Homeಮುಖಪುಟಸೆಂಟ್ರಲ್ ಬಿಟ್ಟು ಅಸೆಂಬ್ಲಿ ಅಖಾಡಕ್ಕೆ ಮಲ್ಲಿಕಾರ್ಜುನ್ ಖರ್ಗೆ?

ಸೆಂಟ್ರಲ್ ಬಿಟ್ಟು ಅಸೆಂಬ್ಲಿ ಅಖಾಡಕ್ಕೆ ಮಲ್ಲಿಕಾರ್ಜುನ್ ಖರ್ಗೆ?

- Advertisement -
- Advertisement -

ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ್ ಖರ್ಗೆಯವರು ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆಂಬ ಸುದ್ದಿಯೊಂದು ಹರಿದಾಡುತ್ತಿದೆ. ವೈದ್ಯಕೀಯ ಶಿಕ್ಷಣ ಸಚಿವ ಹಾಗೂ ಖರ್ಗೆಯವರ ಖಾಸಾ ಶಿಷ್ಯರೂ ಆಗಿರುವ ಶರಣಪ್ರಕಾಶ್ ಪಾಟೀಲ್ ಅವರು ಈ ಸಾಧ್ಯತೆಯನ್ನು ತಳ್ಳಿಹಾಕಿದ್ದಾರಾದರೂ ಹಲವು ಕಾಂಗ್ರೆಸ್ಸಿಗರೇ ಆ ಸಾಧ್ಯತೆಯನ್ನು ಬಲವಾಗಿ ನಂಬಿದ್ದಾರೆ. ಇದರ ಹಿಂದಿನ ಲಾಜಿಕ್ಕು ಈ ಸಾಧ್ಯತೆಗೆ ಪುಷ್ಠಿ ನೀಡುತ್ತಿವೆ.

ಮೊದಲನೆಯದಾಗಿ, ಈ ಬಾರಿ ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲ್ಲಬೇಕಿರುವುದು ಕಾಂಗ್ರೆಸ್‍ಗೆ ಜೀವನ್ಮರಣದ ಪ್ರಶ್ನೆ. ಹಾಗಾಗಿ, ಗೆಲ್ಲಲೇಬೇಕು ಎಂಬ ಅನಿವಾರ್ಯತೆ ಇದ್ದುದರಿಂದ ಪಕ್ಷದಲ್ಲಿ ಗೆಲ್ಲುವವರು ಯಾರೇ ಇದ್ದರೂ ಸರಿ ತಂದು ಚುನಾವಣೆಗೆ ನಿಲ್ಲಿಸಬೇಕೆಂದು ಹೈಕಮಾಂಡ್ ಯೋಚಿಸುತ್ತಿದೆ. ಮಲ್ಲಿಕಾರ್ಜುನ ಖರ್ಗೆಯವರು ಸ್ಪರ್ಧಿಸಿದರೆ ಗೆದ್ದೇ ಗೆಲ್ಲುತ್ತಾರೆ ಎಂಬುದು ಸಾಮಾನ್ಯ ಜ್ಞಾನ.

ಎರಡನೆಯದಾಗಿ, ಮಲ್ಲಿಕಾರ್ಜುನ ಖರ್ಗೆಯವರ ಮಗ ಹಾಗೂ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ಪ್ರವಾಸೋದ್ಯಮ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಈ ಬಾರಿ ಚಿತ್ತಾಪುರ ಕ್ಷೇತ್ರದಿಂದ ಗೆಲ್ಲುವುದು ಕಷ್ಟ ಎಂಬ ಅಭಿಪ್ರಾಯವಿದೆ. ಪಕ್ಷದ ಸ್ಥಳೀಯ ನಾಯಕರು ಮತ್ತು ಕಾರ್ಯಕರ್ತರ ವಿಶ್ವಾಸವನ್ನು ಜ್ಯೂನಿಯರ್ ಖರ್ಗೆ ಕಳೆದುಕೊಂಡಿದ್ದಾರೆ ಎನ್ನಲಾಗುತ್ತಿದೆ. ಹಾಗಾಗಿ, ಚಿತ್ತಾಪುರ ಕ್ಷೇತ್ರದಿಂದ ತಾವೇ ನಿಂತರೆ ಈ ಎಲ್ಲಾ ಅಸಮಾಧಾನಗಳು ಇರುವುದಿಲ್ಲ. ಪಕ್ಷದ ಹಿರಿಯ, ಕಿರಿಯ ನಾಯಕರೆಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿ ತಮ್ಮನ್ನು ಗೆಲ್ಲಿಸುತ್ತಾರೆ ಎಂಬ ಭರವಸೆ ಸೀನಿಯರ್ ಖರ್ಗೆಗೂ ಇದೆ.

ಮೂರನೆಯದಾಗಿ, ಒಂದು ವೇಳೆ ರಾಜ್ಯದಲ್ಲಿ ಅತಂತ್ರ ವಿಧಾನಸಭೆ ಸೃಷ್ಟಿಯಾಗಿ ಜೆಡಿಎಸ್ ಬೆಂಬಲದೊಂದಿಗೆ ಸರ್ಕಾರ ರಚಿಸುವ ಅನಿವಾರ್ಯತೆ ಕಾಂಗ್ರೆಸ್ಸಿಗೆ ಬಂದರೆ ಸಿದ್ದರಾಮಯ್ಯನವರನ್ನು ಮುಖ್ಯಮಂತ್ರಿ ಮಾಡಲು ದೇವೇಗೌಡರಾಗಲೀ, ಕುಮಾರಸ್ವಾಮಿಯವರಾಗಲಿ. ಸುತರಾಂ ಒಪ್ಪುವುದಿಲ್ಲ. ಅಂಥಾ ಸನ್ನಿವೇಶದಲ್ಲಿ ಖರ್ಗೆಯವರು ಮುಂಚೂಣಿಯಲ್ಲಿದ್ದರೆ ಉಭಯರಿಗೂ ಅನುಕೂಲ. ಹೀಗಾದರೆ ಒಂದೆಡೆ ದೇವೇಗೌಡರನ್ನೂ ತೃಪ್ತಿಪಡಿಸಿದಂತಾಗುತ್ತದೆ, ದಲಿತ ಮುಖ್ಯಮಂತ್ರಿಯ ಬಹುದಿನದ ಬೇಡಿಕೆಯನ್ನು ಈಡೇರಿಸಿ ದಲಿತರ ನಡುವಿನ ಬೇಸ್ ಗಟ್ಟಿಗೊಳಿಸಿದಂತಾಗುತ್ತದೆ.

ರಾಜಕೀಯದಲ್ಲಿ ಅಸಾಧ್ಯ ಎಂಬುದು ಯಾವುದೂ ಇಲ್ಲ. ಖರ್ಗೆ ಮತ್ತು ಹೈಕಮಾಂಡ್ ನಡೆಯ ಮೇಲೆ ಈ ರಾಜಕೀಯ ಲೆಕ್ಕಾಚಾರ ನಿಂತಿದೆ ಎನ್ನಲಾಗಿದೆ.

ಈ ಲೆಕ್ಕಾಚಾರ ಒಂದೆಡೆಯಾದರೆ, ಖರ್ಗೆಯವರ ಮಗನ ರಾಜಕೀಯ ಭವಿಷ್ಯವೇನು ಎಂಬುದು ಮತ್ತೊಂದು ಜಟಿಲ ಪ್ರಶ್ನೆ. ಅದಕ್ಕೂ ಒಂದು ಪರ್ಯಾಯ ಯೋಜನೆ ಸಿದ್ಧವಾಗಿದೆ. ಅದು ಗುಲ್ಬರ್ಗಾ ಗ್ರಾಮೀಣ ಕ್ಷೇತ್ರ. ಅದೂ ಕೂಡ ಚಿತ್ತಾಪುರದಂತೆಯೇ ಎಸ್‍ಸಿ ಮೀಸಲು ಕ್ಷೇತ್ರ. ಅಲ್ಲಿ ಕಳೆದ ಬಾರಿ ಬಿಜೆಪಿ, ಕೆಜೆಪಿ ಪಕ್ಷಗಳ ಮತವಿಭಜನೆಯಿಂದಾಗಿ ಕಾಂಗ್ರೆಸ್ಸಿನ ರಾಮಕೃಷ್ಣ ಗೆದ್ದಿದ್ದರು. ಅವರಿಗೆ ವಯಸ್ಸಾಗಿದೆ, ಆರೋಗ್ಯವೂ ಸರಿಯಿಲ್ಲ. ಅವರು ಈ ಬಾರಿ ಚುನಾವಣಾ ಕಣದಲ್ಲೂ ಇಲ್ಲ. ಅವರ ಮಗ ಟಿಕೆಟ್ ಆಕಾಂಕ್ಷಿಯಾಗಿದ್ದರೂ ತಂದೆಗಿದ್ದ ಜನಬೆಂಬಲ ಮಗನಿಗಿಲ್ಲ. ಹೀಗಾಗಿ, ಪ್ರಿಯಾಂಕ ಖರ್ಗೆಯನ್ನು ಅಲ್ಲಿಗೆ ತಂದರೆ ಅವರು ಒಮ್ಮತದ ಅಭ್ಯರ್ಥಿಯಾಗಿಬಿಡುತ್ತಾರೆ. ಅಲ್ಲಿ ಬಿಜೆಪಿ, ಕೆಜೆಪಿ ಒಂದಾಗಿದ್ದರೂ ಮೂವರು ಟಿಕೆಟ್ ಆಕಾಂಕ್ಷಿಗಳು ಪರಸ್ಪರ ಪೈಪೋಟಿಯ ಹಿನ್ನೆಲೆಯಲ್ಲಿ ಖರ್ಗೆ ಪುತ್ರನ ಹಾದಿ ಸುಗಮವಾಗಲಿದೆ. ರೇವುನಾಯಕ ಬೆಳಮಗಿಗೆ ಟಿಕೆಟ್ ಖಾತರಿಯಾಗಲಿದ್ದು ಉಳಿದವರು ಬಂಡಾಯವೇಳುವ ಸಾಧ್ಯತೆಯಿದೆ. ಬಿಜೆಪಿಯ ಈ ಬಂಡಾಯವನ್ನು ಉಪಯೋಗಿಸಿಕೊಳ್ಳುವುದಕ್ಕೂ ಪ್ರಿಯಾಂಕ್ ಖರ್ಗೆ ಸ್ಪರ್ಧೆ ಕಾಂಗ್ರೆಸ್ಸಿಗೆ ನೆರವಾಗಲಿದೆಯೆಂಬ ಲೆಕ್ಕಾಚಾರ ಚಾಲ್ತಿಯಲ್ಲಿದೆ. ರಾಜಕಾರಣದ ಒಳಸುಳಿಗಳೇ ಹೀಗೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...