Homeಮುಖಪುಟಸಿಬಿಐ, ಆಬಿಐ ಸ್ವಾಯುತ್ತತೆ ಹಾಳು ಮಾಡಿದಾಯ್ತು. ಈಗ ದತ್ತಾಂಶ ವಿಶ್ಲೇಷಕ ಸಂಸ್ಥೆಗಳ ಮೇಲೆ ಮೋದಿ ಕಣ್ಣು

ಸಿಬಿಐ, ಆಬಿಐ ಸ್ವಾಯುತ್ತತೆ ಹಾಳು ಮಾಡಿದಾಯ್ತು. ಈಗ ದತ್ತಾಂಶ ವಿಶ್ಲೇಷಕ ಸಂಸ್ಥೆಗಳ ಮೇಲೆ ಮೋದಿ ಕಣ್ಣು

- Advertisement -
- Advertisement -

ಅನುವಾದ – ದಿನೇಶ್ ಕೆ.ಎನ್ |

ವಾಸ್ತವ ಅಂಕಿ ಅಂಶ ಕೊಡದೆ, ದತ್ತಾಂಶ ತಿದ್ದುಪಡಿ ಮಾಡಲು ಮುಂದಾದ ಮೋದಿ ಸರ್ಕಾರ

ಅಂಕಿ ಅಂಶ ವಿಶ್ಲೇಷಕ ಸಂಸ್ಥೆಗಳ ಮೇಲೆ ಮೋದಿ ಸರ್ಕಾರವು ರಾಜಕೀಯ ಹಸ್ತಕ್ಷೇಪ ಮಾಡುತ್ತಿರುವುದನ್ನು ವಿರೋಧಿಸಿ, ಅವುಗಳ ಸಾಂಸ್ಥಿಕ ಸ್ವಾತಂತ್ರ್ಯವನ್ನು ಮರುಸ್ಥಾಪಿಸುವಂತೆ ಒತ್ತಾಯಿಸಿ ಜಗತ್ತಿನ 108 ಅರ್ಥಶಾಸ್ತ್ರಜ್ಞರು, ಸಾಮಾಜಿಕ ವಿಜ್ಞಾನಿಗಳು ದನಿ ಎತ್ತಿದ್ದಾರೆ. ಜಿಡಿಪಿ ದರ ಪರಿಕ್ಷರಣೆ ಮತ್ತು ಎನ್.ಎಸ್.ಎಸ್.ಓ ಡಾಟಾ ತಿದ್ದುಪಡಿ ವಿವಾದದ ಹಿನ್ನೆಲೆಯಲ್ಲಿ ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹಲವು ಆಯಾಮಗಲ್ಲಿ ಆರ್ಥಿಕ ಮತ್ತು ಸಾಮಾಜಿಕ ಮಾನದಂಡಗಳ ಆಧಾರದಲ್ಲಿ ಸಮಗ್ರ, ನಂಬಿಕಾರ್ಹವಾದ ಮಾಹಿತಿ ಒದಗಿಸುವ ಕಾರಣಕ್ಕಾಗಿಯೇ ಭಾರತೀಯ ಸಾಂಖ್ಯಿಕ ಸಂಸ್ಥೆಗಳು ದೊಡ್ಡಮಟ್ಟದ ಖ್ಯಾತಿಯನ್ನು ಪಡೆದಿದ್ದವು. ಈ ಹಿಂದೆ ಕೆಲವೊಮ್ಮೆ ಅವರ ಅಂದಾಜುಗಳ ಗುಣಮಟ್ಟದಲ್ಲಿ ಟೀಕೆಗಳು ಬಂದಿದ್ದರೂ, ನಿರ್ಣಯ ತಗೆದುಕೊಳ್ಳುವಾಗ ರಾಜಕೀಯ ಹಸ್ತಕ್ಷೇಪದ ಆರೋಪಗಳು ಕೇಳಿಬಂದಿರಲಿಲ್ಲ ಎಂದು ಜಂಟಿ ಹೇಳಿಕೆಯಲ್ಲಿ ಉಲ್ಲೇಖಿಸಿದ್ದಾರೆ.

ತಮಗೆ ಅನಾನುಕೂಲವಾಗಲಿದೆ ಎಂಬ ಕಾರಣಕ್ಕಾಗಿಯೇ ಡಾಟಾವನ್ನು ತಡೆಯಿಡಿಯುವ/ನಿಗ್ರಹಿಸುವ ಪ್ರವೃತ್ತಿಯನ್ನು ವಿರೋಧಿಸಬೇಕಿದೆ. ಜೊತೆಗೆ ಸಮಗ್ರತೆಯಿಂದ ಎಲ್ಲಾ ಮಾಹಿತಿಗಳು ಸಾರ್ವಜನಿಕರಿಗೆ ಸುಲಭವಾಗಿ ಸಿಗುವ ರೀತಿಯಲ್ಲಿ ಸಾರ್ವಜನಿಕ ಸಾಂಖ್ಯಿಕ ಸಂಸ್ಥೆಗಳಿಗೆ ಸ್ವಾತಂತ್ರ್ಯ ಇರಬೇಕೆಂದು ಸರ್ಕಾರವನ್ನು ಒತ್ತಾಯಿಸಲು ವೃತ್ತಿಪರ ಅರ್ಥಶಾಸ್ತ್ರಜ್ಞರು, ಸಂಖ್ಯಾತಜ್ಞರು ಮತ್ತು ಸ್ವತಂತ್ರ ಸಂಶೋಧಕರು ಒಟ್ಟಾಗಿ ದನಿ ಎತ್ತಬೇಕೆಂದು ಮನವಿ ಮಾಡಿದ್ದಾರೆ.

2016-17 ರ ಅನಾಣ್ಯೀಕರಗೊಂಡ ವರ್ಷದಲ್ಲಿ ಸಿಎಸ್‍ಓ( ಕೇಂದ್ರೀಯ ಅಂಕಿಅಂಶಗಳ ಕಛೇರಿ) ಜಿಡಿಪಿ ಬೆಳವಣಿಗೆ ದರವನ್ನು 1.1% ರಷ್ಟು ಹೆಚ್ಚಳ ಮಾಡುವ ಮೂಲಕ 8.2% ರಷ್ಟು ಸಾಧಿಸಲಾಗಿದ್ದು ಈ ದಶಕದಲ್ಲೇ ಹೆಚ್ಚಿನಷ್ಟು ಬೆಳವಣಿಗೆ ಆಗಿದೆ ಎಂದು ಹೇಳಿತ್ತು. ಆದರೆ ಜಗತ್ತಿನ ಹಲವು ಅರ್ಥಶಾಸ್ತ್ರಜ್ಞರು ಇದಕ್ಕೆ ದಾಖಲೆ ಸಮೇತ ಭಿನ್ನಮತ ವ್ಯಕ್ತಪಡಿಸಿದ್ದರು. ಅದೇ ರೀತಿಯಲ್ಲಿ ಎನ್‍ಎಸ್‍ಎಸ್‍ಓ ನಡೆಸುವ ಆವರ್ತಕ ಕಾರ್ಮಿಕ ಬಲ ಸಮೀಕ್ಷೆಯನ್ನು ನಿಷ್ಕ್ರಿಯಗೊಳಿಸಿದ್ದಲ್ಲದೇ 2017-18ರ ಸಾಲಿನ ವರದಿಯನ್ನು ಸಹ ಸರ್ಕಾರ ತಡೆಹಿಡಿದಿದೆ. ಹಿನ್ನೆಲೆಯಲ್ಲಿ ರಾಷ್ಟ್ರೀಯ ಅಂಕಿಅಂಶಗಳ ಆಯೋಗದ ಅಧ್ಯಕ್ಷರಾಗಿದ್ದ ಪಿ.ಸಿ ಮೋಹನನ್ ಮತ್ತು ಜೆ.ವಿ ಮೀನಾಕ್ಷಿರವರು ರಾಜೀನಾಮೆ ನೀಡಿದ್ದು ದೊಡ್ಡ ಸುದ್ದಿಯಾಗಿತ್ತು.

ದೇಶದ ಒಳಗಿನ ವಿಷಯಗಳ ವಿಷಯದಲ್ಲಿ ತಲೆಹಾಕಿ ಮೋದಿ ಸ್ವಾಯುತ್ತತೆಯನ್ನು, ದೇಶದ ಸ್ವಾಸ್ಥ್ಯವನ್ನು ಹಾಳು ಮಾಡಿದ್ದಲ್ಲದೇ ಈಗ ಅಂಕಿ ಅಂಶಗಳ ವಿಚಾರಕ್ಕೂ ಕೈ ಹಾಕಿ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತದ ಮಾನ ಹರಾಜಾಕಲು ಮುಂದಾಗಿದ್ದಾರೆ. ಈಗ ಭಾರತದ ಅಪಾಯಕಾರಿ ಬೆಳವಣಿಗೆಗಳ ವಿರುದ್ಧದ ಜಂಟಿ ಹೇಳಿಕೆ ಹೊರಡಿಸಿರುವ ಅರ್ಥಶಾಸ್ತ್ರಜ್ಞರಲ್ಲಿ ಐಐಎಂ-ಎ ನ ರಾಕೇಶ್ ಬಸಂತ್, ಮೆಸಾಚುಯೇಟ್ಸ್ ವಿ.ವಿಯ ಜೇಮ್ಸ್ ಬಾಯ್ಸೆ, ಹಾರ್ವಡ್ ವಿ.ವಿಯ ಎಮಿಲಿ ಬ್ರೆಜ, ದೆಹಲಿ ವಿ.ವಿ ಸತೀಶ್ ದೇಶಪಾಂಡೆ, ಯುನಿವರ್ಸಿಟ್ ಆಫ್ ಬ್ರಿಟಿಷ್ ಕೊಲಂಬಿಯಾದ ಪೇಟ್ರೀಕ್ ಫ್ರಾನ್ಸಿಸ್, ಮುಂಬೈನ ಟಿಸ್ಸ್‍ನ ಆರ್ ರಾಮ್‍ಕುಮಾರ್, ಐಐಎಂ-ಬಿಯ ಹೇಮಾ ಸ್ವಾಮಿನಾಥನ್ ಮತ್ತು ಜೆ.ಎನ್.ಯುನ ರೋಹಿತ್ ಅಜಾದ್‍ರವರು ಸಹಿ ಹಾಕಿದ ಪ್ರಮುಖರಾಗಿದ್ದಾರೆ.

ಸುಪ್ರೀಂ ಕೋರ್ಟ್‍ನ ಜಡ್ಜ್‍ಗಳು ಬಂದು ದೇಶ ಅಪಾಯದಲ್ಲಿದೆ ಎಂದು ಪತ್ರಿಕಾಗೋಷ್ಠಿ ನಡೆಸಿದರು. ಸಿಬಿಐ ಅಧಿಕಾರಿಗಳು ರಾಜಿನಾಮೇ ಕೊಟ್ಟರು. ಆರ್‍ಬಿಐ ತನ್ನ ಅನುಮತಿ ನೀಡದೆಯೂ ಸಹ ಮೋದಿ ನೋಟು ರದ್ಧತಿ ಘೋಷಿಸಿದರು. ಈಗ ಅರ್ಥಶಾಸ್ತ್ರಜ್ಞರು ಮೋದಿ ಆಡಳಿತದಲ್ಲಿ ಎಲ್ಲವೂ ಸರಿಇಲ್ಲ ಎನ್ನುತ್ತಿದ್ದಾರೆ ಮಾತ್ರವಲ್ಲ ಇದರ ವಿರುದ್ಧ ಪ್ರತಿಭಟಿಸುವಂತೆ ಕರೆ ನೀಡುತ್ತಿದ್ದಾರೆ ಅಂದರೆ ನೀವೇ ಅರ್ಥ ಮಾಡಿಕೊಳ್ಳಿ ದೇಶದ ಪರಿಸ್ಥಿತಿಯನ್ನು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...