Homeಅಂಕಣಗಳುಸಾಹಿತ್ಯ ಸಮ್ಮೇಳನದಾರಂಭ ಮತ್ತು ‘ಸುಮಂಗಲಿ’ಯರಿಂದ ಪೂರ್ಣಕುಂಭ!!

ಸಾಹಿತ್ಯ ಸಮ್ಮೇಳನದಾರಂಭ ಮತ್ತು ‘ಸುಮಂಗಲಿ’ಯರಿಂದ ಪೂರ್ಣಕುಂಭ!!

- Advertisement -
- Advertisement -

ಧಾರವಾಡದಲ್ಲಿ ನಡೆಯಲಿರುವ ಈ ಬಾರಿಯ ಕನ್ನಡ ಸಾಹಿತ್ಯ ಸಮ್ಮೇಳನದ ಆರಂಭಕ್ಕೆ, ಸಮ್ಮೇಳನಾಧ್ಯಕ್ಷರಿಗೆ ಸಾವಿರ ಮಂದಿ ‘ಸುಮಂಗಲಿ’ಯರಿಂದ ಪೂರ್ಣಕುಂಭ ಸ್ವಾಗತದ ವಿಚಾರ ಪತ್ರಿಕೆಗಳಲ್ಲಿ ಬರುತ್ತಿದ್ದಂತೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ವಿಶೇಷವಾಗಿ ಸಾಹಿತ್ಯ ಮತ್ತು ಶಿಕ್ಷಣದ ವಿಚಾರದಲ್ಲಿ ನಾಡಿಗೆ ಹೆಸರಾಗಿರುವ ಧಾರವಾಡದ ಚಿಂತಕಿಯರು (ಮತ್ತು ಚಿಂತಕರೂ ಕೂಡಾ) ಹಾಗೂ ರಾಜ್ಯದ ಇತರೆಡೆಗಳ ಪ್ರಗತಿಪರ ಹೋರಾಟಗಾರ್ತಿಯರು, ಬರಹಗಾರ್ತಿಯರು ತೀವ್ರವಾಗಿ ಈ ಪೂರ್ಣಕುಂಭ ಸ್ವಾಗತದ ಸಂಗತಿಯನ್ನು ವಿರೋಧಿಸಿದರು. “‘ಸುಮಂಗಲಿ’ಯರಿಂದ ಸ್ವಾಗತ ಎಂದರೆ ಹಾಗಾದರೆ ಅಮಂಗಲೆಯರು ಯಾರು?”, “ಪೂರ್ಣಕುಂಭದ ಸ್ವಾಗತಕ್ಕೆ ಅಲ್ಲಿ ನಡೆಯುತ್ತಿರುವುದು ಧಾರ್ಮಿಕ ಕಾರ್ಯಕ್ರಮವೋ ಸಾಹಿತ್ಯಿಕ ಕಾರ್ಯಕ್ರಮವೋ?”, “ಧಾರವಾಡದ ನೆಲಕ್ಕೆ ಬಂಡಾಯದ ಮೂಲಗುಣವಿದೆ, ಇಲ್ಲಿ ನಡೆಯುವ ಸಾಹಿತ್ಯ ಸಮ್ಮೇಳನದಲ್ಲಿ ಇಂತಹ ಆಚರಣೆಗಳಿಗೆ ಹೇಗೆ ಅವಕಾಶ ನೀಡಲು ಸಾಧ್ಯ?” ಇವೇ ಮೊದಲಾದ ಪ್ರಶ್ನೆಗಳು ಧಾರವಾಡಿಗರು ಮತ್ತು ಇತರೆಡೆಗಳ ಸಾಹಿತ್ಯಪ್ರಿಯರಿಂದ ತೂರಿಬಂದವು. ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಮನು ಬಳಿಗಾರ್ ಅವರನ್ನೇ ಗುರಿಯಾಗಿಸಿ ಆನ್‍ಲೈನ್ ಪತ್ರ ಚಳವಳಿಯೂ ನಡೆದು ಈ ವಿಷಯ ಗಂಭೀರ ತಿರುವು ಪಡೆದುಕೊಳ್ಳುವ ಲಕ್ಷಣ ಕಾಣಿಸಿತು. ಕನ್ನಡದ ಪತ್ರಿಕೆಗಳೂ ಕೂಡಾ ತಕ್ಷಣವೇ ಈ ವಿಚಾರಕ್ಕೆ ಸ್ಪಂದಿಸಿ ‘ಪೂರ್ಣಕುಂಭಕ್ಕೆ ವಿರೋಧ’ ಎಂಬ ಪತ್ರಗಳನ್ನು ಪ್ರಕಟಿಸಿದವು. ಒಟ್ಟಿನಲ್ಲಿ ಈ ಎಲ್ಲ ವಿರೋಧಗಳ ಬಿಸಿ ತಟ್ಟಿ ಕೊನೆಗೂ ಧಾರವಾಡ ಜಿಲ್ಲಾ ಸಾಹಿತ್ಯ ಪರಿಷತ್ತು ಈ ಆಚರಣೆಯಿಂದ ಹಿಂದೆ ಸರಿದಿದೆ. ಸಂಘಟಕರು ತಮ್ಮ ನಿರ್ಧಾರವನ್ನು ಸಮರ್ಥಿಸುವ ಅನೇಕ ವಾದಗಳನ್ನು ಮುಂದಿಟ್ಟರೂ ಕೂಡಾ ಅಂತಿಮವಾಗಿ ಪೂರ್ಣಕುಂಭದ ವಿಚಾರವನ್ನು ಕೈಬಿಡುವ ಹಾಗೆ ಕಾಣುತ್ತಿದೆ. ಇದು ಬಹಳ ಪ್ರಮುಖವಾದ ಬೆಳವಣಿಗೆ.
‘ಪೂರ್ಣಕುಂಭದ ಸ್ವಾಗತ ನಡೆಯುತ್ತಿರುವುದು ಇದೇ ಮೊದಲ ಸಲವಲ್ಲ; ಈ ಹಿಂದೆಯೂ ನಡೆಯುತ್ತಾ ಬಂದಿದೆ; ಪ್ರೊ.ಬರಗೂರು ರಾಮಚಂದ್ರಪ್ಪ, ಪ್ರೊ.ಚಂದ್ರಶೇಖರ್ ಪಾಟೀಲ್‍ರಂತಹ ಬಂಡಾಯದ ಸಾಹಿತಿಗಳ ಅಧ್ಯಕ್ಷತೆಯಲ್ಲೂ ಕೂಡಾ ಇಂತಹವೆಲ್ಲ ನಡೆದಿದ್ದವು. ಆದರೆ ಈ ಬಾರಿ ಮಾತ್ರ ವಿರೋಧ ಯಾಕೋ ಅರ್ಥವಾಗುತ್ತಿಲ್ಲ’ ಎಂಬಂತೆ ಸಾಹಿತ್ಯ ಪರಿಷತ್ತು ಸಮರ್ಥನೆ ಕೊಟ್ಟುಕೊಂಡಿದೆ. ಈ ಹಿಂದೆ ಒಂದು ವೇಳೆ ಇಂತಹವು ನಡೆದದ್ದು ನಿಜವಾದರೆ ಅದೂ ಕೂಡಾ ಖಂಡನಾರ್ಹ. ಆದರೆ, ಹಿಂದೆ ನಡೆದಿತ್ತು; ಪ್ರಗತಿಪರರೇ ಇದ್ದಾಗ ನಡೆದಿತ್ತು ಎಂಬುದರ ಅರ್ಥ ಈಗಲೂ ನಡೆಯಲಿ ಎಂಬುದಂತೂ ಆಗಬಾರದು. ಈ ಬಾರಿ ವಿರೋಧ ಬಂದಿದೆ, ವಿರೋಧ ಸಕಾರಣವಾದುದಾಗಿದೆ. ಆದ್ದರಿಂದ ಇಂತಹ ಆಚರಣೆ ನಿಲ್ಲಬೇಕು, ಈ ಬಾರಿ ಮಾತ್ರವಲ್ಲ ಮುಂದೆಯೂ ನಡೆಯಬಾರದು ಎಂಬುದಂತೂ ಖಚಿತ.
ಇತ್ತೀಚಿನ ದಿನಗಳಲ್ಲಿ ಇಂತಹ ಹಲವಾರು ಆಚರಣೆಗಳು ಸದ್ದಿಲ್ಲದೆ ನುಸುಳುತ್ತಾ ಸಾರ್ವಜನಿಕ ಸಭೆ ಸಮಾರಂಭಗಳ ಭಾಗವಾಗುತ್ತಿರುವುದು ಸಹಜವೆಂಬಂತೆ ನಡೆಯುತ್ತಿದೆ. ಈ ಸಾಹಿತ್ಯ ಸಮ್ಮೇಳನದ ಪೂರ್ಣಕುಂಭದ ವಿಚಾರಕ್ಕೆ ಬಂದ ಸಮರ್ಥನೆಗಳನ್ನು ಗಮನಿಸಿದರೂ ಇದು ಸ್ಪಷ್ಟವಾಗುತ್ತದೆ. ಈ ಹಿಂದೆ ನಡೆದಿತ್ತೆಂಬುದಷ್ಟೇ ಅಲ್ಲ, ಇದು ನಮ್ಮ ದೇಶದ ಸಂಸ್ಕøತಿ, ಅದನ್ನು ಆಚರಿಸಿದರೆ ತಪ್ಪೇನಿದೆ ಎಂಬರ್ಥದಲ್ಲಿ ಹಲವಾರು ಪ್ರತಿಕ್ರಿಯೆಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದವು. ಅದರಲ್ಲೂ ಮಹಿಳಾ ಚಿಂತಕಿಯರು ಯಾರು ಇದನ್ನೆಲ್ಲ ವಿರೋಧಿಸುತ್ತಿದ್ದರೋ, ಅವರುಗಳನ್ನು ಸಂಸ್ಕøತಿ ವಿರೋಧಿಗಳೆಂಬಂತೆ ಪರೋಕ್ಷವಾಗಿ ದೂಷಿಸುವ ಕೆಲಸವೂ ನಡೆಯಿತು. ಇದು ನಿಜಕ್ಕೂ ಈ ದೇಶದ ಸಾಮಾನ್ಯ ಸಂಪ್ರದಾಯಕ್ಕೆ ವಿರುದ್ಧವಾದುದೆಂಬುದು ಹೆಚ್ಚು ಮುನ್ನೆಲೆಗೆ ಬರಲಿಲ್ಲ. ಸಾರ್ವಜನಿಕ ಕಾರ್ಯಕ್ರಮವೊಂದು ಧರ್ಮ ನಿರಪೇಕ್ಷವಾಗಿರಬೇಕು ಹಾಗೂ ತನ್ನ ಮೂಲ ಆಶಯಕ್ಕೆ ಪೂರಕವಾದ ರೀತಿಯಲ್ಲಿ ನಡೆಯಬೇಕು ಎಂಬುದು ಭಾರತದಲ್ಲಿ ಸ್ವಾತಂತ್ರ್ಯ ಬಂದಾಗಿನಿಂದ ಚಾಲ್ತಿಯಲ್ಲಿರುವ ಸಂಪ್ರದಾಯ ಹಾಗೂ ಈ ದೇಶದ ಸಾಮಾನ್ಯ ಜ್ಞಾನ. ಅಸಂಖ್ಯಾತ ಧರ್ಮಗಳಿರುವ ಈ ದೇಶದಲ್ಲಿ ಸೌಹಾರ್ದತೆ ಉಳಿಯಬೇಕಾದರೆ ಪಾಲಿಸಲೇಬೇಕಾದ ಮೂಲಭೂತ ಸಂಗತಿಗಳಲ್ಲಿ ಇದೂ ಒಂದು. ಆದರೆ, ಈ ಸಾಮಾನ್ಯ ಜ್ಞಾನವನ್ನು ಮೀರುವ ರೀತಿಯಲ್ಲಿ ಸಾಂಸ್ಕøತಿಕ ಹೇರಿಕೆಯ ವಾತಾವರಣ ಬಲಿಯುತ್ತಿರುವುದು ಆತಂಕದ ಸಂಗತಿ. ಆದ್ದರಿಂದಲೇ, ಈ ಹಿಂದೆ ಅಷ್ಟು ಚರ್ಚೆಗೆ ಗ್ರಾಸವಾಗದಿದ್ದ ಪೂರ್ಣಕುಂಭದಂತಹ ವಿಚಾರಗಳು ಶಾಂತಿ ಸೌಹಾರ್ದತೆ ಬಯಸುವವರು ಈ ವಾತಾವರಣದಲ್ಲಿ ಹೆಚ್ಚು ಎಚ್ಚರಿಕೆಯ ನೋಟ ಹೊಂದುತ್ತಿರುವುದರಿಂದ ಕಂಡುಬಂದಿರಲೂ ಬಹುದು.
ಇಲ್ಲೊಂದು ವೈರುಧ್ಯವಿರುವುದನ್ನೂ ಗಮನಿಸಬೇಕು. ಒಂದೆಡೆ, ಕನ್ನಡದ ಸಾಹಿತ್ಯ ಲೋಕ ಹೆಚ್ಚು ಸಂವೇದನಾಶೀಲವಾದುದು, ಜಾತ್ಯತೀತವಾದುದು ಮತ್ತು ಜನಪರ ಕಾಳಜಿಗಳಿಗೆ ಬೇಗ ತನ್ನನ್ನು ತಾನು ಒಗ್ಗಿಸಿಕೊಂಡಂಥದ್ದು ಎಂಬ ಒಂದು ವಿಚಾರ. ಅದೇ ಸಮಯದಲ್ಲಿ ಮತ್ತೊಂದೆಡೆ ಈ ದೇಶದ ಸಾಂಸ್ಕøತಿಕ ಸಾಮಾಜಿಕ ಇತಿಹಾಸವು ಅನೇಕಾನೇಕ ತಾರತಮ್ಯ, ವಿರೋಧಾಭಾಸ ಮತ್ತು ಶ್ರೇಣೀಕರಣಗಳನ್ನು ಹೊಂದಿ, ಅವುಗಳನ್ನು ಆಚರಿಸುತ್ತಾ, ವಿರೋಧ ಬಂದಾಗೆಲ್ಲ ಎತ್ತಿಹಿಡಿದು ಬಲವಾಗಿ ಸಮರ್ಥಿಸುತ್ತಾ ಬಂದಿರುವಂಥದ್ದು. ಆದ್ದರಿಂದಲೇ ಸಾಹಿತ್ಯದ ಹೆಸರಿನಲ್ಲಿ ನಡೆಯುವ ಕಾಯಕ್ರಮಗಳೂ ಎಷ್ಟೋ ಬಾರಿ ಇಂತಹ ಶ್ರೇಣೀಕರಣ ಅಥವಾ ಅಸೂಕ್ಷ್ಮತೆಗಳನ್ನು ಪ್ರದರ್ಶಿಸುವಂತಿರುತ್ತವೆ. ಆಳ್ವಾಸ್ ನುಡಿಸಿರಿಯಲ್ಲಿ ಸಮ್ಮೇಳನಾಧ್ಯಕ್ಷರನ್ನು ಬೋವಿ ಸಮುದಾಯದ ಪುರುಷರು ಪಲ್ಲಕ್ಕಿಯಲ್ಲಿ ಹೊತ್ತು ತರುತ್ತಿದ್ದ ಆಚರಣೆ ನೆನೆಯಬಹುದು. ಆದ್ದರಿಂದ, ಎಲ್ಲ ಬಗೆಯ ತಾರತಮ್ಯದ ಆಚರಣೆಗಳಿಂದ ಮುಕ್ತಿ ಬಯಸುವ ವಿಚಾರವಂತರು ಸದಾ ಎಚ್ಚರದಲ್ಲೇ ಇರಬೇಕಾಗುವ, ಸ್ವಲ್ಪ ಮೈಮರೆತರೂ ಇಂತಹ ಅನೇಕ ಆಚರಣೆಗಳು ಸಹಜವೆಂಬಂತೆ ಒಳತೂರುವ ಸನ್ನಿವೇಶವೇ ಇಂದೂ ಇದೆ (ಅಥವಾ ಈ ಅಪಾಯ ಹಿಂದಿಗಿಂತಲೂ ಇಂದು ಹೆಚ್ಚಾಗಿದೆ) ಎಂಬ ವಾಸ್ತವವನ್ನು ಮರೆಯಲು ಸಾಧ್ಯವಿಲ್ಲ! ಕೆಲವೊಮ್ಮೆ ಸ್ವಲ್ಪ ಅತಿ ಎನ್ನಿಸಿದರೂ, ಇಂತಹವನ್ನು ವಿರೋಧಿಸಬೇಕಾದ್ದು ಇಂದು ಅನಿವಾರ್ಯವೂ ಕೂಡಾ.
ಆದ್ದರಿಂದ, ‘ಸಮ್ಮೇಳನದ ಸರ್ವಾಧ್ಯಕ್ಷರಿಗೆ ಸುಮಂಗಲಿಯರಿಂದ ಪೂರ್ಣಕುಂಭ ಸ್ವಾಗತ’ದ ಆಚರಣೆಯನ್ನು ಬಹಳ ಬೇಗ ಗಮನಿಸಿ, ತಕ್ಷಣವೇ ಕಾರ್ಯಪ್ರವೃತ್ತರಾಗಿ ತಮ್ಮ ಸಕಾಲಿಕ ಮಧ್ಯಪ್ರವೇಶದಿಂದ ಅದನ್ನು ನಿಲ್ಲಿಸಲು ಪ್ರಯತ್ನಿಸಿದ ಕನ್ನಡದ ಎಚ್ಚೆತ್ತ ಮಹಿಳೆಯರನ್ನು ‘ನ್ಯಾಯಪಥ’ ಅಭಿನಂದಿಸುತ್ತದೆ. ಇಂತಹ ಎಚ್ಚರ ಇಂದಿನ ತುರ್ತು. ಆದ್ದರಿಂದ ನಿಮ್ಮ ಬಗ್ಗೆ ನಮಗೆಲ್ಲರಿಗೂ ಹೆಮ್ಮೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...