Homeಅಂಕಣಗಳು`ಸರ್ವೋಚ್ಚ’ವೇ ಶೋಷಿತರ ಭವಿಷ್ಯಕ್ಕೆ ಮುಳ್ಳಾದರೆ...

`ಸರ್ವೋಚ್ಚ’ವೇ ಶೋಷಿತರ ಭವಿಷ್ಯಕ್ಕೆ ಮುಳ್ಳಾದರೆ…

- Advertisement -
- Advertisement -
  • ಗೌರಿ ಲಂಕೇಶ್
    ಆಗಸ್ಟ್ 24, 2005 (`ಕಂಡಹಾಗೆ’ ಸಂಪಾದಕೀಯದಿಂದ) |

ಇಡೀ ದೇಶ ಆಗಸ್ಟ್ 15ರಂದು, ದೇಶಕ್ಕೆ ಸ್ವಾತಂತ್ರ್ಯ ಬಂದು 58 ವರ್ಷಗಳಾಗಿದ್ದನ್ನು ಸಂಭ್ರಮಿಸಲು ಸಜ್ಜಾಗುತ್ತಿತ್ತು. ಆದರೆ ಮೂರು ದಿನಗಳ ಮುನ್ನ ಬಂದ ಸುದ್ದಿ ಈ ದೇಶದ ಶೇ. 80ರಷ್ಟು ಮುಂದಿನ ಪ್ರಜೆಗಳ ಕನಸುಗಳನ್ನೇ ಹೊಸಕಿ ಹಾಕಿತು. ಶುಕ್ರವಾರ ನಮ್ಮ ಸರ್ವೋಚ್ಚ ನ್ಯಾಯಾಲಯ ನೀಡಿದ ತೀರ್ಪು, ಇನ್ನು ಮುಂದೆ ಶೋಷಿತ, ಹಿಂದುಳಿದ, ದಲಿತ, ಹಣ ಹೊಂದಿರದ ವರ್ಗಗಳಿಗೆ ಸೇರಿದ್ದ ಪ್ರತಿಭಾವಂತ ಯುವಕ-ಯುವತಿಯರಿಗೆ ವೃತ್ತಿ ಶಿಕ್ಷಣ ಪಡೆಯುವ ಅವಕಾಶವನ್ನೇ ನಿರಾಕರಿಸಿತು. ಎಲ್ಲರಿಗೂ ನ್ಯಾಯ ಒದಗಿಸಬೇಕಿರುವ ನ್ಯಾಯಾಲಯವೇ ಇನ್ನು ಮುಂದೆ ಖಾಸಗಿ ಇಂಜಿನಿಯರಿಂಗ್ ಮತ್ತು ಮೆಡಿಕಲ್ ಕಾಲೇಜುಗಳು ‘ಸಾಮಾಜಿಕ ನ್ಯಾಯ’ ಒದಗಿಸಬೇಕೆಂಬ ಗೋಜಲುಗಳಿಲ್ಲದೆ ಸರ್ಕಾರದ ಹಸ್ತಕ್ಷೇಪವಿಲ್ಲದೆ, ಕಾರ್ಯ ನಿರ್ವಹಿಸಬಹುದು ಎಂದು ಫರ್ಮಾನು ಹೊರಡಿಸಿತು.
ಜಾಗತೀಕರಣ, ಖಾಸಗಿಕರಣ, ಉದಾರೀಕರಣ ಇಂದಿನ ಪರಿಸ್ಥಿತಿಯಲ್ಲಿ ಭಾರತದ ವಂಚಿತ ವರ್ಗಗಳಿಗೆ ನ್ಯಾಯ ಸಿಗಬೇಕೆಂದಿದ್ದರೆ ಖಾಸಗಿ ಕಂಪನಿಗಳಲ್ಲೂ ಮೀಸಲಾತಿ ಬೇಕೆಂಬ ಬೇಡಿಕೆ ಇರುವ ಸಂದರ್ಭದಲ್ಲಿ ನಮ್ಮ ಸರ್ವೋಚ್ಚ ನ್ಯಾಯಾಲಯವೇ ವೃತ್ತಿ ಶಿಕ್ಷಣದ ಬಾಗಿಲನ್ನು ಈ ವಂಚಿತ ವರ್ಗಗಳಿಗೆ ಮುಚ್ಚಿದೆ.
ಖಾಸಗಿ ವೃತ್ತಿ ಶಿಕ್ಷಣ ಕಾಲೇಜುಗಳು ‘ಸಾಮಾಜಿಕ ನ್ಯಾಯ’ದ ಯಾವ ಮಾನದಂಡವನ್ನು ಅನುಸರಿಸುವ ಅಗತ್ಯವಿಲ್ಲ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯ, ತಮಗೆ ಬೇಕಾದವರಿಗೆ ಈ ಸಂಸ್ಥೆಗಳು ಪ್ರವೇಶ ನೀಡಬಹುದು ಎಂದಿದೆ. ಆದರೆ, ಈ ಪ್ರವೇಶಕ್ಕೆ ಗ್ರಾಮೀಣ, ಕನ್ನಡಿಗ, ದಲಿತ, ಹಿಂದುಳಿದ ಹಿನ್ನಲೆಯವರಿಗೆ ಯಾವುದೇ ಮೀಸಲಾತಿ ಇರುವುದಿಲ್ಲ ಅಷ್ಟೇ ಅಲ್ಲ, ಈ ಖಾಸಗಿ ವಿದ್ಯಾಸಂಸ್ಥೆಗಳು “ಡೊನೇಷನ್ ಪಡೆಯಬಾರದು, ಲಾಭ ಮಾಡಿಕೊಳ್ಳಬಾರದು” ಎಂದು ಹೇಳಿರುವ ನ್ಯಾಯಾಲಯ ಅವುಗಳು ತಮಗೆ ಸೂಕ್ತ ಎನಿಸಿದಷ್ಟು ಶುಲ್ಕ ವಿಧಿಸಹುದು ಎಂದೂ ಆದೇಶಿಸಿದೆ.
ಈ “ಸೂಕ್ತ” ಶುಲ್ಕ ಎಂದರೇನು?
ನಮ್ಮ ಸಂವಿಧಾನವು ಶಿಕ್ಷಣದಲ್ಲಿ ಹಾಗೂ ಉದ್ಯೋಗ ಅವಕಾಶಗಳಲ್ಲಿ ವರ್ಗ, ಜಾತಿ, ಲಿಂಗ ಆಧಾರಿತ ತಾರತಮ್ಯಗಳನ್ನು ನಿವಾರಿಸುವಂತೆ ಯೋಜನೆಗಳನ್ನು ರೂಪಿಸಬೇಕೆಂದು ಸರ್ಕಾರಕ್ಕೆ ಆದೇಶಿಸುತ್ತದೆ. ಅದೇ ರೀತಿ ದೇಶದ ಸಂಪನ್ಮೂಲಗಳೂ ಎಲ್ಲರಿಗೆ ಸಿಗುವಂತಾಂಗಬೇಕು ಎಂದು ಹೇಳುತ್ತದೆ. ಆದ್ದರಿಂದಲೇ ಅತ್ಯಂತ ದಮನಿತ ಪಂಗಡ ಹಾಗೂ ಸಮುದಾಯಗಳಿಗೆ ವಿಶೇಷ ಮೀಸಲಾತಿ ನೀಡಲಾಗುತ್ತದೆ. ಇದನ್ನು ಗಮನದಲ್ಲಿಟ್ಟುಕೊಂಡೇ ಮೋಹಿನಿ ಜೈನ್ ಪ್ರಕರಣದಲ್ಲಿ “ಯಾವುದೇ ಖಾಸಗಿ ಶಿಕ್ಷಣ ಸಂಸ್ಥೆ ಸರ್ಕಾರದಿಂದ ಮಾನ್ಯತೆ ಪಡೆದ ಕೂಡಲೇ ಆ ಸಂಸ್ಥೆಗೆ ಸರ್ಕಾರಕ್ಕಿರುವ ಸಾಮಾಜಿಕ ಜವಾಬ್ದಾರಿಗಳೂ ಅನ್ವಯಿಸುತ್ತದೆ” ಎಂದು 90ರ ದಶಕದಲ್ಲಿ ಸರ್ವೋಚ್ಛ ನ್ಯಾಯಲಯ ಹೇಳಿತ್ತು. ಹಾಗೆಯೇ 1993ರ ಉನ್ನಿ ಕೃಷ್ಣನ್ ಪ್ರಕರಣದಲ್ಲಿ “ಖಾಸಗಿ ಶಿಕ್ಷಣ ಸಂಸ್ಥೆಗಳು ಶಿಕ್ಷಣವನ್ನು ಒಂದು ವ್ಯಾಪಾರವಾಗಿ ನಡೆಸಲು ಸಂವಿಧಾನದಲ್ಲಿ ಮಾನ್ಯತೆ ಇಲ್ಲ” ಎಂದೂ ಹೇಳಿತ್ತು.
ಆದರೆ ಈಗ, ಖಾಸಗಿ ಶಿಕ್ಷಣ ಸಂಸ್ಥೆಗಳು ಸಾಮಾಜಿಕ ನ್ಯಾಯ ನೀತಿಯನ್ನು ಅನುಸರಿಸಬೇಕಿಲ್ಲ, ತಮಗೆ ಸೂಕ್ತವೆನಿಸುವಷ್ಟು ಶುಲ್ಕವನ್ನು ವಿಧಿಸಬಹುದು ಎಂದು ಅದೇ ಸರ್ವೋಚ್ಛ ನ್ಯಾಯಾಲಯ ಹೇಳಿದೆ. ಒಂದು ರೀತಿಯಲ್ಲಿ ಇದೇ ನ್ಯಾಯಾಲಯ ಖಿಒಂ ಪೈ ಪ್ರಕರಣದಲ್ಲಿ “ಶಿಕ್ಷಣವನ್ನು ವ್ಯವಹಾರವಾಗಿ ನಡೆಸಬಹುದು; ಸರ್ಕಾರ ಮೂಗು ತೂರಿಸಬಾರದು” ಎಂದು 2002ರಲ್ಲಿ ನೀಡಿದ್ದ ತೀರ್ಪಿನ ಮುಂದುವರಿದ ಭಾಗದಂತಿದೆ. ಈ ತೀರ್ಪು ನಮ್ಮ ಸಂವಿಧಾನದಲ್ಲಿರುವ ಆಶಯಗಳಿಗೆ ಎಷ್ಟು ಹತ್ತಿರವಾಗಿದೆ ಎಂದು ಯಾರೂ ಬೇಕಾದರೂ ತೀರ್ಮಾನಿಸಬಹುದು.
ಇನ್ನು ಮೆರಿಟ್ ಆಧಾರದ ಮೇಲೆ ಖಾಸಗಿ ಶಿಕ್ಷಣ ಸಂಸ್ಥೆಗಳು ಪ್ರವೇಶವನ್ನು ತೀರ್ಮಾನಿಸಬಹುದು ಎಂದು ಹೇಳಿದೆ. ಮೊದಲನೆಯದಾಗಿ ಈ ‘ಮೆರಿಟ್’ ಎಂಬುದನ್ನೇ ತೀರ್ಮಾನಿಸುವುದು ಯಾವ ಮಾನದಂಡದಿಂದ? ಜಾತಿ, ವರ್ಗ, ನಗರ-ಗ್ರಾಮೀಣ, ಉಳ್ಳವರು-ಉಳ್ಳದಿರುವವರು ಹೀಗೆ ಹಲವಾರು ಅಂತರಗಳು ನಮ್ಮ ಸಮಾಜದಲ್ಲಿರುವಾಗ, ಇಲ್ಲಿ ಐeveಟ Pಟಚಿಥಿiಟಿg ಈieಟಜ ಎಂಬುದೇ ಇಲ್ಲದಿರುವಾಗ, ಈ ‘ಮೆರಿಟ್’ ಅನ್ನು ನಿರ್ಧರಿಸುವುದು ಹೇಗೆ? ಇದನ್ನೆಲ್ಲಾ ಚಿಂತಿಸುತ್ತಾ ಹೋದಂತೆ, ನಿಜವಾಗಲೂ ಇಂದಿನ ಸಮಾಜದಲ್ಲಿ ನಮ್ಮ ಲಕ್ಷಾಂತರ ಪ್ರತಿಭಾವಂತ ವಂಚಿತ ಸಮುದಾಯಗಳ ವಿದ್ಯಾರ್ಥಿಗಳಿಗೆ ಭವಿಷ್ಯವೇ ಇಲ್ಲದಂತಾಗಿದೆ,
ಇದು ಯಾವ ನ್ಯಾಯ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...