Homeಕರ್ನಾಟಕಸುಮಲತಾ ಮಾಡಿದ 3 ದಾಖಲೆಗಳು

ಸುಮಲತಾ ಮಾಡಿದ 3 ದಾಖಲೆಗಳು

ಅಂತೂ ಚುನಾವಣೆ ಫಲಿತಾಂಶದ ದಿನ ಬಂತು. ಆ ದಿನ ಊರಿನ ಊರ ಭದ್ರದೇವರ ಪೂಜೆಯಿತ್ತು. ಇದರಲ್ಲೂ ಕೂಡ ಸುಮಲತಾ ನಿಖಿಲ್ ಪ್ರವೇಶ ಪಡೆದು, ಭಕ್ತಿಯು ರೋಷದಿಂದ ಪ್ರಕಟವಾಗುತ್ತಿತ್ತು.

- Advertisement -
- Advertisement -

| ಬಿ. ಚಂದ್ರೇಗೌಡ |

ಚುನಾವಣೆ ನಂತರ ಅಭ್ಯರ್ಥಿಗಳು ಸತತ ಒಂದು ತಿಂಗಳು ಮತಪೆಟ್ಟಿಗೆಯೊಳಗೆ ಸಿಕ್ಕಿ ನರಳಿದ್ದು ಇದೇ ಮೊದಲಿರಬೇಕು. ಸಹಜವಾಗಿ, ಮತ ನೀಡಿದ ಕೆಲ ಮದ್ಯ ವ್ಯಸನಿ ಮತದಾರರು, ನಿದ್ರೆ ಬಾರದ ಕಾರಣ ನೀಡಿ ಸರಿಯಾಗಿ ಗುಂಡೇರಿಸತೊಡಗಿದರು. ಜೊತೆಯಲ್ಲಿದ್ದ ಮಂಜೇಗೌಡ ಒಳಗಿನ ಎಣ್ಣೆ ವ್ಯಯವಾದಂತೆ ಹೋಗಿ ಹೋಗಿ ತುಂಬಿಸಿಕೊಂಡು ಬರುತ್ತಿದ್ದ. ಹಾಗಾಗಿ ಕಣ್ಣು ಸದಾ ಕೆಂಪಗೆ ಉರಿಯತೊಡಗಿದ್ದವು. ಕೆಲವರಂತೂ ಇವುಳೆಲ್ಲಿದ್ದಳಯ್ಯ ಸುಮಲತ ಬಂದು ಯಲಕ್ಷನ್ನಿಗೆ ನಿಂತು ನಮ್ಮ ಸರೀಳನೆ ಹಾಳಾಗೋಯ್ತು ಎಂದು ಗೊಣಗಿದ್ದರು.”

ಈ ನಡುವೆ ಸುಮಲತ ಗೆಲ್ಲುವ ಬಗ್ಗೆ ಗೆಳೆಯನೊಬ್ಬ ಒಂದು ಲಕ್ಷ ಬೆಟ್ ಕಟ್ಟುವುದಾಗಿ ಘೋಷಣೆ ಮಾಡಿದ, ಯಾರೂ ಬರಲಿಲ್ಲ. ಅದನ್ನು ಐವತ್ತು ಸಾವಿರಕ್ಕೆ ಇಳಿಸಿದ ನಂತರ ಒಬ್ಬ ಬಂದ. ಆತ ಬರಲು ಕಾರಣವೇನೆಂದರೆ, ಈ ಮನೆ ಮುರುಕ ಟಿವಿಗಳು ಮತ್ತೆ ಸುಮಲತ ವಿಷಯ ತೆಗೆದುಕೊಂಡು ಕಾದಿದೆ ಮಂಡ್ಯಕ್ಕೆ ಅಚ್ಚರಿ ಫಲಿತಾಂಶ ಎಂದು ಬೊಗಳತೊಡಗಿದ್ದವು. ಕೊನೆಗೆ ನೆಕ್ ಟು ನೆಕ್ ಎಂದು ಬಿಕ್ಕ ತೊಡಗಿದವು. ಇದರಿಂದ ಸ್ಫೂರ್ತಿಗೊಂಡ ಜೂಜುಗಾರರು ಆತ್ಮವಿಶ್ವಾಸದಿಂದಲೇ ಐವತ್ತು ಸಾವಿರ ತಂದರು. ಅದೈವತ್ತು ಇದೈವತ್ತು ಒಟ್ಟು ಒಂದು ಲಕ್ಷವನ್ನು ಮೂರನೆ ವ್ಯಕ್ತಿ ಕೈಗಿತ್ತು, ಫಲಿತಾಂಶದ ದಿನ ಪಾರ್ಟಿ ಮಾಡಲು ಒಂದು ಸಾವಿರ ತೆಗೆದಿರಿಸಿ, ಆದಿನ ಮದ್ಯದಂಗಡಿ ಬಂದ್ ಆಗುವ ಅಪಾಯವನ್ನ ಗ್ರಹಿಸಿ ಕೂಡಲೇ ಒಂದು ಸಾವಿರಕ್ಕೆ ಎಂಸಿ ಬ್ರಾಂಡಿ ತಂದಿರಿಸಲು ಹೇಳಿದೆವು. ನಿಖಿಲ್ ಗೆಲ್ಲುವ ಬಗ್ಗೆ ಆತ್ಮವಿಶ್ವಾಸದಿಂದ ಮಾತನಾಡುವವರನ್ನು ಕಂಡು ದಿಗಿಲಾಯ್ತು, ಅವರ ಪ್ರಕಾರ ನೂರಾರು ಬೂತಿನಲ್ಲಿ ನಮ್ಮ ಏಜೆಂಟರೇ ಇರಲಿಲ್ಲ. ಜೊತೆಗೆ ಕುಮಾರಣ್ಣ ಕೆ.ಆರ್.ಎಸ್‍ನಲ್ಲಿ ಬೀಡುಬಿಟ್ಟು ಪುಡಿ ಜಾತಿ ಲೀಡರುಗಳನ್ನೆಲ್ಲಾ ಕೊಂಡಿದ್ದಾರಂತೆ, ಈ ಪೈಕಿ ಕುರುಬರ ಮತಗಳನ್ನ ಅಟ್ಟಿಕೊಂಡು ಬಂದು ಬೂತನ್ನ ತುಂಬಿಸುತ್ತೇನೆಂದು ಹೇಳಿದವನೊಬ್ಬನಿಗೆ ಕುಮಾರಣ್ಣ ಹತ್ತು ಲಕ್ಷ ಕೊಟ್ಟನೆಂಬ ಸುದ್ದಿ ಹಬ್ಬಿತ್ತು. ಇದಕ್ಕೆ ಸಾಕ್ಷಿಯೊದಗಿಸುವಂತೆ ಇಪ್ಪತೈದು ಲಕ್ಷದ ಕಾರಿನಲ್ಲಿ ಬಂದ ಆತ ನಿಖಿಲ್‍ಗೆ ಓಟು ಮಾಡಿ ಎಂದು ಬೈಸಿಕೊಂಡು ಹೋಗಿದ್ದ.

ಇದೆಲ್ಲಕ್ಕಿಂತ ನಮಗೆ ಇನ್ನ ದಿಗಿಲು ಹುಟ್ಟಿಸಿದ್ದು, ಸುಮಲತ ಗೆದ್ದು ಬಿಜೆಪಿ ಸೇರುತ್ತಾಳೆಂದು ಭಾವಿಸಿರುವ ಮುಸ್ಲಿಮರು ನಿಖಿಲನಿಗೆ ಓಟು ಮಾಡಿದ್ದಾರೆಂಬುದು, ಅಂತೂ ದಶದಿಕ್ಕಿನಿಂದ ನಮಗೆ ಅಶುಭ ಸುದ್ದಿಗಳೇ ಬರತೊಡಗಿದವು. ಇಂತಹ ಸಮಯದಲ್ಲಿ ನಾನು ಕೇವಲ ಐದು ಸಾವಿರ ಬೆಟ್ ಕಟ್ಟಿದ್ದೆ. ಚುನಾವಣೆ ಫಲಿತಾಂಶದ ವರೆಗೂ ನಾನು ಊರಲ್ಲೇ ಇದ್ದುಬಿಟ್ಟೆ. ಇಲ್ಲಿಗೆ ಪತ್ರಿಕೆಗಳು ಬರುವುದಿಲ್ಲ, ಹಾಗೆ ಟಿವಿ ನೋಡಿ ತಿಂಗಳ ಮೇಲಾಯ್ತು. ಹಳ್ಳಿಗಳು ಇನ್ನ ಉಳಿಸಿಕೊಂಡಿರುವ ಶಕ್ತಿಯಲ್ಲಿ ಪೇಪರ್, ಟಿವಿ ಬೇಕೆನಿಸುವುದಿಲ್ಲ. ಆದರೆ ಜನ ಸಮೂಹದ ಜೊತೆ ಮಾತನಾಡಲು ಸಾಧ್ಯವೇ ಇಲ್ಲ. ಬಾಯಿ ಬಿಟ್ಟರೆ ಸಾಕು ಮೊರೆಯುತ್ತಾರೆ. ಯಾರು ಏನನ್ನ ಕೇಳಿಸಿಕೊಳ್ಳುವುದಿಲ್ಲ. ನಮ್ಮ ಮನೆಯಲ್ಲೇ ಹೆಬ್ಬೆಟ್ಟಿನ ಸಹೋದರನೊಬ್ಬ ರಾಜಕಾರಣದ ಬಗ್ಗೆ ನನಗೇ ಹೇಳಲು ಬರುತ್ತಾನೆ. ಅವನ ಲೆಕ್ಕದಲ್ಲಿ ನಾನು ಕಿರಿಯ ಅವನು ಹಿರಿಯ ಅದಕ್ಕಾಗಿ ಕೇಳಿಸಿಕೊಳ್ಳಬೇಕಂತೆ!

ಅಂತೂ ಚುನಾವಣೆ ಫಲಿತಾಂಶದ ದಿನ ಬಂತು. ಆ ದಿನ ಊರಿನ ಊರ ಭದ್ರದೇವರ ಪೂಜೆಯಿತ್ತು. ಇದರಲ್ಲೂ ಕೂಡ ಸುಮಲತಾ ನಿಖಿಲ್ ಪ್ರವೇಶ ಪಡೆದು, ಭಕ್ತಿಯು ರೋಷದಿಂದ ಪ್ರಕಟವಾಗುತ್ತಿತ್ತು. ಒಂಚೂರು ನಿಖಿಲ್ ಮುಂದೆ ಹೋದ ಸುದ್ದಿಯಿಂದ ಅವನ ಅಭಿಮಾನಿಗಳು ಅವನಂತೆಯೇ ಆಡತೊಡಗಿದರು. ಒಂದಿಷ್ಟು ಆತಂಕವಾಯ್ತು, ನಮ್ಮ ನಾಗಮಂಗಲ ಕ್ಷೇತ್ರದಲ್ಲಿ ಹಿಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‍ಗೆ ನಲವತ್ತೇಳು ಸಾವಿರ ಲೀಡು ಬಂದಿತ್ತು ಅದನ್ನ ಹತ್ತಿಕ್ಕಿ ಕನಿಷ್ಟ ಹತ್ತು ಸಾವಿರ ನಿಖಿಲ್ ಲೀಡ್ ಬರಬಹುದೆಂಬುದು ನಮ್ಮ ಲೆಕ್ಕಾಚಾರವಾಗಿತ್ತು. ಅದು ನಿಜವಾಯ್ತು. ಇದು ಬಿಟ್ಟರೆ ಜಿಲ್ಲೆಯ ಇನ್ನಾವ ತಾಲ್ಲೂಕು ಜೆಡಿಎಸ್‍ಗೆ ಲೀಡ್ ಕೊಡಲಿಲ್ಲ. ನಮ್ಮೂರಿಗೆ ಸುಮಲತ ಲಕ್ಷ ಲೀಡ್‍ನಲ್ಲಿ ಗೆದ್ದಳು ಎಂಬ ಸುದ್ದಿ ತಲುಪಿದಾಗ, ಜನ ಊರ ಮುಂದಿದ್ದರು. ಅದೇ ಸಮಯಕ್ಕೆ ಮಳೆ ಆರಂಭವಾಯ್ತು, ಜನ ಮಳೆಯಲ್ಲೇ ಕುಣಿಯತೊಡಗಿದರು. ಅದು ರಂಗದ ಕುಣಿತ, ತಮ್ಮಟೆ ಚಿಕ್ಕಣ್ಣ ಮಾಯಪ್ಪ ಇವರೆಲ್ಲಾ ತಮಟೆ ಬಡಿಯತೊಡಗಿದಂತೆ ಒಂದು ಗಂಟೆ ಸುರಿದ ಮಳೆಯಲ್ಲಿ ಹೊಸ ತಲೆಮಾರಿನ ಹುಡುಗರು ಕುಣಿಯತೊಡಗಿದರು. ಆಶ್ಚರ್ಯವೆಂದರೆ, ಈ ಕುಣಿತದ ಸಂಭ್ರಮ ನೋಡಲಾಗದ ನಿಖಿಲ್ ಕಡೆಯವರೂ ಬಂದು ಕುಣಿಯತೊಡಗಿದರು. ಈ ಸಮ್ಮಿಲನಕ್ಕೆ ಜನ ಹರ್ಷೋದ್ಘಾರ ಮಾಡಿ ಸೀಟಿ ಹೊಡೆದರು. ವಾಸ್ತವವಾಗಿ ದೇವೇಗೌಡ ಮತ್ತು ಕುಮಾರಸ್ವಮಿಯನ್ನು ಬೆಂಬಲಿಸಿದ್ದವರು ಸ್ವಾಭಿಮಾನ ಕಳೆದುಕೊಂಡವರಂತೆ ಮುಖರಹಿತರಾಗಿದ್ದರು. ಈಗ ಅವರ ಸಂಭ್ರಮ ನೋಡಿದರೆ ಅವರಿಗೂ ಸುಮಲತ ಗೆಲ್ಲಬೇಕಿತ್ತೇನೋ ಅನ್ನಿಸುತ್ತದೆ.

ಇದೇನೆ ಆದರು ಸುಮಲತ ಮೂರು ದಾಖಲೆ ಮಾಡಿದ್ದಾರೆ. ಅದೇನೆಂದರೆ 1. ಮಂಡ್ಯದಿಂದ ಆಯ್ಕೆಯಾದ ಮೊದಲ ಪಕ್ಷೇತರ ಅಭ್ಯರ್ಥಿ. 2. ರಾಜ್ಯದ ಕಳೆದ 52 ವರ್ಷದಲ್ಲಿ ಮೊದಲ ಬಾರಿಗೆ ಸ್ವತಂತ್ರವಾಗಿ ಆಯ್ಕೆಯಾದ ಮಹಿಳಾ ಅಭ್ಯರ್ಥಿ. 3. ದೇಶದ ಮಹಿಳಾ ಪಕ್ಷೇತರ ಸದಸ್ಯೆ. ಇರಲಿ ನನ್ನ ಜೊತೆ ಬೆಟ್ ಕಟ್ಟಿದ್ದವನು ಪತ್ತೆಯಿಲ್ಲ. ನಾನು ಊರಿಂದ ಬಂದ ಮೇಲೆ ಊರಿಗೆ ಬಂದಿರಬಹುದು. ನಮ್ಮ ಸ್ವಾಭಿಮಾನ ಗೆದ್ದಿತಲ್ಲ ಅಷ್ಟೇ ಸಾಕು.

ಇದನ್ನು ಓದಿರಿ ಮಂಡ್ಯದಲ್ಲಿ ನಾ ಕಂಡದ್ದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...