Homeರಾಜಕೀಯಸೋಲುವ ಭೀತಿಯಲ್ಲಿ ಇವಿಎಂ ಯಂತ್ರಗಳಿಗೇ ಕನ್ನ ಹಾಕಿತೇ ಬಿಜೆಪಿ?

ಸೋಲುವ ಭೀತಿಯಲ್ಲಿ ಇವಿಎಂ ಯಂತ್ರಗಳಿಗೇ ಕನ್ನ ಹಾಕಿತೇ ಬಿಜೆಪಿ?

- Advertisement -
- Advertisement -

ಇ.ವಿ.ಎಮ್ ಬಂದ ಹೊಸತರಲ್ಲಿ ಅದನ್ನು ಹ್ಯಾಕ್ ಮಾಡಲು ಸಾಧ್ಯವಿಲ್ಲ, ಮೊದಲು ನಡೆಯುತ್ತಿದ್ದ ಚುನಾವಣೆ ಪ್ರಕ್ರಿಯೆಗಿಂತ ಎಲೆಕ್ಟ್ರಾನಿಕ್ ಓಟಿಂಗ್ ಮಷೀನ್ (ಇವಿಎಮ್) ನಿಂದ ಡಿಜಟಲೀಕರಣಗೊಂಡು ಹೆಚ್ಚು ನಂಬಿಕಾರ್ಹವಾಗಿರುತ್ತದೆ ಎಂದು ಹೇಳಲಾಗುತ್ತಿತ್ತು. ಅದನ್ನು ಹ್ಯಾಕ್ ಮಾಡಲು ಸಾಧ್ಯವಿಲ್ಲ ಎನ್ನುವ ಮಾತುಗಳನ್ನು ಚುನಾವಣೆ ಆಯೋಗವು ಹೇಳುತ್ತಿತ್ತು. ಆದರೆ ಈಗ ಇವಿಎಮ್ ಮಷೀನುಗಳೆ ಮಾಯವಾಗಿ ಖಾಸಗಿ ಹೋಟೆಲ್ ಗಳಲ್ಲಿ, ಎಂ.ಎಲ್.ಎ ಗಳ ಮನೆಗಳಲ್ಲಿ ಪ್ರತ್ಯಕ್ಷವಾಗುತ್ತಿದೆ. ಈ ಹಿಂದೆ ಯಾವುದೇ ಪಕ್ಷಕ್ಕೆ ಮತ ಹಾಕಿದರೂ ಬಿಜೆಪಿಗೇ ಮತಗಳು ಹೋಗುತ್ತಿದ್ದವು ಎನ್ನುವ ಆರೋಪಗಳು ಕೇಳಿಬರುತ್ತಿದ್ದವು. ಚಲಾಯಿಸಿದ ಮತಗಳು ಅಧಿಕೃತವಾಗಿದೆ ಎಂದು ಖಾತ್ರಿ ಮಾಡಿಕೊಳ್ಳಲು ವಿವಿ ಪ್ಯಾಟ್ ವ್ಯವಸ್ಥೆಯನ್ನು ತರಲಾಯಿತು. ಮತದಾರರನ್ನು ಹ್ಯಾಕ್ ಮಾಡಲು ಸಾಧ್ಯವೇ ಇಲ್ಲ ಎಂದು ನಂಬಿಸಲಾಯಿತು. ಆದರೆ ಈಗ ಮಷೀನುಗಳೇ ಕಳ್ಳತನವಾಗುತ್ತಿವೆ. ಇಂತಹ ವಿಡಿಯೋಗಳು ಇದೀಗ ಸಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗುತ್ತಿದೆ. ಇಂತಹ ಕಳ್ಳತನಗಳಲ್ಲಿ ಈವರೆಗೂ ಬಿಜೆಪಿಗರ ಕೈವಾಡವಿರುವುದು ಮತ್ತೊಂದು ವಿಶೇಷವಾಗಿದೆ.

ಇದೇ ತಿಂಗಳ ಶುಕ್ರವಾರದಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ವಿಡಿಯೋದಲ್ಲಿ ರಾಜಸ್ಥಾನದ ಪಾಲಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಶಾಸಕ ಆಗಿರುವ ಗ್ಯಾನ್ ಚಂದ್ ಪಾರಾಖ್ ಅವರ ಮನೆಯಲ್ಲಿ ಇವಿಎಮ್ ಮಷೀನ್ ಗಳು ಸಿಕ್ಕಿದ್ದವು. ಸ್ಥಳೀಯ ವ್ಯಕ್ತಿಯೊಬ್ಬರು ಇದನ್ನು ವಿಡಿಯೋ ಮಾಡಿದ್ದರ ಪರಿಣಾಮವಾಗಿ ಈ ವಿಷಯ ಬೆಳಕಿದೆ ಬಂದಿದೆ. ಚುನಾವಣೆ ಆಯೋಗದ ಉಪ ಆಯುಕ್ತರಾದ ಸಂದೀಪ್ ಸಕ್ಸೇನ ಅವರು ಈ ಪ್ರಕರಣವನ್ನು ಒಪ್ಪಿಕೊಂಡಿದ್ದು ಇದರ ಮೇಲೆ ವಿಚಾರಣೆ ಮಾಡುವುದಾಗಿ ತಿಳಿಸಿದ್ದಾರೆ ಹಾಗೂ ಶಾಸಕರ ಮನೆಗೆ ಇವಿಎಮ್ ತಲುಪಿಸಿದ ಚುನಾವಣೆ ಅಧಿಕಾರಿಯನ್ನು ಅಮಾನತ್ತಿನಲ್ಲಿ ಇಟ್ಟಿರುವುದಾಗಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಇದೇ ರೀತಿಯಾದ 4 ಪ್ರಕರಣಗಳು ಮಧ್ಯಪ್ರದೇಶದಲ್ಲಿ ನಡೆದಿರುವುದು ವರದಿಯಾಗಿದೆ. ನವೆಂಬರ್ 27 ರಂದು ವೈರಲ್ ಆಗಿದ್ದ ಮತ್ತೊಂದು ವಿಡಿಯೋದಲ್ಲಿ ಸೋಹನ್ ಲಾಲ್ ಬಜಾಜ್ ಮತ್ತು ಮೂರು ಜನ ಚುನಾವಣಾಧಿಕಾರಿಗಳು ಇವಿಎಮ್ ಮಷೀನುಗಳನ್ನು ಮಧ್ಯಪ್ರದೇಶದ ಶಹಜಾಪುರ್ ಜಿಲ್ಲೆಯ ರಾಜ್ ಮಹಲ್ ಹೋಟೆಲ್ ನಲ್ಲಿ ಇರಿಸಿಕೊಂಡಿದ್ದರು. ಇದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರದಲ್ಲಿ, ಈ ಮಷೀನುಗಳು ಕಾರ್ಯ ಮಾಡುತ್ತಿಲ್ಲ, ನಮಗೆ ಒಳ್ಳೆಯ ಭಧ್ರತಾ ಕೊಠಡಿಗಳು ಇಲ್ಲ ಎಂಬ ಕಾರಣಗಳನ್ನು ನೀಡಿ ತಪ್ಪಿಸಿಕೊಳ್ಳುವ ಪ್ರಯತ್ನ ಮಾಡಿದ್ದಾರೆ.

ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ಖುರಾಯ್ ನಗರದಲ್ಲಿಯೂ ಚುನಾವಣೆ ನಡೆದ 48 ಗಂಟೆಗಳ ನಂತರದಲ್ಲಿ ಒಂದು ಅನಧಿಕೃತ ಖಾಸಗಿ ವಾಹನದಲ್ಲಿ (ಖಾಸಗಿ ಶಾಲಾ ಬಸ್ ಎಂದು ಹೇಳಲಾಗುತ್ತಿದೆ) 34 ಇವಿಎಮ್ ಮಷೀನ್ ಗಳು ಬಂದವು ಎಂದು ವರದಿಯಾಗಿದೆ.

ಅಲ್ಲದೆ ಛತ್ತೀಸ್ಗಢದಲ್ಲಿ 3 ಇವಿಎಮ್ ಪ್ರಕರಣಗಳು ಜರುಗಿವೆ.

ಅದರಲ್ಲಿ ಈಗಷ್ಟೇ ಬಿಸಿ ಸುದ್ದಿಯಲ್ಲಿರುವುದು ಬಸ್ತಾರ್ ವಲಯದ ಜಗ್ದಲ್ಪುರ್ ನಲ್ಲಿ ಇವಿಎಂ ಮಷೀನುಗಳನ್ನು ಇರಿಸಿದ್ದ ಭಧ್ರತಾ ಕೊಠಡಿಯಲ್ಲಿ ಇಬ್ಬರು ಅನಧಿಕೃತ ವ್ಯಕ್ತಿಗಳು ಸಿಕ್ಕಿಬಿದ್ದಿರೋದು. ಪೊಲೀಸರ ಕೈಗೆ ಸಿಕ್ಕು ಬಂಧನದಲ್ಲಿರುವ ಇವರು ಎ.ಎನ್.ಐ ಟೀಟ್ ನ ಪ್ರಕಾರ ಪೊಲೀಸರು ಇವರು ಜಿಯೋ (ರಿಲಯಾನ್ಸ್) ಕಂಪನಿಯ ನೌಕರರು (ಇದೇ ಜಿಯೋ ಕಂಪನಿಯ ಜಾಹೀರಾತಿಗೆ ಫೋಜು ಕೊಡುವಷ್ಟರ ಮಟ್ಟಿಗೆ ನಮ್ಮ ಪ್ರಧಾನಿ ಮೋದಿಯವರು ಆ ಕಂಪನಿಯ ಮಾಲೀಕ ಅಂಬಾನಿಗೆ ಆಪ್ತ ಗೆಳೆಯರು ಅನ್ನೋದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು) ಎಂದು ತಿಳಿಸಿದ್ದಾರೆ ಎನ್ನಲಾಗಿದೆ. ಅಧಿಕೃತ ಗುರುತಿನ ಚೀಟಿ ಇಲ್ಲದೆ ಯಾರೂ ಒಳಗೆ ಪ್ರವೇಶ ಮಾಡಲು ಸಾಧ್ಯವಿಲ್ಲ. ಆದರೆ ಇವರು ಹೇಗೆ ಒಳಗೆ ಬಂದರು ಎಂದು ನಮಗೆ ತಿಳಿಯುತ್ತಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಭಧ್ರತಾ ಕೊಠಡಿಯಲ್ಲಿ ಭದ್ರತೆ ಒದಗಿಸುತ್ತಿದ್ದ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಅಮಾನತ್ತು ಮಾಡಲಾಗಿದೆ.

ಈ ಘಟನೆ ನಡೆಯುವ ಒಂದು ದಿನದ ಹಿಂದೆಯಷ್ಟೇ ಛತ್ತಿಸ್ಗಢದ ಬೆಮೆತಾರ ಕ್ಷೇತ್ರದಲ್ಲಿ ಬಿ.ಎಸ್.ಎಫ್. ಭದ್ರತಾ ಆಧಿಕಾರಿ ವಿಕ್ರಮ್ ಕುಮಾರ್ ಮೆಹ್ರ ಎಂಬ ವ್ಯಕ್ತಿ ಅನಧಿಕೃತವಾಗಿ ಇವಿಎಂ ಮಷೀನುಗಳನ್ನು ಇರಿಸಿದ್ದ ಭದ್ರತಾ ಕೊಠಡಿಯ ಬಳಿ ಲ್ಯಾಪ್ ಟಾಪ್ ಅನ್ನು ಬಳಸಿದ್ದರು. ವಿರೋಧಪಕ್ಷ ಇದನ್ನು ವಿರೋಧಿಸಿ ಪ್ರತಿಭಟಿಸಿದ ನಂತರವೆ ಅಧಿಕಾರಿಯನ್ನು ಅಮಾನತ್ತು ಮಾಡಿದ್ದಾರೆ.

ಅಲ್ಲದೆ ಧಾಮತಾರಿ ಕ್ಷೇತ್ರದಲ್ಲಿ ಇವಿಎಮ್ ಮಷೀನುಗಳ್ಳಿದ್ದ ಭಧ್ರತಾ ಕೊಠಡಿಯಲ್ಲಿ ಇಬ್ಬರು ಅನಧಿಕೃತ ವ್ಯಕ್ತಿಗಳು ಇದ್ದದ್ದು ವರದಿಯಾಗಿದೆ.

ಇದಲ್ಲದೆ ಭೂಪಾಲ್ ನಲ್ಲಿ ಭದ್ರತಾ ಕೊಠಡಿಯಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಸಿಸಿ ಟಿವಿ ಕ್ಯಾಮರಾಗಳು ಆಫ್ ಆದ ಘಟನೆ ವರದಿಯಾಗಿದೆ.

ಒಟ್ಟಾರೆ ಮೊದಲಿಂದಲೂ ಇವಿಎಮ್ ವಿರೋಧಿಸಿ ಏಳುತ್ತಿರುವ ಪ್ರಶ್ನೆಗಳಿಗೆ ಪುಷ್ಠಿ ನೀಡುವಂತೆ ಈ ಮೇಲಿನ ಇತ್ತೀಚೆಗಿನ ಘಟನೆಗಳು ನಡೆಯುತ್ತಿವೆ. ಲೋಕ ಸಭಾ ಚುನಾವಣೆಗಳು ಹತ್ತಿರವಾಗುತ್ತಿರುವ ಸಂಧರ್ಭದಲ್ಲಿ ಇನ್ನಾದರು ಚುನಾವಣಾ ಆಯೋಗ ಇದರ ಬಗ್ಗೆ ಗಂಭೀರವಾಗಿ ಯೋಚಿಸಬೇಕಿದೆ. ಇದರ ಹಿಂದಿರುವ ದೊಡ್ಡ ಕೈಗಳನ್ನು ಬಯಲಿಗೆಳೆದು ಬಂಧಿಸಬೇಕಾಗಿದೆ. ಚುನಾವಣೆ ಆಯೋಗ-ಪೊಲೀಸ್ ಇಲಾಖೆ ಚಿಕ್ಕ ಕಳ್ಳರನ್ನು ಅಲ್ಲದೆ ದೊಡ್ಡ ಕಳ್ಳರನ್ನು ಬಂಧಿಸಿತ್ತಾರ ಎಂದು ಕಾದು ನೋಡಬೇಕಿದೆ. ಬಿಜೆಪಿಗಾಗಲಿ, ಮೋದಿಯವರಿಗಾಗಲಿ 2014ರಲ್ಲಿ ಇದ್ದ ಆತ್ಮವಿಶ್ವಾಸ 2019ರ ಚುನಾವಣೆಯ ಮೇಲೆ ಬಾರದಿರುವಂಥಾ ವಾತಾವರಣ ದೇಶದಲ್ಲಿ ಸೃಷ್ಟಿಯಾಗುತ್ತಿರುವ ಹೊತ್ತಿನಲ್ಲೇ ಇಂಥಾ ಇವಿಎಂ ಗೋಲ್ ಮಾಲ್ ಗಳು ಬಿಜೆಪಿ ಸುತ್ತಲೇ ದಟ್ಟೈಸುತ್ತಿಕೊಳ್ಳುತ್ತಿರೋದು ಜಸ್ಟ್ ಕಾಕತಾಳೀಯ ಅಂತ ಹೇಳೋದು ಕಷ್ಟ…..ಎಲ್ಲಾ ಕ್ಷೇತ್ರಗಳ ಎಲ್ಲಾ ಬೂತ್.ಗಳಲ್ಲೂ ಇಸು ನಡೆಯದೇ ಇರಬಹುದು. ಆದರೆ ಒಮ್ಮೆಗೇ ಇಷ್ಟು ಬೂತ್.ಗಳಲ್ಲಿ ಸಿಕ್ಕಿಹಾಕಿಕೊಂಡಿರುವುದು ಸಮಸ್ಯೆಯ ಗಂಭೀರತೆಯನ್ನು ತೋರಿಸುತ್ತದೆ. ಸೋಲಿನ ಭೀತಿಯ ಕಾರಣಕ್ಕೆ ಬಿಜೆಪಿ ಈ ಕೃತ್ಯಕ್ಕಿಳಿಯಿತಾ ಎಂಬ ಪ್ರಶ್ನೆಯೂ ಉದ್ಭವಿಸುತ್ತದೆ.

https://youtu.be/Rjr9VARzlWI

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...