Homeಮುಖಪುಟಸಿಬಿಐ, ಆಬಿಐ ಸ್ವಾಯುತ್ತತೆ ಹಾಳು ಮಾಡಿದಾಯ್ತು. ಈಗ ದತ್ತಾಂಶ ವಿಶ್ಲೇಷಕ ಸಂಸ್ಥೆಗಳ ಮೇಲೆ ಮೋದಿ ಕಣ್ಣು

ಸಿಬಿಐ, ಆಬಿಐ ಸ್ವಾಯುತ್ತತೆ ಹಾಳು ಮಾಡಿದಾಯ್ತು. ಈಗ ದತ್ತಾಂಶ ವಿಶ್ಲೇಷಕ ಸಂಸ್ಥೆಗಳ ಮೇಲೆ ಮೋದಿ ಕಣ್ಣು

- Advertisement -
- Advertisement -

ಅನುವಾದ – ದಿನೇಶ್ ಕೆ.ಎನ್ |

ವಾಸ್ತವ ಅಂಕಿ ಅಂಶ ಕೊಡದೆ, ದತ್ತಾಂಶ ತಿದ್ದುಪಡಿ ಮಾಡಲು ಮುಂದಾದ ಮೋದಿ ಸರ್ಕಾರ

ಅಂಕಿ ಅಂಶ ವಿಶ್ಲೇಷಕ ಸಂಸ್ಥೆಗಳ ಮೇಲೆ ಮೋದಿ ಸರ್ಕಾರವು ರಾಜಕೀಯ ಹಸ್ತಕ್ಷೇಪ ಮಾಡುತ್ತಿರುವುದನ್ನು ವಿರೋಧಿಸಿ, ಅವುಗಳ ಸಾಂಸ್ಥಿಕ ಸ್ವಾತಂತ್ರ್ಯವನ್ನು ಮರುಸ್ಥಾಪಿಸುವಂತೆ ಒತ್ತಾಯಿಸಿ ಜಗತ್ತಿನ 108 ಅರ್ಥಶಾಸ್ತ್ರಜ್ಞರು, ಸಾಮಾಜಿಕ ವಿಜ್ಞಾನಿಗಳು ದನಿ ಎತ್ತಿದ್ದಾರೆ. ಜಿಡಿಪಿ ದರ ಪರಿಕ್ಷರಣೆ ಮತ್ತು ಎನ್.ಎಸ್.ಎಸ್.ಓ ಡಾಟಾ ತಿದ್ದುಪಡಿ ವಿವಾದದ ಹಿನ್ನೆಲೆಯಲ್ಲಿ ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹಲವು ಆಯಾಮಗಲ್ಲಿ ಆರ್ಥಿಕ ಮತ್ತು ಸಾಮಾಜಿಕ ಮಾನದಂಡಗಳ ಆಧಾರದಲ್ಲಿ ಸಮಗ್ರ, ನಂಬಿಕಾರ್ಹವಾದ ಮಾಹಿತಿ ಒದಗಿಸುವ ಕಾರಣಕ್ಕಾಗಿಯೇ ಭಾರತೀಯ ಸಾಂಖ್ಯಿಕ ಸಂಸ್ಥೆಗಳು ದೊಡ್ಡಮಟ್ಟದ ಖ್ಯಾತಿಯನ್ನು ಪಡೆದಿದ್ದವು. ಈ ಹಿಂದೆ ಕೆಲವೊಮ್ಮೆ ಅವರ ಅಂದಾಜುಗಳ ಗುಣಮಟ್ಟದಲ್ಲಿ ಟೀಕೆಗಳು ಬಂದಿದ್ದರೂ, ನಿರ್ಣಯ ತಗೆದುಕೊಳ್ಳುವಾಗ ರಾಜಕೀಯ ಹಸ್ತಕ್ಷೇಪದ ಆರೋಪಗಳು ಕೇಳಿಬಂದಿರಲಿಲ್ಲ ಎಂದು ಜಂಟಿ ಹೇಳಿಕೆಯಲ್ಲಿ ಉಲ್ಲೇಖಿಸಿದ್ದಾರೆ.

ತಮಗೆ ಅನಾನುಕೂಲವಾಗಲಿದೆ ಎಂಬ ಕಾರಣಕ್ಕಾಗಿಯೇ ಡಾಟಾವನ್ನು ತಡೆಯಿಡಿಯುವ/ನಿಗ್ರಹಿಸುವ ಪ್ರವೃತ್ತಿಯನ್ನು ವಿರೋಧಿಸಬೇಕಿದೆ. ಜೊತೆಗೆ ಸಮಗ್ರತೆಯಿಂದ ಎಲ್ಲಾ ಮಾಹಿತಿಗಳು ಸಾರ್ವಜನಿಕರಿಗೆ ಸುಲಭವಾಗಿ ಸಿಗುವ ರೀತಿಯಲ್ಲಿ ಸಾರ್ವಜನಿಕ ಸಾಂಖ್ಯಿಕ ಸಂಸ್ಥೆಗಳಿಗೆ ಸ್ವಾತಂತ್ರ್ಯ ಇರಬೇಕೆಂದು ಸರ್ಕಾರವನ್ನು ಒತ್ತಾಯಿಸಲು ವೃತ್ತಿಪರ ಅರ್ಥಶಾಸ್ತ್ರಜ್ಞರು, ಸಂಖ್ಯಾತಜ್ಞರು ಮತ್ತು ಸ್ವತಂತ್ರ ಸಂಶೋಧಕರು ಒಟ್ಟಾಗಿ ದನಿ ಎತ್ತಬೇಕೆಂದು ಮನವಿ ಮಾಡಿದ್ದಾರೆ.

2016-17 ರ ಅನಾಣ್ಯೀಕರಗೊಂಡ ವರ್ಷದಲ್ಲಿ ಸಿಎಸ್‍ಓ( ಕೇಂದ್ರೀಯ ಅಂಕಿಅಂಶಗಳ ಕಛೇರಿ) ಜಿಡಿಪಿ ಬೆಳವಣಿಗೆ ದರವನ್ನು 1.1% ರಷ್ಟು ಹೆಚ್ಚಳ ಮಾಡುವ ಮೂಲಕ 8.2% ರಷ್ಟು ಸಾಧಿಸಲಾಗಿದ್ದು ಈ ದಶಕದಲ್ಲೇ ಹೆಚ್ಚಿನಷ್ಟು ಬೆಳವಣಿಗೆ ಆಗಿದೆ ಎಂದು ಹೇಳಿತ್ತು. ಆದರೆ ಜಗತ್ತಿನ ಹಲವು ಅರ್ಥಶಾಸ್ತ್ರಜ್ಞರು ಇದಕ್ಕೆ ದಾಖಲೆ ಸಮೇತ ಭಿನ್ನಮತ ವ್ಯಕ್ತಪಡಿಸಿದ್ದರು. ಅದೇ ರೀತಿಯಲ್ಲಿ ಎನ್‍ಎಸ್‍ಎಸ್‍ಓ ನಡೆಸುವ ಆವರ್ತಕ ಕಾರ್ಮಿಕ ಬಲ ಸಮೀಕ್ಷೆಯನ್ನು ನಿಷ್ಕ್ರಿಯಗೊಳಿಸಿದ್ದಲ್ಲದೇ 2017-18ರ ಸಾಲಿನ ವರದಿಯನ್ನು ಸಹ ಸರ್ಕಾರ ತಡೆಹಿಡಿದಿದೆ. ಹಿನ್ನೆಲೆಯಲ್ಲಿ ರಾಷ್ಟ್ರೀಯ ಅಂಕಿಅಂಶಗಳ ಆಯೋಗದ ಅಧ್ಯಕ್ಷರಾಗಿದ್ದ ಪಿ.ಸಿ ಮೋಹನನ್ ಮತ್ತು ಜೆ.ವಿ ಮೀನಾಕ್ಷಿರವರು ರಾಜೀನಾಮೆ ನೀಡಿದ್ದು ದೊಡ್ಡ ಸುದ್ದಿಯಾಗಿತ್ತು.

ದೇಶದ ಒಳಗಿನ ವಿಷಯಗಳ ವಿಷಯದಲ್ಲಿ ತಲೆಹಾಕಿ ಮೋದಿ ಸ್ವಾಯುತ್ತತೆಯನ್ನು, ದೇಶದ ಸ್ವಾಸ್ಥ್ಯವನ್ನು ಹಾಳು ಮಾಡಿದ್ದಲ್ಲದೇ ಈಗ ಅಂಕಿ ಅಂಶಗಳ ವಿಚಾರಕ್ಕೂ ಕೈ ಹಾಕಿ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತದ ಮಾನ ಹರಾಜಾಕಲು ಮುಂದಾಗಿದ್ದಾರೆ. ಈಗ ಭಾರತದ ಅಪಾಯಕಾರಿ ಬೆಳವಣಿಗೆಗಳ ವಿರುದ್ಧದ ಜಂಟಿ ಹೇಳಿಕೆ ಹೊರಡಿಸಿರುವ ಅರ್ಥಶಾಸ್ತ್ರಜ್ಞರಲ್ಲಿ ಐಐಎಂ-ಎ ನ ರಾಕೇಶ್ ಬಸಂತ್, ಮೆಸಾಚುಯೇಟ್ಸ್ ವಿ.ವಿಯ ಜೇಮ್ಸ್ ಬಾಯ್ಸೆ, ಹಾರ್ವಡ್ ವಿ.ವಿಯ ಎಮಿಲಿ ಬ್ರೆಜ, ದೆಹಲಿ ವಿ.ವಿ ಸತೀಶ್ ದೇಶಪಾಂಡೆ, ಯುನಿವರ್ಸಿಟ್ ಆಫ್ ಬ್ರಿಟಿಷ್ ಕೊಲಂಬಿಯಾದ ಪೇಟ್ರೀಕ್ ಫ್ರಾನ್ಸಿಸ್, ಮುಂಬೈನ ಟಿಸ್ಸ್‍ನ ಆರ್ ರಾಮ್‍ಕುಮಾರ್, ಐಐಎಂ-ಬಿಯ ಹೇಮಾ ಸ್ವಾಮಿನಾಥನ್ ಮತ್ತು ಜೆ.ಎನ್.ಯುನ ರೋಹಿತ್ ಅಜಾದ್‍ರವರು ಸಹಿ ಹಾಕಿದ ಪ್ರಮುಖರಾಗಿದ್ದಾರೆ.

ಸುಪ್ರೀಂ ಕೋರ್ಟ್‍ನ ಜಡ್ಜ್‍ಗಳು ಬಂದು ದೇಶ ಅಪಾಯದಲ್ಲಿದೆ ಎಂದು ಪತ್ರಿಕಾಗೋಷ್ಠಿ ನಡೆಸಿದರು. ಸಿಬಿಐ ಅಧಿಕಾರಿಗಳು ರಾಜಿನಾಮೇ ಕೊಟ್ಟರು. ಆರ್‍ಬಿಐ ತನ್ನ ಅನುಮತಿ ನೀಡದೆಯೂ ಸಹ ಮೋದಿ ನೋಟು ರದ್ಧತಿ ಘೋಷಿಸಿದರು. ಈಗ ಅರ್ಥಶಾಸ್ತ್ರಜ್ಞರು ಮೋದಿ ಆಡಳಿತದಲ್ಲಿ ಎಲ್ಲವೂ ಸರಿಇಲ್ಲ ಎನ್ನುತ್ತಿದ್ದಾರೆ ಮಾತ್ರವಲ್ಲ ಇದರ ವಿರುದ್ಧ ಪ್ರತಿಭಟಿಸುವಂತೆ ಕರೆ ನೀಡುತ್ತಿದ್ದಾರೆ ಅಂದರೆ ನೀವೇ ಅರ್ಥ ಮಾಡಿಕೊಳ್ಳಿ ದೇಶದ ಪರಿಸ್ಥಿತಿಯನ್ನು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...