Homeಅಂಕಣಗಳು`ಸರ್ವೋಚ್ಚ’ವೇ ಶೋಷಿತರ ಭವಿಷ್ಯಕ್ಕೆ ಮುಳ್ಳಾದರೆ...

`ಸರ್ವೋಚ್ಚ’ವೇ ಶೋಷಿತರ ಭವಿಷ್ಯಕ್ಕೆ ಮುಳ್ಳಾದರೆ…

- Advertisement -
- Advertisement -
  • ಗೌರಿ ಲಂಕೇಶ್
    ಆಗಸ್ಟ್ 24, 2005 (`ಕಂಡಹಾಗೆ’ ಸಂಪಾದಕೀಯದಿಂದ) |

ಇಡೀ ದೇಶ ಆಗಸ್ಟ್ 15ರಂದು, ದೇಶಕ್ಕೆ ಸ್ವಾತಂತ್ರ್ಯ ಬಂದು 58 ವರ್ಷಗಳಾಗಿದ್ದನ್ನು ಸಂಭ್ರಮಿಸಲು ಸಜ್ಜಾಗುತ್ತಿತ್ತು. ಆದರೆ ಮೂರು ದಿನಗಳ ಮುನ್ನ ಬಂದ ಸುದ್ದಿ ಈ ದೇಶದ ಶೇ. 80ರಷ್ಟು ಮುಂದಿನ ಪ್ರಜೆಗಳ ಕನಸುಗಳನ್ನೇ ಹೊಸಕಿ ಹಾಕಿತು. ಶುಕ್ರವಾರ ನಮ್ಮ ಸರ್ವೋಚ್ಚ ನ್ಯಾಯಾಲಯ ನೀಡಿದ ತೀರ್ಪು, ಇನ್ನು ಮುಂದೆ ಶೋಷಿತ, ಹಿಂದುಳಿದ, ದಲಿತ, ಹಣ ಹೊಂದಿರದ ವರ್ಗಗಳಿಗೆ ಸೇರಿದ್ದ ಪ್ರತಿಭಾವಂತ ಯುವಕ-ಯುವತಿಯರಿಗೆ ವೃತ್ತಿ ಶಿಕ್ಷಣ ಪಡೆಯುವ ಅವಕಾಶವನ್ನೇ ನಿರಾಕರಿಸಿತು. ಎಲ್ಲರಿಗೂ ನ್ಯಾಯ ಒದಗಿಸಬೇಕಿರುವ ನ್ಯಾಯಾಲಯವೇ ಇನ್ನು ಮುಂದೆ ಖಾಸಗಿ ಇಂಜಿನಿಯರಿಂಗ್ ಮತ್ತು ಮೆಡಿಕಲ್ ಕಾಲೇಜುಗಳು ‘ಸಾಮಾಜಿಕ ನ್ಯಾಯ’ ಒದಗಿಸಬೇಕೆಂಬ ಗೋಜಲುಗಳಿಲ್ಲದೆ ಸರ್ಕಾರದ ಹಸ್ತಕ್ಷೇಪವಿಲ್ಲದೆ, ಕಾರ್ಯ ನಿರ್ವಹಿಸಬಹುದು ಎಂದು ಫರ್ಮಾನು ಹೊರಡಿಸಿತು.
ಜಾಗತೀಕರಣ, ಖಾಸಗಿಕರಣ, ಉದಾರೀಕರಣ ಇಂದಿನ ಪರಿಸ್ಥಿತಿಯಲ್ಲಿ ಭಾರತದ ವಂಚಿತ ವರ್ಗಗಳಿಗೆ ನ್ಯಾಯ ಸಿಗಬೇಕೆಂದಿದ್ದರೆ ಖಾಸಗಿ ಕಂಪನಿಗಳಲ್ಲೂ ಮೀಸಲಾತಿ ಬೇಕೆಂಬ ಬೇಡಿಕೆ ಇರುವ ಸಂದರ್ಭದಲ್ಲಿ ನಮ್ಮ ಸರ್ವೋಚ್ಚ ನ್ಯಾಯಾಲಯವೇ ವೃತ್ತಿ ಶಿಕ್ಷಣದ ಬಾಗಿಲನ್ನು ಈ ವಂಚಿತ ವರ್ಗಗಳಿಗೆ ಮುಚ್ಚಿದೆ.
ಖಾಸಗಿ ವೃತ್ತಿ ಶಿಕ್ಷಣ ಕಾಲೇಜುಗಳು ‘ಸಾಮಾಜಿಕ ನ್ಯಾಯ’ದ ಯಾವ ಮಾನದಂಡವನ್ನು ಅನುಸರಿಸುವ ಅಗತ್ಯವಿಲ್ಲ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯ, ತಮಗೆ ಬೇಕಾದವರಿಗೆ ಈ ಸಂಸ್ಥೆಗಳು ಪ್ರವೇಶ ನೀಡಬಹುದು ಎಂದಿದೆ. ಆದರೆ, ಈ ಪ್ರವೇಶಕ್ಕೆ ಗ್ರಾಮೀಣ, ಕನ್ನಡಿಗ, ದಲಿತ, ಹಿಂದುಳಿದ ಹಿನ್ನಲೆಯವರಿಗೆ ಯಾವುದೇ ಮೀಸಲಾತಿ ಇರುವುದಿಲ್ಲ ಅಷ್ಟೇ ಅಲ್ಲ, ಈ ಖಾಸಗಿ ವಿದ್ಯಾಸಂಸ್ಥೆಗಳು “ಡೊನೇಷನ್ ಪಡೆಯಬಾರದು, ಲಾಭ ಮಾಡಿಕೊಳ್ಳಬಾರದು” ಎಂದು ಹೇಳಿರುವ ನ್ಯಾಯಾಲಯ ಅವುಗಳು ತಮಗೆ ಸೂಕ್ತ ಎನಿಸಿದಷ್ಟು ಶುಲ್ಕ ವಿಧಿಸಹುದು ಎಂದೂ ಆದೇಶಿಸಿದೆ.
ಈ “ಸೂಕ್ತ” ಶುಲ್ಕ ಎಂದರೇನು?
ನಮ್ಮ ಸಂವಿಧಾನವು ಶಿಕ್ಷಣದಲ್ಲಿ ಹಾಗೂ ಉದ್ಯೋಗ ಅವಕಾಶಗಳಲ್ಲಿ ವರ್ಗ, ಜಾತಿ, ಲಿಂಗ ಆಧಾರಿತ ತಾರತಮ್ಯಗಳನ್ನು ನಿವಾರಿಸುವಂತೆ ಯೋಜನೆಗಳನ್ನು ರೂಪಿಸಬೇಕೆಂದು ಸರ್ಕಾರಕ್ಕೆ ಆದೇಶಿಸುತ್ತದೆ. ಅದೇ ರೀತಿ ದೇಶದ ಸಂಪನ್ಮೂಲಗಳೂ ಎಲ್ಲರಿಗೆ ಸಿಗುವಂತಾಂಗಬೇಕು ಎಂದು ಹೇಳುತ್ತದೆ. ಆದ್ದರಿಂದಲೇ ಅತ್ಯಂತ ದಮನಿತ ಪಂಗಡ ಹಾಗೂ ಸಮುದಾಯಗಳಿಗೆ ವಿಶೇಷ ಮೀಸಲಾತಿ ನೀಡಲಾಗುತ್ತದೆ. ಇದನ್ನು ಗಮನದಲ್ಲಿಟ್ಟುಕೊಂಡೇ ಮೋಹಿನಿ ಜೈನ್ ಪ್ರಕರಣದಲ್ಲಿ “ಯಾವುದೇ ಖಾಸಗಿ ಶಿಕ್ಷಣ ಸಂಸ್ಥೆ ಸರ್ಕಾರದಿಂದ ಮಾನ್ಯತೆ ಪಡೆದ ಕೂಡಲೇ ಆ ಸಂಸ್ಥೆಗೆ ಸರ್ಕಾರಕ್ಕಿರುವ ಸಾಮಾಜಿಕ ಜವಾಬ್ದಾರಿಗಳೂ ಅನ್ವಯಿಸುತ್ತದೆ” ಎಂದು 90ರ ದಶಕದಲ್ಲಿ ಸರ್ವೋಚ್ಛ ನ್ಯಾಯಲಯ ಹೇಳಿತ್ತು. ಹಾಗೆಯೇ 1993ರ ಉನ್ನಿ ಕೃಷ್ಣನ್ ಪ್ರಕರಣದಲ್ಲಿ “ಖಾಸಗಿ ಶಿಕ್ಷಣ ಸಂಸ್ಥೆಗಳು ಶಿಕ್ಷಣವನ್ನು ಒಂದು ವ್ಯಾಪಾರವಾಗಿ ನಡೆಸಲು ಸಂವಿಧಾನದಲ್ಲಿ ಮಾನ್ಯತೆ ಇಲ್ಲ” ಎಂದೂ ಹೇಳಿತ್ತು.
ಆದರೆ ಈಗ, ಖಾಸಗಿ ಶಿಕ್ಷಣ ಸಂಸ್ಥೆಗಳು ಸಾಮಾಜಿಕ ನ್ಯಾಯ ನೀತಿಯನ್ನು ಅನುಸರಿಸಬೇಕಿಲ್ಲ, ತಮಗೆ ಸೂಕ್ತವೆನಿಸುವಷ್ಟು ಶುಲ್ಕವನ್ನು ವಿಧಿಸಬಹುದು ಎಂದು ಅದೇ ಸರ್ವೋಚ್ಛ ನ್ಯಾಯಾಲಯ ಹೇಳಿದೆ. ಒಂದು ರೀತಿಯಲ್ಲಿ ಇದೇ ನ್ಯಾಯಾಲಯ ಖಿಒಂ ಪೈ ಪ್ರಕರಣದಲ್ಲಿ “ಶಿಕ್ಷಣವನ್ನು ವ್ಯವಹಾರವಾಗಿ ನಡೆಸಬಹುದು; ಸರ್ಕಾರ ಮೂಗು ತೂರಿಸಬಾರದು” ಎಂದು 2002ರಲ್ಲಿ ನೀಡಿದ್ದ ತೀರ್ಪಿನ ಮುಂದುವರಿದ ಭಾಗದಂತಿದೆ. ಈ ತೀರ್ಪು ನಮ್ಮ ಸಂವಿಧಾನದಲ್ಲಿರುವ ಆಶಯಗಳಿಗೆ ಎಷ್ಟು ಹತ್ತಿರವಾಗಿದೆ ಎಂದು ಯಾರೂ ಬೇಕಾದರೂ ತೀರ್ಮಾನಿಸಬಹುದು.
ಇನ್ನು ಮೆರಿಟ್ ಆಧಾರದ ಮೇಲೆ ಖಾಸಗಿ ಶಿಕ್ಷಣ ಸಂಸ್ಥೆಗಳು ಪ್ರವೇಶವನ್ನು ತೀರ್ಮಾನಿಸಬಹುದು ಎಂದು ಹೇಳಿದೆ. ಮೊದಲನೆಯದಾಗಿ ಈ ‘ಮೆರಿಟ್’ ಎಂಬುದನ್ನೇ ತೀರ್ಮಾನಿಸುವುದು ಯಾವ ಮಾನದಂಡದಿಂದ? ಜಾತಿ, ವರ್ಗ, ನಗರ-ಗ್ರಾಮೀಣ, ಉಳ್ಳವರು-ಉಳ್ಳದಿರುವವರು ಹೀಗೆ ಹಲವಾರು ಅಂತರಗಳು ನಮ್ಮ ಸಮಾಜದಲ್ಲಿರುವಾಗ, ಇಲ್ಲಿ ಐeveಟ Pಟಚಿಥಿiಟಿg ಈieಟಜ ಎಂಬುದೇ ಇಲ್ಲದಿರುವಾಗ, ಈ ‘ಮೆರಿಟ್’ ಅನ್ನು ನಿರ್ಧರಿಸುವುದು ಹೇಗೆ? ಇದನ್ನೆಲ್ಲಾ ಚಿಂತಿಸುತ್ತಾ ಹೋದಂತೆ, ನಿಜವಾಗಲೂ ಇಂದಿನ ಸಮಾಜದಲ್ಲಿ ನಮ್ಮ ಲಕ್ಷಾಂತರ ಪ್ರತಿಭಾವಂತ ವಂಚಿತ ಸಮುದಾಯಗಳ ವಿದ್ಯಾರ್ಥಿಗಳಿಗೆ ಭವಿಷ್ಯವೇ ಇಲ್ಲದಂತಾಗಿದೆ,
ಇದು ಯಾವ ನ್ಯಾಯ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...