Homeಮುಖಪುಟಸಿದ್ದಾರ್ಥ್ ವರದರಾಜನ್ - `ದಾಳಿಗಿದ್ದ ಟಾರ್ಗೆಟ್ ಮೂರು; ಗುರಿಗೆ ಸಿಕ್ಕಿದ್ದು ಒಂದು!'

ಸಿದ್ದಾರ್ಥ್ ವರದರಾಜನ್ – `ದಾಳಿಗಿದ್ದ ಟಾರ್ಗೆಟ್ ಮೂರು; ಗುರಿಗೆ ಸಿಕ್ಕಿದ್ದು ಒಂದು!’

- Advertisement -
- Advertisement -

ಸಿದ್ದಾರ್ಥ್ ವರದರಾಜನ್ (Thewire.in  ಸಂಸ್ಥಾಪಕ) |

ಭಾರತದ ವಿದೇಶಾಂಗ ಕಾರ್ಯದರ್ಶಿ, ಇದು ಮಿಲಿಟರಿ ದಾಳಿಯಲ್ಲ, ಸಂಭಾವ್ಯ ದಾಳಿ ತಡೆಗಟ್ಟಲು ನಡೆಸಿದ ದಾಳಿ’ ಎಂದು ಒತ್ತಿ ಹೇಳಿದಾಗ ಅವರ ಮನದಲ್ಲಿ ಅಂತರಾಷ್ಟ್ರೀಯ ಕಾನೂನು ಇತ್ತೇನೋ? ಆದರೆ, ಪಾಕಿಸ್ತಾನದ ಬಾಲಾಕೋಟ್‌ನಲ್ಲಿ ಇತ್ತೆನ್ನಲಾದ ಉಗ್ರರ ತರಬೇತಿ ಶಿಬಿರದ ಮೇಲಿನ ವಾಯುದಾಳಿಯನ್ನು ಪ್ರಾಮಾಣಿಕವಾಗಿ ಹೀಗೆ ವಿಶ್ಲೇಷಿಸಬಹುದು: ಮೂರು ವಿಭಿನ್ನ ’ಪ್ರೇಕ್ಷಕರಿಗೆ’ ಸಂದೇಶವೊಂದನ್ನು ನೀಡಲು ಉದ್ದೇಶಿಸಿದ ಪ್ರತೀಕಾರದ ಕ್ರಮ…

  • ಅದರ ಮಿಲಿಟರಿ ಉದ್ದೇಶ: ಪಾಕಿಸ್ತಾನ ನಿಮಗೆ ಒದಗಿಸಿರುವ ಸುರಕ್ಷಿತ ತಾಣಗಳು ಅಷ್ಟು ಸುರಕ್ಷಿತವಲ್ಲ ಎಂದು ಜೈಶ್ ಮತ್ತು ಪಾಕಿಸ್ತಾನದ ಇತರ ಭಯೋತ್ಪಾದನಾ ಗುಂಪುಗಳಿಗೆ ಸಂದೇಶ ನೀಡುವುದು.
  • ಅದರ ರಾಜತಾಂತ್ರಿಕ ಉದ್ದೇಶ: ಭಯೋತ್ಪಾದನೆ ಬೆಂಬಲಿಸುವ ಪಾಕಿಸ್ತಾನಕ್ಕೆ ನೀವು ಎಂದಿನಂತೆ ಸಹಜವಾಗಿ ನೀಡುತ್ತಿರುವ ಬೆಂಬಲ ನೀಡಲಾಗದು ಎಂದು ಬಹುಪಾಲು ರಾಷ್ಟ್ರಗಳಿಗೆ ಸಂದೇಶ ನೀಡುವುದು.
  • ರಾಜಕೀಯ ಉದ್ದೇಶ: ಸಾರ್ವತ್ರಿಕ ಚುನಾವಣೆಯನ್ನು ತಲೆಯಲ್ಲಿ ಇಟ್ಟಕೊಂಡು, ’ದೇಶವನ್ನು ಕಾಪಾಡುವ ರಾಜಕೀಯ ಇಚ್ಛಾಶಕ್ತಿ ಇರುವ ನಾಯಕ ನರೇಂದ್ರ ಮೋದಿ’ ಎಂಬ ಸಂದೇಶವನ್ನು ದೇಶದ ಪ್ರೇಕ್ಷಕರಿಗೆ (ಪ್ರಜೆಗಳಿಗೆ) ನೀಡುವುದು.

ಇವುಗಳಲ್ಲಿ, ಕೇವಲ ರಾಜಕೀಯ ಉದ್ದೇಶ ಈಡೇರಿದೆ ಎಂದು ಮೋದಿ ಆತ್ಮವಿಶ್ವಾಸದಿಂದ ಹೇಳಬಹುದು.

ಭಾರತೀಯ ವಾಯುಸೇನೆಗೆ ಒಂದು ಕಠಿಣ ಮತ್ತು ಅಪಾಯಕಾರಿ ಕಾರ್ಯವನ್ನು ನೀಡಿದ ಸರ್ಕಾರ, ಈಗ ಆಪರೇಷನ್ ಸಕ್ಸಸ್ ಎಂದು ಘೋಷಿಸಿದೆ. ಆದರೆ ಪರಿಶೀಲನೆಗೆ ಅರ್ಹವಾದ ಯಾವುದೇ ಮಾಹಿತಿ ನೀಡದೇ ಇದನ್ನು ಮಾಡಲಾಗುತ್ತಿದೆ. ಭಾರತೀಯ ಮಾಧ್ಯಮಗಳಿಗೆ ತಲುಪಿದ ಅತಿರಂಜಿತ ಮಾಹಿತಿಗಳಿಂದಾಗಿ, ಪಾಕಿಸ್ತಾನ ಸುಮ್ಮನೇ ಕೂಡುವುದಂತೂ ಕಷ್ಟ.

2016ರ ಸರ್ಜಿಕಲ್ ದಾಳಿ ಮತ್ತು ಈಗಿನ ವಾಯುದಾಳಿ-ಈ ಎರಡರಿಂದಲೂ ಯಾವುದೇ ಹಾನಿಯಾಗಿಲ್ಲ ಎಂದು ಪಾಕಿಸ್ತಾನಿ ಸೇನೆ ಹೇಳಿದೆ. ಆದರೆ ಈ ಸಲ ರಾಜಕೀಯ ಮತ್ತು ಮಿಲಿಟರಿ ಎರಡೂ ವ್ಯವಸ್ಥೆಗಳು ಇದಕ್ಕೆ ಸೇನಾತ್ಮಕ ಪ್ರತಿಕ್ರಿಯೆ ಖಂಡಿತ ಎಂದು ಘೋಷಿಸಿವೆ. ಈ ಬೆದರಿಕೆಯನ್ನು ಹಗುರವಾಗಿ ಪರಿಗಣಿಸಲು ಯಾವ ಕಾರಣವೂ ಇಲ್ಲ.

ನಮ್ಮ ವಾಯುಸೇನೆಯ ಶಕ್ತಿ-ಸಾಮರ್ಥ್ಯಗಳ ಬಗ್ಗೆ ಎಂದಿಗೂ ಸಕಾರಾತ್ಮಕ ನಿಲುವೇ ಇದೆ. ಆದರೆ 1971ರ ನಂತರ ಮೊದಲ ಬಾರಿಗೆ ವಾಯುಸೇನೆಯನ್ನು ಗಡಿಯಾಚೆ ನುಗ್ಗಿಸುವ ಕೆಲಸ ಮಾಡಿದ್ದಾರೆ ಮೋದಿ.

ಹಿಂದಿನ ಸರ್ಕಾರಗಳು ನಿಯಂತ್ರಣ ರೇಖೆಗೆ ಹೊಂದಿಕೊಂಡಿರುವ ಮತ್ತು ಪಾಕಿಸ್ತಾನದೊಳಗೆ ಇರುವ ಉಗ್ರರ ನೆಲೆಗಳ ಮೇಲೆ ವಾಯುದಾಳಿಯ ಪ್ರಯೋಗದಿಂದ ದೂರ ಉಳಿದಿದ್ದವು. ಇದಕ್ಕೆ ಪಾಕಿಸ್ತಾನ ಅಣ್ವಸ್ತ್ರ ರಾಷ್ಟ್ರ ಎಂಬ ಭಯವಾಗಲೀ  ಅಥವಾ ರಾಜಕೀಯ ಇಚ್ಛಾಶಕ್ತಿಯ ಕೊರತೆಯಾಗಲೀ ಕಾರಣವಲ್ಲ. ಆದರೆ, ಗಡಿಯಾಚೆಯಿಂದ ಬರುವ ಭಯೋತ್ಪಾದನಾ ಬೆದರಿಕೆಯನ್ನು ಇಂತಹ ಕ್ರಮಗಳಿಂದ ತಟಸ್ಥಗೊಳಿಸಿವುದು ಅಸಾಧ್ಯ ಎಂಬ ಅರಿವು ಆ ಸರ್ಕಾರಗಳಿಗಿತ್ತು.

ಇದನ್ನು ಅರ್ಥ ಮಾಡಿಕೊಳ್ಳಲು, 2016 ಸೆಪ್ಟೆಂಬರ್‌ನ ಸರ್ಜಿಕಲ್ ದಾಳಿಯ ನಂತರದ ಬೆಳವಣಿಗೆಗಳನ್ನು ನೋಡಬಹುದು. ಪಾಕಿಸ್ತಾನ ಮೂಲದ ಉಗ್ರರ ಗುಂಪುಗಳಿಂದ ಭವಿಷ್ಯದಲ್ಲಿ ದಾಳಿಗಳನ್ನು ತಡೆಯಬಹುದೆಂಬ ನಿರೀಕ್ಷೆಯನ್ನು ಆ ಸರ್ಜಿಕಲ್ ದಾಳಿ ಹುಸಿಗೊಳಿಸಿತು. ಈ ವಿಷಯದಲ್ಲಿ ಅದು ಪುಟ್ಟಾಪೂರಾ ವಿಫಲವಾಯಿತು. ಆ ಸರ್ಜಿಕಲ್ ದಾಳಿಯ ನಂತರ ಉಗ್ರರ ದಾಳಿಗಳು ಹೆಚ್ಚಾದವು ಮತ್ತು 1989ರಲ್ಲಿ ಕಣಿವೆಯಲ್ಲಿ ಭಯೋತ್ಪಾದನೆ ಭುಗಿಲೆದ್ದ ನಂತರ ಅತಿ ಭಯಾನಕ ದಾಳಿ ಎನಿಸಿದ ಪುಲ್ವಾಮಾ ದಾಳಿಯೂ ಸಂಭವಿಸಿತು.

ಪಾಕಿಸ್ತಾನದಲ್ಲಿರುವ ಉಗ್ರರ ನೆಲೆ ಮೇಲೆ ದಾಳಿ ಮಾಡಲು ಯೋಚಿಸಿದ ಪ್ರಧಾನಿ ಮೋದಿ ಒಬ್ಬರೇ ಅಲ್ಲ. 2001ರಲ್ಲಿ ಸಂಸತ್ ಮೇಲೆ ದಾಳಿ ಆದಾಗ ವಾಜಪೇಯಿ ಮತ್ತು 2008ರಲ್ಲಿ ಮುಂಬೈ ಮೇಲೆ ದಾಳಿ ನಡೆದಾಗ ಮನಮೋಹನಸಿಂಗ್ ಕೂಡ ಯೋಚಿಸಿದ್ದರು. ಆದರೆ ಸುದೀರ್ಘ ಸಮಾಲೋಚನೆ ನಂತರ ಈ ಮಾರ್ಗದಿಂದ ಭಯೋತ್ಪಾದನೆ ತಡೆಯುವುದು ಅಸಾಧ್ಯ ಎಂಬ ಸತ್ಯವನ್ನು ಅರಿತಿದ್ದರು. ಮಾತುಕತೆ ಮತ್ತು ಭಯೋತ್ಪಾದನೆ ಎರಡೂ ಒಟ್ಟಿಗೆ ಸಾಧ್ಯವಿಲ್ಲ ಎಂಬುದು ಇವತ್ತಿನ ಮಂತ್ರವಾಗಿರಬಹುದು. ಆದರೆ ಭಯೋತ್ಪಾದನೆ ನಿಗ್ರಹಿಸುತ್ತಲೇ ಮಾತುಕತೆಯನ್ನು ಜಾರಿಯಲ್ಲಿಡುವ ಮೂಲಕ ವಾಜಪೇಯಿ ಮತ್ತು ಮನಮೋಹನಸಿಂಗ್ ಕಾಶ್ಮೀರವನ್ನು ಸಾಧ್ಯವಾದಷ್ಟು ಶಾಂತವಾಗಿಡಲು ಸಫಲರಾಗಿದ್ದರು.

ಮೋದಿ ಈಗ ಮಿಲಿಟರಿ ಕಾರ್ಡ್ ಆಟದ ಮೂಲಕ ಗ್ಯಾಂಬ್ಲಿಂಗ್ ಮಾಡಿದ್ದಾರೆ. ಕ್ಷುದ್ರ ಪಾಕಿಸ್ತಾನ ನಡೆಸುವ ಪ್ರತೀಕಾರವೂ ಅವರಿಗೆ ಶಕ್ತಿ ತುಂಬಬಹುದು. ಆದರೆ ಒಂದು ಕಾಲ ಊಹಿಸಿದ್ದಕ್ಕಿಂತ ಬೇಗನೆ ಬರಲಿದೆ- ಭಯೋತ್ಪಾದನೆಯ ಸಮಸ್ಯೆ ಮುಗಿದಿಲ್ಲ, ಬದಲಾಗಿ ಇನ್ನಷ್ಟು ಸಂಕೀರ್ಣಗೊಂಡಿದೆ ಮತ್ತು ನಿಯಂಯ್ರಣ ಮೀರುತ್ತಿದೆ ಎಂಬುದನ್ನು ಈ ದೇಶದ ಸಾಮಾನ್ಯ ನಾಗರಿಕರು ಅರಿಯುವ ಕಾಲ.

(ಭಾವಾನುವಾದ: ಮಲ್ಲಿ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...