Homeರಾಜಕೀಯಕುರುಬ್ರು ವಿಶ್ವನಾಥನ ಹಿಂದೋದ್ರೆ?

ಕುರುಬ್ರು ವಿಶ್ವನಾಥನ ಹಿಂದೋದ್ರೆ?

- Advertisement -
- Advertisement -

ಕಾಲ ಎಂತೆಂತಹ ವಿಚಿತ್ರ ಸನ್ನಿವೇಶಗಳನ್ನು. ಸೃಷ್ಟಿ ಮಾಡುತ್ತದಲ್ಲವೆ! ಕಳೆದ ಚುನಾವಣೆಯಲ್ಲಿ ಅವರಪ್ಪನಾಣೆ ಕುಮಾರಸ್ವಾಮಿ ಮುಖ್ಯಮಂತ್ರಿ ಆಗೊಲ್ಲ ಎಂದು ಹೋದಲ್ಲಿಬಂದಲ್ಲಿ ಭಾಷಣ ಬಿಗಿದಿದ್ದ ಸಿದ್ದರಾಮಯ್ಯ, ಚುನಾವಣಾ ಫಲಿತಾಂಶ ಇನ್ನ ಬಾಕಿ ಇರುವಾಗಲೇ ಕುಮಾರಸ್ವಾಮಿ ಮನೆಯ ಕರೆಗಂಟೆ ಒತ್ತಿ ಕೈಕಟ್ಟಿ ನಿಂತಿದ್ದಾರಲ್ಲಾ. ಆಗ ಸಿದ್ದು ನಮ್ಮಪ್ಪನಾಣೆ ನೀನೇ ಮುಖ್ಯಮಂತ್ರಿ ಎನ್ನುವುದೊಂದು ಬಾಕಿ ಇತ್ತು. ಸಿದ್ದು ಸ್ಥಿತಿ ನೋಡಿ ನಗು ಅದುಮಿಕೊಂಡ ದೇವೇಗೌಡರು ಮಗ ಮುಖ್ಯಮಂತ್ರಿ ಯಾದರೂ ಬಿಡದೆ, ಸಿದ್ದು ಬಗೆಗಿನ ಸೇಡನ್ನು ಮುಂದುವರಿಸುವ ಸಲುವಾಗಿ, ವಿಶ್ವನಾಥನನ್ನೇ ಪಾರ್ಟಿ ಪ್ರೆಸಿಡೆಂಟು ಮಾಡಿಬಿಟ್ಟಿದ್ದಾರಲ್ಲಾ, ಈ ಬಗ್ಗೆ ಸಿದ್ದುವನ್ನು ಕೇಳಬೇಕೆಂದು ಫೋನ್ ಮಾಡಿದರೆ ರಿಂಗಾಯ್ತು.
ರಿಂಗ್‍ಠೋನ್ “ಕರಿಯ ಕಂಬಳಿ ಗದ್ದುಗೆ ಮಾಡಿ ವೀರದೊಳ್ಳತಂದಿರಿಸಿದರೊ, ವೀರದೊಳತಂದಿರಿಸಿದರೊ. ವಿಶ್ವನಾಥನ ಭಜಿಸಿದರೊ….. ಹಲೊ.
“ಯಾರು.”
“ನಾನು ಸಾರ್ ಯಾಹೂ.”
“ಏನ್ರಿ ಯಾಹೂ.”
“ಏನ್ ಸಾರ್ ಮುಖ್ಯಮಂತ್ರಿಯಾದಾಗ ನೋಡಕ್ಕೂ ಸಿಗಲಿಲ್ಲ, ಈಗ್ಲು ಸಿಗದಿ¯ವಲ್ಲ ಸಾರ್ ಅಷ್ಟು ಬಿಜಿನ.”
“ಅಂಗೇನಿಲ್ಲ ಹೇಳಿ.”
“ನಿಮ್ಮ ಸರಕಾರ ಸೋತಿದ್ದರ ಬಗ್ಗೆ ನೀವೇನೇಳ್ತಿರಿ ಸಾರ್.”
“ಜನ ಮೋಸ ಮಾಡಿದ್ರು.”
“ನಿಮ್ಮ ಭಾಗದ ತಪ್ಪುಗಳೇನಾದ್ರು ಇದ್ದವೆ?’’
“ಆಂಂ.’’
“ನೀವೇನಾರ ತೆಪ್ಪು ಮಾಡಿದ್ರ ಸಾರ್.”
“ನಾನೇನು ಮಾಡಿದೇ.”
“ ಮೊದಲನೆದಾಗಿ ನಿಮ್ಮ ಪ್ರತಿ ಭಾಷಣದಲ್ಲಿ ಎಡೂರಪ್ಪನ ಜೈಲಿನ ವಿಷಯ ಪ್ರಸ್ತಾಪ ಮಾಡಿದ್ರಿ? ಜನ ಚಪ್ಪಾಳೆ ತಟ್ಟಿದ್ರು, ಆದ್ರೆ ಲಿಂಗಾಯಿತ್ರು ಎಡೂರಪ್ಪನ ಹಿಂದೆ ಒಗ್ಗಟ್ಟಾದ್ರು. ಆಮೇಲೆ ಕುಮಾರಸ್ವಾಮಿಯ ಅವರಪ್ಪನಾಣೆ ಮುಖ್ಯಮಂತ್ರಿ ಆಗಲ್ಲ್ಲ ಅಂದ್ರಿ. ಅದ್ಯಂಗಾಗಲ್ಲ ನೋಡನ ಅಂತ ಒಕ್ಕಲಿಗರೆಲ್ಲ ಒಂದಾದ್ರು. ಅಂತೂ ನಿಮ್ಮ ಭಾಷಣನೆ ಜಾತಿಜನ ಒಟ್ಟು ಮಾಡ್ತು. ಇದೇ ಕಾರಣ ಸೋಲಿಗೆ ಅಂತ ನಮ್ಮ ಲೆಕ್ಕಾಚಾರ.”
“ಈಗಾಯ್ತಲ್ಲ ಬುಡ್ರಿ ಆ ಸುದ್ದಿ ತಗಂಡೇನು.”
“ವಿಶ್ಲೇಷಣೆ ಮಾಡ್ಬೇಕಲ್ಲವಾ ಸಾರ್.”
“ಈಗ ಮಾಡಿ ಏನು ಪ್ರಯೋಜನ.”
“ಮುಂದೆ ರಾಜಕಾರಣ ಮಾಡೋರಿಗೆ ಒಂದು ಅನುಭವ ಆಗುತ್ತೆ ಸಾರ್.”
“ಆ….”
“ಅಷ್ಟೊಂದು ಹಟದ ಅಗತ್ಯ ಇರಲಿಲ್ಲ, ಆ ಮುಸ್ಲಿಮರು ಏನು ಕೇಳ್ತಾರೆ ಅದನ್ನ ಮಾತ್ರ ಕೊಡಬೇಕು. ಅದು ಬುಟ್ಟು ಏನೇನೋ ಕೊಡಕೋದ್ರೆ ಅದವುರಿಗೂ ಬೇಕಿರಲಿಲ್ಲ. ಬೇರೆ ಜನಗಳೂ ಅದನ್ನ ಸಯಿಸದಿಲ್ಲ ಸಾರ್.”
“ಸಯಿಸದಿಲ್ಲ ಅಂತ ನಾವು ಮಾಡದನ್ನ ಬಿಡಬಾರ್ದು, ಅಧಿಕಾರ ಸಿಕ್ಕಿದಾಗ ದುರ್ಬಲರಿಗೆ ಸಹಾಯ ಮಾಡ್ಳೇಬೇಕು.”
“ನಿಮ್ಮ ಸಹಾಯ ಸಾಲಮನ್ನಾ, ಬಿಟ್ಟಿ ಅನ್ನ, ಹಲವಾರು ಭಾಗ್ಯ, ಸರಕಾರಿ ಕವರ್iಜಾರಿಗಳ ಸಂಬಳ ಏರಿಸಿ, ದಲಿತ್ರ ಸಾಲ ಮನ್ನ ಮಾಡಿದ್ರೂ ಜನ ಕೈ ಹಿಡಿಲಿಲ್ಲವಲ್ಲ. ಇದರ ಕಾರಣ ಗೊತ್ತಾಯ್ತಾ ಸಾರ್.”
“ಇಲ್ಲ ಹೇಳಿ.”
“ಜನ ಜಾತ್ಯಂದ್ರಾದಾಗ ಏನು ಕೊಟ್ರೂ ಜಾತಿ ಮಕ್ಕಳಾಗೇ ವರ್ತುಸ್ತಾರೆ, ಜೊತೆಗೆ ನೀವು ತಿರಗ ನಾನೇ ಮುಖ್ಯಮಂತ್ರಿ ಅಂದ್ರೆ ಅದು ರಿವರ್ಸಾಯ್ತು. ದಲಿತ ಮುಖ್ಯಮಂತ್ರಿ ಬೇಡಿಕೆ ಇಟ್ಟಿದ್ದ ಜನ ಹಗಲುರಾತ್ರಿ ಓಡಾಡಿ ಬಿಜೆಪಿಗೆ ಓಟು ಮಾಡಿಸಿದ್ರು ಗೊತ್ತಾ.”
“ಹೋಗ್ಲಿಬುಡಿ.”
“ಬುಡದಲ್ಲ ಸಾರ್, ಅಧಿಕಾರದ ಅಂತ್ಯದಲ್ಲಿ ಯಲ್ಲಾರಿಗೂ ಅಹಂಕಾರ ಬತ್ತದೆ, ನಿಮಿಗೊಂಚೂರು ಜಾಸ್ತಿನೆ ಬಂತು.”
“ನಾನೇನು ಮಾಡಿದೆ.”
“ನಿಮ್ಮನ್ನ ಕಾಂಗ್ರೆಸಿಗೆ ಕರೆತಂದ ವಿಶ್ವನಾಥನ್ನ ಕಾಸಿಗಿಂತ ಕಡೆಮಾಡಿದ್ರಿ, ನೀವು ಗೆಲ್ಲಲಿ ಅಂತ ಓಡಾಡಿದ ರೇವಣಸಿದ್ದಯ್ಯನ್ನ ಐದೊರ್ಸ ಎಲ್ಯವುರೆ ಅಂತ ನೋಡಲಿಲ್ಲ, ಚಾಮುಂಡೇಶ್ವರಿಗಾರ ಟಿಕೆಟ್ ಕೊಡಬವುದಿತ್ತು. ಅಂಗೇ ನೋಡಿದ್ರೆ ಕಾಂಗ್ರೆಸ್ ಸೋಲಿನ ದೊಡ್ಡಪಾಲು ನಿಮ್ಮದೆ ಸಾರ್.”
“ಸೋತಾಯ್ತಲ್ಲ ಬುಡಿ.”
“ಇನ್ನೋಂದು ವಿಷಯ ಸಾರ್.”
“ಏನು.”
“ದೇವೇಗೌಡ್ರು ವಿಶ್ವನಾಥನ್ನ ಜೆಡಿಎಸ್ ಪಾರ್ಟಿ ಪ್ರೆಸಿಡೆಂಟ್ ಮಾಡ್ಯವುರೇ.”
“ಮಾಡ್ಲಿ ಬುಡ್ರಿ.”
“ಅದರಿಂದ ನಿಮಗೇನು ಬೇಜಾರಾಗಿಲ್ವೇ.”
“ಬೇಜಾರ್ಯಾಕೆ, ನಾನು ಜೆಡಿಎಸ್ ಅಧ್ಯಕ್ಷ ಆಗಿದ್ದೆ, ನನ್ನ ಹುಟ್ಟುಹಬ್ಬದ ದಿನವೇ ದೇವೇಗೌಡ ನನ್ನನ್ನ ತಗದು ಆ ತಿಪ್ಪಣ್ಣನ್ನ ಪ್ರೆಸಿಡೆಂಟ್ ಮಾಡಿದ್ರು, ಅವುರು ಪಾರ್ಟಿ ಬುಟ್ಟು ಬಿಜೆಪಿಗೋದ್ರು, ಅಂಗೆ ಒಂದಿನ ಈ ಅಪ್ಪ ಮಕ್ಕಳಿಗೆ ಬೇಜಾರಾದ್ರೆ ವಿಶ್ವನಾಥನ್ನ ತೆಗೆದಾಕ್ತರೆ. ಆದ್ರಿಂದ ವಿಶ್ವನಾಥ ನನ್ನ ಎದುರಾಳಿನೂ ಅಲ್ಲ, ಸ್ಪರ್ಧಿನೂ ಅಲ್ಲ.”
“ಕುರುಬ್ರು ವಿಶ್ವನಾಥನ ಹಿಂದೋದ್ರೆ.”
“ಹೋಗ್ಲಿ ಬುಡ್ರಿ ನಂಗೇನು.”
“ಥೂತ್ತೇರಿ.”

-ಯಾಹೂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...

ಉತ್ತರ ಪ್ರದೇಶ| ಪಾಕ್ ಸಂಪರ್ಕದ ಆರೋಪ; ಮಹಿಳೆ ಸೇರಿದಂತೆ 6 ಜನರ ಬಂಧನ

ಪಾಕಿಸ್ತಾನದ ದೇಶದ ಕೋಡ್‌ನಲ್ಲಿ ನೋಂದಾಯಿಸಲಾದ ವಿದೇಶಿ ಸಂಖ್ಯೆಯೊಂದಿಗೆ ಭದ್ರತಾ ಕಚೇರಿಗಳು, ತನಿಖಾ ಸಂಸ್ಥೆಗಳು ಮತ್ತು ರೈಲ್ವೆ ನಿಲ್ದಾಣಗಳಂತಹ ಸಾರ್ವಜನಿಕ ಸ್ಥಳಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಚಿತ್ರೀಕರಿಸಿ ಹಂಚಿಕೊಂಡ ಆರೋಪದ ಮೇಲೆ ಗಾಜಿಯಾಬಾದ್‌ನಲ್ಲಿ ಮಹಿಳೆ...

ವೈರಮುತ್ತುಗೆ ಜ್ಞಾನಪೀಠ ಪ್ರಶಸ್ತಿ : ಚಿನ್ಮಯಿ ಶ್ರೀಪಾದ, ಟಿಎಂ ಕೃಷ್ಣ ಸೇರಿ ಹಲವರಿಂದ ಟೀಕೆ

ಲಿಂಗತಾರತಮ್ಯ ಮತ್ತು ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ತಮಿಳು ಸಾಹಿತಿ ವೈರಮುತ್ತು ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಘೋಷಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.  ಸಾಹಿತ್ಯ ಕ್ಷೇತ್ರದಲ್ಲಿನ ಅವರ ಕೊಡುಗೆಯನ್ನು ಪರಿಗಣಿಸಿ...

ಡ್ರೋನ್ ದಾಳಿಯ ನಂತರ ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ ಅವಘಡ; ವಿಮಾನ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತ

ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿಯಿಂದಾಗಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಆದರೆ, ದುಬೈ ಅಧಿಕಾರಿಗಳ ಪ್ರಕಾರ, ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ."ದುಬೈ ಅಂತರಾಷ್ಟ್ರೀಯ ವಿಮಾನ...

ಕಾನ್ಶಿ ರಾಮ್‌ಗೆ ಭಾರತ ರತ್ನ ನೀಡುವಂತೆ ಆಗ್ರಹಿಸಿ ಪ್ರಧಾನಿಗೆ ಪತ್ರ ಬರೆದ ರಾಹುಲ್ ಗಾಂಧಿ

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಸ್ಥಾಪಿಸಿದ ದಲಿತ ಐಕಾನ್ ಕಾನ್ಶಿ ರಾಮ್‌ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ...

ರಾಜ್ಯಸಭೆಯ 37 ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಹತ್ತು ರಾಜ್ಯಗಳ 37 ಸ್ಥಾನಗಳನ್ನು ಒಳಗೊಂಡ ದ್ವೈವಾರ್ಷಿಕ ರಾಜ್ಯಸಭಾ ಚುನಾವಣೆಗೆ ಸೋಮವಾರ (ಮಾ.16) ಮತದಾನ ನಡೆಯುತ್ತಿದೆ. ಬಿಹಾರ, ಒಡಿಶಾ ಮತ್ತು ಹರಿಯಾಣದಲ್ಲಿ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆ ಇದ್ದು, 26 ಅಭ್ಯರ್ಥಿಗಳು ಈಗಾಗಲೇ...

ಒಡಿಶಾ | ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 10 ಮಂದಿ ಸಾವು

ಒಡಿಶಾದ ಕಟಕ್‌ನಲ್ಲಿರುವ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯುನಲ್ಲಿ ಸೋಮವಾರ (ಮಾರ್ಚ್ 16) ಬೆಂಕಿ ಅವಘಡ ಸಂಭವಿಸಿದ್ದು, ಕನಿಷ್ಠ 10 ರೋಗಿಗಳು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು...

ಆಸ್ಕರ್‌ 2026 : ಮೈಕೆಲ್ ಬಿ. ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ, ಒನ್ ಬ್ಯಾಟಲ್ ಆಫ್ಟರ್ ಅನದರ್‌ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

ಪ್ರತಿಷ್ಠಿತ 98ನೇ ಅಕಾಡೆಮಿ ಪ್ರಶಸ್ತಿ (ಆಸ್ಕರ್ 2026) ಸಮಾರಂಭ ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ಮಾರ್ಚ್ 15ರಂದು (ಭಾರತೀಯ ಕಾಲಮಾನ ಮಾರ್ಚ್ 16) ನಡೆಯಿತು. ಖ್ಯಾತ ಹಾಸ್ಯನಟ ಕೋನನ್ ಒಬ್ರೇನ್ ಅವರು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು....

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...