Homeಮುಖಪುಟಸೀಟು ಹಂಚಿಕೆ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ: ಸುಪ್ರಿಯಾ ಸುಳೆ

ಸೀಟು ಹಂಚಿಕೆ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ: ಸುಪ್ರಿಯಾ ಸುಳೆ

- Advertisement -
- Advertisement -

2024ರ ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆ ವಿಚಾರದಲ್ಲಿ ‘ಇಂಡಿಯಾ’ ಒಕ್ಕೂಟದ ಪಕ್ಷಗಳ ನಡುವೆ ಯಾವುದೇ ಆಂತರಿಕ ಗೊಂದಲಗಳಿಲ್ಲ ಎಂದು ಸೋಮವಾರ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಸಂಸದೆ ಸುಪ್ರಿಯಾ ಸುಳೆ ಹೇಳಿದರು.

ಠಾಕ್ರೆ ಮತ್ತು ಶರದ್ ಪವಾರ್, ಸೋನಿಯಾ ಗಾಂಧಿ, ಉದ್ಧವ್ ನಡುವಿನ ಸಭೆಯಲ್ಲಿ ಸೀಟು ಹಂಚಿಕೆ ಕುರಿತು ಹಲವು ವಿಷಯಗಳನ್ನು ಸ್ಪಷ್ಟಪಡಿಸಿದ್ದಾರೆ ಎಂದು ಹೇಳಿದ್ದಾರೆ.

ಸೀಟು ಹಂಚಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮತ್ತು ಶಿವಸೇನೆ (ಯುಬಿಟಿ) ನಡುವಿನ ಹಗ್ಗ ಜಗ್ಗಾಟ ನಡೆಯುತ್ತಿದೆ ಎಂಬ ಸುದ್ದಿಗೆ ಸುಪ್ರಿಯಾ ಸ್ಪಷ್ಟನೆ ನೀಡಿದ್ದಾರೆ.

‘ಆಂತರಿಕವಾಗಿ ಯಾವುದೇ ಗೊಂದಲವಿಲ್ಲ. 15 ದಿನಗಳ ಹಿಂದೆ ದೆಹಲಿಯಲ್ಲಿ ಸೋನಿಯಾ ಗಾಂಧಿ, ಉದ್ಧವ್ ಠಾಕ್ರೆ ಮತ್ತು ಶರದ್ ಪವಾರ್ ನಡುವೆ ಸಭೆ ನಡೆದಿತ್ತು. ಆ ಸಭೆಯಲ್ಲಿ ಸೀಟು ಹಂಚಿಕೆ ಕುರಿತು ಹಲವು ವಿಷಯಗಳಿಗೆ ಸ್ಪಷ್ಟನೆ ಸಿಕ್ಕಿದೆ. ಮುಂದಿನ 8ರಂದು ಅಧಿಕೃತವಾಗಿ ಮಾಹಿತಿ ಪ್ರಕಟಿಸಲಾಗುವುದು. ನಾವು ಮೈತ್ರಿ ಮಾಡಿಕೊಂಡಿರುವುದರಿಂದ ಸೀಟು ಹಂಚಿಕೆ ಸೂತ್ರದಲ್ಲಿ ಏರಿಳಿತಗಳಿರುತ್ತವೆ. ಹಾಗಾಗಿ, ಇಂತ ಗೊಂದಲ ಮೂಡುತ್ತಿವೆ’ ಎಂದರು.

ಇಂಡಿಯಾ ಒಕ್ಕೂಟದಲ್ಲಿ ಪ್ರಕಾಶ್ ಅಂಬೇಡ್ಕರ್ ಅವರ ಪಾತ್ರದ ಬಗ್ಗೆ ಕೇಳಿದಾಗ, ‘ಅವರು ಖಂಡಿತವಾಗಿಯೂ ಮೈತ್ರಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ’ ಎಂದು ಹೇಳಿದರು.

ಇದಕ್ಕೂ ಮೊದಲು, ಡಾ. ಬಿ.ಆರ್. ಅಂಬೇಡ್ಕರ್ ಅವರ ಮೊಮ್ಮಗ, ಮಾಜಿ ಲೋಕಸಭಾ ಸಂಸದ ಪ್ರಕಾಶ್ ಅಂಬೇಡ್ಕರ್ ಅವರು 2024 ರಲ್ಲಿ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಇಂಡಿಯಾ ಮೈತ್ರಿಕೂಟಕ್ಕೆ ಸೇರುವ ಆಸಕ್ತಿಯನ್ನು ಪುನರುಚ್ಚರಿಸಿದರು.

ವಿಬಿಎ (ವಂಚಿತ್ ಬಹುಜನ ಆಘಾಡಿ) ಅಧ್ಯಕ್ಷ ಪ್ರಕಾಶ್ ಅಂಬೇಡ್ಕರ್ ಅವರು ಮಲ್ಲಿಕಾರ್ಜುನ ಖರ್ಗೆ, ಶರದ್ ಪವಾರ್ ಮತ್ತು ಉದ್ಧವ್ ಠಾಕ್ರೆ ಅವರಿಗೆ ಬರೆದ ಪತ್ರದಲ್ಲಿ ಪ್ರತಿಯೊಂದು ಪಕ್ಷಕ್ಕೂ 12 ಸ್ಥಾನಗಳನ್ನು ನೀಡುವ ತಮ್ಮ ಪ್ರಸ್ತಾವಿತ ಸೂತ್ರವನ್ನು ಅಳವಡಿಸಿಕೊಳ್ಳುವ ಅಗತ್ಯವನ್ನು ಒತ್ತಿ ಹೇಳಿದರು.

ಶಿವಸೇನಾ (ಯುಬಿಟಿ) ಸಂಸದ ಸಂಜಯ್ ರಾವುತ್ ಮಾತನಾಡಿ, ‘ಕಾಂಗ್ರೆಸ್ ಶೂನ್ಯದಿಂದ ಪ್ರಾರಂಭವಾಗಬೇಕು ಎಂದು ನಾನು ಹೇಳಿದ್ದೆ, ಕಾಂಗ್ರೆಸ್ ಶೂನ್ಯ ಎಂದು ಹೇಳಿಲ್ಲ. ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಒಬ್ಬನೇ ಒಬ್ಬ ಸಂಸದನನ್ನು ಹೊಂದಿಲ್ಲ. ನಾವು 18 ಸಂಸದರನ್ನು ಹೊಂದಿದ್ದೇವೆ. ಆದರೆ, ಕೆಲವರು ಬಿಟ್ಟು ಹೋಗಿದ್ದಾರೆ, ನಾವೂ ಕೆಲವರನ್ನು ಬಿಟ್ಟಿದ್ದೇವೆ. ನಮ್ಮ ಮೈತ್ರಿ ಕಾಂಗ್ರೆಸ್ ಜೊತೆಗಿದೆ ಮತ್ತು ಮಹಾ ವಿಕಾಸ್ ಅಘಾಡಿ ಸುಮಾರು 40 ಸ್ಥಾನಗಳನ್ನು ಗೆಲ್ಲುತ್ತದೆ. ಬಿಜೆಪಿ ಗೆಲ್ಲಲು ಇವಿಎಂಗಳು ಬೇಕು, ಅವರು ಏಕಾಂಗಿಯಾಗಿ ಗೆಲ್ಲಲು ಸಾಧ್ಯವಿಲ್ಲ’ ಎಂದರು.

ಆದರೆ, ಶಿವಸೇನೆಯ (ಯುಬಿಟಿ) ಬೇಡಿಕೆಗೆ ಪ್ರತ್ಯುತ್ತರ ನೀಡಿರುವ ಕಾಂಗ್ರೆಸ್ ಪಕ್ಷ, ಸೀಟು ಹಂಚಿಕೆ ಸಂಕೀರ್ಣ ವಿಷಯವಾಗಿದ್ದು, ಸುಲಭವಾಗಿ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ. ಇಂಡಿಯಾ ಬ್ಲಾಕ್‌ನಲ್ಲಿರುವ ಎಲ್ಲ ಪಕ್ಷಗಳು ಒಟ್ಟಾಗಿ ಹೋರಾಡಿ ಬಿಜೆಪಿಯನ್ನು ಸೋಲಿಸಬೇಕಾದರೆ, ನಾವು ಆಂತರಿಕ ಕಚ್ಚಾಟವನ್ನು ನಿಲ್ಲಿಸಬೇಕು. ಪತ್ರಿಕೆಯಿಂದ, ಶಿವಸೇನೆಯು 23 ಸ್ಥಾನಗಳಿಗೆ ಬೇಡಿಕೆ ಇಟ್ಟಿದೆ ಎಂದು ನನಗೆ ತಿಳಿದಿದೆ’ ಎಂದು ಕಾಂಗ್ರೆಸ್ ಮುಖಂಡ ಸಂಜಯ್ ನಿರುಪಮ್ ಹೇಳಿದ್ದಾರೆ.

ಇದನ್ನೂ ಓದಿ; ಅತ್ಯಾಚಾರ ಯತ್ನ ವಿಫಲ; 6 ವರ್ಷದ ಬಾಲಕಿಯನ್ನು ಕ್ರೂರವಾಗಿ ಹತ್ಯೆಗೈದ ಕಾವಲುಗಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...