Homeಅಂಕಣಗಳು`ಸರ್ವೋಚ್ಚ’ವೇ ಶೋಷಿತರ ಭವಿಷ್ಯಕ್ಕೆ ಮುಳ್ಳಾದರೆ...

`ಸರ್ವೋಚ್ಚ’ವೇ ಶೋಷಿತರ ಭವಿಷ್ಯಕ್ಕೆ ಮುಳ್ಳಾದರೆ…

- Advertisement -
- Advertisement -
  • ಗೌರಿ ಲಂಕೇಶ್
    ಆಗಸ್ಟ್ 24, 2005 (`ಕಂಡಹಾಗೆ’ ಸಂಪಾದಕೀಯದಿಂದ) |

ಇಡೀ ದೇಶ ಆಗಸ್ಟ್ 15ರಂದು, ದೇಶಕ್ಕೆ ಸ್ವಾತಂತ್ರ್ಯ ಬಂದು 58 ವರ್ಷಗಳಾಗಿದ್ದನ್ನು ಸಂಭ್ರಮಿಸಲು ಸಜ್ಜಾಗುತ್ತಿತ್ತು. ಆದರೆ ಮೂರು ದಿನಗಳ ಮುನ್ನ ಬಂದ ಸುದ್ದಿ ಈ ದೇಶದ ಶೇ. 80ರಷ್ಟು ಮುಂದಿನ ಪ್ರಜೆಗಳ ಕನಸುಗಳನ್ನೇ ಹೊಸಕಿ ಹಾಕಿತು. ಶುಕ್ರವಾರ ನಮ್ಮ ಸರ್ವೋಚ್ಚ ನ್ಯಾಯಾಲಯ ನೀಡಿದ ತೀರ್ಪು, ಇನ್ನು ಮುಂದೆ ಶೋಷಿತ, ಹಿಂದುಳಿದ, ದಲಿತ, ಹಣ ಹೊಂದಿರದ ವರ್ಗಗಳಿಗೆ ಸೇರಿದ್ದ ಪ್ರತಿಭಾವಂತ ಯುವಕ-ಯುವತಿಯರಿಗೆ ವೃತ್ತಿ ಶಿಕ್ಷಣ ಪಡೆಯುವ ಅವಕಾಶವನ್ನೇ ನಿರಾಕರಿಸಿತು. ಎಲ್ಲರಿಗೂ ನ್ಯಾಯ ಒದಗಿಸಬೇಕಿರುವ ನ್ಯಾಯಾಲಯವೇ ಇನ್ನು ಮುಂದೆ ಖಾಸಗಿ ಇಂಜಿನಿಯರಿಂಗ್ ಮತ್ತು ಮೆಡಿಕಲ್ ಕಾಲೇಜುಗಳು ‘ಸಾಮಾಜಿಕ ನ್ಯಾಯ’ ಒದಗಿಸಬೇಕೆಂಬ ಗೋಜಲುಗಳಿಲ್ಲದೆ ಸರ್ಕಾರದ ಹಸ್ತಕ್ಷೇಪವಿಲ್ಲದೆ, ಕಾರ್ಯ ನಿರ್ವಹಿಸಬಹುದು ಎಂದು ಫರ್ಮಾನು ಹೊರಡಿಸಿತು.
ಜಾಗತೀಕರಣ, ಖಾಸಗಿಕರಣ, ಉದಾರೀಕರಣ ಇಂದಿನ ಪರಿಸ್ಥಿತಿಯಲ್ಲಿ ಭಾರತದ ವಂಚಿತ ವರ್ಗಗಳಿಗೆ ನ್ಯಾಯ ಸಿಗಬೇಕೆಂದಿದ್ದರೆ ಖಾಸಗಿ ಕಂಪನಿಗಳಲ್ಲೂ ಮೀಸಲಾತಿ ಬೇಕೆಂಬ ಬೇಡಿಕೆ ಇರುವ ಸಂದರ್ಭದಲ್ಲಿ ನಮ್ಮ ಸರ್ವೋಚ್ಚ ನ್ಯಾಯಾಲಯವೇ ವೃತ್ತಿ ಶಿಕ್ಷಣದ ಬಾಗಿಲನ್ನು ಈ ವಂಚಿತ ವರ್ಗಗಳಿಗೆ ಮುಚ್ಚಿದೆ.
ಖಾಸಗಿ ವೃತ್ತಿ ಶಿಕ್ಷಣ ಕಾಲೇಜುಗಳು ‘ಸಾಮಾಜಿಕ ನ್ಯಾಯ’ದ ಯಾವ ಮಾನದಂಡವನ್ನು ಅನುಸರಿಸುವ ಅಗತ್ಯವಿಲ್ಲ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯ, ತಮಗೆ ಬೇಕಾದವರಿಗೆ ಈ ಸಂಸ್ಥೆಗಳು ಪ್ರವೇಶ ನೀಡಬಹುದು ಎಂದಿದೆ. ಆದರೆ, ಈ ಪ್ರವೇಶಕ್ಕೆ ಗ್ರಾಮೀಣ, ಕನ್ನಡಿಗ, ದಲಿತ, ಹಿಂದುಳಿದ ಹಿನ್ನಲೆಯವರಿಗೆ ಯಾವುದೇ ಮೀಸಲಾತಿ ಇರುವುದಿಲ್ಲ ಅಷ್ಟೇ ಅಲ್ಲ, ಈ ಖಾಸಗಿ ವಿದ್ಯಾಸಂಸ್ಥೆಗಳು “ಡೊನೇಷನ್ ಪಡೆಯಬಾರದು, ಲಾಭ ಮಾಡಿಕೊಳ್ಳಬಾರದು” ಎಂದು ಹೇಳಿರುವ ನ್ಯಾಯಾಲಯ ಅವುಗಳು ತಮಗೆ ಸೂಕ್ತ ಎನಿಸಿದಷ್ಟು ಶುಲ್ಕ ವಿಧಿಸಹುದು ಎಂದೂ ಆದೇಶಿಸಿದೆ.
ಈ “ಸೂಕ್ತ” ಶುಲ್ಕ ಎಂದರೇನು?
ನಮ್ಮ ಸಂವಿಧಾನವು ಶಿಕ್ಷಣದಲ್ಲಿ ಹಾಗೂ ಉದ್ಯೋಗ ಅವಕಾಶಗಳಲ್ಲಿ ವರ್ಗ, ಜಾತಿ, ಲಿಂಗ ಆಧಾರಿತ ತಾರತಮ್ಯಗಳನ್ನು ನಿವಾರಿಸುವಂತೆ ಯೋಜನೆಗಳನ್ನು ರೂಪಿಸಬೇಕೆಂದು ಸರ್ಕಾರಕ್ಕೆ ಆದೇಶಿಸುತ್ತದೆ. ಅದೇ ರೀತಿ ದೇಶದ ಸಂಪನ್ಮೂಲಗಳೂ ಎಲ್ಲರಿಗೆ ಸಿಗುವಂತಾಂಗಬೇಕು ಎಂದು ಹೇಳುತ್ತದೆ. ಆದ್ದರಿಂದಲೇ ಅತ್ಯಂತ ದಮನಿತ ಪಂಗಡ ಹಾಗೂ ಸಮುದಾಯಗಳಿಗೆ ವಿಶೇಷ ಮೀಸಲಾತಿ ನೀಡಲಾಗುತ್ತದೆ. ಇದನ್ನು ಗಮನದಲ್ಲಿಟ್ಟುಕೊಂಡೇ ಮೋಹಿನಿ ಜೈನ್ ಪ್ರಕರಣದಲ್ಲಿ “ಯಾವುದೇ ಖಾಸಗಿ ಶಿಕ್ಷಣ ಸಂಸ್ಥೆ ಸರ್ಕಾರದಿಂದ ಮಾನ್ಯತೆ ಪಡೆದ ಕೂಡಲೇ ಆ ಸಂಸ್ಥೆಗೆ ಸರ್ಕಾರಕ್ಕಿರುವ ಸಾಮಾಜಿಕ ಜವಾಬ್ದಾರಿಗಳೂ ಅನ್ವಯಿಸುತ್ತದೆ” ಎಂದು 90ರ ದಶಕದಲ್ಲಿ ಸರ್ವೋಚ್ಛ ನ್ಯಾಯಲಯ ಹೇಳಿತ್ತು. ಹಾಗೆಯೇ 1993ರ ಉನ್ನಿ ಕೃಷ್ಣನ್ ಪ್ರಕರಣದಲ್ಲಿ “ಖಾಸಗಿ ಶಿಕ್ಷಣ ಸಂಸ್ಥೆಗಳು ಶಿಕ್ಷಣವನ್ನು ಒಂದು ವ್ಯಾಪಾರವಾಗಿ ನಡೆಸಲು ಸಂವಿಧಾನದಲ್ಲಿ ಮಾನ್ಯತೆ ಇಲ್ಲ” ಎಂದೂ ಹೇಳಿತ್ತು.
ಆದರೆ ಈಗ, ಖಾಸಗಿ ಶಿಕ್ಷಣ ಸಂಸ್ಥೆಗಳು ಸಾಮಾಜಿಕ ನ್ಯಾಯ ನೀತಿಯನ್ನು ಅನುಸರಿಸಬೇಕಿಲ್ಲ, ತಮಗೆ ಸೂಕ್ತವೆನಿಸುವಷ್ಟು ಶುಲ್ಕವನ್ನು ವಿಧಿಸಬಹುದು ಎಂದು ಅದೇ ಸರ್ವೋಚ್ಛ ನ್ಯಾಯಾಲಯ ಹೇಳಿದೆ. ಒಂದು ರೀತಿಯಲ್ಲಿ ಇದೇ ನ್ಯಾಯಾಲಯ ಖಿಒಂ ಪೈ ಪ್ರಕರಣದಲ್ಲಿ “ಶಿಕ್ಷಣವನ್ನು ವ್ಯವಹಾರವಾಗಿ ನಡೆಸಬಹುದು; ಸರ್ಕಾರ ಮೂಗು ತೂರಿಸಬಾರದು” ಎಂದು 2002ರಲ್ಲಿ ನೀಡಿದ್ದ ತೀರ್ಪಿನ ಮುಂದುವರಿದ ಭಾಗದಂತಿದೆ. ಈ ತೀರ್ಪು ನಮ್ಮ ಸಂವಿಧಾನದಲ್ಲಿರುವ ಆಶಯಗಳಿಗೆ ಎಷ್ಟು ಹತ್ತಿರವಾಗಿದೆ ಎಂದು ಯಾರೂ ಬೇಕಾದರೂ ತೀರ್ಮಾನಿಸಬಹುದು.
ಇನ್ನು ಮೆರಿಟ್ ಆಧಾರದ ಮೇಲೆ ಖಾಸಗಿ ಶಿಕ್ಷಣ ಸಂಸ್ಥೆಗಳು ಪ್ರವೇಶವನ್ನು ತೀರ್ಮಾನಿಸಬಹುದು ಎಂದು ಹೇಳಿದೆ. ಮೊದಲನೆಯದಾಗಿ ಈ ‘ಮೆರಿಟ್’ ಎಂಬುದನ್ನೇ ತೀರ್ಮಾನಿಸುವುದು ಯಾವ ಮಾನದಂಡದಿಂದ? ಜಾತಿ, ವರ್ಗ, ನಗರ-ಗ್ರಾಮೀಣ, ಉಳ್ಳವರು-ಉಳ್ಳದಿರುವವರು ಹೀಗೆ ಹಲವಾರು ಅಂತರಗಳು ನಮ್ಮ ಸಮಾಜದಲ್ಲಿರುವಾಗ, ಇಲ್ಲಿ ಐeveಟ Pಟಚಿಥಿiಟಿg ಈieಟಜ ಎಂಬುದೇ ಇಲ್ಲದಿರುವಾಗ, ಈ ‘ಮೆರಿಟ್’ ಅನ್ನು ನಿರ್ಧರಿಸುವುದು ಹೇಗೆ? ಇದನ್ನೆಲ್ಲಾ ಚಿಂತಿಸುತ್ತಾ ಹೋದಂತೆ, ನಿಜವಾಗಲೂ ಇಂದಿನ ಸಮಾಜದಲ್ಲಿ ನಮ್ಮ ಲಕ್ಷಾಂತರ ಪ್ರತಿಭಾವಂತ ವಂಚಿತ ಸಮುದಾಯಗಳ ವಿದ್ಯಾರ್ಥಿಗಳಿಗೆ ಭವಿಷ್ಯವೇ ಇಲ್ಲದಂತಾಗಿದೆ,
ಇದು ಯಾವ ನ್ಯಾಯ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...