Homeಅಂಕಣಗಳು`ಸರ್ವೋಚ್ಚ’ವೇ ಶೋಷಿತರ ಭವಿಷ್ಯಕ್ಕೆ ಮುಳ್ಳಾದರೆ...

`ಸರ್ವೋಚ್ಚ’ವೇ ಶೋಷಿತರ ಭವಿಷ್ಯಕ್ಕೆ ಮುಳ್ಳಾದರೆ…

- Advertisement -
- Advertisement -
  • ಗೌರಿ ಲಂಕೇಶ್
    ಆಗಸ್ಟ್ 24, 2005 (`ಕಂಡಹಾಗೆ’ ಸಂಪಾದಕೀಯದಿಂದ) |

ಇಡೀ ದೇಶ ಆಗಸ್ಟ್ 15ರಂದು, ದೇಶಕ್ಕೆ ಸ್ವಾತಂತ್ರ್ಯ ಬಂದು 58 ವರ್ಷಗಳಾಗಿದ್ದನ್ನು ಸಂಭ್ರಮಿಸಲು ಸಜ್ಜಾಗುತ್ತಿತ್ತು. ಆದರೆ ಮೂರು ದಿನಗಳ ಮುನ್ನ ಬಂದ ಸುದ್ದಿ ಈ ದೇಶದ ಶೇ. 80ರಷ್ಟು ಮುಂದಿನ ಪ್ರಜೆಗಳ ಕನಸುಗಳನ್ನೇ ಹೊಸಕಿ ಹಾಕಿತು. ಶುಕ್ರವಾರ ನಮ್ಮ ಸರ್ವೋಚ್ಚ ನ್ಯಾಯಾಲಯ ನೀಡಿದ ತೀರ್ಪು, ಇನ್ನು ಮುಂದೆ ಶೋಷಿತ, ಹಿಂದುಳಿದ, ದಲಿತ, ಹಣ ಹೊಂದಿರದ ವರ್ಗಗಳಿಗೆ ಸೇರಿದ್ದ ಪ್ರತಿಭಾವಂತ ಯುವಕ-ಯುವತಿಯರಿಗೆ ವೃತ್ತಿ ಶಿಕ್ಷಣ ಪಡೆಯುವ ಅವಕಾಶವನ್ನೇ ನಿರಾಕರಿಸಿತು. ಎಲ್ಲರಿಗೂ ನ್ಯಾಯ ಒದಗಿಸಬೇಕಿರುವ ನ್ಯಾಯಾಲಯವೇ ಇನ್ನು ಮುಂದೆ ಖಾಸಗಿ ಇಂಜಿನಿಯರಿಂಗ್ ಮತ್ತು ಮೆಡಿಕಲ್ ಕಾಲೇಜುಗಳು ‘ಸಾಮಾಜಿಕ ನ್ಯಾಯ’ ಒದಗಿಸಬೇಕೆಂಬ ಗೋಜಲುಗಳಿಲ್ಲದೆ ಸರ್ಕಾರದ ಹಸ್ತಕ್ಷೇಪವಿಲ್ಲದೆ, ಕಾರ್ಯ ನಿರ್ವಹಿಸಬಹುದು ಎಂದು ಫರ್ಮಾನು ಹೊರಡಿಸಿತು.
ಜಾಗತೀಕರಣ, ಖಾಸಗಿಕರಣ, ಉದಾರೀಕರಣ ಇಂದಿನ ಪರಿಸ್ಥಿತಿಯಲ್ಲಿ ಭಾರತದ ವಂಚಿತ ವರ್ಗಗಳಿಗೆ ನ್ಯಾಯ ಸಿಗಬೇಕೆಂದಿದ್ದರೆ ಖಾಸಗಿ ಕಂಪನಿಗಳಲ್ಲೂ ಮೀಸಲಾತಿ ಬೇಕೆಂಬ ಬೇಡಿಕೆ ಇರುವ ಸಂದರ್ಭದಲ್ಲಿ ನಮ್ಮ ಸರ್ವೋಚ್ಚ ನ್ಯಾಯಾಲಯವೇ ವೃತ್ತಿ ಶಿಕ್ಷಣದ ಬಾಗಿಲನ್ನು ಈ ವಂಚಿತ ವರ್ಗಗಳಿಗೆ ಮುಚ್ಚಿದೆ.
ಖಾಸಗಿ ವೃತ್ತಿ ಶಿಕ್ಷಣ ಕಾಲೇಜುಗಳು ‘ಸಾಮಾಜಿಕ ನ್ಯಾಯ’ದ ಯಾವ ಮಾನದಂಡವನ್ನು ಅನುಸರಿಸುವ ಅಗತ್ಯವಿಲ್ಲ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯ, ತಮಗೆ ಬೇಕಾದವರಿಗೆ ಈ ಸಂಸ್ಥೆಗಳು ಪ್ರವೇಶ ನೀಡಬಹುದು ಎಂದಿದೆ. ಆದರೆ, ಈ ಪ್ರವೇಶಕ್ಕೆ ಗ್ರಾಮೀಣ, ಕನ್ನಡಿಗ, ದಲಿತ, ಹಿಂದುಳಿದ ಹಿನ್ನಲೆಯವರಿಗೆ ಯಾವುದೇ ಮೀಸಲಾತಿ ಇರುವುದಿಲ್ಲ ಅಷ್ಟೇ ಅಲ್ಲ, ಈ ಖಾಸಗಿ ವಿದ್ಯಾಸಂಸ್ಥೆಗಳು “ಡೊನೇಷನ್ ಪಡೆಯಬಾರದು, ಲಾಭ ಮಾಡಿಕೊಳ್ಳಬಾರದು” ಎಂದು ಹೇಳಿರುವ ನ್ಯಾಯಾಲಯ ಅವುಗಳು ತಮಗೆ ಸೂಕ್ತ ಎನಿಸಿದಷ್ಟು ಶುಲ್ಕ ವಿಧಿಸಹುದು ಎಂದೂ ಆದೇಶಿಸಿದೆ.
ಈ “ಸೂಕ್ತ” ಶುಲ್ಕ ಎಂದರೇನು?
ನಮ್ಮ ಸಂವಿಧಾನವು ಶಿಕ್ಷಣದಲ್ಲಿ ಹಾಗೂ ಉದ್ಯೋಗ ಅವಕಾಶಗಳಲ್ಲಿ ವರ್ಗ, ಜಾತಿ, ಲಿಂಗ ಆಧಾರಿತ ತಾರತಮ್ಯಗಳನ್ನು ನಿವಾರಿಸುವಂತೆ ಯೋಜನೆಗಳನ್ನು ರೂಪಿಸಬೇಕೆಂದು ಸರ್ಕಾರಕ್ಕೆ ಆದೇಶಿಸುತ್ತದೆ. ಅದೇ ರೀತಿ ದೇಶದ ಸಂಪನ್ಮೂಲಗಳೂ ಎಲ್ಲರಿಗೆ ಸಿಗುವಂತಾಂಗಬೇಕು ಎಂದು ಹೇಳುತ್ತದೆ. ಆದ್ದರಿಂದಲೇ ಅತ್ಯಂತ ದಮನಿತ ಪಂಗಡ ಹಾಗೂ ಸಮುದಾಯಗಳಿಗೆ ವಿಶೇಷ ಮೀಸಲಾತಿ ನೀಡಲಾಗುತ್ತದೆ. ಇದನ್ನು ಗಮನದಲ್ಲಿಟ್ಟುಕೊಂಡೇ ಮೋಹಿನಿ ಜೈನ್ ಪ್ರಕರಣದಲ್ಲಿ “ಯಾವುದೇ ಖಾಸಗಿ ಶಿಕ್ಷಣ ಸಂಸ್ಥೆ ಸರ್ಕಾರದಿಂದ ಮಾನ್ಯತೆ ಪಡೆದ ಕೂಡಲೇ ಆ ಸಂಸ್ಥೆಗೆ ಸರ್ಕಾರಕ್ಕಿರುವ ಸಾಮಾಜಿಕ ಜವಾಬ್ದಾರಿಗಳೂ ಅನ್ವಯಿಸುತ್ತದೆ” ಎಂದು 90ರ ದಶಕದಲ್ಲಿ ಸರ್ವೋಚ್ಛ ನ್ಯಾಯಲಯ ಹೇಳಿತ್ತು. ಹಾಗೆಯೇ 1993ರ ಉನ್ನಿ ಕೃಷ್ಣನ್ ಪ್ರಕರಣದಲ್ಲಿ “ಖಾಸಗಿ ಶಿಕ್ಷಣ ಸಂಸ್ಥೆಗಳು ಶಿಕ್ಷಣವನ್ನು ಒಂದು ವ್ಯಾಪಾರವಾಗಿ ನಡೆಸಲು ಸಂವಿಧಾನದಲ್ಲಿ ಮಾನ್ಯತೆ ಇಲ್ಲ” ಎಂದೂ ಹೇಳಿತ್ತು.
ಆದರೆ ಈಗ, ಖಾಸಗಿ ಶಿಕ್ಷಣ ಸಂಸ್ಥೆಗಳು ಸಾಮಾಜಿಕ ನ್ಯಾಯ ನೀತಿಯನ್ನು ಅನುಸರಿಸಬೇಕಿಲ್ಲ, ತಮಗೆ ಸೂಕ್ತವೆನಿಸುವಷ್ಟು ಶುಲ್ಕವನ್ನು ವಿಧಿಸಬಹುದು ಎಂದು ಅದೇ ಸರ್ವೋಚ್ಛ ನ್ಯಾಯಾಲಯ ಹೇಳಿದೆ. ಒಂದು ರೀತಿಯಲ್ಲಿ ಇದೇ ನ್ಯಾಯಾಲಯ ಖಿಒಂ ಪೈ ಪ್ರಕರಣದಲ್ಲಿ “ಶಿಕ್ಷಣವನ್ನು ವ್ಯವಹಾರವಾಗಿ ನಡೆಸಬಹುದು; ಸರ್ಕಾರ ಮೂಗು ತೂರಿಸಬಾರದು” ಎಂದು 2002ರಲ್ಲಿ ನೀಡಿದ್ದ ತೀರ್ಪಿನ ಮುಂದುವರಿದ ಭಾಗದಂತಿದೆ. ಈ ತೀರ್ಪು ನಮ್ಮ ಸಂವಿಧಾನದಲ್ಲಿರುವ ಆಶಯಗಳಿಗೆ ಎಷ್ಟು ಹತ್ತಿರವಾಗಿದೆ ಎಂದು ಯಾರೂ ಬೇಕಾದರೂ ತೀರ್ಮಾನಿಸಬಹುದು.
ಇನ್ನು ಮೆರಿಟ್ ಆಧಾರದ ಮೇಲೆ ಖಾಸಗಿ ಶಿಕ್ಷಣ ಸಂಸ್ಥೆಗಳು ಪ್ರವೇಶವನ್ನು ತೀರ್ಮಾನಿಸಬಹುದು ಎಂದು ಹೇಳಿದೆ. ಮೊದಲನೆಯದಾಗಿ ಈ ‘ಮೆರಿಟ್’ ಎಂಬುದನ್ನೇ ತೀರ್ಮಾನಿಸುವುದು ಯಾವ ಮಾನದಂಡದಿಂದ? ಜಾತಿ, ವರ್ಗ, ನಗರ-ಗ್ರಾಮೀಣ, ಉಳ್ಳವರು-ಉಳ್ಳದಿರುವವರು ಹೀಗೆ ಹಲವಾರು ಅಂತರಗಳು ನಮ್ಮ ಸಮಾಜದಲ್ಲಿರುವಾಗ, ಇಲ್ಲಿ ಐeveಟ Pಟಚಿಥಿiಟಿg ಈieಟಜ ಎಂಬುದೇ ಇಲ್ಲದಿರುವಾಗ, ಈ ‘ಮೆರಿಟ್’ ಅನ್ನು ನಿರ್ಧರಿಸುವುದು ಹೇಗೆ? ಇದನ್ನೆಲ್ಲಾ ಚಿಂತಿಸುತ್ತಾ ಹೋದಂತೆ, ನಿಜವಾಗಲೂ ಇಂದಿನ ಸಮಾಜದಲ್ಲಿ ನಮ್ಮ ಲಕ್ಷಾಂತರ ಪ್ರತಿಭಾವಂತ ವಂಚಿತ ಸಮುದಾಯಗಳ ವಿದ್ಯಾರ್ಥಿಗಳಿಗೆ ಭವಿಷ್ಯವೇ ಇಲ್ಲದಂತಾಗಿದೆ,
ಇದು ಯಾವ ನ್ಯಾಯ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....