Homeಮುಖಪುಟಫೇಸ್ಬುಕ್, ಟ್ವಿಟ್ಟರ್ ಖಾತೆಗಳಿಗೆ ಆಧಾರ್ ಕಡ್ಡಾಯ ಮಾಡಿ ಎಂದವರ ಅರ್ಜಿಯನ್ನೇ ವಜಾಗೊಳಿಸಿತು ಸುಪ್ರೀಂ ಕೋರ್ಟ್

ಫೇಸ್ಬುಕ್, ಟ್ವಿಟ್ಟರ್ ಖಾತೆಗಳಿಗೆ ಆಧಾರ್ ಕಡ್ಡಾಯ ಮಾಡಿ ಎಂದವರ ಅರ್ಜಿಯನ್ನೇ ವಜಾಗೊಳಿಸಿತು ಸುಪ್ರೀಂ ಕೋರ್ಟ್

- Advertisement -
- Advertisement -

12 ಅಂಕಿಗಳ ಆಧಾರ್ ಸಂಖ್ಯೆಯನ್ನು ಸಾಮಾಜಿಕ ಜಾಲತಾಣಗಳ ಅವರವರ ಖಾತೆಗೆ ಕಡ್ಡಾಯವಾಗಿ ಲಿಂಕ್ ಮಾಡಲು ನಿರ್ದೇಶನ ನೀಡಬೇಕೆಂದು ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಆಧಾರ್ ನಂಬರನ್ನು ಸಾಮಾಜಿಕ ಜಾಲತಾಣಗಳ ಖಾತೆಗೆ ಲಿಂಕ್ ಮಾಡುವ ವಿಚಾರದ ಬಗ್ಗೆ ಈಗಾಗಲೇ ಮದ್ರಾಸ್ ಹೈಕೋರ್ಟ್ ವಿಚಾರಣೆ ನಡೆಸುತ್ತಿದೆ. ಹಾಗಾಗಿ ಅಂತದ್ದೇ ಪ್ರಕರಣವನ್ನು ನಾನು ಮತ್ತೆ ಕೈಗೆತ್ತಿಕೊಳ್ಳಲಾರೆ. ನೀವು ಮದ್ರಾಸ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿ ಎಂದು ದೂರುದಾರರಿಗೆ ಸುಪ್ರೀಂಕೋರ್ಟ್ ನಿರ್ದೇಶಿಸಿದೆ.

ಬಹು ದಿನಗಳಿಂದ ಸಾಮಾಜಿಕ ಜಾಲತಾಣಗಳ ಖಾತೆಗೆ ಆಧಾರ್ ನಂಬರ್ ಲಿಂಕ್ ವಿಚಾರ ಸುದ್ದಿಯಲ್ಲಿದೆ. ಆನ್ ಲೈನ್ ಕಿರುಕುಳ, ನಿಂದನೆ, ಸುಳ್ಳು ಸುದ್ದಿ ಹಾಗೂ ಸಂದೇಶಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದು, ಸಮಾಜದ ಸ್ವಾಸ್ಥ್ಯ ಕೆಡಿಸುವ ಪೋಸ್ಟ್ ಹಾಕುವುದನ್ನು ತಡೆಯಲು ಫೇಸ್ ಬುಕ್ ಸೇರಿದಂತೆ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಆಧಾರ್ ಲಿಂಕ್ ಮಾಡಬೇಕೆಂಬುದು ಅರ್ಜಿದಾರರಾದ ಅಶ್ವಿನಿ ಉಪಾಧ್ಯಾಯ ಅವರ ವಾದವಾಗಿತ್ತು.

`ಎಲ್ಲಾ ಕೇಸ್ ಗಳು, ವಿಷಯಗಳನ್ನು ಸುಪ್ರೀಂಕೋರ್ಟ್ ಗೆ ತರಬೇಕು ಎಂದೇನಿಲ್ಲ. ಆಧಾರ್ ವಿಚಾರವಾಗಿ ಮದ್ರಾಸ್ ಹೈಕೋರ್ಟ್ ವಿಚಾರಣೆ ನಡೆಸುತ್ತಿದೆ. ನೀವು ಅಲ್ಲಿಗೆ ಹೋಗಿ’ ಎಂದು ಅರ್ಜಿದಾರರಿಗೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ.

ಮದ್ರಾಸ್ ಹೈಕೋರ್ಟಿನ ಮುಂದೆ ಇದೇ ವಿಷಯಕ್ಕೆ ಸಂಬಂಧಿಸಿದ ಎರಡು ಪ್ರಕರಣಗಳು ವಿಚಾರಣೆಯಲ್ಲಿವೆ. ಈಗಾಗಲೇ ‘ಸಾಮಾಜಿಕ ಜಾಲತಾಣಗಳ ಖಾತೆಗೆ ಆಧಾರ್ ಲಿಂಕ್ ಮಾಡುವ ಅಗತ್ಯವಿಲ್ಲ. ಆದರೆ ಕೆಲ ಸಂದೇಶಗಳ ಮೂಲಗಳನ್ನು ಪತ್ತೆ ಹಚ್ಚುವ ಸಂಭಾವ್ಯತೆಗೆ ಸಂಬಂಧಿಸಿದಂತೆ ಅರ್ಜಿಯನ್ನು ವಿಸ್ತರಿಸಬಹುದು’ ಎಂದು ಹೇಳಿರುವ ಹೈಕೋರ್ಟ್ ಆ ದಿಶೆಯಲ್ಲೇ ವಿಚಾರಣೆ ನಡೆಸುತ್ತಿದೆ. ಅಂದಹಾಗೆ, ಬಾಂಬೆ ಮತ್ತು ಮಧ್ಯಪ್ರದೇಶ ಹೈಕೋರ್ಟ್ ಗಳ ಮುಂದೆಯೂ ಇಂತಜಹ ಹಿತಾಸಕ್ತಿ ಅರ್ಜಿಗಳು ಸಲ್ಲಿಕೆಯಾಗಿವೆ.

ಇದಕ್ಕೆ ಪ್ರತಿಯಾಗಿ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದ ಫೇಸ್ ಬುಕ್ ಸಂಸ್ಥೆ `ಬೇರೆಬೇರೆ ಹೈಕೋರ್ಟುಗಳಲ್ಲಿ ಒಂದೇ ಬಗೆಯ ಪ್ರಕರಣಗಳು ವಿಚಾರಣೆ ನಡೆದು, ವ್ಯತಿರಿಕ್ತ ತೀರ್ಪುಗಳು ಬರುವುದರ ಬದಲು ಎಲ್ಲವನ್ನೂ ಒಟ್ಟುಗೂಡಿಸಿ ಸರ್ವೋಚ್ಛ ನ್ಯಾಯಾಲಯವೇ ಕೈಗೆತ್ತಿಕೊಳ್ಳಬೇಕು’ ಎಂಬ ಮನವಿ ಮಾಡಿಕೊಂಡಿತ್ತು. ಆದರೆ ಸುಪ್ರೀಂ ಕೋರ್ಟ್ ಅದನ್ನೂ ಪುರಸ್ಕರಿಸಿಲ್ಲ.

ಇನ್ನು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ನ್ಯಾಯಾಲಯದ ಮುಂದೆ ಹಾಜರಾಗಿ ಕೇಂದ್ರ ಸರ್ಕಾರದ ಮಾಹಿತಿ ಮತ್ತು ತಂತ್ರಜ್ಞಾನ ಇಲಾಖೆಯು ನಿಯಮಾವಳಿಗಳನ್ನು ರೂಪಿಸುತ್ತಿರುವ ಪ್ರಕ್ರಿಯೆಯನ್ನು ವಿವರಿಸಿದರು, ಆದರೆ ಅದನ್ನು ಅಂತಿಮಗೊಳಿಸಲು ಎಷ್ಟು ಕಾಲಾವಧಿ ಬೇಕಾಗುವುದು ಎಂಬುದನ್ನು ಈಗಲೇ ಹೇಳಲು ಸಾಧ್ಯವಾಗದು ಎಂದಿದ್ದಾರೆ. ಇತ್ತ ತಮಿಳುನಾಡು ಸರ್ಕಾರದ ಅಟಾರ್ನಿ ಜನರಲ್ ಕೆ.ಕೆ ವೇಣುಗೋಪಾಲ್ ಅವರು `ಹೈಕೋರ್ಟ್ ನ ಮುಂದೆ ನಡೆಯುತ್ತಿರುವ ವಿಚಾರಣೆಗೆ ಪದೇಪದೇ ಗೈರು ಹಾಜರಾಗುತ್ತಿರುವ ಸೋಶಿಯಲ್ ಮೀಡಿಯಾ ಕಂಪನಿಗಳು ಈಗ ಪ್ರಕರಣವನ್ನು ಸುಪ್ರೀಂ ಕೋರ್ಟಿಗೆ ವರ್ಗಾಯಿಸಬೇಕೆಂದು ಮನವಿ ಸಲ್ಲಿಸಿವೆ. ಆದರೆ  ಹೈಕೋರ್ಟ್ ಗಳೇ  ವಿಚಾರಣೆ ನಡೆಸಲು ಸರ್ವೋಚ್ಛ ನ್ಯಾಯಾಲಯ ಅನುವು ಮಾಡಿಕೊಡಬೇಕು’ ಎಂಬ ವಾದ ಮಂಡಿಸಿದ್ದರು. ಅವರ ವಾದವನ್ನು ಪುರಸ್ಕರಿಸಿರುವ ಸುಪ್ರೀಂ ಕೋರ್ಟ್ ಅರ್ಜಿದಾರರನ್ನು ಹೈಕೋರ್ಟುಗಳಿಗೇ ತೆರಳುವಂತೆ ನಿರ್ದೇಶನ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...