Homeಕರ್ನಾಟಕಸುಪ್ರೀಂಕೋರ್ಟ್ ತೀರ್ಪಿನ ಪರಿಣಾಮವೇನು? ಸಾಧ್ಯತೆಗಳೇನು?

ಸುಪ್ರೀಂಕೋರ್ಟ್ ತೀರ್ಪಿನ ಪರಿಣಾಮವೇನು? ಸಾಧ್ಯತೆಗಳೇನು?

- Advertisement -
- Advertisement -

ಇದುವರೆಗೆ ಸ್ಪಷ್ಟವಾಗಿರುವಂತೆ ಶಾಸಕರ ರಾಜೀನಾಮೆ ವಿಚಾರದಲ್ಲಿ ಸುಪ್ರೀಂಕೋರ್ಟು ಈ ರೀತಿ ಹೇಳಿದೆ.

1. ರಾಜೀನಾಮೆ ಅಂಗೀಕಾರದ ವಿಚಾರದಲ್ಲಿ ಸ್ಪೀಕರ್ ತೀರ್ಮಾನವೇ ಅಂತಿಮ.

2. ಅವರಿಗೆ ಸಮಯ ನಿಗದಿ ಮಾಡುವುದಿಲ್ಲ.

3. ಸದನದಲ್ಲಿ ವಿಶ್ವಾಸಮತ ಯಾಚನೆ ನಾಳೆ ಮುಂದುವರೆಯಬಹುದು.

4. ರಾಜೀನಾಮೆ ನೀಡಿರುವ ಶಾಸಕರು ವಿಶ್ವಾಸಮತ ಯಾಚನೆಯಲ್ಲಿ ಭಾಗವಹಿಸಲೇಬೇಕೆಂದು ಒತ್ತಾಯಿಸುವಂತಿಲ್ಲ.

ಇದರ ಅರ್ಥ ಏನು?

1. ರಾಜೀನಾಮೆ ಅಂಗೀಕಾರ ಮಾಡುತ್ತೇನೆ/ಮಾಡುವುದಿಲ್ಲ ಎಂದು ಸ್ಪೀಕರ್ ಹೇಳಿದ ನಂತರವೂ ಸುಪ್ರೀಂಕೋಟು ಮಧ್ಯ ಪ್ರವೇಶ ಮಾಡುವುದಿಲ್ಲ ಎಂದೇನೂ ಇದರ ಅರ್ಥವಲ್ಲ. ಆದರೆ, ಇಂತಿಷ್ಟೇ ದಿನಗಳಲ್ಲಿ ಅಂಗೀಕರಿಸಿ ಎಂದೋ, ಈಗಲೇ ಅಂಗೀಕರಿಸಿ ಎಂದೋ ಸುಪ್ರೀಂಕೋರ್ಟು ಹೇಳಿಲ್ಲ. ತಾನು ಹೇಳಬಾರದು ಎಂಬ ಅರ್ಥವನ್ನು ಅದು ಹೊರಡಿಸಿದೆ.

2. ವಿಶ್ವಾಸಮತ ಯಾಚನೆ ನಾಳೆಯೇ ನಡೆಯಬೇಕೆಂದೂ ಸುಪ್ರೀಂಕೋರ್ಟು ಹೇಳಿಲ್ಲ.

3. ಸದರಿ ಶಾಸಕರು ಭಾಗವಹಿಸಲೇಬೇಕೆಂದು ಒತ್ತಾಯಿಸುವಂತಿಲ್ಲ ಎಂದ ಮೇಲೆ ವಿಪ್ ಅನ್ವಯವಾಗುವುದಿಲ್ಲ ಎಂದೇ ಆಗುತ್ತದೆ. ಇದು ವಿಪ್ ವಿಚಾರದಲ್ಲಿ ಹೊಸದೊಂದು ನಿಯಮಕ್ಕೆ ಅಥವಾ ನಿಯಮ ತಿದ್ದುಪಡಿಗೆ ದಾರಿ ಮಾಡಿಕೊಟ್ಟಿದೆ. ಇದು ಆಪರೇಷನ್ ಕಮಲ ಎಂಬ ಪಿಡುಗಿಗೆ ಮುಕ್ತ ಅವಕಾಶ ಕೊಡಲಿದೆ.

4. ಹಾಗಾಗಿ ನಾಳೆಯ ವಿಪ್ ಉಲ್ಲಂಘನೆಯ ಆಧಾರದ ಮೇಲೆ ಅನರ್ಹತೆ ವಿಷಯ ನಿರ್ಧಾರವಾಗುವುದಿಲ್ಲ.

ಇದರ ಪರಿಣಾಮವೇನು? ಸಾಮಾನ್ಯ ಸಂದರ್ಭದಲ್ಲಿ ಏನು ಸಾಧ್ಯತೆಗಳಿವೆ?

1. ನಾಳೆ ವಿಶ್ವಾಸಮತ ಯಾಚನೆ ಆರಂಭವಾಗುತ್ತದೆ, ಆದರೆ ಆ ಪ್ರಕ್ರಿಯೆ ನಾಳೆಯೇ ಮುಗಿದುಬಿಡುವುದಿಲ್ಲ.

2. ಈ ಮಧ್ಯೆ ಶಾಸಕರ ಅನರ್ಹತೆ ವಿಚಾರವನ್ನು ಸ್ಪೀಕರ್ ಕೈಗೆತ್ತಿಕೊಂಡು ಅವರನ್ನು ಅನರ್ಹಗೊಳಿಸಬಹುದು. ಇವರೆಲ್ಲರೂ ಗುಂಪುಗೂಡಿಯೇ ರಾಜೀನಾಮೆ ನೀಡಿ, ಗುಂಪಾಗಿಯೇ ಹೋಟೆಲ್‍ನಲ್ಲಿರುವುದು, ಬಿಜೆಪಿಯ ಜೊತೆ ಸಂಪರ್ಕದಲ್ಲಿರುವುದು, ಸರ್ಕಾರದ ಬಹುಮತ ಕುಸಿಯುವಂತೆ ಮಾಡಿ ಬಿಜೆಪಿ ಸರ್ಕಾರ ರಚಿಸಲು ಅನುವು ಮಾಡಿಕೊಡಲೇ ರಾಜೀನಾಮೆ ಕೊಟ್ಟಿರುವುದು ಸ್ಪಷ್ಟವಿರುವುದರಿಂದ ಅದೇ ಅನರ್ಹತೆಗೆ ದಾರಿ ಮಾಡಬಹುದು.

3. ಅದೇನೇ ಇದ್ದರೂ ಇಂದಲ್ಲಾ ನಾಳೆ ಸರ್ಕಾರದ ಬಹುಮತ ಕುಸಿಯುತ್ತದೆ. ಶಾಸಕರು ಅನರ್ಹರಾಗುತ್ತಾರೆ, ಇಲ್ಲವೇ ರಾಜೀನಾಮೆ ಅಂಗೀಕಾರವಾಗುತ್ತದೆ. ಇವೆಲ್ಲದರ ಲಾಭ ಬಿಜೆಪಿಗೆ ಆಗುತ್ತದೆ. ಏಕೆಂದರೆ ಅವರು ಸರ್ಕಾರ ರಚಿಸುತ್ತಾರೆ. ರಾಜೀನಾಮೆ ಕೊಟ್ಟಿರುವ ಎಲ್ಲಾ ಶಾಸಕರಿಗೂ ಪಕ್ಷದ ಟಿಕೆಟ್ ನೀಡಲೇಬೇಕೆಂದೂ ಇಲ್ಲ. ಉಪಚುನಾವಣೆಯಲ್ಲಿ 6 ಜನ ಶಾಸಕರು ಗೆದ್ದು ಬಂದರೂ ಪೂರ್ಣ ವಿಧಾನಸಭೆಯಲ್ಲೂ ಸರಳ ಬಹುಮತ ದೊರೆಯುತ್ತದೆ.

4. ಅನರ್ಹಗೊಳಿಸುವುದರಿಂದ ಶಾಸಕರ ರಾಜಕೀಯ ಬದುಕಿನಲ್ಲಿ ಕಪ್ಪು ಚುಕ್ಕೆ. ಆದರೆ, ಹಾಗೆಂದು ಅವರಾಗಲೀ ಮಾಧ್ಯಮಗಳಾಗಲೀ ಭಾವಿಸುವುದಿಲ್ಲವಾದ್ದರಿಂದ ಜನರೂ ಭಾವಿಸದಂತೆ ಮಾಡಲಾಗುತ್ತದೆ. ಭ್ರಷ್ಟಾಚಾರ ಇತ್ಯಾದಿಗಳ ಕಾರಣದಿಂದ ಅನರ್ಹಗೊಳ್ಳುವವರು 6 ವರ್ಷಗಳ ಕಾಲ ಸ್ಪರ್ಧಿಸದಂತೆ ನಿಯಮವಿದೆ. ಆದರೆ, ತಮಿಳುನಾಡಿನಲ್ಲಿ ಪಕ್ಷಾಂತರದ ಕಾರಣಕ್ಕಾಗಿ ಅನರ್ಹಗೊಂಡವರು ಮತ್ತೆ ಸ್ಪರ್ಧಿಸಬಹುದು ಎಂದು ಚುನಾವಣಾ ಆಯೋಗ ಹೇಳಿತ್ತು!

ಆಶ್ಚರ್ಯಕರ ಸಾಧ್ಯತೆಗಳು

1. ಕೆಲವು ಶಾಸಕರು ತಮ್ಮ ಮಾತೃಪಕ್ಷಗಳಿಗೆ ಮರಳಿ ಬರುವುದರ ಮೂಲಕ ಇನ್ನಷ್ಟು ಕಾಲ ಸಮ್ಮಿಶ್ರ ಸರ್ಕಾರ ಉಳಿದುಕೊಳ್ಳಬಹುದು.

2. ವಿಶ್ವಾಸಮತ ಯಾಚನೆಯನ್ನೇ ಅನಿರ್ದಿಷ್ಟಾವಧಿಗೆ ಮುಂದೂಡುವುದು. ಇದು ಬಿಜೆಪಿ ಮತ್ತು ಸಮ್ಮಿಶ್ರ ಪಕ್ಷಗಳ ನಡುವೆ ಮಾತ್ರವಲ್ಲದೇ, ರಾಜ್ಯಪಾಲರು ವರ್ಸಸ್ ಸ್ಪೀಕರ್ ಸಂಘರ್ಷಕ್ಕೂ ದಾರಿ ಮಾಡಿಕೊಡಬಹುದು, ಆಗ ಸುಪ್ರೀಂಕೋರ್ಟ್ ಸಹಾ ಮಧ್ಯಪ್ರವೇಶಿಸಬಹುದು.

3. ಈಗಲೇ ಕುಮಾರಸ್ವಾಮಿಯವರು ರಾಜೀನಾಮೆ ನೀಡಿ, ಬಿಜೆಪಿ ಸರ್ಕಾರಕ್ಕೆ ಅವಕಾಶ ಮಾಡಿಕೊಡುವುದು.

ಅದೇನೇ ಇದ್ದರೂ, ಅನೈತಿಕ ಕಾರಣಗಳಿಗಾಗಿ ರಾಜೀನಾಮೆ ನೀಡುವ ಮೂಲಕ (ಆಪರೇಷನ್ ಕಮಲ) ಬೇರೆ ಪಕ್ಷವನ್ನು ಸೇರುವುದಕ್ಕೆ ಸುಪ್ರೀಂಕೋರ್ಟಿನ ತೀರ್ಪಿನಿಂದ ಅವಕಾಶ ಸಿಕ್ಕಿದಂತಾಗಿದೆ. ಇದನ್ನು ಕೌಂಟರ್ ಮಾಡುವ ಬೇರೇನಾದರೂ ಅಸ್ತ್ರ ಸ್ಪೀಕರ್ ಬಳಿ ಇದೆಯೇ ನೋಡಬೇಕು. ಎಲ್ಲಕ್ಕಿಂತ ದುರಂತದ ವಿಚಾರವೆಂದರೆ ಮಾಧ್ಯಮಗಳು ಅನೈತಿಕ ರಾಜಕಾರಣದ ಪರವಾಗಿ ನಿಂತಿರುವುದು ಮತ್ತು ಜನಸಾಮಾನ್ಯರು ಮೂಕವಾಗಿರುವುದು. ಇದರಲ್ಲಿ ಏನಾದರೂ ಬದಲಾವಣೆಗಳು ಬರುತ್ತದಾ ಎಂಬುದನ್ನೂ ಕಾದು ನೋಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...