Homeಅಂಕಣಗಳು`ಸರ್ವೋಚ್ಚ’ವೇ ಶೋಷಿತರ ಭವಿಷ್ಯಕ್ಕೆ ಮುಳ್ಳಾದರೆ...

`ಸರ್ವೋಚ್ಚ’ವೇ ಶೋಷಿತರ ಭವಿಷ್ಯಕ್ಕೆ ಮುಳ್ಳಾದರೆ…

- Advertisement -
- Advertisement -
  • ಗೌರಿ ಲಂಕೇಶ್
    ಆಗಸ್ಟ್ 24, 2005 (`ಕಂಡಹಾಗೆ’ ಸಂಪಾದಕೀಯದಿಂದ) |

ಇಡೀ ದೇಶ ಆಗಸ್ಟ್ 15ರಂದು, ದೇಶಕ್ಕೆ ಸ್ವಾತಂತ್ರ್ಯ ಬಂದು 58 ವರ್ಷಗಳಾಗಿದ್ದನ್ನು ಸಂಭ್ರಮಿಸಲು ಸಜ್ಜಾಗುತ್ತಿತ್ತು. ಆದರೆ ಮೂರು ದಿನಗಳ ಮುನ್ನ ಬಂದ ಸುದ್ದಿ ಈ ದೇಶದ ಶೇ. 80ರಷ್ಟು ಮುಂದಿನ ಪ್ರಜೆಗಳ ಕನಸುಗಳನ್ನೇ ಹೊಸಕಿ ಹಾಕಿತು. ಶುಕ್ರವಾರ ನಮ್ಮ ಸರ್ವೋಚ್ಚ ನ್ಯಾಯಾಲಯ ನೀಡಿದ ತೀರ್ಪು, ಇನ್ನು ಮುಂದೆ ಶೋಷಿತ, ಹಿಂದುಳಿದ, ದಲಿತ, ಹಣ ಹೊಂದಿರದ ವರ್ಗಗಳಿಗೆ ಸೇರಿದ್ದ ಪ್ರತಿಭಾವಂತ ಯುವಕ-ಯುವತಿಯರಿಗೆ ವೃತ್ತಿ ಶಿಕ್ಷಣ ಪಡೆಯುವ ಅವಕಾಶವನ್ನೇ ನಿರಾಕರಿಸಿತು. ಎಲ್ಲರಿಗೂ ನ್ಯಾಯ ಒದಗಿಸಬೇಕಿರುವ ನ್ಯಾಯಾಲಯವೇ ಇನ್ನು ಮುಂದೆ ಖಾಸಗಿ ಇಂಜಿನಿಯರಿಂಗ್ ಮತ್ತು ಮೆಡಿಕಲ್ ಕಾಲೇಜುಗಳು ‘ಸಾಮಾಜಿಕ ನ್ಯಾಯ’ ಒದಗಿಸಬೇಕೆಂಬ ಗೋಜಲುಗಳಿಲ್ಲದೆ ಸರ್ಕಾರದ ಹಸ್ತಕ್ಷೇಪವಿಲ್ಲದೆ, ಕಾರ್ಯ ನಿರ್ವಹಿಸಬಹುದು ಎಂದು ಫರ್ಮಾನು ಹೊರಡಿಸಿತು.
ಜಾಗತೀಕರಣ, ಖಾಸಗಿಕರಣ, ಉದಾರೀಕರಣ ಇಂದಿನ ಪರಿಸ್ಥಿತಿಯಲ್ಲಿ ಭಾರತದ ವಂಚಿತ ವರ್ಗಗಳಿಗೆ ನ್ಯಾಯ ಸಿಗಬೇಕೆಂದಿದ್ದರೆ ಖಾಸಗಿ ಕಂಪನಿಗಳಲ್ಲೂ ಮೀಸಲಾತಿ ಬೇಕೆಂಬ ಬೇಡಿಕೆ ಇರುವ ಸಂದರ್ಭದಲ್ಲಿ ನಮ್ಮ ಸರ್ವೋಚ್ಚ ನ್ಯಾಯಾಲಯವೇ ವೃತ್ತಿ ಶಿಕ್ಷಣದ ಬಾಗಿಲನ್ನು ಈ ವಂಚಿತ ವರ್ಗಗಳಿಗೆ ಮುಚ್ಚಿದೆ.
ಖಾಸಗಿ ವೃತ್ತಿ ಶಿಕ್ಷಣ ಕಾಲೇಜುಗಳು ‘ಸಾಮಾಜಿಕ ನ್ಯಾಯ’ದ ಯಾವ ಮಾನದಂಡವನ್ನು ಅನುಸರಿಸುವ ಅಗತ್ಯವಿಲ್ಲ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯ, ತಮಗೆ ಬೇಕಾದವರಿಗೆ ಈ ಸಂಸ್ಥೆಗಳು ಪ್ರವೇಶ ನೀಡಬಹುದು ಎಂದಿದೆ. ಆದರೆ, ಈ ಪ್ರವೇಶಕ್ಕೆ ಗ್ರಾಮೀಣ, ಕನ್ನಡಿಗ, ದಲಿತ, ಹಿಂದುಳಿದ ಹಿನ್ನಲೆಯವರಿಗೆ ಯಾವುದೇ ಮೀಸಲಾತಿ ಇರುವುದಿಲ್ಲ ಅಷ್ಟೇ ಅಲ್ಲ, ಈ ಖಾಸಗಿ ವಿದ್ಯಾಸಂಸ್ಥೆಗಳು “ಡೊನೇಷನ್ ಪಡೆಯಬಾರದು, ಲಾಭ ಮಾಡಿಕೊಳ್ಳಬಾರದು” ಎಂದು ಹೇಳಿರುವ ನ್ಯಾಯಾಲಯ ಅವುಗಳು ತಮಗೆ ಸೂಕ್ತ ಎನಿಸಿದಷ್ಟು ಶುಲ್ಕ ವಿಧಿಸಹುದು ಎಂದೂ ಆದೇಶಿಸಿದೆ.
ಈ “ಸೂಕ್ತ” ಶುಲ್ಕ ಎಂದರೇನು?
ನಮ್ಮ ಸಂವಿಧಾನವು ಶಿಕ್ಷಣದಲ್ಲಿ ಹಾಗೂ ಉದ್ಯೋಗ ಅವಕಾಶಗಳಲ್ಲಿ ವರ್ಗ, ಜಾತಿ, ಲಿಂಗ ಆಧಾರಿತ ತಾರತಮ್ಯಗಳನ್ನು ನಿವಾರಿಸುವಂತೆ ಯೋಜನೆಗಳನ್ನು ರೂಪಿಸಬೇಕೆಂದು ಸರ್ಕಾರಕ್ಕೆ ಆದೇಶಿಸುತ್ತದೆ. ಅದೇ ರೀತಿ ದೇಶದ ಸಂಪನ್ಮೂಲಗಳೂ ಎಲ್ಲರಿಗೆ ಸಿಗುವಂತಾಂಗಬೇಕು ಎಂದು ಹೇಳುತ್ತದೆ. ಆದ್ದರಿಂದಲೇ ಅತ್ಯಂತ ದಮನಿತ ಪಂಗಡ ಹಾಗೂ ಸಮುದಾಯಗಳಿಗೆ ವಿಶೇಷ ಮೀಸಲಾತಿ ನೀಡಲಾಗುತ್ತದೆ. ಇದನ್ನು ಗಮನದಲ್ಲಿಟ್ಟುಕೊಂಡೇ ಮೋಹಿನಿ ಜೈನ್ ಪ್ರಕರಣದಲ್ಲಿ “ಯಾವುದೇ ಖಾಸಗಿ ಶಿಕ್ಷಣ ಸಂಸ್ಥೆ ಸರ್ಕಾರದಿಂದ ಮಾನ್ಯತೆ ಪಡೆದ ಕೂಡಲೇ ಆ ಸಂಸ್ಥೆಗೆ ಸರ್ಕಾರಕ್ಕಿರುವ ಸಾಮಾಜಿಕ ಜವಾಬ್ದಾರಿಗಳೂ ಅನ್ವಯಿಸುತ್ತದೆ” ಎಂದು 90ರ ದಶಕದಲ್ಲಿ ಸರ್ವೋಚ್ಛ ನ್ಯಾಯಲಯ ಹೇಳಿತ್ತು. ಹಾಗೆಯೇ 1993ರ ಉನ್ನಿ ಕೃಷ್ಣನ್ ಪ್ರಕರಣದಲ್ಲಿ “ಖಾಸಗಿ ಶಿಕ್ಷಣ ಸಂಸ್ಥೆಗಳು ಶಿಕ್ಷಣವನ್ನು ಒಂದು ವ್ಯಾಪಾರವಾಗಿ ನಡೆಸಲು ಸಂವಿಧಾನದಲ್ಲಿ ಮಾನ್ಯತೆ ಇಲ್ಲ” ಎಂದೂ ಹೇಳಿತ್ತು.
ಆದರೆ ಈಗ, ಖಾಸಗಿ ಶಿಕ್ಷಣ ಸಂಸ್ಥೆಗಳು ಸಾಮಾಜಿಕ ನ್ಯಾಯ ನೀತಿಯನ್ನು ಅನುಸರಿಸಬೇಕಿಲ್ಲ, ತಮಗೆ ಸೂಕ್ತವೆನಿಸುವಷ್ಟು ಶುಲ್ಕವನ್ನು ವಿಧಿಸಬಹುದು ಎಂದು ಅದೇ ಸರ್ವೋಚ್ಛ ನ್ಯಾಯಾಲಯ ಹೇಳಿದೆ. ಒಂದು ರೀತಿಯಲ್ಲಿ ಇದೇ ನ್ಯಾಯಾಲಯ ಖಿಒಂ ಪೈ ಪ್ರಕರಣದಲ್ಲಿ “ಶಿಕ್ಷಣವನ್ನು ವ್ಯವಹಾರವಾಗಿ ನಡೆಸಬಹುದು; ಸರ್ಕಾರ ಮೂಗು ತೂರಿಸಬಾರದು” ಎಂದು 2002ರಲ್ಲಿ ನೀಡಿದ್ದ ತೀರ್ಪಿನ ಮುಂದುವರಿದ ಭಾಗದಂತಿದೆ. ಈ ತೀರ್ಪು ನಮ್ಮ ಸಂವಿಧಾನದಲ್ಲಿರುವ ಆಶಯಗಳಿಗೆ ಎಷ್ಟು ಹತ್ತಿರವಾಗಿದೆ ಎಂದು ಯಾರೂ ಬೇಕಾದರೂ ತೀರ್ಮಾನಿಸಬಹುದು.
ಇನ್ನು ಮೆರಿಟ್ ಆಧಾರದ ಮೇಲೆ ಖಾಸಗಿ ಶಿಕ್ಷಣ ಸಂಸ್ಥೆಗಳು ಪ್ರವೇಶವನ್ನು ತೀರ್ಮಾನಿಸಬಹುದು ಎಂದು ಹೇಳಿದೆ. ಮೊದಲನೆಯದಾಗಿ ಈ ‘ಮೆರಿಟ್’ ಎಂಬುದನ್ನೇ ತೀರ್ಮಾನಿಸುವುದು ಯಾವ ಮಾನದಂಡದಿಂದ? ಜಾತಿ, ವರ್ಗ, ನಗರ-ಗ್ರಾಮೀಣ, ಉಳ್ಳವರು-ಉಳ್ಳದಿರುವವರು ಹೀಗೆ ಹಲವಾರು ಅಂತರಗಳು ನಮ್ಮ ಸಮಾಜದಲ್ಲಿರುವಾಗ, ಇಲ್ಲಿ ಐeveಟ Pಟಚಿಥಿiಟಿg ಈieಟಜ ಎಂಬುದೇ ಇಲ್ಲದಿರುವಾಗ, ಈ ‘ಮೆರಿಟ್’ ಅನ್ನು ನಿರ್ಧರಿಸುವುದು ಹೇಗೆ? ಇದನ್ನೆಲ್ಲಾ ಚಿಂತಿಸುತ್ತಾ ಹೋದಂತೆ, ನಿಜವಾಗಲೂ ಇಂದಿನ ಸಮಾಜದಲ್ಲಿ ನಮ್ಮ ಲಕ್ಷಾಂತರ ಪ್ರತಿಭಾವಂತ ವಂಚಿತ ಸಮುದಾಯಗಳ ವಿದ್ಯಾರ್ಥಿಗಳಿಗೆ ಭವಿಷ್ಯವೇ ಇಲ್ಲದಂತಾಗಿದೆ,
ಇದು ಯಾವ ನ್ಯಾಯ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಆಟೋ ಚಾಲಕನಾಗಿ ಕೆಲಸ ಮಾಡುವ ತಂದೆಯೊಬ್ಬರು ಕೈಯಲ್ಲಿ ಸಿಹಿ ತಿಂಡಿಯ ಪೆಟ್ಟಿಗೆಯೊಂದಿಗೆ ಮನೆಗೆ ಹೆಜ್ಜೆ ಹಾಕುತ್ತಾರೆ. ಅದನ್ನು ನೋಡಿದ ಮಗಳು, "ಏನಪ್ಪಾ ವಿಶೇಷ, ಇವತ್ತು ಹುಟ್ಟುಹಬ್ಬನಾ, ಹಬ್ಬನಾ ಅಥವಾ ಕುಟುಂಬದ ಸಂಭ್ರಮನಾ?" ಎಂದು...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...