Homeರಾಜಕೀಯಕುರುಬ್ರು ವಿಶ್ವನಾಥನ ಹಿಂದೋದ್ರೆ?

ಕುರುಬ್ರು ವಿಶ್ವನಾಥನ ಹಿಂದೋದ್ರೆ?

- Advertisement -
- Advertisement -

ಕಾಲ ಎಂತೆಂತಹ ವಿಚಿತ್ರ ಸನ್ನಿವೇಶಗಳನ್ನು. ಸೃಷ್ಟಿ ಮಾಡುತ್ತದಲ್ಲವೆ! ಕಳೆದ ಚುನಾವಣೆಯಲ್ಲಿ ಅವರಪ್ಪನಾಣೆ ಕುಮಾರಸ್ವಾಮಿ ಮುಖ್ಯಮಂತ್ರಿ ಆಗೊಲ್ಲ ಎಂದು ಹೋದಲ್ಲಿಬಂದಲ್ಲಿ ಭಾಷಣ ಬಿಗಿದಿದ್ದ ಸಿದ್ದರಾಮಯ್ಯ, ಚುನಾವಣಾ ಫಲಿತಾಂಶ ಇನ್ನ ಬಾಕಿ ಇರುವಾಗಲೇ ಕುಮಾರಸ್ವಾಮಿ ಮನೆಯ ಕರೆಗಂಟೆ ಒತ್ತಿ ಕೈಕಟ್ಟಿ ನಿಂತಿದ್ದಾರಲ್ಲಾ. ಆಗ ಸಿದ್ದು ನಮ್ಮಪ್ಪನಾಣೆ ನೀನೇ ಮುಖ್ಯಮಂತ್ರಿ ಎನ್ನುವುದೊಂದು ಬಾಕಿ ಇತ್ತು. ಸಿದ್ದು ಸ್ಥಿತಿ ನೋಡಿ ನಗು ಅದುಮಿಕೊಂಡ ದೇವೇಗೌಡರು ಮಗ ಮುಖ್ಯಮಂತ್ರಿ ಯಾದರೂ ಬಿಡದೆ, ಸಿದ್ದು ಬಗೆಗಿನ ಸೇಡನ್ನು ಮುಂದುವರಿಸುವ ಸಲುವಾಗಿ, ವಿಶ್ವನಾಥನನ್ನೇ ಪಾರ್ಟಿ ಪ್ರೆಸಿಡೆಂಟು ಮಾಡಿಬಿಟ್ಟಿದ್ದಾರಲ್ಲಾ, ಈ ಬಗ್ಗೆ ಸಿದ್ದುವನ್ನು ಕೇಳಬೇಕೆಂದು ಫೋನ್ ಮಾಡಿದರೆ ರಿಂಗಾಯ್ತು.
ರಿಂಗ್‍ಠೋನ್ “ಕರಿಯ ಕಂಬಳಿ ಗದ್ದುಗೆ ಮಾಡಿ ವೀರದೊಳ್ಳತಂದಿರಿಸಿದರೊ, ವೀರದೊಳತಂದಿರಿಸಿದರೊ. ವಿಶ್ವನಾಥನ ಭಜಿಸಿದರೊ….. ಹಲೊ.
“ಯಾರು.”
“ನಾನು ಸಾರ್ ಯಾಹೂ.”
“ಏನ್ರಿ ಯಾಹೂ.”
“ಏನ್ ಸಾರ್ ಮುಖ್ಯಮಂತ್ರಿಯಾದಾಗ ನೋಡಕ್ಕೂ ಸಿಗಲಿಲ್ಲ, ಈಗ್ಲು ಸಿಗದಿ¯ವಲ್ಲ ಸಾರ್ ಅಷ್ಟು ಬಿಜಿನ.”
“ಅಂಗೇನಿಲ್ಲ ಹೇಳಿ.”
“ನಿಮ್ಮ ಸರಕಾರ ಸೋತಿದ್ದರ ಬಗ್ಗೆ ನೀವೇನೇಳ್ತಿರಿ ಸಾರ್.”
“ಜನ ಮೋಸ ಮಾಡಿದ್ರು.”
“ನಿಮ್ಮ ಭಾಗದ ತಪ್ಪುಗಳೇನಾದ್ರು ಇದ್ದವೆ?’’
“ಆಂಂ.’’
“ನೀವೇನಾರ ತೆಪ್ಪು ಮಾಡಿದ್ರ ಸಾರ್.”
“ನಾನೇನು ಮಾಡಿದೇ.”
“ ಮೊದಲನೆದಾಗಿ ನಿಮ್ಮ ಪ್ರತಿ ಭಾಷಣದಲ್ಲಿ ಎಡೂರಪ್ಪನ ಜೈಲಿನ ವಿಷಯ ಪ್ರಸ್ತಾಪ ಮಾಡಿದ್ರಿ? ಜನ ಚಪ್ಪಾಳೆ ತಟ್ಟಿದ್ರು, ಆದ್ರೆ ಲಿಂಗಾಯಿತ್ರು ಎಡೂರಪ್ಪನ ಹಿಂದೆ ಒಗ್ಗಟ್ಟಾದ್ರು. ಆಮೇಲೆ ಕುಮಾರಸ್ವಾಮಿಯ ಅವರಪ್ಪನಾಣೆ ಮುಖ್ಯಮಂತ್ರಿ ಆಗಲ್ಲ್ಲ ಅಂದ್ರಿ. ಅದ್ಯಂಗಾಗಲ್ಲ ನೋಡನ ಅಂತ ಒಕ್ಕಲಿಗರೆಲ್ಲ ಒಂದಾದ್ರು. ಅಂತೂ ನಿಮ್ಮ ಭಾಷಣನೆ ಜಾತಿಜನ ಒಟ್ಟು ಮಾಡ್ತು. ಇದೇ ಕಾರಣ ಸೋಲಿಗೆ ಅಂತ ನಮ್ಮ ಲೆಕ್ಕಾಚಾರ.”
“ಈಗಾಯ್ತಲ್ಲ ಬುಡ್ರಿ ಆ ಸುದ್ದಿ ತಗಂಡೇನು.”
“ವಿಶ್ಲೇಷಣೆ ಮಾಡ್ಬೇಕಲ್ಲವಾ ಸಾರ್.”
“ಈಗ ಮಾಡಿ ಏನು ಪ್ರಯೋಜನ.”
“ಮುಂದೆ ರಾಜಕಾರಣ ಮಾಡೋರಿಗೆ ಒಂದು ಅನುಭವ ಆಗುತ್ತೆ ಸಾರ್.”
“ಆ….”
“ಅಷ್ಟೊಂದು ಹಟದ ಅಗತ್ಯ ಇರಲಿಲ್ಲ, ಆ ಮುಸ್ಲಿಮರು ಏನು ಕೇಳ್ತಾರೆ ಅದನ್ನ ಮಾತ್ರ ಕೊಡಬೇಕು. ಅದು ಬುಟ್ಟು ಏನೇನೋ ಕೊಡಕೋದ್ರೆ ಅದವುರಿಗೂ ಬೇಕಿರಲಿಲ್ಲ. ಬೇರೆ ಜನಗಳೂ ಅದನ್ನ ಸಯಿಸದಿಲ್ಲ ಸಾರ್.”
“ಸಯಿಸದಿಲ್ಲ ಅಂತ ನಾವು ಮಾಡದನ್ನ ಬಿಡಬಾರ್ದು, ಅಧಿಕಾರ ಸಿಕ್ಕಿದಾಗ ದುರ್ಬಲರಿಗೆ ಸಹಾಯ ಮಾಡ್ಳೇಬೇಕು.”
“ನಿಮ್ಮ ಸಹಾಯ ಸಾಲಮನ್ನಾ, ಬಿಟ್ಟಿ ಅನ್ನ, ಹಲವಾರು ಭಾಗ್ಯ, ಸರಕಾರಿ ಕವರ್iಜಾರಿಗಳ ಸಂಬಳ ಏರಿಸಿ, ದಲಿತ್ರ ಸಾಲ ಮನ್ನ ಮಾಡಿದ್ರೂ ಜನ ಕೈ ಹಿಡಿಲಿಲ್ಲವಲ್ಲ. ಇದರ ಕಾರಣ ಗೊತ್ತಾಯ್ತಾ ಸಾರ್.”
“ಇಲ್ಲ ಹೇಳಿ.”
“ಜನ ಜಾತ್ಯಂದ್ರಾದಾಗ ಏನು ಕೊಟ್ರೂ ಜಾತಿ ಮಕ್ಕಳಾಗೇ ವರ್ತುಸ್ತಾರೆ, ಜೊತೆಗೆ ನೀವು ತಿರಗ ನಾನೇ ಮುಖ್ಯಮಂತ್ರಿ ಅಂದ್ರೆ ಅದು ರಿವರ್ಸಾಯ್ತು. ದಲಿತ ಮುಖ್ಯಮಂತ್ರಿ ಬೇಡಿಕೆ ಇಟ್ಟಿದ್ದ ಜನ ಹಗಲುರಾತ್ರಿ ಓಡಾಡಿ ಬಿಜೆಪಿಗೆ ಓಟು ಮಾಡಿಸಿದ್ರು ಗೊತ್ತಾ.”
“ಹೋಗ್ಲಿಬುಡಿ.”
“ಬುಡದಲ್ಲ ಸಾರ್, ಅಧಿಕಾರದ ಅಂತ್ಯದಲ್ಲಿ ಯಲ್ಲಾರಿಗೂ ಅಹಂಕಾರ ಬತ್ತದೆ, ನಿಮಿಗೊಂಚೂರು ಜಾಸ್ತಿನೆ ಬಂತು.”
“ನಾನೇನು ಮಾಡಿದೆ.”
“ನಿಮ್ಮನ್ನ ಕಾಂಗ್ರೆಸಿಗೆ ಕರೆತಂದ ವಿಶ್ವನಾಥನ್ನ ಕಾಸಿಗಿಂತ ಕಡೆಮಾಡಿದ್ರಿ, ನೀವು ಗೆಲ್ಲಲಿ ಅಂತ ಓಡಾಡಿದ ರೇವಣಸಿದ್ದಯ್ಯನ್ನ ಐದೊರ್ಸ ಎಲ್ಯವುರೆ ಅಂತ ನೋಡಲಿಲ್ಲ, ಚಾಮುಂಡೇಶ್ವರಿಗಾರ ಟಿಕೆಟ್ ಕೊಡಬವುದಿತ್ತು. ಅಂಗೇ ನೋಡಿದ್ರೆ ಕಾಂಗ್ರೆಸ್ ಸೋಲಿನ ದೊಡ್ಡಪಾಲು ನಿಮ್ಮದೆ ಸಾರ್.”
“ಸೋತಾಯ್ತಲ್ಲ ಬುಡಿ.”
“ಇನ್ನೋಂದು ವಿಷಯ ಸಾರ್.”
“ಏನು.”
“ದೇವೇಗೌಡ್ರು ವಿಶ್ವನಾಥನ್ನ ಜೆಡಿಎಸ್ ಪಾರ್ಟಿ ಪ್ರೆಸಿಡೆಂಟ್ ಮಾಡ್ಯವುರೇ.”
“ಮಾಡ್ಲಿ ಬುಡ್ರಿ.”
“ಅದರಿಂದ ನಿಮಗೇನು ಬೇಜಾರಾಗಿಲ್ವೇ.”
“ಬೇಜಾರ್ಯಾಕೆ, ನಾನು ಜೆಡಿಎಸ್ ಅಧ್ಯಕ್ಷ ಆಗಿದ್ದೆ, ನನ್ನ ಹುಟ್ಟುಹಬ್ಬದ ದಿನವೇ ದೇವೇಗೌಡ ನನ್ನನ್ನ ತಗದು ಆ ತಿಪ್ಪಣ್ಣನ್ನ ಪ್ರೆಸಿಡೆಂಟ್ ಮಾಡಿದ್ರು, ಅವುರು ಪಾರ್ಟಿ ಬುಟ್ಟು ಬಿಜೆಪಿಗೋದ್ರು, ಅಂಗೆ ಒಂದಿನ ಈ ಅಪ್ಪ ಮಕ್ಕಳಿಗೆ ಬೇಜಾರಾದ್ರೆ ವಿಶ್ವನಾಥನ್ನ ತೆಗೆದಾಕ್ತರೆ. ಆದ್ರಿಂದ ವಿಶ್ವನಾಥ ನನ್ನ ಎದುರಾಳಿನೂ ಅಲ್ಲ, ಸ್ಪರ್ಧಿನೂ ಅಲ್ಲ.”
“ಕುರುಬ್ರು ವಿಶ್ವನಾಥನ ಹಿಂದೋದ್ರೆ.”
“ಹೋಗ್ಲಿ ಬುಡ್ರಿ ನಂಗೇನು.”
“ಥೂತ್ತೇರಿ.”

-ಯಾಹೂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರದೇಶ: ಬುಡಕಟ್ಟು ವಿಶ್ವವಿದ್ಯಾಲಯ ಹಾಸ್ಟೆಲ್ ಒಳಗೆ ಅಸ್ಸಾಮಿ ವಿದ್ಯಾರ್ಥಿ ಮೇಲೆ ಗುಂಪು ಹಲ್ಲೆ

ಮಧ್ಯಪ್ರದೇಶದ ಇಂದಿರಾ ಗಾಂಧಿ ರಾಷ್ಟ್ರೀಯ ಬುಡಕಟ್ಟು ವಿಶ್ವವಿದ್ಯಾಲಯದ ಹಾಸ್ಟೆಲ್ ಕೋಣೆಯೊಳಗೆ ಐದು ಜನ ವಿದ್ಯಾರ್ಥಿಗಳ ತಂಡವು ಅಸ್ಸಾಮಿ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದೆ ಎಂದು ಆರೋಪಿಸಲಾಗಿದೆ. ಗುಂಪು ಆತನಿಗೆ ಇಲ್ಲಿಯೇ ಸಾಯಬೇಕು ಎಂದು...

ಮಹಿಳೆಯರ ಜೊತೆ ಪುರುಷರಿಗೂ ಉಚಿತ ಬಸ್‌ ಪ್ರಯಾಣ, ಗ್ರಾಮೀಣರಿಗೆ 150 ಕೂಲಿ ದಿನ : ಮೊದಲ ಹಂತದ ಪ್ರಣಾಳಿಕೆ ಬಿಡುಗಡೆ ಮಾಡಿದ ಎಐಎಡಿಎಂಕೆ

ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿ ಶನಿವಾರ (ಜ.17) ಪಕ್ಷದ ಮೊದಲ ಹಂತದ ಪ್ರಣಾಳಿಕೆ (ಚುನಾವಣಾ ಭರವಸೆ) ಬಿಡುಗಡೆ ಮಾಡಿದ್ದಾರೆ. ಕರ್ನಾಟಕದ ಗೃಹಲಕ್ಷ್ಮಿ ಯೋಜನೆಯಂತೆ ಎಲ್ಲಾ ಪಡಿತರ...

ಛತ್ತೀಸ್‌ಗಢ| ಬಿಜಾಪುರದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ನಕ್ಸಲರು ಸಾವು

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಶನಿವಾರ ಭದ್ರತಾ ಪಡೆಗಳೊಂದಿಗಿನ ಎನ್‌ಕೌಂಟರ್‌ನಲ್ಲಿ ಕನಿಷ್ಠ ಇಬ್ಬರು ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜಿಲ್ಲೆಯ ವಾಯುವ್ಯ ಪ್ರದೇಶದ ಅರಣ್ಯ ಬೆಟ್ಟಗಳಲ್ಲಿ ಶನಿವಾರ ಬೆಳಿಗ್ಗೆ ಗುಂಡಿನ ಚಕಮಕಿ ನಡೆಯಿತು. ಹಿರಿಯ...

ಮಮತಾ ಬ್ಯಾನರ್ಜಿ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಸುವೇಂದು ಅಧಿಕಾರಿ

ಪಶ್ಚಿಮ ಬಂಗಾಳದ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಶುಕ್ರವಾರ (ಜ.16) ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ 100 ಕೋಟಿ ರೂ.ಗಳ ಪರಿಹಾರ ಕೋರಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಮಮತಾ...

ಕೋಮುವಾದ ಕಾರಣಕ್ಕೆ ಬಾಲಿವುಡ್‌ನಲ್ಲಿ ಅವಕಾಶ ಕಡಿಮೆ; ರೆಹಮಾನ್ ಹೇಳಿಕೆ ತಳ್ಳಿಹಾಕಿದ ಜಾವೇದ್ ಅಖ್ತರ್

ಯಶಸ್ವೀ ಸಂಗೀತಗಾರನಾಗಿ ಹಲವು ಕೊಡುಗೆ ನೀಡಿದ್ದರೂ ಕೆಲವರಿಗೆ ಹೊರಗಿನವನು ಎಂಬ ಭಾವನೆ ಹೋಗಿಲ್ಲ. ಕಳೆದ ಎಂಟು ವರ್ಷಗಳಲ್ಲಿ ಬಾಲಿವುಡ್‌ನ ಕದ ಮುಚ್ಚಿದೆ ಎಂಬ ಬಗ್ಗೆ ಎ.ಆರ್. ರೆಹಮಾನ್ ಹೇಳಿಕೆಯನ್ನು ಹಿರಿಯ ಗೀತೆ ರಚನೆಕಾರ...

14 ವರ್ಷದ ದಲಿತ ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣ : 16 ವರ್ಷದ ಬಾಲಕನನ್ನು ವಶಕ್ಕೆ ಪಡೆದ ಪೊಲೀಸರು

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ 14 ವರ್ಷದ ದಲಿತ ಬಾಲಕಿಯ ಭೀಕರ ಅತ್ಯಾಚಾರ, ಕೊಲೆ ನಡೆದಿದ್ದು, ಈ ಸಂಬಂಧ 16 ವರ್ಷದ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗುರುವಾರ (ಜ.15) ಬೆಳಿಗ್ಗೆ ಶಾಲೆಗೆ ಹೋದ...

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮುಸ್ಲಿಮರನ್ನು ಎರಡನೇ ದರ್ಜೆಯ ನಾಗರಿಕರಂತೆ ನಡೆಸಿಕೊಳ್ಳುತ್ತದೆ: ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಬಿಜೆಪಿ ಆಡಳಿತದ ಕೇಂದ್ರ ಸರ್ಕಾರದ ವಿರುದ್ಧ ತಮ್ಮ ವಾಗ್ದಾಳಿ ನಡೆಸಿದ್ದಾರೆ. ಪೌರತ್ವ ಕಾಯ್ದೆ ಮತ್ತು ಹೊಸ ವಕ್ಫ್ ಕಾಯ್ದೆಯಂತಹ ಅದರ ವಿವಿಧ ಕಾನೂನುಗಳು ಮತ್ತು ನೀತಿಗಳು...

ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆ: 114 ಸ್ಥಾನಗಳೊಂದಿಗೆ ಪ್ರಮುಖ ಪಕ್ಷವಾಗಿ ಹೊರಹೊಮ್ಮಿದ ಎಐಎಂಐಎಂ

ಮಹಾರಾಷ್ಟ್ರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಅಖಿಲ ಭಾರತ ಮಜ್ಲಿಸ್ ಇ ಇತ್ತೆಹಾದುಲ್ ಮುಸ್ಲಿಮೀನ್ ಪಕ್ಷವು (ಎಐಎಂಐಎಂ) 114 ಸ್ಥಾನಗಳನ್ನು ಗೆದ್ದು, 2017 ರ ಸ್ಥಳೀಯ ಸಂಸ್ಥೆ ಚುನಾವಣೆಗಳಿಗಿಂತ ತನ್ನ ಸಂಖ್ಯೆಯನ್ನು ತೀವ್ರವಾಗಿ ಹೆಚ್ಚಿಸಿಕೊಂಡಿದೆ....

ವಲಸೆ ಕಾರ್ಮಿಕರ ಶೆಡ್‌ಗಳಿಗೆ ತೆರಳಿ ಅನೈತಿಕ ಪೊಲೀಸ್‌ಗಿರಿ : ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ಬಂಧನ

ವಲಸೆ ಕಾರ್ಮಿಕರ ಶೆಡ್‌ಗಳಿಗೆ ತೆರಳಿ ಅವರ ಗೌಪ್ಯ ದಾಖಲೆಗಳನ್ನು ಪಡೆದು ಪೌರತ್ವ ಪರಿಶೀಲಿಸುವ ಮೂಲಕ ಅನೈತಿಕ ಪೊಲೀಸ್‌ಗಿರಿ ಮಾಡುತ್ತಿದ್ದ ಕೊಲೆ ಆರೋಪಿ ಪುನೀತ್ ಕೆರೆಹಳ್ಳಿಯನ್ನು ಬನ್ನೇರುಘಟ್ಟ ಪೊಲೀಸರು ಶುಕ್ರವಾರ (ಜ.16) ತಡರಾತ್ರಿ ಬಂಧಿಸಿದ್ದಾರೆ...

ಬಳ್ಳಾರಿ| ಬಂಡಿಹಟ್ಟಿ-ದಾನಪ್ಪ ಬೀದಿ ಬಡರೈತರ ಮೇಲೆ ದೌರ್ಜನ್ಯ; ಪ್ರತಾಪರೆಡ್ಡಿ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ಬಳ್ಳಾರಿ ಜಿಲ್ಲೆಯ ಬಂಡಿಹಟ್ಟಿ-ದಾನಪ್ಪ ಬೀದಿಯ ಬಡರೈತರ ಮೇಲೆ ದೌರ್ಜನ್ಯ ಎಸಗುತ್ತಿರುವ ಎನ್‌.ಪ್ರತಾಪ ರೆಡ್ಡಿ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು 'ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ' ಮುಖಂಡರು ಆಗ್ರಹಿಸಿದರು....