Homeಕರ್ನಾಟಕಸುಪ್ರೀಂಕೋರ್ಟ್ ತೀರ್ಪಿನ ಪರಿಣಾಮವೇನು? ಸಾಧ್ಯತೆಗಳೇನು?

ಸುಪ್ರೀಂಕೋರ್ಟ್ ತೀರ್ಪಿನ ಪರಿಣಾಮವೇನು? ಸಾಧ್ಯತೆಗಳೇನು?

- Advertisement -
- Advertisement -

ಇದುವರೆಗೆ ಸ್ಪಷ್ಟವಾಗಿರುವಂತೆ ಶಾಸಕರ ರಾಜೀನಾಮೆ ವಿಚಾರದಲ್ಲಿ ಸುಪ್ರೀಂಕೋರ್ಟು ಈ ರೀತಿ ಹೇಳಿದೆ.

1. ರಾಜೀನಾಮೆ ಅಂಗೀಕಾರದ ವಿಚಾರದಲ್ಲಿ ಸ್ಪೀಕರ್ ತೀರ್ಮಾನವೇ ಅಂತಿಮ.

2. ಅವರಿಗೆ ಸಮಯ ನಿಗದಿ ಮಾಡುವುದಿಲ್ಲ.

3. ಸದನದಲ್ಲಿ ವಿಶ್ವಾಸಮತ ಯಾಚನೆ ನಾಳೆ ಮುಂದುವರೆಯಬಹುದು.

4. ರಾಜೀನಾಮೆ ನೀಡಿರುವ ಶಾಸಕರು ವಿಶ್ವಾಸಮತ ಯಾಚನೆಯಲ್ಲಿ ಭಾಗವಹಿಸಲೇಬೇಕೆಂದು ಒತ್ತಾಯಿಸುವಂತಿಲ್ಲ.

ಇದರ ಅರ್ಥ ಏನು?

1. ರಾಜೀನಾಮೆ ಅಂಗೀಕಾರ ಮಾಡುತ್ತೇನೆ/ಮಾಡುವುದಿಲ್ಲ ಎಂದು ಸ್ಪೀಕರ್ ಹೇಳಿದ ನಂತರವೂ ಸುಪ್ರೀಂಕೋಟು ಮಧ್ಯ ಪ್ರವೇಶ ಮಾಡುವುದಿಲ್ಲ ಎಂದೇನೂ ಇದರ ಅರ್ಥವಲ್ಲ. ಆದರೆ, ಇಂತಿಷ್ಟೇ ದಿನಗಳಲ್ಲಿ ಅಂಗೀಕರಿಸಿ ಎಂದೋ, ಈಗಲೇ ಅಂಗೀಕರಿಸಿ ಎಂದೋ ಸುಪ್ರೀಂಕೋರ್ಟು ಹೇಳಿಲ್ಲ. ತಾನು ಹೇಳಬಾರದು ಎಂಬ ಅರ್ಥವನ್ನು ಅದು ಹೊರಡಿಸಿದೆ.

2. ವಿಶ್ವಾಸಮತ ಯಾಚನೆ ನಾಳೆಯೇ ನಡೆಯಬೇಕೆಂದೂ ಸುಪ್ರೀಂಕೋರ್ಟು ಹೇಳಿಲ್ಲ.

3. ಸದರಿ ಶಾಸಕರು ಭಾಗವಹಿಸಲೇಬೇಕೆಂದು ಒತ್ತಾಯಿಸುವಂತಿಲ್ಲ ಎಂದ ಮೇಲೆ ವಿಪ್ ಅನ್ವಯವಾಗುವುದಿಲ್ಲ ಎಂದೇ ಆಗುತ್ತದೆ. ಇದು ವಿಪ್ ವಿಚಾರದಲ್ಲಿ ಹೊಸದೊಂದು ನಿಯಮಕ್ಕೆ ಅಥವಾ ನಿಯಮ ತಿದ್ದುಪಡಿಗೆ ದಾರಿ ಮಾಡಿಕೊಟ್ಟಿದೆ. ಇದು ಆಪರೇಷನ್ ಕಮಲ ಎಂಬ ಪಿಡುಗಿಗೆ ಮುಕ್ತ ಅವಕಾಶ ಕೊಡಲಿದೆ.

4. ಹಾಗಾಗಿ ನಾಳೆಯ ವಿಪ್ ಉಲ್ಲಂಘನೆಯ ಆಧಾರದ ಮೇಲೆ ಅನರ್ಹತೆ ವಿಷಯ ನಿರ್ಧಾರವಾಗುವುದಿಲ್ಲ.

ಇದರ ಪರಿಣಾಮವೇನು? ಸಾಮಾನ್ಯ ಸಂದರ್ಭದಲ್ಲಿ ಏನು ಸಾಧ್ಯತೆಗಳಿವೆ?

1. ನಾಳೆ ವಿಶ್ವಾಸಮತ ಯಾಚನೆ ಆರಂಭವಾಗುತ್ತದೆ, ಆದರೆ ಆ ಪ್ರಕ್ರಿಯೆ ನಾಳೆಯೇ ಮುಗಿದುಬಿಡುವುದಿಲ್ಲ.

2. ಈ ಮಧ್ಯೆ ಶಾಸಕರ ಅನರ್ಹತೆ ವಿಚಾರವನ್ನು ಸ್ಪೀಕರ್ ಕೈಗೆತ್ತಿಕೊಂಡು ಅವರನ್ನು ಅನರ್ಹಗೊಳಿಸಬಹುದು. ಇವರೆಲ್ಲರೂ ಗುಂಪುಗೂಡಿಯೇ ರಾಜೀನಾಮೆ ನೀಡಿ, ಗುಂಪಾಗಿಯೇ ಹೋಟೆಲ್‍ನಲ್ಲಿರುವುದು, ಬಿಜೆಪಿಯ ಜೊತೆ ಸಂಪರ್ಕದಲ್ಲಿರುವುದು, ಸರ್ಕಾರದ ಬಹುಮತ ಕುಸಿಯುವಂತೆ ಮಾಡಿ ಬಿಜೆಪಿ ಸರ್ಕಾರ ರಚಿಸಲು ಅನುವು ಮಾಡಿಕೊಡಲೇ ರಾಜೀನಾಮೆ ಕೊಟ್ಟಿರುವುದು ಸ್ಪಷ್ಟವಿರುವುದರಿಂದ ಅದೇ ಅನರ್ಹತೆಗೆ ದಾರಿ ಮಾಡಬಹುದು.

3. ಅದೇನೇ ಇದ್ದರೂ ಇಂದಲ್ಲಾ ನಾಳೆ ಸರ್ಕಾರದ ಬಹುಮತ ಕುಸಿಯುತ್ತದೆ. ಶಾಸಕರು ಅನರ್ಹರಾಗುತ್ತಾರೆ, ಇಲ್ಲವೇ ರಾಜೀನಾಮೆ ಅಂಗೀಕಾರವಾಗುತ್ತದೆ. ಇವೆಲ್ಲದರ ಲಾಭ ಬಿಜೆಪಿಗೆ ಆಗುತ್ತದೆ. ಏಕೆಂದರೆ ಅವರು ಸರ್ಕಾರ ರಚಿಸುತ್ತಾರೆ. ರಾಜೀನಾಮೆ ಕೊಟ್ಟಿರುವ ಎಲ್ಲಾ ಶಾಸಕರಿಗೂ ಪಕ್ಷದ ಟಿಕೆಟ್ ನೀಡಲೇಬೇಕೆಂದೂ ಇಲ್ಲ. ಉಪಚುನಾವಣೆಯಲ್ಲಿ 6 ಜನ ಶಾಸಕರು ಗೆದ್ದು ಬಂದರೂ ಪೂರ್ಣ ವಿಧಾನಸಭೆಯಲ್ಲೂ ಸರಳ ಬಹುಮತ ದೊರೆಯುತ್ತದೆ.

4. ಅನರ್ಹಗೊಳಿಸುವುದರಿಂದ ಶಾಸಕರ ರಾಜಕೀಯ ಬದುಕಿನಲ್ಲಿ ಕಪ್ಪು ಚುಕ್ಕೆ. ಆದರೆ, ಹಾಗೆಂದು ಅವರಾಗಲೀ ಮಾಧ್ಯಮಗಳಾಗಲೀ ಭಾವಿಸುವುದಿಲ್ಲವಾದ್ದರಿಂದ ಜನರೂ ಭಾವಿಸದಂತೆ ಮಾಡಲಾಗುತ್ತದೆ. ಭ್ರಷ್ಟಾಚಾರ ಇತ್ಯಾದಿಗಳ ಕಾರಣದಿಂದ ಅನರ್ಹಗೊಳ್ಳುವವರು 6 ವರ್ಷಗಳ ಕಾಲ ಸ್ಪರ್ಧಿಸದಂತೆ ನಿಯಮವಿದೆ. ಆದರೆ, ತಮಿಳುನಾಡಿನಲ್ಲಿ ಪಕ್ಷಾಂತರದ ಕಾರಣಕ್ಕಾಗಿ ಅನರ್ಹಗೊಂಡವರು ಮತ್ತೆ ಸ್ಪರ್ಧಿಸಬಹುದು ಎಂದು ಚುನಾವಣಾ ಆಯೋಗ ಹೇಳಿತ್ತು!

ಆಶ್ಚರ್ಯಕರ ಸಾಧ್ಯತೆಗಳು

1. ಕೆಲವು ಶಾಸಕರು ತಮ್ಮ ಮಾತೃಪಕ್ಷಗಳಿಗೆ ಮರಳಿ ಬರುವುದರ ಮೂಲಕ ಇನ್ನಷ್ಟು ಕಾಲ ಸಮ್ಮಿಶ್ರ ಸರ್ಕಾರ ಉಳಿದುಕೊಳ್ಳಬಹುದು.

2. ವಿಶ್ವಾಸಮತ ಯಾಚನೆಯನ್ನೇ ಅನಿರ್ದಿಷ್ಟಾವಧಿಗೆ ಮುಂದೂಡುವುದು. ಇದು ಬಿಜೆಪಿ ಮತ್ತು ಸಮ್ಮಿಶ್ರ ಪಕ್ಷಗಳ ನಡುವೆ ಮಾತ್ರವಲ್ಲದೇ, ರಾಜ್ಯಪಾಲರು ವರ್ಸಸ್ ಸ್ಪೀಕರ್ ಸಂಘರ್ಷಕ್ಕೂ ದಾರಿ ಮಾಡಿಕೊಡಬಹುದು, ಆಗ ಸುಪ್ರೀಂಕೋರ್ಟ್ ಸಹಾ ಮಧ್ಯಪ್ರವೇಶಿಸಬಹುದು.

3. ಈಗಲೇ ಕುಮಾರಸ್ವಾಮಿಯವರು ರಾಜೀನಾಮೆ ನೀಡಿ, ಬಿಜೆಪಿ ಸರ್ಕಾರಕ್ಕೆ ಅವಕಾಶ ಮಾಡಿಕೊಡುವುದು.

ಅದೇನೇ ಇದ್ದರೂ, ಅನೈತಿಕ ಕಾರಣಗಳಿಗಾಗಿ ರಾಜೀನಾಮೆ ನೀಡುವ ಮೂಲಕ (ಆಪರೇಷನ್ ಕಮಲ) ಬೇರೆ ಪಕ್ಷವನ್ನು ಸೇರುವುದಕ್ಕೆ ಸುಪ್ರೀಂಕೋರ್ಟಿನ ತೀರ್ಪಿನಿಂದ ಅವಕಾಶ ಸಿಕ್ಕಿದಂತಾಗಿದೆ. ಇದನ್ನು ಕೌಂಟರ್ ಮಾಡುವ ಬೇರೇನಾದರೂ ಅಸ್ತ್ರ ಸ್ಪೀಕರ್ ಬಳಿ ಇದೆಯೇ ನೋಡಬೇಕು. ಎಲ್ಲಕ್ಕಿಂತ ದುರಂತದ ವಿಚಾರವೆಂದರೆ ಮಾಧ್ಯಮಗಳು ಅನೈತಿಕ ರಾಜಕಾರಣದ ಪರವಾಗಿ ನಿಂತಿರುವುದು ಮತ್ತು ಜನಸಾಮಾನ್ಯರು ಮೂಕವಾಗಿರುವುದು. ಇದರಲ್ಲಿ ಏನಾದರೂ ಬದಲಾವಣೆಗಳು ಬರುತ್ತದಾ ಎಂಬುದನ್ನೂ ಕಾದು ನೋಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...