Homeಮುಖಪುಟ"ಸೈಂಟಿಫಿಕ್ ಪೆಪ್ಪರಮಿಂಟ್" ಅಂದ್ರೆ ಏನು, ಹೇಗಿರುತ್ತೆ ಗೊತ್ತಾ?

“ಸೈಂಟಿಫಿಕ್ ಪೆಪ್ಪರಮಿಂಟ್” ಅಂದ್ರೆ ಏನು, ಹೇಗಿರುತ್ತೆ ಗೊತ್ತಾ?

- Advertisement -
- Advertisement -

ಹೊಸ ಶಿಕ್ಷಣ ನೀತಿಯ ಹಿನ್ನೆಲೆಯಲ್ಲಿ ಕೇಂದ್ರದ ಸಾಂಸ್ಕೃತಿಕ ವಕ್ತಾರರನ್ನು ಸಂದರ್ಶಿಸಲಾಯಿತು. ಈ ದೇಶದ ಮುಂದಿನ ಐವತ್ತು ವರ್ಷಗಳ ಶಿಕ್ಷಣ, ಸಾಂಸ್ಕೃತಿಕ ನಡೆ ಕುರಿತ ಕಾಣ್ಕೆಯನ್ನು ವಕ್ತಾರರು ಹಂಚಿಕೊಂಡರು.

ಅದರ ಆಯ್ದ ಭಾಗವನ್ನು ಇಲ್ಲಿ ಪ್ರಕಟಿಸಲಾಗಿದೆ.

ನಾನು: ಹೊಸ ಶಿಕ್ಷಣ ನೀತಿಯ ಒತ್ತು ಏನು?

ಸಾಂಸ್ಕೃತಿಕ ವಕ್ತಾರ: ನೋಡಿ ಕಳೆದ ಎಪ್ಪತ್ತು ವರ್ಷಗಳಲ್ಲಿ ನಮ್ಮ ಸಂಸ್ಕೃತಿಯನ್ನು ನಾಶಮಾಡುವ ಕೆಲಸವನ್ನು ನೆಹರೂ ಮತ್ತು ಎಡಚರು ಮಾಡಿದ್ದಾರೆ . ನಾವು ಅದನ್ನು ತಿದ್ದಿ ಭಾರತದ ಭವ್ಯ ಸಂಸ್ಕೃತಿಯನ್ನು ಸ್ಥಾಪಿಸಬೇಕಾಗಿದೆ. ಭಾರತ ವಿಶ್ವಗುರುವಾಗಲು ಇದು ಬುನಾದಿ.

ನಾನು: ಇದನ್ನು ಹೇಗೆ ಸಾಧಿಸಲಾಗುತ್ತದೆ?

ಸಾಂವ: ಈಗ ನೋಡಿ ಮೊನ್ನೆ ಗ್ರಹಣ ಆಯಿತು. ಎಡಚರು ಇದನ್ನು ಖಗೋಳ ಶಾಸ್ತ್ರೀಯ ಘಟನೆ ಅನ್ನುತ್ತಾರೆ. ಆದರೆ ನಮ್ಮ ಹಳ್ಳಿಹಳ್ಳಿಗಳಲ್ಲೂ ಇದನ್ನು ಸಾವಿರಾರು ವರ್ಷಗಳಿಂದ ಗಮನಿಸಿದ್ದಾರೆ. ಇದರ ಪರಿಣಾಮಗಳನ್ನು ನಿವಾರಿಸಲು ಪರಿಹಾರ ಕ್ರಮ ಮಾಡುತ್ತಾರೆ. ಹಾಗಿದ್ದರೆ ಅವರು ಅಜ್ಞಾನಿಗಳೇ? ಉದಾ: ಗ್ರಹಣ ಕಾಲದಲ್ಲಿ ವಿಕಿರಣ ಪರಿಣಾಮ ಆಗುತ್ತೆ. ಅದಕ್ಕೇ ಮಕ್ಕಳನ್ನು ತಿಪ್ಪೆಯಲ್ಲಿ ಹುಗಿದಿಡುವ ಸಂಪ್ರದಾಯ ಇದೆ. ಯಾಕೆ ಹೇಳಿ? ಗೋವಿನ ಸೆಗಣಿಗೆ ವಿಕಿರಣವನ್ನು ತಡೆಯುವ ಶಕ್ತಿ ಇದೆ.

ನಾನು: ಅಂದರೆ?

ಸಾಂ ವ: ಅಂದರೆ ನಾವು ಈ ಬಗ್ಗೆ ವಿಶೇಷ ಸಂಶೋಧನೆಗೆ ಅನುದಾನ ನೀಡುತ್ತೇವೆ. ಮಾತ್ರವಲ್ಲ ಮುಂದಿನ ವರ್ಷಗಳಲ್ಲಿ ಗ್ರಹಣ ಕಾಲದಲ್ಲಿ ಅಂಗನವಾಡಿ ಮತ್ತು ಶಾಲಾಮಕ್ಕಳನ್ನು ಶಾಲಾ ಆವರಣದಲ್ಲೇ ತಿಪ್ಪೆಯಲ್ಲಿ ಹೂತಿಡುವ ಬೃಹತ್ ರಾಷ್ಟ್ರೀಯ ಕಾರ್ಯಕ್ರಮವನ್ನು ಚಾಲೂ ಮಾಡಲಾಗುವುದು. ವಿದೇಶಗಳಲ್ಲೂ ಇದರ ವೈಜ್ಞಾನಿಕ ಮಹತ್ವವನ್ನು ಸಾರಲೂ ವಿದೇಶದಲ್ಲಿರುವ ಭಾರತೀಯ ಮಕ್ಕಳನ್ನು ಬಳಸಿ ಅಲ್ಲಿ ಪ್ರಾತ್ಯಕ್ಷಿಕೆ ಮಾಡಿ ವಿದೇಶಗಳಲ್ಲೂ ನಮ್ಮ ಆಚರಣೆಯ ಮಹತ್ವವನ್ನು ಪ್ರಚುರಪಡಿಸಲಾಗುವುದು.

ನಾನು : ಮತ್ತೆ ಈ ದರ್ಭೆಗೆ ವಿಶೇಷ ಮಹತ್ವ ಇದೆ ಎಂದು ಹೇಳ್ತಿದ್ರು..

ಸಾಂವ: ದರ್ಭೆ? ಅದು ಜಗತ್ತಿನಲ್ಲೇ ವಿಶೇಷ. ಅದರ ಒಂದು ತುಂಡು ಹಾಕಿದರೂ ವಿಕಿರಣ ತಾಗೋದಿಲ್ಲ. ಅಷ್ಟೇಕೆ, ನಾವೀಗ ದರ್ಭೇಯನ್ನೇ ಉಪಯೋಗಿಸಿ ಬೆನ್ನಟ್ಟುವ ಕ್ಷಿಪಣಿ ತಯಾರು ಮಾಡುವ ತಂತ್ರಜ್ಞಾನದ ಸಂಶೋಧನೆ ಆರಂಭಿಸಿದ್ದೇವೆ

ನಾನು: ಅದು ಹೇಗೆ?

ಸಾಂವ: ಅಯ್ಯೋ, ರಾಮಾಯಣದಲ್ಲಿ ಶ್ರೀರಾಮ ದೇವರು ದರ್ಭೆಗೆ ಮಂತ್ರ ಆವಾಹನೆ ಮಾಡಿ ಕಾಕಾಸುರನನ್ನು ಬೆನ್ನಟ್ಟಲಿಲ್ಲವೇ? ಹಾಗೇ ಶತ್ರು ಕ್ಷಿಪಣಿ/ ವಿಮಾನದ ಶಾಖವನ್ನೇ ಬೆನ್ನು ಹತ್ತಿ ಅದನ್ನು ನಾಶ ಮಾಡೋದು. ದರ್ಭೆ ಸಣ್ಣಕ್ಕೆ ಇರುವ ಕಾರಣ ಅದು ರಾಡಾರಿನಲ್ಲೂ ಕಾಣಿಸೋದಿಲ್ಲ. ಅದಕ್ಕೆ ಆಗ್ನೇಯಾಸ್ತ, ಬ್ರಹ್ಮಾಸ್ತ್ರದಂಥಾ ಮಂತ್ರವನ್ನು ಆವಾಹಿಸಲು ವಿಶೇಷ ವಿಪ್ರ ಪುರೋಹಿತರನ್ನು ಸೈನ್ಯ ನಿಯೋಜಿಸಲಿದೆ.

ನಾನು: ಅದ್ಭುತ. ಇದನ್ನು ಜಗತ್ತಿಗೆ ಹೇಳಬೇಕು!!

ಸಾಂವ: ( ನಕ್ಕು) ನೋಡಿ.. ಇದು ಡಿಫೆನ್ಸ್ ಸೀಕ್ರೆಟ್. ಇದನ್ನು ನಾವು ಯಾರಿಗೂ ಹೇಳೋದಿಲ್ಲ ಹ್ಹ.. ಹ್ಹಾ..

ನಾನು: ಅದ್ಭುತ.. ಇನ್ನು ಇಂಥಾ ಎಷ್ಟು ಯೋಜನೆಗಳಿದಾವೆ?

ಸಾಂವ: ತುಂಬಾ ಇದೆ. ಆದರೆ ಕೆಲವನ್ನು ನಾವು ಗುಪ್ತವಾಗಿ ಮಾಡಬೇಕಿದೆ. ಉದಾ: ನಾವು ಈಗಾಗಲೇ ಯಾವುದೇ ಶಸ್ತ್ರಚಿಕಿತ್ಸೆ ಇಲ್ಲದೇ ಮೆದುಳು ಮತ್ತು ಹೃದಯವನ್ನು ಬದಲಾಯಿಸುವ ಶಸ್ತ್ರಚಿಕಿತ್ಸೆಯನ್ನು ಗುಂಪು ಗುಂಪಿಗೆ ಮಾಡಿದ್ದೇವೆ. ಇದರಲ್ಲಿ ಮೆದುಳನ್ನು ಮೆತ್ತಗೆ ಮಾಡಿ ವಿಧೇಯತೆಯನ್ನು ಮುದ್ರಿಸುವುದನ್ನು ಮಾಡಲಾಗುತ್ತದೆ. ಇನ್ನು ಹೃದಯದ್ದು ಸ್ವಲ್ಪ ಬೇರೆ. ಅದು ಮೃದು ಇದ್ದರೆ ಕಷ್ಟ. ಅದಕ್ಕೇ ಕೆಲವು ಮೂಲಿಕೆ ಬಳಸಿ ಅದು ಕಲ್ಲಾಗುವ ತರ ಮಾಡುವುದು. ರಕ್ತಪರಿಚಲನೆ ಬಿಟ್ಟು ಬೇರೆ ಭಾವನೆಗಳ ಕೆಲಸ ಹೃದಯಕ್ಕೆ ಇರೋದು ವೇಸ್ಟ್ .

ನಾನು: ಅದ್ಭುತ.. ಇದು ಯಾವಾಗ ಚಾಲೂ ಆಗುತ್ತೆ?

ಸಾಂವ: ಚಾಲೂ? ಎಲ್ಲಿದ್ದೀರಿ ನೀವು..? ಈಗ ನಮ್ಮ ಪರವಾಗಿ ಮಾತಾಡಿ, ಬೀದಿಗಿಳಿದು ಗಲಾಟೆ ಮಾಡೋರು ಯಾರು ಅಂದ್ಕೊಂಡ್ರಿ? ಅದು ಈಗಾಗಲೇ ಲಕ್ಷಾಂತರ ಮಂದಿಗೆ ಮಾಡಿಯಾಗಿದೆ..

ನಾನು: ಅದ್ಭುತ: ಈ ಒಟ್ಟಾರೆ ನೀತಿಗೆ ಏನೆಂದು ಕರೆಯಲಾಗುತ್ತೆ?

ಸಾಂವ: ನೋಡಿ ನೆಹರೂ ಇದನ್ನು ಸೈಂಟಿಫಿಕ್ ಟೆಂಪರಮೆಂಟ್ ಅಂತ ಕರಿತಿದ್ರು. ಎಂಥಾ ಟೆಂಪರ್? ಅದಕ್ಕೇ ನಾವಿದನ್ನು ಪೆಪ್ಪರಮಿಂಟ್.. ಸೈಂಟಿಫಿಕ್ ಪೆಪ್ಪರಮಿಂಟ್ ಎಂದು ಕರೆಯುತ್ತೇವೆ. ಪೆಪ್ಪರಮಿಂಟ್ ಅಂದ್ರೇನು? ಗೊತ್ತಲ್ಲ. ಮಕ್ಕಳಿಗೆ ಇಷ್ಟ. ಅದಕ್ಕೇ ಈ ಯೋಜನೆಗೆ ಆ ಹೆಸರು

ನಾನು: ಸೂಪರ್ ಸಾರ್… ಅಭಿನಂದನೆಗಳು..!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...