Homeಕರ್ನಾಟಕಸುಪ್ರೀಂಕೋರ್ಟ್ ತೀರ್ಪಿನ ಪರಿಣಾಮವೇನು? ಸಾಧ್ಯತೆಗಳೇನು?

ಸುಪ್ರೀಂಕೋರ್ಟ್ ತೀರ್ಪಿನ ಪರಿಣಾಮವೇನು? ಸಾಧ್ಯತೆಗಳೇನು?

- Advertisement -
- Advertisement -

ಇದುವರೆಗೆ ಸ್ಪಷ್ಟವಾಗಿರುವಂತೆ ಶಾಸಕರ ರಾಜೀನಾಮೆ ವಿಚಾರದಲ್ಲಿ ಸುಪ್ರೀಂಕೋರ್ಟು ಈ ರೀತಿ ಹೇಳಿದೆ.

1. ರಾಜೀನಾಮೆ ಅಂಗೀಕಾರದ ವಿಚಾರದಲ್ಲಿ ಸ್ಪೀಕರ್ ತೀರ್ಮಾನವೇ ಅಂತಿಮ.

2. ಅವರಿಗೆ ಸಮಯ ನಿಗದಿ ಮಾಡುವುದಿಲ್ಲ.

3. ಸದನದಲ್ಲಿ ವಿಶ್ವಾಸಮತ ಯಾಚನೆ ನಾಳೆ ಮುಂದುವರೆಯಬಹುದು.

4. ರಾಜೀನಾಮೆ ನೀಡಿರುವ ಶಾಸಕರು ವಿಶ್ವಾಸಮತ ಯಾಚನೆಯಲ್ಲಿ ಭಾಗವಹಿಸಲೇಬೇಕೆಂದು ಒತ್ತಾಯಿಸುವಂತಿಲ್ಲ.

ಇದರ ಅರ್ಥ ಏನು?

1. ರಾಜೀನಾಮೆ ಅಂಗೀಕಾರ ಮಾಡುತ್ತೇನೆ/ಮಾಡುವುದಿಲ್ಲ ಎಂದು ಸ್ಪೀಕರ್ ಹೇಳಿದ ನಂತರವೂ ಸುಪ್ರೀಂಕೋಟು ಮಧ್ಯ ಪ್ರವೇಶ ಮಾಡುವುದಿಲ್ಲ ಎಂದೇನೂ ಇದರ ಅರ್ಥವಲ್ಲ. ಆದರೆ, ಇಂತಿಷ್ಟೇ ದಿನಗಳಲ್ಲಿ ಅಂಗೀಕರಿಸಿ ಎಂದೋ, ಈಗಲೇ ಅಂಗೀಕರಿಸಿ ಎಂದೋ ಸುಪ್ರೀಂಕೋರ್ಟು ಹೇಳಿಲ್ಲ. ತಾನು ಹೇಳಬಾರದು ಎಂಬ ಅರ್ಥವನ್ನು ಅದು ಹೊರಡಿಸಿದೆ.

2. ವಿಶ್ವಾಸಮತ ಯಾಚನೆ ನಾಳೆಯೇ ನಡೆಯಬೇಕೆಂದೂ ಸುಪ್ರೀಂಕೋರ್ಟು ಹೇಳಿಲ್ಲ.

3. ಸದರಿ ಶಾಸಕರು ಭಾಗವಹಿಸಲೇಬೇಕೆಂದು ಒತ್ತಾಯಿಸುವಂತಿಲ್ಲ ಎಂದ ಮೇಲೆ ವಿಪ್ ಅನ್ವಯವಾಗುವುದಿಲ್ಲ ಎಂದೇ ಆಗುತ್ತದೆ. ಇದು ವಿಪ್ ವಿಚಾರದಲ್ಲಿ ಹೊಸದೊಂದು ನಿಯಮಕ್ಕೆ ಅಥವಾ ನಿಯಮ ತಿದ್ದುಪಡಿಗೆ ದಾರಿ ಮಾಡಿಕೊಟ್ಟಿದೆ. ಇದು ಆಪರೇಷನ್ ಕಮಲ ಎಂಬ ಪಿಡುಗಿಗೆ ಮುಕ್ತ ಅವಕಾಶ ಕೊಡಲಿದೆ.

4. ಹಾಗಾಗಿ ನಾಳೆಯ ವಿಪ್ ಉಲ್ಲಂಘನೆಯ ಆಧಾರದ ಮೇಲೆ ಅನರ್ಹತೆ ವಿಷಯ ನಿರ್ಧಾರವಾಗುವುದಿಲ್ಲ.

ಇದರ ಪರಿಣಾಮವೇನು? ಸಾಮಾನ್ಯ ಸಂದರ್ಭದಲ್ಲಿ ಏನು ಸಾಧ್ಯತೆಗಳಿವೆ?

1. ನಾಳೆ ವಿಶ್ವಾಸಮತ ಯಾಚನೆ ಆರಂಭವಾಗುತ್ತದೆ, ಆದರೆ ಆ ಪ್ರಕ್ರಿಯೆ ನಾಳೆಯೇ ಮುಗಿದುಬಿಡುವುದಿಲ್ಲ.

2. ಈ ಮಧ್ಯೆ ಶಾಸಕರ ಅನರ್ಹತೆ ವಿಚಾರವನ್ನು ಸ್ಪೀಕರ್ ಕೈಗೆತ್ತಿಕೊಂಡು ಅವರನ್ನು ಅನರ್ಹಗೊಳಿಸಬಹುದು. ಇವರೆಲ್ಲರೂ ಗುಂಪುಗೂಡಿಯೇ ರಾಜೀನಾಮೆ ನೀಡಿ, ಗುಂಪಾಗಿಯೇ ಹೋಟೆಲ್‍ನಲ್ಲಿರುವುದು, ಬಿಜೆಪಿಯ ಜೊತೆ ಸಂಪರ್ಕದಲ್ಲಿರುವುದು, ಸರ್ಕಾರದ ಬಹುಮತ ಕುಸಿಯುವಂತೆ ಮಾಡಿ ಬಿಜೆಪಿ ಸರ್ಕಾರ ರಚಿಸಲು ಅನುವು ಮಾಡಿಕೊಡಲೇ ರಾಜೀನಾಮೆ ಕೊಟ್ಟಿರುವುದು ಸ್ಪಷ್ಟವಿರುವುದರಿಂದ ಅದೇ ಅನರ್ಹತೆಗೆ ದಾರಿ ಮಾಡಬಹುದು.

3. ಅದೇನೇ ಇದ್ದರೂ ಇಂದಲ್ಲಾ ನಾಳೆ ಸರ್ಕಾರದ ಬಹುಮತ ಕುಸಿಯುತ್ತದೆ. ಶಾಸಕರು ಅನರ್ಹರಾಗುತ್ತಾರೆ, ಇಲ್ಲವೇ ರಾಜೀನಾಮೆ ಅಂಗೀಕಾರವಾಗುತ್ತದೆ. ಇವೆಲ್ಲದರ ಲಾಭ ಬಿಜೆಪಿಗೆ ಆಗುತ್ತದೆ. ಏಕೆಂದರೆ ಅವರು ಸರ್ಕಾರ ರಚಿಸುತ್ತಾರೆ. ರಾಜೀನಾಮೆ ಕೊಟ್ಟಿರುವ ಎಲ್ಲಾ ಶಾಸಕರಿಗೂ ಪಕ್ಷದ ಟಿಕೆಟ್ ನೀಡಲೇಬೇಕೆಂದೂ ಇಲ್ಲ. ಉಪಚುನಾವಣೆಯಲ್ಲಿ 6 ಜನ ಶಾಸಕರು ಗೆದ್ದು ಬಂದರೂ ಪೂರ್ಣ ವಿಧಾನಸಭೆಯಲ್ಲೂ ಸರಳ ಬಹುಮತ ದೊರೆಯುತ್ತದೆ.

4. ಅನರ್ಹಗೊಳಿಸುವುದರಿಂದ ಶಾಸಕರ ರಾಜಕೀಯ ಬದುಕಿನಲ್ಲಿ ಕಪ್ಪು ಚುಕ್ಕೆ. ಆದರೆ, ಹಾಗೆಂದು ಅವರಾಗಲೀ ಮಾಧ್ಯಮಗಳಾಗಲೀ ಭಾವಿಸುವುದಿಲ್ಲವಾದ್ದರಿಂದ ಜನರೂ ಭಾವಿಸದಂತೆ ಮಾಡಲಾಗುತ್ತದೆ. ಭ್ರಷ್ಟಾಚಾರ ಇತ್ಯಾದಿಗಳ ಕಾರಣದಿಂದ ಅನರ್ಹಗೊಳ್ಳುವವರು 6 ವರ್ಷಗಳ ಕಾಲ ಸ್ಪರ್ಧಿಸದಂತೆ ನಿಯಮವಿದೆ. ಆದರೆ, ತಮಿಳುನಾಡಿನಲ್ಲಿ ಪಕ್ಷಾಂತರದ ಕಾರಣಕ್ಕಾಗಿ ಅನರ್ಹಗೊಂಡವರು ಮತ್ತೆ ಸ್ಪರ್ಧಿಸಬಹುದು ಎಂದು ಚುನಾವಣಾ ಆಯೋಗ ಹೇಳಿತ್ತು!

ಆಶ್ಚರ್ಯಕರ ಸಾಧ್ಯತೆಗಳು

1. ಕೆಲವು ಶಾಸಕರು ತಮ್ಮ ಮಾತೃಪಕ್ಷಗಳಿಗೆ ಮರಳಿ ಬರುವುದರ ಮೂಲಕ ಇನ್ನಷ್ಟು ಕಾಲ ಸಮ್ಮಿಶ್ರ ಸರ್ಕಾರ ಉಳಿದುಕೊಳ್ಳಬಹುದು.

2. ವಿಶ್ವಾಸಮತ ಯಾಚನೆಯನ್ನೇ ಅನಿರ್ದಿಷ್ಟಾವಧಿಗೆ ಮುಂದೂಡುವುದು. ಇದು ಬಿಜೆಪಿ ಮತ್ತು ಸಮ್ಮಿಶ್ರ ಪಕ್ಷಗಳ ನಡುವೆ ಮಾತ್ರವಲ್ಲದೇ, ರಾಜ್ಯಪಾಲರು ವರ್ಸಸ್ ಸ್ಪೀಕರ್ ಸಂಘರ್ಷಕ್ಕೂ ದಾರಿ ಮಾಡಿಕೊಡಬಹುದು, ಆಗ ಸುಪ್ರೀಂಕೋರ್ಟ್ ಸಹಾ ಮಧ್ಯಪ್ರವೇಶಿಸಬಹುದು.

3. ಈಗಲೇ ಕುಮಾರಸ್ವಾಮಿಯವರು ರಾಜೀನಾಮೆ ನೀಡಿ, ಬಿಜೆಪಿ ಸರ್ಕಾರಕ್ಕೆ ಅವಕಾಶ ಮಾಡಿಕೊಡುವುದು.

ಅದೇನೇ ಇದ್ದರೂ, ಅನೈತಿಕ ಕಾರಣಗಳಿಗಾಗಿ ರಾಜೀನಾಮೆ ನೀಡುವ ಮೂಲಕ (ಆಪರೇಷನ್ ಕಮಲ) ಬೇರೆ ಪಕ್ಷವನ್ನು ಸೇರುವುದಕ್ಕೆ ಸುಪ್ರೀಂಕೋರ್ಟಿನ ತೀರ್ಪಿನಿಂದ ಅವಕಾಶ ಸಿಕ್ಕಿದಂತಾಗಿದೆ. ಇದನ್ನು ಕೌಂಟರ್ ಮಾಡುವ ಬೇರೇನಾದರೂ ಅಸ್ತ್ರ ಸ್ಪೀಕರ್ ಬಳಿ ಇದೆಯೇ ನೋಡಬೇಕು. ಎಲ್ಲಕ್ಕಿಂತ ದುರಂತದ ವಿಚಾರವೆಂದರೆ ಮಾಧ್ಯಮಗಳು ಅನೈತಿಕ ರಾಜಕಾರಣದ ಪರವಾಗಿ ನಿಂತಿರುವುದು ಮತ್ತು ಜನಸಾಮಾನ್ಯರು ಮೂಕವಾಗಿರುವುದು. ಇದರಲ್ಲಿ ಏನಾದರೂ ಬದಲಾವಣೆಗಳು ಬರುತ್ತದಾ ಎಂಬುದನ್ನೂ ಕಾದು ನೋಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...