Homeಕರ್ನಾಟಕಪಕ್ಷಾಂತರ ನಿಷೇಧ ಕಾಯ್ದೆ: ಸ್ಪೀಕರ್ v/s ಸುಪ್ರೀಂ ಕೋರ್ಟ್

ಪಕ್ಷಾಂತರ ನಿಷೇಧ ಕಾಯ್ದೆ: ಸ್ಪೀಕರ್ v/s ಸುಪ್ರೀಂ ಕೋರ್ಟ್

- Advertisement -
- Advertisement -

| ರಾಜಲಕ್ಷ್ಮಿ ಅಂಕಲಗಿ |
ವಕೀಲರು, ಕರ್ನಾಟಕ ಹೈಕೋರ್ಟ್

ಬಹುಶಃ ಈ ಲೇಖನ ಪ್ರಕಟವಾಗುವಷ್ಟರಲ್ಲಿ ಕರ್ನಾಟಕದ ರಾಜಕೀಯದ ರಮ್ಮಿ ಆಟ ಒಂದು ಹಂತಕ್ಕೆ ಬಂದಿರುತ್ತದೆ. ಅದ್ಯಾಕೋ ‘ರಾಜಕೀಯ ದೊಂಬರಾಟ’ ಎಂದು ಕರೆದು, ಪ್ರಾಣ ಒತ್ತೆಯಿಟ್ಟು ಹೊಟ್ಟೆಪಾಡಿಗಾಗಿ ದೊಂಬರಾಟ ಮಾಡುವವರನ್ನು ಅವಮಾನಿಸಲು ಮನಸ್ಸು ಬರುತ್ತಿಲ್ಲ. ಕೆಲವೊಂದು ಟಿ.ವಿ ಚಾನೆಲ್‍ಗಳು ಹಾಗೂ ಪತ್ರಿಕೆಗಳು ಇವರನ್ನು ರೆಬೆಲ್ ನಾಯಕರು ಎಂದು ಕರೆದಾಗ ಆ ರೆಬೆಲ್ ಎಂಬ ಶಬ್ದಕ್ಕೇನಾದರೂ ಮಾತು ಬರುತ್ತಿದ್ದರೆ ಮಾನಹಾನಿ ಕೇಸು ಹಾಕುತ್ತಿತ್ತು. ಈ ಕೋಟ್ಯಾಧಿಪತಿ ಎಂಎಲ್‍ಎಗಳನ್ನು ಕುರಿಗಳಂತೆ ಕೂಡಿಹಾಕಿ ಕಾಯುತ್ತಿರುವುದನ್ನು ನೋಡಿದ ಜನ ಅಸಹ್ಯಪಡುವುದರ ಜೊತೆಗೆ ನೂರಾರು ಪ್ರಶ್ನೆ ಕೇಳುತ್ತಿದ್ದಾರೆ. ಅದ್ಯಾವ ಪ್ರಲೋಭನೆ ಅಥವಾ ಭಯ ಇವರನ್ನು ಹೀಗೆ ಮಾಡಲು ಪ್ರೇರೇಪಿಸಿರಬಹುದು ಎಂಬುದು ಗೂಢವಾಗಿದೆ. ಒಟ್ಟಿನಲ್ಲಿ ಒಂದು ದೇಶ ಒಂದು ಪಕ್ಷ ಎಂಬ ಸಿದ್ಧಾಂತ ತಂದು ವ್ಯವಸ್ಥಿತವಾಗಿ ವಿರೋಧ ಪಕ್ಷಗಳನ್ನು ನಿರ್ನಾಮಗೊಳಸಿ ಪ್ರಜಾತಂತ್ರವನ್ನು ಅಣುಕು ಯಂತ್ರವನ್ನಾಗಿ ಮಾಡುವ ಹುನ್ನಾರ ನಿಚ್ಚಳವಾಗಿದೆ.

ಸ್ವಾತಂತ್ರ್ಯನಂತರ ಈ ಪಕ್ಷಾಂತರ ಮಾಡುವ ಅವಕಾಶವಾದಿ ರಾಜಕಾರಣಿಗಳು ಹಾಗೂ ನಿರಂತರ ಅಸ್ಥಿರ ಸರ್ಕಾರಗಳು ಇವನ್ನು ಒಂದು ನಿಯಂತ್ರಣದಲ್ಲಿಡುವ ಉದ್ದೇಶದಿಂದ 1985ರಲ್ಲಿ ರಾಜೀವ್‍ಗಾಂಧಿ ಸರ್ಕಾರ ಸಂವಿಧಾನಿಕ ತಿದ್ದುಪಡಿ ಮಾಡುವ ಮೂಲಕ ಹತ್ತನೇ ಶೆಡ್ಯೂಲನ್ನು ಸೇರಿಸಿ ‘ಪಕ್ಷಾಂತರ ನಿಷೇಧ ಕಾಯ್ದೆ’ಯನ್ನು ಜಾರಿಗೆ ತಂದಿತು. ಅದರ ಉದ್ದೇಶ ನಿಚ್ಚಳವಾಗಿತ್ತು.
* ಸಂಸದರ ರಾಜಕೀಯ ಪಕ್ಷಾಂತರ ತಡೆಯುವುದು ಹಾಗೂ ಎರಡು ಕಾರಣಗಳಿಗಾಗಿ ಅವರ ಸದಸ್ಯತ್ವವನ್ನು ರದ್ದುಗೊಳಿಸುವುದು.
* ಅಕಸ್ಮಾತ್ ಸದಸ್ಯರು ತಮ್ಮ ಇಚ್ಛೆಯಿಂದ ತಮ್ಮ ಪಕ್ಷದ ಸದಸ್ಯತ್ವವನ್ನು ಬಿಟ್ಟುಕೊಟ್ಟರೆ
* ಸಂಸದ ತನ್ನ ಪಕ್ಷದ ನಿರ್ದೇಶನಗಳನ್ನು ಉಲ್ಲಂಘಿಸಿ ಮತದಾನ ಮಾಡಿದರೆ

ಇಲ್ಲಿ ಪಕ್ಷದ ಸದಸ್ಯತ್ವವನ್ನು ತೊರೆಯುವುದನ್ನು ರಾಜೀನಾಮೆ ಯೊಂದಿಗೆ ಹೋಲಿಸಲು ಬರುವುದಿಲ್ಲ. ಅವೆರಡೂ ಬೇರೆಯದು. ಆದರೆ ಇದನ್ನು ಹೊರತುಪಡಿಸಿಯೂ ಸಂಸದರ ನಡತೆಯನ್ನು ನೋಡಿ ಸ್ಪೀಕರ್ ತನ್ನ ವಿವೇಚನೆಯನ್ನು ಬಳಸಿ ಅಂತಹ ನಡೆಯನ್ನು ಪಕ್ಷ ವಿರೋಧಿ ಎಂದು ಪರಿಗಣಿಸಿದರೆ ಅವರ ಸದಸ್ಯತ್ವವನ್ನು ರದ್ದುಗೊಳಿಸಬಹುದು. ಆದರೆ ಪ್ರಜಾತಂತ್ರ ವ್ಯವಸ್ಥೆಯಲ್ಲಿ ಕೇವಲ ಶಿಸ್ತಿನ ಹೆಸರಿನಲ್ಲಿ ಯಾರ ಅಭಿಪ್ರಾಯಗಳನ್ನೂ ಕಟ್ಟಿಹಾಕಲು ಆಗದು. ಆದ್ದರಿಂದಲೇ ಕಾಯ್ದೆಯಲ್ಲಿ ಭಿನ್ನಾಭಿಪ್ರಾಯಗಳನ್ನೂ ಪರಿಗಣಿಸಿ ಅದಕ್ಕೆ ದಾರಿಯನ್ನು ಒದಗಿಸಲಾಗಿದೆ. ಅಕಸ್ಮಾತ್ ಒಂದು ರಾಜಕೀಯ ಪಕ್ಷದ 2/3ರಷ್ಟು ಸದಸ್ಯರು ಒಟ್ಟಾರೆಯಾಗಿ ಪಕ್ಷತೊರೆದು ಮತ್ತೊಂದು ಪಕ್ಷದೊಂದಿಗೆ ವಿಲೀನ ಹೊಂದಲು ಅವಕಾಶ ಮಾಡಿಕೊಡಲಾಗಿದೆ. ‘ಸ್ಪೀಕರ್ ತನ್ನ ವಿವೇಚನೆ ಬಳಸಿ’ ಎಂದ ಕೂಡಲೇ ಅವರ ತೀರ್ಮಾನದ ಬಗ್ಗೆ ಪರ ವಿರೋಧ ನಿಲುವುಗಳು ಬರುವುದಕ್ಕೆ ಪ್ರಾರಂಭಿಸುತ್ತವೆ. ಒಂದು ಸಾಂವಿಧಾನಿಕ ಹುದ್ದೆ ಅಲಂಕರಿಸಿದ ಮೇಲೆ ತಮ್ಮ ಮಾತೃ ಪಕ್ಷವನ್ನು ಮರೆತು ನಿಷ್ಪಕ್ಷವಾಗಿ ನಡೆದುಕೊಂಡ ಉದಾಹರಣೆಗಳು ವಿರಳವಾಗಿರುವಾಗ ಈ ಸಂಶಯಗಳು ಸಹಜ. ಹಾಗಾದರೆ ಸ್ಪೀಕರ್ ವಿವೇಚನೆ ಸರಿಯೋ ತಪ್ಪೋ ಎಂದು ತೀರ್ಮಾನಿಸುವ ಅಧಿಕಾರ ಯಾರಿಗೆ ಇದೆ ಎಂಬ ಪ್ರಶ್ನೆ ಸಹಜ. ಈ ವಿಷಯಕ್ಕೆ ಕುರಿತಂತೆ ಸುಪ್ರೀಂಕೋರ್ಟ್ ಆಗಾಗ ನೀಡಿದ ತೀರ್ಮಾನಗಳ ಮುಖಾಂತರ ಇದು ಸ್ಪೀಕರ್ ಅವರಿಗೆ ಮಾತ್ರ ಸೇರಿದ ವಿಚಾರ ಎಂದು ಸಾರಿ ಹೇಳಿದೆ. ಆದರೆ ಸ್ಪೀಕರ್ ತಮ್ಮ ಕಾರಣಗಳನ್ನು ಸರಿಯಾಗಿ ವಿವರಿಸಬೇಕು.

ಈ ಕಾಯ್ದೆ ಬಂದ ನಂತರ ಸಣ್ಣಪ್ರಮಾಣದ ಪಕ್ಷಾಂತರ ಹಾಗೂ ರಾಜಕೀಯ ಅಸ್ಥಿರತೆಗಳು ಕಡಿಮೆ ಆಗಿವೆಯಾದರೂ ಸಾಮೂಹಿಕ ಗುಳೆ ನಿಂತಿಲ್ಲ. ಈ ನಿಟ್ಟಿನಲ್ಲಿ ನೋಡಿದರೆ ಕಾಯ್ದೆಯು ಸಫಲತೆ ಕಂಡಿದೆ ಎನ್ನಬಹುದು.

ಸುಪ್ರೀಂ ಕೋರ್ಟ್ ಸದಸ್ಯರ ಸದಸ್ಯತ್ವ ಅಮಾನ್ಯಗೊಳಿಸುವ ವಿಷಯಗಳಲ್ಲಿ ಬಹುತೇಕ ನಿರ್ಲಿಪ್ತ ಧೋರಣೆ ಹೊಂದಿದೆ. ಇನ್ನು ಕೆಲವು ಸಲ ಕೆಲವೊಂದು ನಿರ್ದೇಶನಗಳನ್ನು ಮಾತ್ರ ನೀಡಿ ತೀರ್ಪು ನೀಡುವುದರಿಂದ ಹೊರಗುಳಿದಿದೆ. ಇದು ಸಂವಿಧಾನ ಬದ್ಧವಾದ ನಡೆಯೂ ಹೌದು. ಏಕೆಂದರೆ ಸಂವಿಧಾನದಲ್ಲಿ ಸ್ಪೀಕರ್ ಅವರ ಅಧಿಕಾರ ಹಾಗೂ ಕಾರ್ಯವ್ಯಾಪ್ತಿಯನ್ನು ನಿರ್ದಿಷ್ಟವಾಗಿ ವಿವರಿಸಿದಾಗ ಆ ವಿಷಯಗಳಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲ ಎಂಬ ಕೋರ್ಟಿನ ನಿಲುವು ಸರಿ. ಆದರೆ ಸುಪ್ರೀಕೋರ್ಟ್‍ನ ಮುಂದೆ ಆಗಾಗ್ಗೆ ಅನೇಕ ದ್ವಂದ್ವಗಳು ಎದುರಾಗುತ್ತಿರುತ್ತವೆ.

ತಮಿಳುನಾಡಿನ ಎಐಡಿಎಂಕೆಯ ಇ.ಪಳನಿಸ್ವಾಮಿ ಸರ್ಕಾರಕ್ಕೆ ಬೆಂಬಲಿಸಲು ನಿರಾಕರಿಸಿದ 18 ಸದಸ್ಯರನ್ನು ರಾಜ್ಯಪಾಲರು ಅಮಾನ್ಯ ಮಾಡಿದಾಗ ಆ ವಿಷಯ ಹೈಕೋರ್ಟಿನ ಮುಂದೆ ಬಂತು. ಆಗ ಕೋರ್ಟು, ಒಂದು ಪಕ್ಷದ ನಾಯಕನೆಂದರೆ ಅವನೊಬ್ಬ ವ್ಯಕ್ತಿ ಮಾತ್ರವೇ ಅಥವಾ ಅವನೇ ಪಕ್ಷವೇ? ಎಂಬ ಪ್ರಶ್ನೆ ಎತ್ತಿತ್ತು. ಇನ್ನು ಕೇವಲ ತಮ್ಮ ಪಕ್ಷದ ಕಾರ್ಯವೈಖರಿಯನ್ನು ಪ್ರಶ್ನಿಸಿದ ಮಾತ್ರಕ್ಕೆ ಅವನನ್ನು ಶಿಸ್ತಿನ ಹೆಸರಿನಲ್ಲಿ ಅಮಾನ್ಯ ಮಾಡುವುದು ಎಷ್ಟು ಸರಿ? ಈ ಪ್ರಶ್ನೆಗಳು ನೈಜವಾದರೂ ನಾವು ದಿನನಿತ್ಯ ನೋಡುವ ಈ ಪಕ್ಷಾಂತರಿಗಳಿಗೆ ಇವು ಅನ್ವಯಿಸುತ್ತವಾ ಎಂಬುದು ಬಹುದೊಡ್ಡ ಪ್ರಶ್ನೆ.

ಬಹುಶಃ ಸೈದ್ಧಾಂತಿಕ ಕಾರಣಗಳಿಗಾಗಿ ಭಿನ್ನಾಭಿಪ್ರಾಯ ವ್ಯಕ್ತಪಡಿಸಿ ಹೊರನಡೆದ, ಇಲ್ಲವೇ ರಾಜೀನಾಮೆ ನೀಡಿದ ರಾಜಕಾರಣಿಗಳನ್ನು ಈಗ ಸಿನಿಮಾಗಳಲ್ಲಿ ಮಾತ್ರ ನೋಡಬಹುದು.

ನಮಗೆ ಅಭಿವೃದ್ಧಿ ಕಾರ್ಯ ಕೈಗೊಳ್ಳಲ ಬಿಡುತ್ತಿಲ್ಲ ಎಂದು ಎಂಎಲ್‍ಎಗಳು ನೆಪ ಹೇಳುವಾಗ ‘ಯಾರ ಅಭಿವೃದ್ಧಿ’ ಎಂದು ಜನ ಮಾತಾಡುವುದು ಸರಿಯಾಗೇ ಇದೆ. ಮುಲಾಯಂ ಸಿಂಗ್ ಪಕ್ಷದ ಸದಸ್ಯನೊಂದಿಗೆ ಸೇರಿ 2007ರಲ್ಲಿ ಮಾಯಾವತಿ ಸರ್ಕಾರದ ವಿರುದ್ಧ ಕೆಲ ಸದಸ್ಯರು ರಾಜ್ಯಪಾಲರನ್ನು ಭೇಟಿ ಮಾಡಿ ಬಿಎಸ್‍ಪಿ ಸರ್ಕಾರವನ್ನು ವಜಾಗೊಳಿಸುವಂತೆ ಕೇಳಿದಾಗ ಅಂಥ ಸದಸ್ಯರನ್ನು ಪಕ್ಷದಿಂದ ಹೊರಹಾಕಲಾಯಿತು. ಆ ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್‍ಗೆ ಸದಸ್ಯರು ಹೋದಾಗ ‘ಅವರ ನಡೆ ಐಚ್ಛಿಕವಾಗಿ ಪಕ್ಷದ ಸದಸ್ಯತ್ವವನ್ನು ತೊರೆದಿದ್ದಕ್ಕೆ ಸಮ’ ಎಂದು ಹೇಳಿ ಕೋರ್ಟು ರಾಜ್ಯಪಾಲರ ತೀರ್ಪನ್ನು ಎತ್ತಿ ಹಿಡಿದಿತ್ತು. ಆದರೆ 2011ರಲ್ಲಿ ಬಿ.ಎಸ್.ಯಡಿಯೂರಪ್ಪ ಕೇಸಿನಲ್ಲಿ ಬಾಲಚಂದ್ರ ಜಾರಕಿಹೊಳಿ ಸೇರಿದಂತೆ ಅನೇಕರ ಸದಸ್ಯತ್ವ ಅಮಾನ್ಯ ಮಾಡಿದ ರಾಜ್ಯಪಾಲರ ತೀರ್ಪನ್ನು ತಳ್ಳಿಹಾಕಿತ್ತು. ಹಾಗೆ ಮಾಡುವಾಗ ಪಕ್ಷದಲ್ಲಿನ ಸ್ವಜನಪಕ್ಷಪಾತ, ದುರಾಡಳಿತ ಯಾವುದನ್ನು ಅವರು ನಿರಾಕರಿಸದೆ ಇದ್ದುದರಿಂದ ಪ್ರತಿಕೂಲ ಅನುಮಾನ (adverse inference) ವ್ಯಕ್ತಪಡಿಸಿ ತೀರ್ಮಾನ ಕೈಗೊಂಡಿತ್ತು. ಇನ್ನು ಮುಖ್ಯವಾಗಿ 2/3 ಸದಸ್ಯರು ಒಂದು ಪಕ್ಷ ತೊರೆದು ಮತ್ತೊಂದು ಪಕ್ಷದೊಂದಿಗೆ ವಿಲೀನ ಹೊಂದಿದಾಗ ಅದು ಪಕ್ಷದ ತೀರ್ಮಾನವಾಗಿರದೆ ಕೇವಲ ಹೊರನಡೆದ ಸದಸ್ಯರ ತೀರ್ಮಾನ ಮಾತ್ರ ಆದಾಗ ಅದನ್ನು ಪಕ್ಷದ ವಿಲೀನ ಎನ್ನಲು ಬರುವುದಿಲ್ಲ. ಅದು ಕೇವಲ ಆ ಸದಸ್ಯರ ವಿಲೀನ ಮಾತ್ರ. ಹಾಗಿದ್ದಾಗ ಇಂತಹ ಸನ್ನಿವೇಶವನ್ನು ಹೇಗೆ ಅರ್ಥೈಸುತ್ತಾರೆ ಎಂಬುದು ಕೂಡ ಒಂದು ದ್ವಂದ್ವವೇ.

ಒಂದು ಸ್ಥಿರತೆ ಹಾಗೂ ಶಿಸ್ತು ತರಲು ಜಾರಿಗೆ ಬಂದ ಈ ಕಾಯ್ದೆ ಎಷ್ಟರಮಟ್ಟಿಗೆ ಯಶಸ್ವಿಯಾಗಿದೆ ಎಂಬುದು ಜನರ ಎದುರಿಗೆ ಇದೆ. ಒಟ್ಟಿನಲ್ಲಿ ಈ ರಾಜಕೀಯ ರಮ್ಮಿ ಆಟದಲ್ಲಿ ಆಗಬಹುದಾದ ಸಂಯೋಜನೆಗಳಿಗೆ ಅಂತ್ಯವೇ ಇಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...