Homeರಾಜಕೀಯಸೋಲುವ ಭೀತಿಯಲ್ಲಿ ಇವಿಎಂ ಯಂತ್ರಗಳಿಗೇ ಕನ್ನ ಹಾಕಿತೇ ಬಿಜೆಪಿ?

ಸೋಲುವ ಭೀತಿಯಲ್ಲಿ ಇವಿಎಂ ಯಂತ್ರಗಳಿಗೇ ಕನ್ನ ಹಾಕಿತೇ ಬಿಜೆಪಿ?

- Advertisement -
- Advertisement -

ಇ.ವಿ.ಎಮ್ ಬಂದ ಹೊಸತರಲ್ಲಿ ಅದನ್ನು ಹ್ಯಾಕ್ ಮಾಡಲು ಸಾಧ್ಯವಿಲ್ಲ, ಮೊದಲು ನಡೆಯುತ್ತಿದ್ದ ಚುನಾವಣೆ ಪ್ರಕ್ರಿಯೆಗಿಂತ ಎಲೆಕ್ಟ್ರಾನಿಕ್ ಓಟಿಂಗ್ ಮಷೀನ್ (ಇವಿಎಮ್) ನಿಂದ ಡಿಜಟಲೀಕರಣಗೊಂಡು ಹೆಚ್ಚು ನಂಬಿಕಾರ್ಹವಾಗಿರುತ್ತದೆ ಎಂದು ಹೇಳಲಾಗುತ್ತಿತ್ತು. ಅದನ್ನು ಹ್ಯಾಕ್ ಮಾಡಲು ಸಾಧ್ಯವಿಲ್ಲ ಎನ್ನುವ ಮಾತುಗಳನ್ನು ಚುನಾವಣೆ ಆಯೋಗವು ಹೇಳುತ್ತಿತ್ತು. ಆದರೆ ಈಗ ಇವಿಎಮ್ ಮಷೀನುಗಳೆ ಮಾಯವಾಗಿ ಖಾಸಗಿ ಹೋಟೆಲ್ ಗಳಲ್ಲಿ, ಎಂ.ಎಲ್.ಎ ಗಳ ಮನೆಗಳಲ್ಲಿ ಪ್ರತ್ಯಕ್ಷವಾಗುತ್ತಿದೆ. ಈ ಹಿಂದೆ ಯಾವುದೇ ಪಕ್ಷಕ್ಕೆ ಮತ ಹಾಕಿದರೂ ಬಿಜೆಪಿಗೇ ಮತಗಳು ಹೋಗುತ್ತಿದ್ದವು ಎನ್ನುವ ಆರೋಪಗಳು ಕೇಳಿಬರುತ್ತಿದ್ದವು. ಚಲಾಯಿಸಿದ ಮತಗಳು ಅಧಿಕೃತವಾಗಿದೆ ಎಂದು ಖಾತ್ರಿ ಮಾಡಿಕೊಳ್ಳಲು ವಿವಿ ಪ್ಯಾಟ್ ವ್ಯವಸ್ಥೆಯನ್ನು ತರಲಾಯಿತು. ಮತದಾರರನ್ನು ಹ್ಯಾಕ್ ಮಾಡಲು ಸಾಧ್ಯವೇ ಇಲ್ಲ ಎಂದು ನಂಬಿಸಲಾಯಿತು. ಆದರೆ ಈಗ ಮಷೀನುಗಳೇ ಕಳ್ಳತನವಾಗುತ್ತಿವೆ. ಇಂತಹ ವಿಡಿಯೋಗಳು ಇದೀಗ ಸಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗುತ್ತಿದೆ. ಇಂತಹ ಕಳ್ಳತನಗಳಲ್ಲಿ ಈವರೆಗೂ ಬಿಜೆಪಿಗರ ಕೈವಾಡವಿರುವುದು ಮತ್ತೊಂದು ವಿಶೇಷವಾಗಿದೆ.

ಇದೇ ತಿಂಗಳ ಶುಕ್ರವಾರದಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ವಿಡಿಯೋದಲ್ಲಿ ರಾಜಸ್ಥಾನದ ಪಾಲಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಶಾಸಕ ಆಗಿರುವ ಗ್ಯಾನ್ ಚಂದ್ ಪಾರಾಖ್ ಅವರ ಮನೆಯಲ್ಲಿ ಇವಿಎಮ್ ಮಷೀನ್ ಗಳು ಸಿಕ್ಕಿದ್ದವು. ಸ್ಥಳೀಯ ವ್ಯಕ್ತಿಯೊಬ್ಬರು ಇದನ್ನು ವಿಡಿಯೋ ಮಾಡಿದ್ದರ ಪರಿಣಾಮವಾಗಿ ಈ ವಿಷಯ ಬೆಳಕಿದೆ ಬಂದಿದೆ. ಚುನಾವಣೆ ಆಯೋಗದ ಉಪ ಆಯುಕ್ತರಾದ ಸಂದೀಪ್ ಸಕ್ಸೇನ ಅವರು ಈ ಪ್ರಕರಣವನ್ನು ಒಪ್ಪಿಕೊಂಡಿದ್ದು ಇದರ ಮೇಲೆ ವಿಚಾರಣೆ ಮಾಡುವುದಾಗಿ ತಿಳಿಸಿದ್ದಾರೆ ಹಾಗೂ ಶಾಸಕರ ಮನೆಗೆ ಇವಿಎಮ್ ತಲುಪಿಸಿದ ಚುನಾವಣೆ ಅಧಿಕಾರಿಯನ್ನು ಅಮಾನತ್ತಿನಲ್ಲಿ ಇಟ್ಟಿರುವುದಾಗಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಇದೇ ರೀತಿಯಾದ 4 ಪ್ರಕರಣಗಳು ಮಧ್ಯಪ್ರದೇಶದಲ್ಲಿ ನಡೆದಿರುವುದು ವರದಿಯಾಗಿದೆ. ನವೆಂಬರ್ 27 ರಂದು ವೈರಲ್ ಆಗಿದ್ದ ಮತ್ತೊಂದು ವಿಡಿಯೋದಲ್ಲಿ ಸೋಹನ್ ಲಾಲ್ ಬಜಾಜ್ ಮತ್ತು ಮೂರು ಜನ ಚುನಾವಣಾಧಿಕಾರಿಗಳು ಇವಿಎಮ್ ಮಷೀನುಗಳನ್ನು ಮಧ್ಯಪ್ರದೇಶದ ಶಹಜಾಪುರ್ ಜಿಲ್ಲೆಯ ರಾಜ್ ಮಹಲ್ ಹೋಟೆಲ್ ನಲ್ಲಿ ಇರಿಸಿಕೊಂಡಿದ್ದರು. ಇದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರದಲ್ಲಿ, ಈ ಮಷೀನುಗಳು ಕಾರ್ಯ ಮಾಡುತ್ತಿಲ್ಲ, ನಮಗೆ ಒಳ್ಳೆಯ ಭಧ್ರತಾ ಕೊಠಡಿಗಳು ಇಲ್ಲ ಎಂಬ ಕಾರಣಗಳನ್ನು ನೀಡಿ ತಪ್ಪಿಸಿಕೊಳ್ಳುವ ಪ್ರಯತ್ನ ಮಾಡಿದ್ದಾರೆ.

ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ಖುರಾಯ್ ನಗರದಲ್ಲಿಯೂ ಚುನಾವಣೆ ನಡೆದ 48 ಗಂಟೆಗಳ ನಂತರದಲ್ಲಿ ಒಂದು ಅನಧಿಕೃತ ಖಾಸಗಿ ವಾಹನದಲ್ಲಿ (ಖಾಸಗಿ ಶಾಲಾ ಬಸ್ ಎಂದು ಹೇಳಲಾಗುತ್ತಿದೆ) 34 ಇವಿಎಮ್ ಮಷೀನ್ ಗಳು ಬಂದವು ಎಂದು ವರದಿಯಾಗಿದೆ.

ಅಲ್ಲದೆ ಛತ್ತೀಸ್ಗಢದಲ್ಲಿ 3 ಇವಿಎಮ್ ಪ್ರಕರಣಗಳು ಜರುಗಿವೆ.

ಅದರಲ್ಲಿ ಈಗಷ್ಟೇ ಬಿಸಿ ಸುದ್ದಿಯಲ್ಲಿರುವುದು ಬಸ್ತಾರ್ ವಲಯದ ಜಗ್ದಲ್ಪುರ್ ನಲ್ಲಿ ಇವಿಎಂ ಮಷೀನುಗಳನ್ನು ಇರಿಸಿದ್ದ ಭಧ್ರತಾ ಕೊಠಡಿಯಲ್ಲಿ ಇಬ್ಬರು ಅನಧಿಕೃತ ವ್ಯಕ್ತಿಗಳು ಸಿಕ್ಕಿಬಿದ್ದಿರೋದು. ಪೊಲೀಸರ ಕೈಗೆ ಸಿಕ್ಕು ಬಂಧನದಲ್ಲಿರುವ ಇವರು ಎ.ಎನ್.ಐ ಟೀಟ್ ನ ಪ್ರಕಾರ ಪೊಲೀಸರು ಇವರು ಜಿಯೋ (ರಿಲಯಾನ್ಸ್) ಕಂಪನಿಯ ನೌಕರರು (ಇದೇ ಜಿಯೋ ಕಂಪನಿಯ ಜಾಹೀರಾತಿಗೆ ಫೋಜು ಕೊಡುವಷ್ಟರ ಮಟ್ಟಿಗೆ ನಮ್ಮ ಪ್ರಧಾನಿ ಮೋದಿಯವರು ಆ ಕಂಪನಿಯ ಮಾಲೀಕ ಅಂಬಾನಿಗೆ ಆಪ್ತ ಗೆಳೆಯರು ಅನ್ನೋದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು) ಎಂದು ತಿಳಿಸಿದ್ದಾರೆ ಎನ್ನಲಾಗಿದೆ. ಅಧಿಕೃತ ಗುರುತಿನ ಚೀಟಿ ಇಲ್ಲದೆ ಯಾರೂ ಒಳಗೆ ಪ್ರವೇಶ ಮಾಡಲು ಸಾಧ್ಯವಿಲ್ಲ. ಆದರೆ ಇವರು ಹೇಗೆ ಒಳಗೆ ಬಂದರು ಎಂದು ನಮಗೆ ತಿಳಿಯುತ್ತಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಭಧ್ರತಾ ಕೊಠಡಿಯಲ್ಲಿ ಭದ್ರತೆ ಒದಗಿಸುತ್ತಿದ್ದ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಅಮಾನತ್ತು ಮಾಡಲಾಗಿದೆ.

ಈ ಘಟನೆ ನಡೆಯುವ ಒಂದು ದಿನದ ಹಿಂದೆಯಷ್ಟೇ ಛತ್ತಿಸ್ಗಢದ ಬೆಮೆತಾರ ಕ್ಷೇತ್ರದಲ್ಲಿ ಬಿ.ಎಸ್.ಎಫ್. ಭದ್ರತಾ ಆಧಿಕಾರಿ ವಿಕ್ರಮ್ ಕುಮಾರ್ ಮೆಹ್ರ ಎಂಬ ವ್ಯಕ್ತಿ ಅನಧಿಕೃತವಾಗಿ ಇವಿಎಂ ಮಷೀನುಗಳನ್ನು ಇರಿಸಿದ್ದ ಭದ್ರತಾ ಕೊಠಡಿಯ ಬಳಿ ಲ್ಯಾಪ್ ಟಾಪ್ ಅನ್ನು ಬಳಸಿದ್ದರು. ವಿರೋಧಪಕ್ಷ ಇದನ್ನು ವಿರೋಧಿಸಿ ಪ್ರತಿಭಟಿಸಿದ ನಂತರವೆ ಅಧಿಕಾರಿಯನ್ನು ಅಮಾನತ್ತು ಮಾಡಿದ್ದಾರೆ.

ಅಲ್ಲದೆ ಧಾಮತಾರಿ ಕ್ಷೇತ್ರದಲ್ಲಿ ಇವಿಎಮ್ ಮಷೀನುಗಳ್ಳಿದ್ದ ಭಧ್ರತಾ ಕೊಠಡಿಯಲ್ಲಿ ಇಬ್ಬರು ಅನಧಿಕೃತ ವ್ಯಕ್ತಿಗಳು ಇದ್ದದ್ದು ವರದಿಯಾಗಿದೆ.

ಇದಲ್ಲದೆ ಭೂಪಾಲ್ ನಲ್ಲಿ ಭದ್ರತಾ ಕೊಠಡಿಯಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಸಿಸಿ ಟಿವಿ ಕ್ಯಾಮರಾಗಳು ಆಫ್ ಆದ ಘಟನೆ ವರದಿಯಾಗಿದೆ.

ಒಟ್ಟಾರೆ ಮೊದಲಿಂದಲೂ ಇವಿಎಮ್ ವಿರೋಧಿಸಿ ಏಳುತ್ತಿರುವ ಪ್ರಶ್ನೆಗಳಿಗೆ ಪುಷ್ಠಿ ನೀಡುವಂತೆ ಈ ಮೇಲಿನ ಇತ್ತೀಚೆಗಿನ ಘಟನೆಗಳು ನಡೆಯುತ್ತಿವೆ. ಲೋಕ ಸಭಾ ಚುನಾವಣೆಗಳು ಹತ್ತಿರವಾಗುತ್ತಿರುವ ಸಂಧರ್ಭದಲ್ಲಿ ಇನ್ನಾದರು ಚುನಾವಣಾ ಆಯೋಗ ಇದರ ಬಗ್ಗೆ ಗಂಭೀರವಾಗಿ ಯೋಚಿಸಬೇಕಿದೆ. ಇದರ ಹಿಂದಿರುವ ದೊಡ್ಡ ಕೈಗಳನ್ನು ಬಯಲಿಗೆಳೆದು ಬಂಧಿಸಬೇಕಾಗಿದೆ. ಚುನಾವಣೆ ಆಯೋಗ-ಪೊಲೀಸ್ ಇಲಾಖೆ ಚಿಕ್ಕ ಕಳ್ಳರನ್ನು ಅಲ್ಲದೆ ದೊಡ್ಡ ಕಳ್ಳರನ್ನು ಬಂಧಿಸಿತ್ತಾರ ಎಂದು ಕಾದು ನೋಡಬೇಕಿದೆ. ಬಿಜೆಪಿಗಾಗಲಿ, ಮೋದಿಯವರಿಗಾಗಲಿ 2014ರಲ್ಲಿ ಇದ್ದ ಆತ್ಮವಿಶ್ವಾಸ 2019ರ ಚುನಾವಣೆಯ ಮೇಲೆ ಬಾರದಿರುವಂಥಾ ವಾತಾವರಣ ದೇಶದಲ್ಲಿ ಸೃಷ್ಟಿಯಾಗುತ್ತಿರುವ ಹೊತ್ತಿನಲ್ಲೇ ಇಂಥಾ ಇವಿಎಂ ಗೋಲ್ ಮಾಲ್ ಗಳು ಬಿಜೆಪಿ ಸುತ್ತಲೇ ದಟ್ಟೈಸುತ್ತಿಕೊಳ್ಳುತ್ತಿರೋದು ಜಸ್ಟ್ ಕಾಕತಾಳೀಯ ಅಂತ ಹೇಳೋದು ಕಷ್ಟ…..ಎಲ್ಲಾ ಕ್ಷೇತ್ರಗಳ ಎಲ್ಲಾ ಬೂತ್.ಗಳಲ್ಲೂ ಇಸು ನಡೆಯದೇ ಇರಬಹುದು. ಆದರೆ ಒಮ್ಮೆಗೇ ಇಷ್ಟು ಬೂತ್.ಗಳಲ್ಲಿ ಸಿಕ್ಕಿಹಾಕಿಕೊಂಡಿರುವುದು ಸಮಸ್ಯೆಯ ಗಂಭೀರತೆಯನ್ನು ತೋರಿಸುತ್ತದೆ. ಸೋಲಿನ ಭೀತಿಯ ಕಾರಣಕ್ಕೆ ಬಿಜೆಪಿ ಈ ಕೃತ್ಯಕ್ಕಿಳಿಯಿತಾ ಎಂಬ ಪ್ರಶ್ನೆಯೂ ಉದ್ಭವಿಸುತ್ತದೆ.

https://youtu.be/Rjr9VARzlWI

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...