Homeರಾಜಕೀಯಸೋಲುವ ಭೀತಿಯಲ್ಲಿ ಇವಿಎಂ ಯಂತ್ರಗಳಿಗೇ ಕನ್ನ ಹಾಕಿತೇ ಬಿಜೆಪಿ?

ಸೋಲುವ ಭೀತಿಯಲ್ಲಿ ಇವಿಎಂ ಯಂತ್ರಗಳಿಗೇ ಕನ್ನ ಹಾಕಿತೇ ಬಿಜೆಪಿ?

- Advertisement -
- Advertisement -

ಇ.ವಿ.ಎಮ್ ಬಂದ ಹೊಸತರಲ್ಲಿ ಅದನ್ನು ಹ್ಯಾಕ್ ಮಾಡಲು ಸಾಧ್ಯವಿಲ್ಲ, ಮೊದಲು ನಡೆಯುತ್ತಿದ್ದ ಚುನಾವಣೆ ಪ್ರಕ್ರಿಯೆಗಿಂತ ಎಲೆಕ್ಟ್ರಾನಿಕ್ ಓಟಿಂಗ್ ಮಷೀನ್ (ಇವಿಎಮ್) ನಿಂದ ಡಿಜಟಲೀಕರಣಗೊಂಡು ಹೆಚ್ಚು ನಂಬಿಕಾರ್ಹವಾಗಿರುತ್ತದೆ ಎಂದು ಹೇಳಲಾಗುತ್ತಿತ್ತು. ಅದನ್ನು ಹ್ಯಾಕ್ ಮಾಡಲು ಸಾಧ್ಯವಿಲ್ಲ ಎನ್ನುವ ಮಾತುಗಳನ್ನು ಚುನಾವಣೆ ಆಯೋಗವು ಹೇಳುತ್ತಿತ್ತು. ಆದರೆ ಈಗ ಇವಿಎಮ್ ಮಷೀನುಗಳೆ ಮಾಯವಾಗಿ ಖಾಸಗಿ ಹೋಟೆಲ್ ಗಳಲ್ಲಿ, ಎಂ.ಎಲ್.ಎ ಗಳ ಮನೆಗಳಲ್ಲಿ ಪ್ರತ್ಯಕ್ಷವಾಗುತ್ತಿದೆ. ಈ ಹಿಂದೆ ಯಾವುದೇ ಪಕ್ಷಕ್ಕೆ ಮತ ಹಾಕಿದರೂ ಬಿಜೆಪಿಗೇ ಮತಗಳು ಹೋಗುತ್ತಿದ್ದವು ಎನ್ನುವ ಆರೋಪಗಳು ಕೇಳಿಬರುತ್ತಿದ್ದವು. ಚಲಾಯಿಸಿದ ಮತಗಳು ಅಧಿಕೃತವಾಗಿದೆ ಎಂದು ಖಾತ್ರಿ ಮಾಡಿಕೊಳ್ಳಲು ವಿವಿ ಪ್ಯಾಟ್ ವ್ಯವಸ್ಥೆಯನ್ನು ತರಲಾಯಿತು. ಮತದಾರರನ್ನು ಹ್ಯಾಕ್ ಮಾಡಲು ಸಾಧ್ಯವೇ ಇಲ್ಲ ಎಂದು ನಂಬಿಸಲಾಯಿತು. ಆದರೆ ಈಗ ಮಷೀನುಗಳೇ ಕಳ್ಳತನವಾಗುತ್ತಿವೆ. ಇಂತಹ ವಿಡಿಯೋಗಳು ಇದೀಗ ಸಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗುತ್ತಿದೆ. ಇಂತಹ ಕಳ್ಳತನಗಳಲ್ಲಿ ಈವರೆಗೂ ಬಿಜೆಪಿಗರ ಕೈವಾಡವಿರುವುದು ಮತ್ತೊಂದು ವಿಶೇಷವಾಗಿದೆ.

ಇದೇ ತಿಂಗಳ ಶುಕ್ರವಾರದಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ವಿಡಿಯೋದಲ್ಲಿ ರಾಜಸ್ಥಾನದ ಪಾಲಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಶಾಸಕ ಆಗಿರುವ ಗ್ಯಾನ್ ಚಂದ್ ಪಾರಾಖ್ ಅವರ ಮನೆಯಲ್ಲಿ ಇವಿಎಮ್ ಮಷೀನ್ ಗಳು ಸಿಕ್ಕಿದ್ದವು. ಸ್ಥಳೀಯ ವ್ಯಕ್ತಿಯೊಬ್ಬರು ಇದನ್ನು ವಿಡಿಯೋ ಮಾಡಿದ್ದರ ಪರಿಣಾಮವಾಗಿ ಈ ವಿಷಯ ಬೆಳಕಿದೆ ಬಂದಿದೆ. ಚುನಾವಣೆ ಆಯೋಗದ ಉಪ ಆಯುಕ್ತರಾದ ಸಂದೀಪ್ ಸಕ್ಸೇನ ಅವರು ಈ ಪ್ರಕರಣವನ್ನು ಒಪ್ಪಿಕೊಂಡಿದ್ದು ಇದರ ಮೇಲೆ ವಿಚಾರಣೆ ಮಾಡುವುದಾಗಿ ತಿಳಿಸಿದ್ದಾರೆ ಹಾಗೂ ಶಾಸಕರ ಮನೆಗೆ ಇವಿಎಮ್ ತಲುಪಿಸಿದ ಚುನಾವಣೆ ಅಧಿಕಾರಿಯನ್ನು ಅಮಾನತ್ತಿನಲ್ಲಿ ಇಟ್ಟಿರುವುದಾಗಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಇದೇ ರೀತಿಯಾದ 4 ಪ್ರಕರಣಗಳು ಮಧ್ಯಪ್ರದೇಶದಲ್ಲಿ ನಡೆದಿರುವುದು ವರದಿಯಾಗಿದೆ. ನವೆಂಬರ್ 27 ರಂದು ವೈರಲ್ ಆಗಿದ್ದ ಮತ್ತೊಂದು ವಿಡಿಯೋದಲ್ಲಿ ಸೋಹನ್ ಲಾಲ್ ಬಜಾಜ್ ಮತ್ತು ಮೂರು ಜನ ಚುನಾವಣಾಧಿಕಾರಿಗಳು ಇವಿಎಮ್ ಮಷೀನುಗಳನ್ನು ಮಧ್ಯಪ್ರದೇಶದ ಶಹಜಾಪುರ್ ಜಿಲ್ಲೆಯ ರಾಜ್ ಮಹಲ್ ಹೋಟೆಲ್ ನಲ್ಲಿ ಇರಿಸಿಕೊಂಡಿದ್ದರು. ಇದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರದಲ್ಲಿ, ಈ ಮಷೀನುಗಳು ಕಾರ್ಯ ಮಾಡುತ್ತಿಲ್ಲ, ನಮಗೆ ಒಳ್ಳೆಯ ಭಧ್ರತಾ ಕೊಠಡಿಗಳು ಇಲ್ಲ ಎಂಬ ಕಾರಣಗಳನ್ನು ನೀಡಿ ತಪ್ಪಿಸಿಕೊಳ್ಳುವ ಪ್ರಯತ್ನ ಮಾಡಿದ್ದಾರೆ.

ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ಖುರಾಯ್ ನಗರದಲ್ಲಿಯೂ ಚುನಾವಣೆ ನಡೆದ 48 ಗಂಟೆಗಳ ನಂತರದಲ್ಲಿ ಒಂದು ಅನಧಿಕೃತ ಖಾಸಗಿ ವಾಹನದಲ್ಲಿ (ಖಾಸಗಿ ಶಾಲಾ ಬಸ್ ಎಂದು ಹೇಳಲಾಗುತ್ತಿದೆ) 34 ಇವಿಎಮ್ ಮಷೀನ್ ಗಳು ಬಂದವು ಎಂದು ವರದಿಯಾಗಿದೆ.

ಅಲ್ಲದೆ ಛತ್ತೀಸ್ಗಢದಲ್ಲಿ 3 ಇವಿಎಮ್ ಪ್ರಕರಣಗಳು ಜರುಗಿವೆ.

ಅದರಲ್ಲಿ ಈಗಷ್ಟೇ ಬಿಸಿ ಸುದ್ದಿಯಲ್ಲಿರುವುದು ಬಸ್ತಾರ್ ವಲಯದ ಜಗ್ದಲ್ಪುರ್ ನಲ್ಲಿ ಇವಿಎಂ ಮಷೀನುಗಳನ್ನು ಇರಿಸಿದ್ದ ಭಧ್ರತಾ ಕೊಠಡಿಯಲ್ಲಿ ಇಬ್ಬರು ಅನಧಿಕೃತ ವ್ಯಕ್ತಿಗಳು ಸಿಕ್ಕಿಬಿದ್ದಿರೋದು. ಪೊಲೀಸರ ಕೈಗೆ ಸಿಕ್ಕು ಬಂಧನದಲ್ಲಿರುವ ಇವರು ಎ.ಎನ್.ಐ ಟೀಟ್ ನ ಪ್ರಕಾರ ಪೊಲೀಸರು ಇವರು ಜಿಯೋ (ರಿಲಯಾನ್ಸ್) ಕಂಪನಿಯ ನೌಕರರು (ಇದೇ ಜಿಯೋ ಕಂಪನಿಯ ಜಾಹೀರಾತಿಗೆ ಫೋಜು ಕೊಡುವಷ್ಟರ ಮಟ್ಟಿಗೆ ನಮ್ಮ ಪ್ರಧಾನಿ ಮೋದಿಯವರು ಆ ಕಂಪನಿಯ ಮಾಲೀಕ ಅಂಬಾನಿಗೆ ಆಪ್ತ ಗೆಳೆಯರು ಅನ್ನೋದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು) ಎಂದು ತಿಳಿಸಿದ್ದಾರೆ ಎನ್ನಲಾಗಿದೆ. ಅಧಿಕೃತ ಗುರುತಿನ ಚೀಟಿ ಇಲ್ಲದೆ ಯಾರೂ ಒಳಗೆ ಪ್ರವೇಶ ಮಾಡಲು ಸಾಧ್ಯವಿಲ್ಲ. ಆದರೆ ಇವರು ಹೇಗೆ ಒಳಗೆ ಬಂದರು ಎಂದು ನಮಗೆ ತಿಳಿಯುತ್ತಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಭಧ್ರತಾ ಕೊಠಡಿಯಲ್ಲಿ ಭದ್ರತೆ ಒದಗಿಸುತ್ತಿದ್ದ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಅಮಾನತ್ತು ಮಾಡಲಾಗಿದೆ.

ಈ ಘಟನೆ ನಡೆಯುವ ಒಂದು ದಿನದ ಹಿಂದೆಯಷ್ಟೇ ಛತ್ತಿಸ್ಗಢದ ಬೆಮೆತಾರ ಕ್ಷೇತ್ರದಲ್ಲಿ ಬಿ.ಎಸ್.ಎಫ್. ಭದ್ರತಾ ಆಧಿಕಾರಿ ವಿಕ್ರಮ್ ಕುಮಾರ್ ಮೆಹ್ರ ಎಂಬ ವ್ಯಕ್ತಿ ಅನಧಿಕೃತವಾಗಿ ಇವಿಎಂ ಮಷೀನುಗಳನ್ನು ಇರಿಸಿದ್ದ ಭದ್ರತಾ ಕೊಠಡಿಯ ಬಳಿ ಲ್ಯಾಪ್ ಟಾಪ್ ಅನ್ನು ಬಳಸಿದ್ದರು. ವಿರೋಧಪಕ್ಷ ಇದನ್ನು ವಿರೋಧಿಸಿ ಪ್ರತಿಭಟಿಸಿದ ನಂತರವೆ ಅಧಿಕಾರಿಯನ್ನು ಅಮಾನತ್ತು ಮಾಡಿದ್ದಾರೆ.

ಅಲ್ಲದೆ ಧಾಮತಾರಿ ಕ್ಷೇತ್ರದಲ್ಲಿ ಇವಿಎಮ್ ಮಷೀನುಗಳ್ಳಿದ್ದ ಭಧ್ರತಾ ಕೊಠಡಿಯಲ್ಲಿ ಇಬ್ಬರು ಅನಧಿಕೃತ ವ್ಯಕ್ತಿಗಳು ಇದ್ದದ್ದು ವರದಿಯಾಗಿದೆ.

ಇದಲ್ಲದೆ ಭೂಪಾಲ್ ನಲ್ಲಿ ಭದ್ರತಾ ಕೊಠಡಿಯಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಸಿಸಿ ಟಿವಿ ಕ್ಯಾಮರಾಗಳು ಆಫ್ ಆದ ಘಟನೆ ವರದಿಯಾಗಿದೆ.

ಒಟ್ಟಾರೆ ಮೊದಲಿಂದಲೂ ಇವಿಎಮ್ ವಿರೋಧಿಸಿ ಏಳುತ್ತಿರುವ ಪ್ರಶ್ನೆಗಳಿಗೆ ಪುಷ್ಠಿ ನೀಡುವಂತೆ ಈ ಮೇಲಿನ ಇತ್ತೀಚೆಗಿನ ಘಟನೆಗಳು ನಡೆಯುತ್ತಿವೆ. ಲೋಕ ಸಭಾ ಚುನಾವಣೆಗಳು ಹತ್ತಿರವಾಗುತ್ತಿರುವ ಸಂಧರ್ಭದಲ್ಲಿ ಇನ್ನಾದರು ಚುನಾವಣಾ ಆಯೋಗ ಇದರ ಬಗ್ಗೆ ಗಂಭೀರವಾಗಿ ಯೋಚಿಸಬೇಕಿದೆ. ಇದರ ಹಿಂದಿರುವ ದೊಡ್ಡ ಕೈಗಳನ್ನು ಬಯಲಿಗೆಳೆದು ಬಂಧಿಸಬೇಕಾಗಿದೆ. ಚುನಾವಣೆ ಆಯೋಗ-ಪೊಲೀಸ್ ಇಲಾಖೆ ಚಿಕ್ಕ ಕಳ್ಳರನ್ನು ಅಲ್ಲದೆ ದೊಡ್ಡ ಕಳ್ಳರನ್ನು ಬಂಧಿಸಿತ್ತಾರ ಎಂದು ಕಾದು ನೋಡಬೇಕಿದೆ. ಬಿಜೆಪಿಗಾಗಲಿ, ಮೋದಿಯವರಿಗಾಗಲಿ 2014ರಲ್ಲಿ ಇದ್ದ ಆತ್ಮವಿಶ್ವಾಸ 2019ರ ಚುನಾವಣೆಯ ಮೇಲೆ ಬಾರದಿರುವಂಥಾ ವಾತಾವರಣ ದೇಶದಲ್ಲಿ ಸೃಷ್ಟಿಯಾಗುತ್ತಿರುವ ಹೊತ್ತಿನಲ್ಲೇ ಇಂಥಾ ಇವಿಎಂ ಗೋಲ್ ಮಾಲ್ ಗಳು ಬಿಜೆಪಿ ಸುತ್ತಲೇ ದಟ್ಟೈಸುತ್ತಿಕೊಳ್ಳುತ್ತಿರೋದು ಜಸ್ಟ್ ಕಾಕತಾಳೀಯ ಅಂತ ಹೇಳೋದು ಕಷ್ಟ…..ಎಲ್ಲಾ ಕ್ಷೇತ್ರಗಳ ಎಲ್ಲಾ ಬೂತ್.ಗಳಲ್ಲೂ ಇಸು ನಡೆಯದೇ ಇರಬಹುದು. ಆದರೆ ಒಮ್ಮೆಗೇ ಇಷ್ಟು ಬೂತ್.ಗಳಲ್ಲಿ ಸಿಕ್ಕಿಹಾಕಿಕೊಂಡಿರುವುದು ಸಮಸ್ಯೆಯ ಗಂಭೀರತೆಯನ್ನು ತೋರಿಸುತ್ತದೆ. ಸೋಲಿನ ಭೀತಿಯ ಕಾರಣಕ್ಕೆ ಬಿಜೆಪಿ ಈ ಕೃತ್ಯಕ್ಕಿಳಿಯಿತಾ ಎಂಬ ಪ್ರಶ್ನೆಯೂ ಉದ್ಭವಿಸುತ್ತದೆ.

https://youtu.be/Rjr9VARzlWI

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...