Homeಮುಖಪುಟ"ಸೈಂಟಿಫಿಕ್ ಪೆಪ್ಪರಮಿಂಟ್" ಅಂದ್ರೆ ಏನು, ಹೇಗಿರುತ್ತೆ ಗೊತ್ತಾ?

“ಸೈಂಟಿಫಿಕ್ ಪೆಪ್ಪರಮಿಂಟ್” ಅಂದ್ರೆ ಏನು, ಹೇಗಿರುತ್ತೆ ಗೊತ್ತಾ?

- Advertisement -
- Advertisement -

ಹೊಸ ಶಿಕ್ಷಣ ನೀತಿಯ ಹಿನ್ನೆಲೆಯಲ್ಲಿ ಕೇಂದ್ರದ ಸಾಂಸ್ಕೃತಿಕ ವಕ್ತಾರರನ್ನು ಸಂದರ್ಶಿಸಲಾಯಿತು. ಈ ದೇಶದ ಮುಂದಿನ ಐವತ್ತು ವರ್ಷಗಳ ಶಿಕ್ಷಣ, ಸಾಂಸ್ಕೃತಿಕ ನಡೆ ಕುರಿತ ಕಾಣ್ಕೆಯನ್ನು ವಕ್ತಾರರು ಹಂಚಿಕೊಂಡರು.

ಅದರ ಆಯ್ದ ಭಾಗವನ್ನು ಇಲ್ಲಿ ಪ್ರಕಟಿಸಲಾಗಿದೆ.

ನಾನು: ಹೊಸ ಶಿಕ್ಷಣ ನೀತಿಯ ಒತ್ತು ಏನು?

ಸಾಂಸ್ಕೃತಿಕ ವಕ್ತಾರ: ನೋಡಿ ಕಳೆದ ಎಪ್ಪತ್ತು ವರ್ಷಗಳಲ್ಲಿ ನಮ್ಮ ಸಂಸ್ಕೃತಿಯನ್ನು ನಾಶಮಾಡುವ ಕೆಲಸವನ್ನು ನೆಹರೂ ಮತ್ತು ಎಡಚರು ಮಾಡಿದ್ದಾರೆ . ನಾವು ಅದನ್ನು ತಿದ್ದಿ ಭಾರತದ ಭವ್ಯ ಸಂಸ್ಕೃತಿಯನ್ನು ಸ್ಥಾಪಿಸಬೇಕಾಗಿದೆ. ಭಾರತ ವಿಶ್ವಗುರುವಾಗಲು ಇದು ಬುನಾದಿ.

ನಾನು: ಇದನ್ನು ಹೇಗೆ ಸಾಧಿಸಲಾಗುತ್ತದೆ?

ಸಾಂವ: ಈಗ ನೋಡಿ ಮೊನ್ನೆ ಗ್ರಹಣ ಆಯಿತು. ಎಡಚರು ಇದನ್ನು ಖಗೋಳ ಶಾಸ್ತ್ರೀಯ ಘಟನೆ ಅನ್ನುತ್ತಾರೆ. ಆದರೆ ನಮ್ಮ ಹಳ್ಳಿಹಳ್ಳಿಗಳಲ್ಲೂ ಇದನ್ನು ಸಾವಿರಾರು ವರ್ಷಗಳಿಂದ ಗಮನಿಸಿದ್ದಾರೆ. ಇದರ ಪರಿಣಾಮಗಳನ್ನು ನಿವಾರಿಸಲು ಪರಿಹಾರ ಕ್ರಮ ಮಾಡುತ್ತಾರೆ. ಹಾಗಿದ್ದರೆ ಅವರು ಅಜ್ಞಾನಿಗಳೇ? ಉದಾ: ಗ್ರಹಣ ಕಾಲದಲ್ಲಿ ವಿಕಿರಣ ಪರಿಣಾಮ ಆಗುತ್ತೆ. ಅದಕ್ಕೇ ಮಕ್ಕಳನ್ನು ತಿಪ್ಪೆಯಲ್ಲಿ ಹುಗಿದಿಡುವ ಸಂಪ್ರದಾಯ ಇದೆ. ಯಾಕೆ ಹೇಳಿ? ಗೋವಿನ ಸೆಗಣಿಗೆ ವಿಕಿರಣವನ್ನು ತಡೆಯುವ ಶಕ್ತಿ ಇದೆ.

ನಾನು: ಅಂದರೆ?

ಸಾಂ ವ: ಅಂದರೆ ನಾವು ಈ ಬಗ್ಗೆ ವಿಶೇಷ ಸಂಶೋಧನೆಗೆ ಅನುದಾನ ನೀಡುತ್ತೇವೆ. ಮಾತ್ರವಲ್ಲ ಮುಂದಿನ ವರ್ಷಗಳಲ್ಲಿ ಗ್ರಹಣ ಕಾಲದಲ್ಲಿ ಅಂಗನವಾಡಿ ಮತ್ತು ಶಾಲಾಮಕ್ಕಳನ್ನು ಶಾಲಾ ಆವರಣದಲ್ಲೇ ತಿಪ್ಪೆಯಲ್ಲಿ ಹೂತಿಡುವ ಬೃಹತ್ ರಾಷ್ಟ್ರೀಯ ಕಾರ್ಯಕ್ರಮವನ್ನು ಚಾಲೂ ಮಾಡಲಾಗುವುದು. ವಿದೇಶಗಳಲ್ಲೂ ಇದರ ವೈಜ್ಞಾನಿಕ ಮಹತ್ವವನ್ನು ಸಾರಲೂ ವಿದೇಶದಲ್ಲಿರುವ ಭಾರತೀಯ ಮಕ್ಕಳನ್ನು ಬಳಸಿ ಅಲ್ಲಿ ಪ್ರಾತ್ಯಕ್ಷಿಕೆ ಮಾಡಿ ವಿದೇಶಗಳಲ್ಲೂ ನಮ್ಮ ಆಚರಣೆಯ ಮಹತ್ವವನ್ನು ಪ್ರಚುರಪಡಿಸಲಾಗುವುದು.

ನಾನು : ಮತ್ತೆ ಈ ದರ್ಭೆಗೆ ವಿಶೇಷ ಮಹತ್ವ ಇದೆ ಎಂದು ಹೇಳ್ತಿದ್ರು..

ಸಾಂವ: ದರ್ಭೆ? ಅದು ಜಗತ್ತಿನಲ್ಲೇ ವಿಶೇಷ. ಅದರ ಒಂದು ತುಂಡು ಹಾಕಿದರೂ ವಿಕಿರಣ ತಾಗೋದಿಲ್ಲ. ಅಷ್ಟೇಕೆ, ನಾವೀಗ ದರ್ಭೇಯನ್ನೇ ಉಪಯೋಗಿಸಿ ಬೆನ್ನಟ್ಟುವ ಕ್ಷಿಪಣಿ ತಯಾರು ಮಾಡುವ ತಂತ್ರಜ್ಞಾನದ ಸಂಶೋಧನೆ ಆರಂಭಿಸಿದ್ದೇವೆ

ನಾನು: ಅದು ಹೇಗೆ?

ಸಾಂವ: ಅಯ್ಯೋ, ರಾಮಾಯಣದಲ್ಲಿ ಶ್ರೀರಾಮ ದೇವರು ದರ್ಭೆಗೆ ಮಂತ್ರ ಆವಾಹನೆ ಮಾಡಿ ಕಾಕಾಸುರನನ್ನು ಬೆನ್ನಟ್ಟಲಿಲ್ಲವೇ? ಹಾಗೇ ಶತ್ರು ಕ್ಷಿಪಣಿ/ ವಿಮಾನದ ಶಾಖವನ್ನೇ ಬೆನ್ನು ಹತ್ತಿ ಅದನ್ನು ನಾಶ ಮಾಡೋದು. ದರ್ಭೆ ಸಣ್ಣಕ್ಕೆ ಇರುವ ಕಾರಣ ಅದು ರಾಡಾರಿನಲ್ಲೂ ಕಾಣಿಸೋದಿಲ್ಲ. ಅದಕ್ಕೆ ಆಗ್ನೇಯಾಸ್ತ, ಬ್ರಹ್ಮಾಸ್ತ್ರದಂಥಾ ಮಂತ್ರವನ್ನು ಆವಾಹಿಸಲು ವಿಶೇಷ ವಿಪ್ರ ಪುರೋಹಿತರನ್ನು ಸೈನ್ಯ ನಿಯೋಜಿಸಲಿದೆ.

ನಾನು: ಅದ್ಭುತ. ಇದನ್ನು ಜಗತ್ತಿಗೆ ಹೇಳಬೇಕು!!

ಸಾಂವ: ( ನಕ್ಕು) ನೋಡಿ.. ಇದು ಡಿಫೆನ್ಸ್ ಸೀಕ್ರೆಟ್. ಇದನ್ನು ನಾವು ಯಾರಿಗೂ ಹೇಳೋದಿಲ್ಲ ಹ್ಹ.. ಹ್ಹಾ..

ನಾನು: ಅದ್ಭುತ.. ಇನ್ನು ಇಂಥಾ ಎಷ್ಟು ಯೋಜನೆಗಳಿದಾವೆ?

ಸಾಂವ: ತುಂಬಾ ಇದೆ. ಆದರೆ ಕೆಲವನ್ನು ನಾವು ಗುಪ್ತವಾಗಿ ಮಾಡಬೇಕಿದೆ. ಉದಾ: ನಾವು ಈಗಾಗಲೇ ಯಾವುದೇ ಶಸ್ತ್ರಚಿಕಿತ್ಸೆ ಇಲ್ಲದೇ ಮೆದುಳು ಮತ್ತು ಹೃದಯವನ್ನು ಬದಲಾಯಿಸುವ ಶಸ್ತ್ರಚಿಕಿತ್ಸೆಯನ್ನು ಗುಂಪು ಗುಂಪಿಗೆ ಮಾಡಿದ್ದೇವೆ. ಇದರಲ್ಲಿ ಮೆದುಳನ್ನು ಮೆತ್ತಗೆ ಮಾಡಿ ವಿಧೇಯತೆಯನ್ನು ಮುದ್ರಿಸುವುದನ್ನು ಮಾಡಲಾಗುತ್ತದೆ. ಇನ್ನು ಹೃದಯದ್ದು ಸ್ವಲ್ಪ ಬೇರೆ. ಅದು ಮೃದು ಇದ್ದರೆ ಕಷ್ಟ. ಅದಕ್ಕೇ ಕೆಲವು ಮೂಲಿಕೆ ಬಳಸಿ ಅದು ಕಲ್ಲಾಗುವ ತರ ಮಾಡುವುದು. ರಕ್ತಪರಿಚಲನೆ ಬಿಟ್ಟು ಬೇರೆ ಭಾವನೆಗಳ ಕೆಲಸ ಹೃದಯಕ್ಕೆ ಇರೋದು ವೇಸ್ಟ್ .

ನಾನು: ಅದ್ಭುತ.. ಇದು ಯಾವಾಗ ಚಾಲೂ ಆಗುತ್ತೆ?

ಸಾಂವ: ಚಾಲೂ? ಎಲ್ಲಿದ್ದೀರಿ ನೀವು..? ಈಗ ನಮ್ಮ ಪರವಾಗಿ ಮಾತಾಡಿ, ಬೀದಿಗಿಳಿದು ಗಲಾಟೆ ಮಾಡೋರು ಯಾರು ಅಂದ್ಕೊಂಡ್ರಿ? ಅದು ಈಗಾಗಲೇ ಲಕ್ಷಾಂತರ ಮಂದಿಗೆ ಮಾಡಿಯಾಗಿದೆ..

ನಾನು: ಅದ್ಭುತ: ಈ ಒಟ್ಟಾರೆ ನೀತಿಗೆ ಏನೆಂದು ಕರೆಯಲಾಗುತ್ತೆ?

ಸಾಂವ: ನೋಡಿ ನೆಹರೂ ಇದನ್ನು ಸೈಂಟಿಫಿಕ್ ಟೆಂಪರಮೆಂಟ್ ಅಂತ ಕರಿತಿದ್ರು. ಎಂಥಾ ಟೆಂಪರ್? ಅದಕ್ಕೇ ನಾವಿದನ್ನು ಪೆಪ್ಪರಮಿಂಟ್.. ಸೈಂಟಿಫಿಕ್ ಪೆಪ್ಪರಮಿಂಟ್ ಎಂದು ಕರೆಯುತ್ತೇವೆ. ಪೆಪ್ಪರಮಿಂಟ್ ಅಂದ್ರೇನು? ಗೊತ್ತಲ್ಲ. ಮಕ್ಕಳಿಗೆ ಇಷ್ಟ. ಅದಕ್ಕೇ ಈ ಯೋಜನೆಗೆ ಆ ಹೆಸರು

ನಾನು: ಸೂಪರ್ ಸಾರ್… ಅಭಿನಂದನೆಗಳು..!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...

ಉತ್ತರ ಪ್ರದೇಶ| ಪಾಕ್ ಸಂಪರ್ಕದ ಆರೋಪ; ಮಹಿಳೆ ಸೇರಿದಂತೆ 6 ಜನರ ಬಂಧನ

ಪಾಕಿಸ್ತಾನದ ದೇಶದ ಕೋಡ್‌ನಲ್ಲಿ ನೋಂದಾಯಿಸಲಾದ ವಿದೇಶಿ ಸಂಖ್ಯೆಯೊಂದಿಗೆ ಭದ್ರತಾ ಕಚೇರಿಗಳು, ತನಿಖಾ ಸಂಸ್ಥೆಗಳು ಮತ್ತು ರೈಲ್ವೆ ನಿಲ್ದಾಣಗಳಂತಹ ಸಾರ್ವಜನಿಕ ಸ್ಥಳಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಚಿತ್ರೀಕರಿಸಿ ಹಂಚಿಕೊಂಡ ಆರೋಪದ ಮೇಲೆ ಗಾಜಿಯಾಬಾದ್‌ನಲ್ಲಿ ಮಹಿಳೆ...

ವೈರಮುತ್ತುಗೆ ಜ್ಞಾನಪೀಠ ಪ್ರಶಸ್ತಿ : ಚಿನ್ಮಯಿ ಶ್ರೀಪಾದ, ಟಿಎಂ ಕೃಷ್ಣ ಸೇರಿ ಹಲವರಿಂದ ಟೀಕೆ

ಲಿಂಗತಾರತಮ್ಯ ಮತ್ತು ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ತಮಿಳು ಸಾಹಿತಿ ವೈರಮುತ್ತು ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಘೋಷಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.  ಸಾಹಿತ್ಯ ಕ್ಷೇತ್ರದಲ್ಲಿನ ಅವರ ಕೊಡುಗೆಯನ್ನು ಪರಿಗಣಿಸಿ...

ಡ್ರೋನ್ ದಾಳಿಯ ನಂತರ ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ ಅವಘಡ; ವಿಮಾನ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತ

ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿಯಿಂದಾಗಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಆದರೆ, ದುಬೈ ಅಧಿಕಾರಿಗಳ ಪ್ರಕಾರ, ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ."ದುಬೈ ಅಂತರಾಷ್ಟ್ರೀಯ ವಿಮಾನ...

ಕಾನ್ಶಿ ರಾಮ್‌ಗೆ ಭಾರತ ರತ್ನ ನೀಡುವಂತೆ ಆಗ್ರಹಿಸಿ ಪ್ರಧಾನಿಗೆ ಪತ್ರ ಬರೆದ ರಾಹುಲ್ ಗಾಂಧಿ

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಸ್ಥಾಪಿಸಿದ ದಲಿತ ಐಕಾನ್ ಕಾನ್ಶಿ ರಾಮ್‌ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ...

ರಾಜ್ಯಸಭೆಯ 37 ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಹತ್ತು ರಾಜ್ಯಗಳ 37 ಸ್ಥಾನಗಳನ್ನು ಒಳಗೊಂಡ ದ್ವೈವಾರ್ಷಿಕ ರಾಜ್ಯಸಭಾ ಚುನಾವಣೆಗೆ ಸೋಮವಾರ (ಮಾ.16) ಮತದಾನ ನಡೆಯುತ್ತಿದೆ. ಬಿಹಾರ, ಒಡಿಶಾ ಮತ್ತು ಹರಿಯಾಣದಲ್ಲಿ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆ ಇದ್ದು, 26 ಅಭ್ಯರ್ಥಿಗಳು ಈಗಾಗಲೇ...

ಒಡಿಶಾ | ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 10 ಮಂದಿ ಸಾವು

ಒಡಿಶಾದ ಕಟಕ್‌ನಲ್ಲಿರುವ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯುನಲ್ಲಿ ಸೋಮವಾರ (ಮಾರ್ಚ್ 16) ಬೆಂಕಿ ಅವಘಡ ಸಂಭವಿಸಿದ್ದು, ಕನಿಷ್ಠ 10 ರೋಗಿಗಳು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು...

ಆಸ್ಕರ್‌ 2026 : ಮೈಕೆಲ್ ಬಿ. ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ, ಒನ್ ಬ್ಯಾಟಲ್ ಆಫ್ಟರ್ ಅನದರ್‌ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

ಪ್ರತಿಷ್ಠಿತ 98ನೇ ಅಕಾಡೆಮಿ ಪ್ರಶಸ್ತಿ (ಆಸ್ಕರ್ 2026) ಸಮಾರಂಭ ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ಮಾರ್ಚ್ 15ರಂದು (ಭಾರತೀಯ ಕಾಲಮಾನ ಮಾರ್ಚ್ 16) ನಡೆಯಿತು. ಖ್ಯಾತ ಹಾಸ್ಯನಟ ಕೋನನ್ ಒಬ್ರೇನ್ ಅವರು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು....