Homeಅಂಕಣಗಳು`ಸರ್ವೋಚ್ಚ’ವೇ ಶೋಷಿತರ ಭವಿಷ್ಯಕ್ಕೆ ಮುಳ್ಳಾದರೆ...

`ಸರ್ವೋಚ್ಚ’ವೇ ಶೋಷಿತರ ಭವಿಷ್ಯಕ್ಕೆ ಮುಳ್ಳಾದರೆ…

- Advertisement -
- Advertisement -
  • ಗೌರಿ ಲಂಕೇಶ್
    ಆಗಸ್ಟ್ 24, 2005 (`ಕಂಡಹಾಗೆ’ ಸಂಪಾದಕೀಯದಿಂದ) |

ಇಡೀ ದೇಶ ಆಗಸ್ಟ್ 15ರಂದು, ದೇಶಕ್ಕೆ ಸ್ವಾತಂತ್ರ್ಯ ಬಂದು 58 ವರ್ಷಗಳಾಗಿದ್ದನ್ನು ಸಂಭ್ರಮಿಸಲು ಸಜ್ಜಾಗುತ್ತಿತ್ತು. ಆದರೆ ಮೂರು ದಿನಗಳ ಮುನ್ನ ಬಂದ ಸುದ್ದಿ ಈ ದೇಶದ ಶೇ. 80ರಷ್ಟು ಮುಂದಿನ ಪ್ರಜೆಗಳ ಕನಸುಗಳನ್ನೇ ಹೊಸಕಿ ಹಾಕಿತು. ಶುಕ್ರವಾರ ನಮ್ಮ ಸರ್ವೋಚ್ಚ ನ್ಯಾಯಾಲಯ ನೀಡಿದ ತೀರ್ಪು, ಇನ್ನು ಮುಂದೆ ಶೋಷಿತ, ಹಿಂದುಳಿದ, ದಲಿತ, ಹಣ ಹೊಂದಿರದ ವರ್ಗಗಳಿಗೆ ಸೇರಿದ್ದ ಪ್ರತಿಭಾವಂತ ಯುವಕ-ಯುವತಿಯರಿಗೆ ವೃತ್ತಿ ಶಿಕ್ಷಣ ಪಡೆಯುವ ಅವಕಾಶವನ್ನೇ ನಿರಾಕರಿಸಿತು. ಎಲ್ಲರಿಗೂ ನ್ಯಾಯ ಒದಗಿಸಬೇಕಿರುವ ನ್ಯಾಯಾಲಯವೇ ಇನ್ನು ಮುಂದೆ ಖಾಸಗಿ ಇಂಜಿನಿಯರಿಂಗ್ ಮತ್ತು ಮೆಡಿಕಲ್ ಕಾಲೇಜುಗಳು ‘ಸಾಮಾಜಿಕ ನ್ಯಾಯ’ ಒದಗಿಸಬೇಕೆಂಬ ಗೋಜಲುಗಳಿಲ್ಲದೆ ಸರ್ಕಾರದ ಹಸ್ತಕ್ಷೇಪವಿಲ್ಲದೆ, ಕಾರ್ಯ ನಿರ್ವಹಿಸಬಹುದು ಎಂದು ಫರ್ಮಾನು ಹೊರಡಿಸಿತು.
ಜಾಗತೀಕರಣ, ಖಾಸಗಿಕರಣ, ಉದಾರೀಕರಣ ಇಂದಿನ ಪರಿಸ್ಥಿತಿಯಲ್ಲಿ ಭಾರತದ ವಂಚಿತ ವರ್ಗಗಳಿಗೆ ನ್ಯಾಯ ಸಿಗಬೇಕೆಂದಿದ್ದರೆ ಖಾಸಗಿ ಕಂಪನಿಗಳಲ್ಲೂ ಮೀಸಲಾತಿ ಬೇಕೆಂಬ ಬೇಡಿಕೆ ಇರುವ ಸಂದರ್ಭದಲ್ಲಿ ನಮ್ಮ ಸರ್ವೋಚ್ಚ ನ್ಯಾಯಾಲಯವೇ ವೃತ್ತಿ ಶಿಕ್ಷಣದ ಬಾಗಿಲನ್ನು ಈ ವಂಚಿತ ವರ್ಗಗಳಿಗೆ ಮುಚ್ಚಿದೆ.
ಖಾಸಗಿ ವೃತ್ತಿ ಶಿಕ್ಷಣ ಕಾಲೇಜುಗಳು ‘ಸಾಮಾಜಿಕ ನ್ಯಾಯ’ದ ಯಾವ ಮಾನದಂಡವನ್ನು ಅನುಸರಿಸುವ ಅಗತ್ಯವಿಲ್ಲ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯ, ತಮಗೆ ಬೇಕಾದವರಿಗೆ ಈ ಸಂಸ್ಥೆಗಳು ಪ್ರವೇಶ ನೀಡಬಹುದು ಎಂದಿದೆ. ಆದರೆ, ಈ ಪ್ರವೇಶಕ್ಕೆ ಗ್ರಾಮೀಣ, ಕನ್ನಡಿಗ, ದಲಿತ, ಹಿಂದುಳಿದ ಹಿನ್ನಲೆಯವರಿಗೆ ಯಾವುದೇ ಮೀಸಲಾತಿ ಇರುವುದಿಲ್ಲ ಅಷ್ಟೇ ಅಲ್ಲ, ಈ ಖಾಸಗಿ ವಿದ್ಯಾಸಂಸ್ಥೆಗಳು “ಡೊನೇಷನ್ ಪಡೆಯಬಾರದು, ಲಾಭ ಮಾಡಿಕೊಳ್ಳಬಾರದು” ಎಂದು ಹೇಳಿರುವ ನ್ಯಾಯಾಲಯ ಅವುಗಳು ತಮಗೆ ಸೂಕ್ತ ಎನಿಸಿದಷ್ಟು ಶುಲ್ಕ ವಿಧಿಸಹುದು ಎಂದೂ ಆದೇಶಿಸಿದೆ.
ಈ “ಸೂಕ್ತ” ಶುಲ್ಕ ಎಂದರೇನು?
ನಮ್ಮ ಸಂವಿಧಾನವು ಶಿಕ್ಷಣದಲ್ಲಿ ಹಾಗೂ ಉದ್ಯೋಗ ಅವಕಾಶಗಳಲ್ಲಿ ವರ್ಗ, ಜಾತಿ, ಲಿಂಗ ಆಧಾರಿತ ತಾರತಮ್ಯಗಳನ್ನು ನಿವಾರಿಸುವಂತೆ ಯೋಜನೆಗಳನ್ನು ರೂಪಿಸಬೇಕೆಂದು ಸರ್ಕಾರಕ್ಕೆ ಆದೇಶಿಸುತ್ತದೆ. ಅದೇ ರೀತಿ ದೇಶದ ಸಂಪನ್ಮೂಲಗಳೂ ಎಲ್ಲರಿಗೆ ಸಿಗುವಂತಾಂಗಬೇಕು ಎಂದು ಹೇಳುತ್ತದೆ. ಆದ್ದರಿಂದಲೇ ಅತ್ಯಂತ ದಮನಿತ ಪಂಗಡ ಹಾಗೂ ಸಮುದಾಯಗಳಿಗೆ ವಿಶೇಷ ಮೀಸಲಾತಿ ನೀಡಲಾಗುತ್ತದೆ. ಇದನ್ನು ಗಮನದಲ್ಲಿಟ್ಟುಕೊಂಡೇ ಮೋಹಿನಿ ಜೈನ್ ಪ್ರಕರಣದಲ್ಲಿ “ಯಾವುದೇ ಖಾಸಗಿ ಶಿಕ್ಷಣ ಸಂಸ್ಥೆ ಸರ್ಕಾರದಿಂದ ಮಾನ್ಯತೆ ಪಡೆದ ಕೂಡಲೇ ಆ ಸಂಸ್ಥೆಗೆ ಸರ್ಕಾರಕ್ಕಿರುವ ಸಾಮಾಜಿಕ ಜವಾಬ್ದಾರಿಗಳೂ ಅನ್ವಯಿಸುತ್ತದೆ” ಎಂದು 90ರ ದಶಕದಲ್ಲಿ ಸರ್ವೋಚ್ಛ ನ್ಯಾಯಲಯ ಹೇಳಿತ್ತು. ಹಾಗೆಯೇ 1993ರ ಉನ್ನಿ ಕೃಷ್ಣನ್ ಪ್ರಕರಣದಲ್ಲಿ “ಖಾಸಗಿ ಶಿಕ್ಷಣ ಸಂಸ್ಥೆಗಳು ಶಿಕ್ಷಣವನ್ನು ಒಂದು ವ್ಯಾಪಾರವಾಗಿ ನಡೆಸಲು ಸಂವಿಧಾನದಲ್ಲಿ ಮಾನ್ಯತೆ ಇಲ್ಲ” ಎಂದೂ ಹೇಳಿತ್ತು.
ಆದರೆ ಈಗ, ಖಾಸಗಿ ಶಿಕ್ಷಣ ಸಂಸ್ಥೆಗಳು ಸಾಮಾಜಿಕ ನ್ಯಾಯ ನೀತಿಯನ್ನು ಅನುಸರಿಸಬೇಕಿಲ್ಲ, ತಮಗೆ ಸೂಕ್ತವೆನಿಸುವಷ್ಟು ಶುಲ್ಕವನ್ನು ವಿಧಿಸಬಹುದು ಎಂದು ಅದೇ ಸರ್ವೋಚ್ಛ ನ್ಯಾಯಾಲಯ ಹೇಳಿದೆ. ಒಂದು ರೀತಿಯಲ್ಲಿ ಇದೇ ನ್ಯಾಯಾಲಯ ಖಿಒಂ ಪೈ ಪ್ರಕರಣದಲ್ಲಿ “ಶಿಕ್ಷಣವನ್ನು ವ್ಯವಹಾರವಾಗಿ ನಡೆಸಬಹುದು; ಸರ್ಕಾರ ಮೂಗು ತೂರಿಸಬಾರದು” ಎಂದು 2002ರಲ್ಲಿ ನೀಡಿದ್ದ ತೀರ್ಪಿನ ಮುಂದುವರಿದ ಭಾಗದಂತಿದೆ. ಈ ತೀರ್ಪು ನಮ್ಮ ಸಂವಿಧಾನದಲ್ಲಿರುವ ಆಶಯಗಳಿಗೆ ಎಷ್ಟು ಹತ್ತಿರವಾಗಿದೆ ಎಂದು ಯಾರೂ ಬೇಕಾದರೂ ತೀರ್ಮಾನಿಸಬಹುದು.
ಇನ್ನು ಮೆರಿಟ್ ಆಧಾರದ ಮೇಲೆ ಖಾಸಗಿ ಶಿಕ್ಷಣ ಸಂಸ್ಥೆಗಳು ಪ್ರವೇಶವನ್ನು ತೀರ್ಮಾನಿಸಬಹುದು ಎಂದು ಹೇಳಿದೆ. ಮೊದಲನೆಯದಾಗಿ ಈ ‘ಮೆರಿಟ್’ ಎಂಬುದನ್ನೇ ತೀರ್ಮಾನಿಸುವುದು ಯಾವ ಮಾನದಂಡದಿಂದ? ಜಾತಿ, ವರ್ಗ, ನಗರ-ಗ್ರಾಮೀಣ, ಉಳ್ಳವರು-ಉಳ್ಳದಿರುವವರು ಹೀಗೆ ಹಲವಾರು ಅಂತರಗಳು ನಮ್ಮ ಸಮಾಜದಲ್ಲಿರುವಾಗ, ಇಲ್ಲಿ ಐeveಟ Pಟಚಿಥಿiಟಿg ಈieಟಜ ಎಂಬುದೇ ಇಲ್ಲದಿರುವಾಗ, ಈ ‘ಮೆರಿಟ್’ ಅನ್ನು ನಿರ್ಧರಿಸುವುದು ಹೇಗೆ? ಇದನ್ನೆಲ್ಲಾ ಚಿಂತಿಸುತ್ತಾ ಹೋದಂತೆ, ನಿಜವಾಗಲೂ ಇಂದಿನ ಸಮಾಜದಲ್ಲಿ ನಮ್ಮ ಲಕ್ಷಾಂತರ ಪ್ರತಿಭಾವಂತ ವಂಚಿತ ಸಮುದಾಯಗಳ ವಿದ್ಯಾರ್ಥಿಗಳಿಗೆ ಭವಿಷ್ಯವೇ ಇಲ್ಲದಂತಾಗಿದೆ,
ಇದು ಯಾವ ನ್ಯಾಯ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...