Homeಮುಖಪುಟಸಿದ್ದಾರ್ಥ್ ವರದರಾಜನ್ - `ದಾಳಿಗಿದ್ದ ಟಾರ್ಗೆಟ್ ಮೂರು; ಗುರಿಗೆ ಸಿಕ್ಕಿದ್ದು ಒಂದು!'

ಸಿದ್ದಾರ್ಥ್ ವರದರಾಜನ್ – `ದಾಳಿಗಿದ್ದ ಟಾರ್ಗೆಟ್ ಮೂರು; ಗುರಿಗೆ ಸಿಕ್ಕಿದ್ದು ಒಂದು!’

- Advertisement -
- Advertisement -

ಸಿದ್ದಾರ್ಥ್ ವರದರಾಜನ್ (Thewire.in  ಸಂಸ್ಥಾಪಕ) |

ಭಾರತದ ವಿದೇಶಾಂಗ ಕಾರ್ಯದರ್ಶಿ, ಇದು ಮಿಲಿಟರಿ ದಾಳಿಯಲ್ಲ, ಸಂಭಾವ್ಯ ದಾಳಿ ತಡೆಗಟ್ಟಲು ನಡೆಸಿದ ದಾಳಿ’ ಎಂದು ಒತ್ತಿ ಹೇಳಿದಾಗ ಅವರ ಮನದಲ್ಲಿ ಅಂತರಾಷ್ಟ್ರೀಯ ಕಾನೂನು ಇತ್ತೇನೋ? ಆದರೆ, ಪಾಕಿಸ್ತಾನದ ಬಾಲಾಕೋಟ್‌ನಲ್ಲಿ ಇತ್ತೆನ್ನಲಾದ ಉಗ್ರರ ತರಬೇತಿ ಶಿಬಿರದ ಮೇಲಿನ ವಾಯುದಾಳಿಯನ್ನು ಪ್ರಾಮಾಣಿಕವಾಗಿ ಹೀಗೆ ವಿಶ್ಲೇಷಿಸಬಹುದು: ಮೂರು ವಿಭಿನ್ನ ’ಪ್ರೇಕ್ಷಕರಿಗೆ’ ಸಂದೇಶವೊಂದನ್ನು ನೀಡಲು ಉದ್ದೇಶಿಸಿದ ಪ್ರತೀಕಾರದ ಕ್ರಮ…

  • ಅದರ ಮಿಲಿಟರಿ ಉದ್ದೇಶ: ಪಾಕಿಸ್ತಾನ ನಿಮಗೆ ಒದಗಿಸಿರುವ ಸುರಕ್ಷಿತ ತಾಣಗಳು ಅಷ್ಟು ಸುರಕ್ಷಿತವಲ್ಲ ಎಂದು ಜೈಶ್ ಮತ್ತು ಪಾಕಿಸ್ತಾನದ ಇತರ ಭಯೋತ್ಪಾದನಾ ಗುಂಪುಗಳಿಗೆ ಸಂದೇಶ ನೀಡುವುದು.
  • ಅದರ ರಾಜತಾಂತ್ರಿಕ ಉದ್ದೇಶ: ಭಯೋತ್ಪಾದನೆ ಬೆಂಬಲಿಸುವ ಪಾಕಿಸ್ತಾನಕ್ಕೆ ನೀವು ಎಂದಿನಂತೆ ಸಹಜವಾಗಿ ನೀಡುತ್ತಿರುವ ಬೆಂಬಲ ನೀಡಲಾಗದು ಎಂದು ಬಹುಪಾಲು ರಾಷ್ಟ್ರಗಳಿಗೆ ಸಂದೇಶ ನೀಡುವುದು.
  • ರಾಜಕೀಯ ಉದ್ದೇಶ: ಸಾರ್ವತ್ರಿಕ ಚುನಾವಣೆಯನ್ನು ತಲೆಯಲ್ಲಿ ಇಟ್ಟಕೊಂಡು, ’ದೇಶವನ್ನು ಕಾಪಾಡುವ ರಾಜಕೀಯ ಇಚ್ಛಾಶಕ್ತಿ ಇರುವ ನಾಯಕ ನರೇಂದ್ರ ಮೋದಿ’ ಎಂಬ ಸಂದೇಶವನ್ನು ದೇಶದ ಪ್ರೇಕ್ಷಕರಿಗೆ (ಪ್ರಜೆಗಳಿಗೆ) ನೀಡುವುದು.

ಇವುಗಳಲ್ಲಿ, ಕೇವಲ ರಾಜಕೀಯ ಉದ್ದೇಶ ಈಡೇರಿದೆ ಎಂದು ಮೋದಿ ಆತ್ಮವಿಶ್ವಾಸದಿಂದ ಹೇಳಬಹುದು.

ಭಾರತೀಯ ವಾಯುಸೇನೆಗೆ ಒಂದು ಕಠಿಣ ಮತ್ತು ಅಪಾಯಕಾರಿ ಕಾರ್ಯವನ್ನು ನೀಡಿದ ಸರ್ಕಾರ, ಈಗ ಆಪರೇಷನ್ ಸಕ್ಸಸ್ ಎಂದು ಘೋಷಿಸಿದೆ. ಆದರೆ ಪರಿಶೀಲನೆಗೆ ಅರ್ಹವಾದ ಯಾವುದೇ ಮಾಹಿತಿ ನೀಡದೇ ಇದನ್ನು ಮಾಡಲಾಗುತ್ತಿದೆ. ಭಾರತೀಯ ಮಾಧ್ಯಮಗಳಿಗೆ ತಲುಪಿದ ಅತಿರಂಜಿತ ಮಾಹಿತಿಗಳಿಂದಾಗಿ, ಪಾಕಿಸ್ತಾನ ಸುಮ್ಮನೇ ಕೂಡುವುದಂತೂ ಕಷ್ಟ.

2016ರ ಸರ್ಜಿಕಲ್ ದಾಳಿ ಮತ್ತು ಈಗಿನ ವಾಯುದಾಳಿ-ಈ ಎರಡರಿಂದಲೂ ಯಾವುದೇ ಹಾನಿಯಾಗಿಲ್ಲ ಎಂದು ಪಾಕಿಸ್ತಾನಿ ಸೇನೆ ಹೇಳಿದೆ. ಆದರೆ ಈ ಸಲ ರಾಜಕೀಯ ಮತ್ತು ಮಿಲಿಟರಿ ಎರಡೂ ವ್ಯವಸ್ಥೆಗಳು ಇದಕ್ಕೆ ಸೇನಾತ್ಮಕ ಪ್ರತಿಕ್ರಿಯೆ ಖಂಡಿತ ಎಂದು ಘೋಷಿಸಿವೆ. ಈ ಬೆದರಿಕೆಯನ್ನು ಹಗುರವಾಗಿ ಪರಿಗಣಿಸಲು ಯಾವ ಕಾರಣವೂ ಇಲ್ಲ.

ನಮ್ಮ ವಾಯುಸೇನೆಯ ಶಕ್ತಿ-ಸಾಮರ್ಥ್ಯಗಳ ಬಗ್ಗೆ ಎಂದಿಗೂ ಸಕಾರಾತ್ಮಕ ನಿಲುವೇ ಇದೆ. ಆದರೆ 1971ರ ನಂತರ ಮೊದಲ ಬಾರಿಗೆ ವಾಯುಸೇನೆಯನ್ನು ಗಡಿಯಾಚೆ ನುಗ್ಗಿಸುವ ಕೆಲಸ ಮಾಡಿದ್ದಾರೆ ಮೋದಿ.

ಹಿಂದಿನ ಸರ್ಕಾರಗಳು ನಿಯಂತ್ರಣ ರೇಖೆಗೆ ಹೊಂದಿಕೊಂಡಿರುವ ಮತ್ತು ಪಾಕಿಸ್ತಾನದೊಳಗೆ ಇರುವ ಉಗ್ರರ ನೆಲೆಗಳ ಮೇಲೆ ವಾಯುದಾಳಿಯ ಪ್ರಯೋಗದಿಂದ ದೂರ ಉಳಿದಿದ್ದವು. ಇದಕ್ಕೆ ಪಾಕಿಸ್ತಾನ ಅಣ್ವಸ್ತ್ರ ರಾಷ್ಟ್ರ ಎಂಬ ಭಯವಾಗಲೀ  ಅಥವಾ ರಾಜಕೀಯ ಇಚ್ಛಾಶಕ್ತಿಯ ಕೊರತೆಯಾಗಲೀ ಕಾರಣವಲ್ಲ. ಆದರೆ, ಗಡಿಯಾಚೆಯಿಂದ ಬರುವ ಭಯೋತ್ಪಾದನಾ ಬೆದರಿಕೆಯನ್ನು ಇಂತಹ ಕ್ರಮಗಳಿಂದ ತಟಸ್ಥಗೊಳಿಸಿವುದು ಅಸಾಧ್ಯ ಎಂಬ ಅರಿವು ಆ ಸರ್ಕಾರಗಳಿಗಿತ್ತು.

ಇದನ್ನು ಅರ್ಥ ಮಾಡಿಕೊಳ್ಳಲು, 2016 ಸೆಪ್ಟೆಂಬರ್‌ನ ಸರ್ಜಿಕಲ್ ದಾಳಿಯ ನಂತರದ ಬೆಳವಣಿಗೆಗಳನ್ನು ನೋಡಬಹುದು. ಪಾಕಿಸ್ತಾನ ಮೂಲದ ಉಗ್ರರ ಗುಂಪುಗಳಿಂದ ಭವಿಷ್ಯದಲ್ಲಿ ದಾಳಿಗಳನ್ನು ತಡೆಯಬಹುದೆಂಬ ನಿರೀಕ್ಷೆಯನ್ನು ಆ ಸರ್ಜಿಕಲ್ ದಾಳಿ ಹುಸಿಗೊಳಿಸಿತು. ಈ ವಿಷಯದಲ್ಲಿ ಅದು ಪುಟ್ಟಾಪೂರಾ ವಿಫಲವಾಯಿತು. ಆ ಸರ್ಜಿಕಲ್ ದಾಳಿಯ ನಂತರ ಉಗ್ರರ ದಾಳಿಗಳು ಹೆಚ್ಚಾದವು ಮತ್ತು 1989ರಲ್ಲಿ ಕಣಿವೆಯಲ್ಲಿ ಭಯೋತ್ಪಾದನೆ ಭುಗಿಲೆದ್ದ ನಂತರ ಅತಿ ಭಯಾನಕ ದಾಳಿ ಎನಿಸಿದ ಪುಲ್ವಾಮಾ ದಾಳಿಯೂ ಸಂಭವಿಸಿತು.

ಪಾಕಿಸ್ತಾನದಲ್ಲಿರುವ ಉಗ್ರರ ನೆಲೆ ಮೇಲೆ ದಾಳಿ ಮಾಡಲು ಯೋಚಿಸಿದ ಪ್ರಧಾನಿ ಮೋದಿ ಒಬ್ಬರೇ ಅಲ್ಲ. 2001ರಲ್ಲಿ ಸಂಸತ್ ಮೇಲೆ ದಾಳಿ ಆದಾಗ ವಾಜಪೇಯಿ ಮತ್ತು 2008ರಲ್ಲಿ ಮುಂಬೈ ಮೇಲೆ ದಾಳಿ ನಡೆದಾಗ ಮನಮೋಹನಸಿಂಗ್ ಕೂಡ ಯೋಚಿಸಿದ್ದರು. ಆದರೆ ಸುದೀರ್ಘ ಸಮಾಲೋಚನೆ ನಂತರ ಈ ಮಾರ್ಗದಿಂದ ಭಯೋತ್ಪಾದನೆ ತಡೆಯುವುದು ಅಸಾಧ್ಯ ಎಂಬ ಸತ್ಯವನ್ನು ಅರಿತಿದ್ದರು. ಮಾತುಕತೆ ಮತ್ತು ಭಯೋತ್ಪಾದನೆ ಎರಡೂ ಒಟ್ಟಿಗೆ ಸಾಧ್ಯವಿಲ್ಲ ಎಂಬುದು ಇವತ್ತಿನ ಮಂತ್ರವಾಗಿರಬಹುದು. ಆದರೆ ಭಯೋತ್ಪಾದನೆ ನಿಗ್ರಹಿಸುತ್ತಲೇ ಮಾತುಕತೆಯನ್ನು ಜಾರಿಯಲ್ಲಿಡುವ ಮೂಲಕ ವಾಜಪೇಯಿ ಮತ್ತು ಮನಮೋಹನಸಿಂಗ್ ಕಾಶ್ಮೀರವನ್ನು ಸಾಧ್ಯವಾದಷ್ಟು ಶಾಂತವಾಗಿಡಲು ಸಫಲರಾಗಿದ್ದರು.

ಮೋದಿ ಈಗ ಮಿಲಿಟರಿ ಕಾರ್ಡ್ ಆಟದ ಮೂಲಕ ಗ್ಯಾಂಬ್ಲಿಂಗ್ ಮಾಡಿದ್ದಾರೆ. ಕ್ಷುದ್ರ ಪಾಕಿಸ್ತಾನ ನಡೆಸುವ ಪ್ರತೀಕಾರವೂ ಅವರಿಗೆ ಶಕ್ತಿ ತುಂಬಬಹುದು. ಆದರೆ ಒಂದು ಕಾಲ ಊಹಿಸಿದ್ದಕ್ಕಿಂತ ಬೇಗನೆ ಬರಲಿದೆ- ಭಯೋತ್ಪಾದನೆಯ ಸಮಸ್ಯೆ ಮುಗಿದಿಲ್ಲ, ಬದಲಾಗಿ ಇನ್ನಷ್ಟು ಸಂಕೀರ್ಣಗೊಂಡಿದೆ ಮತ್ತು ನಿಯಂಯ್ರಣ ಮೀರುತ್ತಿದೆ ಎಂಬುದನ್ನು ಈ ದೇಶದ ಸಾಮಾನ್ಯ ನಾಗರಿಕರು ಅರಿಯುವ ಕಾಲ.

(ಭಾವಾನುವಾದ: ಮಲ್ಲಿ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

​ಚನ್ನರಾಯಪಟ್ಟಣ ರೈತರಿಗೆ ಅಂತಿಮ ವಿಜಯ; ​ಬೆಂಬಲಕ್ಕೆ ನಿಂತವರಿಗೆ ಧನ್ಯವಾದ ತಿಳಿಸಿದ ‘ಹೋರಾಟ ಸಮಿತಿ’

​ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ ರೈತರ ಭೂ ಹೋರಾಟ ಕೊನೆಗೂ ಸುಖಾಂತ್ಯವಾಗಿದೆ. ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ಜೊತೆಗೆ ರಾಜ್ಯದ ಹತ್ತಾರು ಜನಪರ ಸಂಘಟನೆಗಳು ನಡೆಸಿದ ಸುದೀರ್ಘ ಹೋರಾಟ...

ಸಚಿವ ಸಂಪುಟ ಸಭೆಯಲ್ಲಿ ಅಲೆಮಾರಿಗಳ ಬಗ್ಗೆ ತುಟಿ ಬಿಚ್ಚದ ಸರ್ಕಾರ; ‘ಬೆಳಗಾವಿ ಚಲೋ’ ಹೋರಾಟಕ್ಕೆ ಕರೆ

ಗುರುವಾರ (ಡಿ.4) ನಡೆದ ಸಚಿವ ಸಂಪುಟ ಸಭೆಯಲ್ಲಿ ಅಲೆಮಾರಿಗಳ ಮೀಸಲಾತಿ ಬಗ್ಗೆ ತುಟಿ ಬಿಚ್ಚದ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತವಾಗಿದ್ದು, 'ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ' 'ಬೆಳಗಾವಿ ಚಲೋ'...

ಅಖಂಡ ಕರ್ನಾಟಕದ ಪ್ರದೇಶಗಳನ್ನು ಸಾಂಸ್ಕೃತಿಕವಾಗಿ ವಿಲೀನಗೊಳಿಸಲು ಇದು ಸಕಾಲ: ಡಾ.ಪುರುಷೋತ್ತಮ ಬಿಳಿಮಲೆ

ಕರ್ನಾಟಕ ಮತ್ತು ನೆರೆ ರಾಜ್ಯಗಳ ಅಚ್ಚ ಕನ್ನಡ ಪ್ರದೇಶಗಳ ನಡುವಿನ ಭೌತಿಕ ಗಡಿಗಳು ಇದ್ದಂತೆ ಇದ್ದರೂ ಸಾಂಸ್ಕೃತಿಕವಾಗಿ ಹೇರಲಾಗುತ್ತಿರುವ ಗಡಿಗಳನ್ನು ಅಪ್ರಸ್ತುತವಾಗಿಸುವುದು ಸಾಧ್ಯವಿದೆ. ಇಂತಹ ಪ್ರದೇಶಗಳೊಂದಿಗೆ ಕರ್ನಾಟಕದ ಭಾವನಾತ್ಮಕ ಸಂಬಂಧದ ವಿಸ್ತರಣೆಗೆ ಇದು...

ಅರುಂಧತಿ ರಾಯ್ ಅವರ ಪುಸ್ತಕದ ಮುಖಪುಟ ವಿರೋಧಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಖ್ಯಾತ ಲೇಖಕಿ ಅರುಂಧತಿ ರಾಯ್ ಅವರ 'ಮದರ್ ಮೇರಿ ಕಮ್ಸ್ ಟು ಮಿ' ಪುಸ್ತಕದ ಮುಖಪುಟ ಚಿತ್ರದ ಪ್ರಸಾರದ ವಿರುದ್ಧ ಸಲ್ಲಿಸಲಾದ ಅರ್ಜಿಯನ್ನು ಸುಪ್ರಿಂ ಕೋರ್ಟ್‌ ಶುಕ್ರವಾರ ತಿರಸ್ಕರಿಸಿದೆ. ಏಕೆಂದರೆ, ಲೇಖಕರು ಧೂಮಪಾನವನ್ನು...

ರೋಹಿಂಗ್ಯಾ ಕುರಿತು ಆಕ್ಷೇಪಾರ್ಹ ಹೇಳಿಕೆ: ಸಿಐಜೆ ಸೂರ್ಯಕಾಂತ್ ಅವರಿಗೆ ಮಾಜಿ ನ್ಯಾಯಾದೀಶರು, ವಕೀಲರು, ಶಿಕ್ಷಣ ತಜ್ಞರಿಂದ ಮುಕ್ತ ಪತ್ರ

ರೋಹಿಂಗ್ಯಾಗಳ ವಿರುದ್ಧ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರು ನೀಡಿದ್ದ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿ ಮಾಜಿ ನ್ಯಾಯಾಧೀಶರು, ವಕೀಲರು ಮತ್ತು ಶಿಕ್ಷಣ ತಜ್ಞರು ಸೂರ್ಯಕಾಂತ್ ಅವರಿಗೆ ಮುಕ್ತ ಪತ್ರ ಬರೆದಿದ್ದಾರೆ.  ಕಿರುಕುಳದಿಂದ ಪಲಾಯನ ಮಾಡಿದ...

ಛತ್ತೀಸ್‌ಗಢ: ‘ಎಸ್‌ಇಸಿಎಲ್‌ ಅಮೇರಾ’ ಕಲ್ಲಿದ್ದಲು ಗಣಿ ವಿಸ್ತರಣೆ ವಿರೋಧಿಸಿ ಪರ್ಸೋಡಿ ಕಲಾನ್ ಗ್ರಾಮದಲ್ಲಿ ಪ್ರತಿಭಟನೆ

ಛತ್ತೀಸ್‌ಗಢದ ಸೌತ್ ಈಸ್ಟರ್ನ್ ಕೋಲ್‌ಫೀಲ್ಡ್ಸ್ ಲಿಮಿಟೆಡ್‌ನ (ಎಸ್‌ಇಸಿಎಲ್‌) ಅಮೇರಾ ಕಲ್ಲಿದ್ದಲು ಗಣಿಗಾರಿಕೆ ವಿಸ್ತರಣೆ ವಿರೋಧಿಸಿ ಡಿ.3 ರಂದು ಅಂಬಿಕಾಪುರದ ಪರ್ಸೋಡಿ ಕಲಾನ್ ಗ್ರಾಮದಲ್ಲಿ ಪ್ರತಿಭಟನೆ ಭುಗಿಲೆದ್ದಿದೆ. ಪ್ರತಿಭಟನೆ ಸಂದರ್ಭದಲ್ಲಿ ಪೊಲೀಸರ ಮೇಲೆ ಗ್ರಾಮಸ್ಥರು...

ಗಂಟೆಗಟ್ಟಲೆ ಇಂಡಿಗೋ ವಿಮಾನ ವಿಳಂಬ: ‘ನನ್ನ ಮಗಳಿಗೆ ಸ್ಯಾನಿಟರಿ ಪ್ಯಾಡ್‌ ಕೊಡಿ..’ ಎಂದು ಬೇಡಿಕೊಂಡ ತಂದೆ

ದೇಶಾದ್ಯಂತ ಇಂಡಿಗೋ ಪ್ರಯಾಣಿಕರು ಭಾರಿ ಅನಾನುಕೂಲತೆಯನ್ನು ಎದುರಿಸುತ್ತಿದ್ದಾರೆ. ಏಕೆಂದರೆ, ವಿಮಾನಯಾನ ಸಂಸ್ಥೆಯ ವಿಳಂಬ ಮತ್ತು ರದ್ದತಿ ನಿರ್ಧಾರವು ಸತತ ನಾಲ್ಕನೇ ದಿನವೂ (ಡಿ. 5) ಮುಂದುವರೆದಿದೆ. ಅವ್ಯವಸ್ಥೆಯ ನಡುವೆಯೇ, ವಿಮಾನ ನಿಲ್ದಾಣದಿಂದ ಬಂದ...

ರಷ್ಯಾ-ಉಕ್ರೇನ್ ಯುದ್ಧ ವಿಚಾರದಲ್ಲಿ ಭಾರತ ತಟಸ್ಥವಾಗಿಲ್ಲ, ಶಾಂತಿಯ ಪರವಾಗಿದೆ: ಪುಟಿನ್‌ ಜೊತೆಗಿನ ದ್ವಿಪಕ್ಷೀಯ ಮಾತುಕತೆ ವೇಳೆ ಮೋದಿ ಹೇಳಿಕೆ

ನವದೆಹಲಿ: ರಷ್ಯಾ-ಉಕ್ರೇನ್ ಯುದ್ಧ ವಿಚಾರದಲ್ಲಿ ಭಾರತ ತಟಸ್ಥವಾಗಿಲ್ಲ. ಶಾಂತಿಯ ಪರವಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ ಹೇಳಿದ್ದಾರೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಎರಡು ದಿನಗಳ ಭೇಟಿಗೆಂದು ಭಾರತಕ್ಕೆ ಆಗಮಿಸಿದ್ದು,...

ಮನೆ ಕಟ್ಟಲು, ವಾಹನ ಖರೀದಿಸಲು ಇದು ಸುಸಮಯ: ರೆಪೊ ದರ ಕಡಿತಗೊಳಿಸಿದ ಆರ್.ಬಿ.ಐ

ಡಿಸೆಂಬರ್ 05, ಶುಕ್ರವಾರದಂದು ನಡೆದ ಹಣಕಾಸು ನೀತಿ ಸಭೆಯಲ್ಲಿ (MPC) ಭಾರತೀಯ ರಿಸರ್ವ್ ಬ್ಯಾಂಕ್ (RBI) ರೆಪೊ ದರವನ್ನು 25 ಬೇಸಿಸ್ ಪಾಯಿಂಟ್‌ಗಳಷ್ಟು ಕಡಿತಗೊಳಿಸಿದೆ. ಇಂದಿನ ಕಡಿತದ ನಂತರ, ಕೇಂದ್ರ ಬ್ಯಾಂಕ್ ಈ...

ಉತ್ತರ ಪ್ರದೇಶ| ದಲಿತ ಯುವಕನ ಮೇಲೆ ಹಲ್ಲೆ; ಬಂದೂಕು ತೋರಿಸಿ ವಿವಸ್ತ್ರಗೊಳಿಸಿದ ಗುಂಪು

ಸಿಗರೇಟ್ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಗುಂಪೊಂದು ದಲಿತ ಯುವಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ವರದಿಯಾಗಿದೆ. ಗುಂಪು ದಲಿತ ಯುವಕನನ್ನು ಚಪ್ಪಲಿಯಿಂದ ಹೊಡೆದು, ಮುಷ್ಟಿ, ಕಾಲು ಮತ್ತು...