Homeಕರ್ನಾಟಕಸುಪ್ರೀಂಕೋರ್ಟ್ ತೀರ್ಪಿನ ಪರಿಣಾಮವೇನು? ಸಾಧ್ಯತೆಗಳೇನು?

ಸುಪ್ರೀಂಕೋರ್ಟ್ ತೀರ್ಪಿನ ಪರಿಣಾಮವೇನು? ಸಾಧ್ಯತೆಗಳೇನು?

- Advertisement -
- Advertisement -

ಇದುವರೆಗೆ ಸ್ಪಷ್ಟವಾಗಿರುವಂತೆ ಶಾಸಕರ ರಾಜೀನಾಮೆ ವಿಚಾರದಲ್ಲಿ ಸುಪ್ರೀಂಕೋರ್ಟು ಈ ರೀತಿ ಹೇಳಿದೆ.

1. ರಾಜೀನಾಮೆ ಅಂಗೀಕಾರದ ವಿಚಾರದಲ್ಲಿ ಸ್ಪೀಕರ್ ತೀರ್ಮಾನವೇ ಅಂತಿಮ.

2. ಅವರಿಗೆ ಸಮಯ ನಿಗದಿ ಮಾಡುವುದಿಲ್ಲ.

3. ಸದನದಲ್ಲಿ ವಿಶ್ವಾಸಮತ ಯಾಚನೆ ನಾಳೆ ಮುಂದುವರೆಯಬಹುದು.

4. ರಾಜೀನಾಮೆ ನೀಡಿರುವ ಶಾಸಕರು ವಿಶ್ವಾಸಮತ ಯಾಚನೆಯಲ್ಲಿ ಭಾಗವಹಿಸಲೇಬೇಕೆಂದು ಒತ್ತಾಯಿಸುವಂತಿಲ್ಲ.

ಇದರ ಅರ್ಥ ಏನು?

1. ರಾಜೀನಾಮೆ ಅಂಗೀಕಾರ ಮಾಡುತ್ತೇನೆ/ಮಾಡುವುದಿಲ್ಲ ಎಂದು ಸ್ಪೀಕರ್ ಹೇಳಿದ ನಂತರವೂ ಸುಪ್ರೀಂಕೋಟು ಮಧ್ಯ ಪ್ರವೇಶ ಮಾಡುವುದಿಲ್ಲ ಎಂದೇನೂ ಇದರ ಅರ್ಥವಲ್ಲ. ಆದರೆ, ಇಂತಿಷ್ಟೇ ದಿನಗಳಲ್ಲಿ ಅಂಗೀಕರಿಸಿ ಎಂದೋ, ಈಗಲೇ ಅಂಗೀಕರಿಸಿ ಎಂದೋ ಸುಪ್ರೀಂಕೋರ್ಟು ಹೇಳಿಲ್ಲ. ತಾನು ಹೇಳಬಾರದು ಎಂಬ ಅರ್ಥವನ್ನು ಅದು ಹೊರಡಿಸಿದೆ.

2. ವಿಶ್ವಾಸಮತ ಯಾಚನೆ ನಾಳೆಯೇ ನಡೆಯಬೇಕೆಂದೂ ಸುಪ್ರೀಂಕೋರ್ಟು ಹೇಳಿಲ್ಲ.

3. ಸದರಿ ಶಾಸಕರು ಭಾಗವಹಿಸಲೇಬೇಕೆಂದು ಒತ್ತಾಯಿಸುವಂತಿಲ್ಲ ಎಂದ ಮೇಲೆ ವಿಪ್ ಅನ್ವಯವಾಗುವುದಿಲ್ಲ ಎಂದೇ ಆಗುತ್ತದೆ. ಇದು ವಿಪ್ ವಿಚಾರದಲ್ಲಿ ಹೊಸದೊಂದು ನಿಯಮಕ್ಕೆ ಅಥವಾ ನಿಯಮ ತಿದ್ದುಪಡಿಗೆ ದಾರಿ ಮಾಡಿಕೊಟ್ಟಿದೆ. ಇದು ಆಪರೇಷನ್ ಕಮಲ ಎಂಬ ಪಿಡುಗಿಗೆ ಮುಕ್ತ ಅವಕಾಶ ಕೊಡಲಿದೆ.

4. ಹಾಗಾಗಿ ನಾಳೆಯ ವಿಪ್ ಉಲ್ಲಂಘನೆಯ ಆಧಾರದ ಮೇಲೆ ಅನರ್ಹತೆ ವಿಷಯ ನಿರ್ಧಾರವಾಗುವುದಿಲ್ಲ.

ಇದರ ಪರಿಣಾಮವೇನು? ಸಾಮಾನ್ಯ ಸಂದರ್ಭದಲ್ಲಿ ಏನು ಸಾಧ್ಯತೆಗಳಿವೆ?

1. ನಾಳೆ ವಿಶ್ವಾಸಮತ ಯಾಚನೆ ಆರಂಭವಾಗುತ್ತದೆ, ಆದರೆ ಆ ಪ್ರಕ್ರಿಯೆ ನಾಳೆಯೇ ಮುಗಿದುಬಿಡುವುದಿಲ್ಲ.

2. ಈ ಮಧ್ಯೆ ಶಾಸಕರ ಅನರ್ಹತೆ ವಿಚಾರವನ್ನು ಸ್ಪೀಕರ್ ಕೈಗೆತ್ತಿಕೊಂಡು ಅವರನ್ನು ಅನರ್ಹಗೊಳಿಸಬಹುದು. ಇವರೆಲ್ಲರೂ ಗುಂಪುಗೂಡಿಯೇ ರಾಜೀನಾಮೆ ನೀಡಿ, ಗುಂಪಾಗಿಯೇ ಹೋಟೆಲ್‍ನಲ್ಲಿರುವುದು, ಬಿಜೆಪಿಯ ಜೊತೆ ಸಂಪರ್ಕದಲ್ಲಿರುವುದು, ಸರ್ಕಾರದ ಬಹುಮತ ಕುಸಿಯುವಂತೆ ಮಾಡಿ ಬಿಜೆಪಿ ಸರ್ಕಾರ ರಚಿಸಲು ಅನುವು ಮಾಡಿಕೊಡಲೇ ರಾಜೀನಾಮೆ ಕೊಟ್ಟಿರುವುದು ಸ್ಪಷ್ಟವಿರುವುದರಿಂದ ಅದೇ ಅನರ್ಹತೆಗೆ ದಾರಿ ಮಾಡಬಹುದು.

3. ಅದೇನೇ ಇದ್ದರೂ ಇಂದಲ್ಲಾ ನಾಳೆ ಸರ್ಕಾರದ ಬಹುಮತ ಕುಸಿಯುತ್ತದೆ. ಶಾಸಕರು ಅನರ್ಹರಾಗುತ್ತಾರೆ, ಇಲ್ಲವೇ ರಾಜೀನಾಮೆ ಅಂಗೀಕಾರವಾಗುತ್ತದೆ. ಇವೆಲ್ಲದರ ಲಾಭ ಬಿಜೆಪಿಗೆ ಆಗುತ್ತದೆ. ಏಕೆಂದರೆ ಅವರು ಸರ್ಕಾರ ರಚಿಸುತ್ತಾರೆ. ರಾಜೀನಾಮೆ ಕೊಟ್ಟಿರುವ ಎಲ್ಲಾ ಶಾಸಕರಿಗೂ ಪಕ್ಷದ ಟಿಕೆಟ್ ನೀಡಲೇಬೇಕೆಂದೂ ಇಲ್ಲ. ಉಪಚುನಾವಣೆಯಲ್ಲಿ 6 ಜನ ಶಾಸಕರು ಗೆದ್ದು ಬಂದರೂ ಪೂರ್ಣ ವಿಧಾನಸಭೆಯಲ್ಲೂ ಸರಳ ಬಹುಮತ ದೊರೆಯುತ್ತದೆ.

4. ಅನರ್ಹಗೊಳಿಸುವುದರಿಂದ ಶಾಸಕರ ರಾಜಕೀಯ ಬದುಕಿನಲ್ಲಿ ಕಪ್ಪು ಚುಕ್ಕೆ. ಆದರೆ, ಹಾಗೆಂದು ಅವರಾಗಲೀ ಮಾಧ್ಯಮಗಳಾಗಲೀ ಭಾವಿಸುವುದಿಲ್ಲವಾದ್ದರಿಂದ ಜನರೂ ಭಾವಿಸದಂತೆ ಮಾಡಲಾಗುತ್ತದೆ. ಭ್ರಷ್ಟಾಚಾರ ಇತ್ಯಾದಿಗಳ ಕಾರಣದಿಂದ ಅನರ್ಹಗೊಳ್ಳುವವರು 6 ವರ್ಷಗಳ ಕಾಲ ಸ್ಪರ್ಧಿಸದಂತೆ ನಿಯಮವಿದೆ. ಆದರೆ, ತಮಿಳುನಾಡಿನಲ್ಲಿ ಪಕ್ಷಾಂತರದ ಕಾರಣಕ್ಕಾಗಿ ಅನರ್ಹಗೊಂಡವರು ಮತ್ತೆ ಸ್ಪರ್ಧಿಸಬಹುದು ಎಂದು ಚುನಾವಣಾ ಆಯೋಗ ಹೇಳಿತ್ತು!

ಆಶ್ಚರ್ಯಕರ ಸಾಧ್ಯತೆಗಳು

1. ಕೆಲವು ಶಾಸಕರು ತಮ್ಮ ಮಾತೃಪಕ್ಷಗಳಿಗೆ ಮರಳಿ ಬರುವುದರ ಮೂಲಕ ಇನ್ನಷ್ಟು ಕಾಲ ಸಮ್ಮಿಶ್ರ ಸರ್ಕಾರ ಉಳಿದುಕೊಳ್ಳಬಹುದು.

2. ವಿಶ್ವಾಸಮತ ಯಾಚನೆಯನ್ನೇ ಅನಿರ್ದಿಷ್ಟಾವಧಿಗೆ ಮುಂದೂಡುವುದು. ಇದು ಬಿಜೆಪಿ ಮತ್ತು ಸಮ್ಮಿಶ್ರ ಪಕ್ಷಗಳ ನಡುವೆ ಮಾತ್ರವಲ್ಲದೇ, ರಾಜ್ಯಪಾಲರು ವರ್ಸಸ್ ಸ್ಪೀಕರ್ ಸಂಘರ್ಷಕ್ಕೂ ದಾರಿ ಮಾಡಿಕೊಡಬಹುದು, ಆಗ ಸುಪ್ರೀಂಕೋರ್ಟ್ ಸಹಾ ಮಧ್ಯಪ್ರವೇಶಿಸಬಹುದು.

3. ಈಗಲೇ ಕುಮಾರಸ್ವಾಮಿಯವರು ರಾಜೀನಾಮೆ ನೀಡಿ, ಬಿಜೆಪಿ ಸರ್ಕಾರಕ್ಕೆ ಅವಕಾಶ ಮಾಡಿಕೊಡುವುದು.

ಅದೇನೇ ಇದ್ದರೂ, ಅನೈತಿಕ ಕಾರಣಗಳಿಗಾಗಿ ರಾಜೀನಾಮೆ ನೀಡುವ ಮೂಲಕ (ಆಪರೇಷನ್ ಕಮಲ) ಬೇರೆ ಪಕ್ಷವನ್ನು ಸೇರುವುದಕ್ಕೆ ಸುಪ್ರೀಂಕೋರ್ಟಿನ ತೀರ್ಪಿನಿಂದ ಅವಕಾಶ ಸಿಕ್ಕಿದಂತಾಗಿದೆ. ಇದನ್ನು ಕೌಂಟರ್ ಮಾಡುವ ಬೇರೇನಾದರೂ ಅಸ್ತ್ರ ಸ್ಪೀಕರ್ ಬಳಿ ಇದೆಯೇ ನೋಡಬೇಕು. ಎಲ್ಲಕ್ಕಿಂತ ದುರಂತದ ವಿಚಾರವೆಂದರೆ ಮಾಧ್ಯಮಗಳು ಅನೈತಿಕ ರಾಜಕಾರಣದ ಪರವಾಗಿ ನಿಂತಿರುವುದು ಮತ್ತು ಜನಸಾಮಾನ್ಯರು ಮೂಕವಾಗಿರುವುದು. ಇದರಲ್ಲಿ ಏನಾದರೂ ಬದಲಾವಣೆಗಳು ಬರುತ್ತದಾ ಎಂಬುದನ್ನೂ ಕಾದು ನೋಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...