ಸಂದೇಶಗಳ ಮೂಲಗಳನ್ನು ಪತ್ತೆ ಹಚ್ಚುವ ಸಂಭಾವ್ಯತೆಗೆ ಸಂಬಂಧಿಸಿದಂತೆ ಅರ್ಜಿಯನ್ನು ವಿಸ್ತರಿಸಬಹುದು’ ಎಂದು ಹೇಳಿರುವ ಹೈಕೋರ್ಟ್ ಆ ದಿಶೆಯಲ್ಲೇ ವಿಚಾರಣೆ ನಡೆಸುತ್ತಿದೆ. ಅಂದಹಾಗೆ, ಬಾಂಬೆ ಮತ್ತು ಮಧ್ಯಪ್ರದೇಶ ಹೈಕೋರ್ಟ್ ಗಳ ಮುಂದೆಯೂ ಇಂತಜಹ ಹಿತಾಸಕ್ತಿ ಅರ್ಜಿಗಳು ಸಲ್ಲಿಕೆಯಾಗಿವೆ.

ಇದಕ್ಕೆ ಪ್ರತಿಯಾಗಿ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದ ಫೇಸ್ ಬುಕ್ ಸಂಸ್ಥೆ `ಬೇರೆಬೇರೆ ಹೈಕೋರ್ಟುಗಳಲ್ಲಿ ಒಂದೇ ಬಗೆಯ ಪ್ರಕರಣಗಳು ವಿಚಾರಣೆ ನಡೆದು, ವ್ಯತಿರಿಕ್ತ ತೀರ್ಪುಗಳು ಬರುವುದರ ಬದಲು ಎಲ್ಲವನ್ನೂ ಒಟ್ಟುಗೂಡಿಸಿ ಸರ್ವೋಚ್ಛ ನ್ಯಾಯಾಲಯವೇ ಕೈಗೆತ್ತಿಕೊಳ್ಳಬೇಕು’ ಎಂಬ ಮನವಿ ಮಾಡಿಕೊಂಡಿತ್ತು. ಆದರೆ ಸುಪ್ರೀಂ ಕೋರ್ಟ್ ಅದನ್ನೂ ಪುರಸ್ಕರಿಸಿಲ್ಲ.

ಇನ್ನು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ನ್ಯಾಯಾಲಯದ ಮುಂದೆ ಹಾಜರಾಗಿ ಕೇಂದ್ರ ಸರ್ಕಾರದ ಮಾಹಿತಿ ಮತ್ತು ತಂತ್ರಜ್ಞಾನ ಇಲಾಖೆಯು ನಿಯಮಾವಳಿಗಳನ್ನು ರೂಪಿಸುತ್ತಿರುವ ಪ್ರಕ್ರಿಯೆಯನ್ನು ವಿವರಿಸಿದರು, ಆದರೆ ಅದನ್ನು ಅಂತಿಮಗೊಳಿಸಲು ಎಷ್ಟು ಕಾಲಾವಧಿ ಬೇಕಾಗುವುದು ಎಂಬುದನ್ನು ಈಗಲೇ ಹೇಳಲು ಸಾಧ್ಯವಾಗದು ಎಂದಿದ್ದಾರೆ. ಇತ್ತ ತಮಿಳುನಾಡು ಸರ್ಕಾರದ ಅಟಾರ್ನಿ ಜನರಲ್ ಕೆ.ಕೆ ವೇಣುಗೋಪಾಲ್ ಅವರು `ಹೈಕೋರ್ಟ್ ನ ಮುಂದೆ ನಡೆಯುತ್ತಿರುವ ವಿಚಾರಣೆಗೆ ಪದೇಪದೇ ಗೈರು ಹಾಜರಾಗುತ್ತಿರುವ ಸೋಶಿಯಲ್ ಮೀಡಿಯಾ ಕಂಪನಿಗಳು ಈಗ ಪ್ರಕರಣವನ್ನು ಸುಪ್ರೀಂ ಕೋರ್ಟಿಗೆ ವರ್ಗಾಯಿಸಬೇಕೆಂದು ಮನವಿ ಸಲ್ಲಿಸಿವೆ. ಆದರೆ  ಹೈಕೋರ್ಟ್ ಗಳೇ  ವಿಚಾರಣೆ ನಡೆಸಲು ಸರ್ವೋಚ್ಛ ನ್ಯಾಯಾಲಯ ಅನುವು ಮಾಡಿಕೊಡಬೇಕು’ ಎಂಬ ವಾದ ಮಂಡಿಸಿದ್ದರು. ಅವರ ವಾದವನ್ನು ಪುರಸ್ಕರಿಸಿರುವ ಸುಪ್ರೀಂ ಕೋರ್ಟ್ ಅರ್ಜಿದಾರರನ್ನು ಹೈಕೋರ್ಟುಗಳಿಗೇ ತೆರಳುವಂತೆ ನಿರ್ದೇಶನ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...