Homeಕರ್ನಾಟಕಸ್ಥಳೀಯ ಸಂಸ್ಥೆಗಳ ಚುನಾವಣೆ: ಮೇಲುಗೈ ಕಾಯ್ದುಕೊಂಡ ಕಾಂಗ್ರೆಸ್

ಸ್ಥಳೀಯ ಸಂಸ್ಥೆಗಳ ಚುನಾವಣೆ: ಮೇಲುಗೈ ಕಾಯ್ದುಕೊಂಡ ಕಾಂಗ್ರೆಸ್

ಸ್ಥಳೀಯ ಸಂಸ್ಥೆಗಳ ಚುನಾವಣೆ ಸ್ಥಳೀಯ ನಾಯಕತ್ವದ ಆಧಾರದಲ್ಲಿ ನಡೆಯುತ್ತದೆ

- Advertisement -
- Advertisement -

| ನಾನುಗೌರಿ ಡೆಸ್ಕ್ |

ಎರಡು ಹಂತದ ಮತ ಎಣಿಕೆ ಮುಕ್ತಾಯವಾಗಿದ್ದು ಕಾಂಗ್ರೆಸ್ ಅತಿ ಹೆಚ್ಚು ಸ್ಥಾನಗಳಲ್ಲಿ ಜಯಗಳಿಸಿದೆ. ಪುರಸಭೆ, ಪಟ್ಟಣ ಪಂಚಾಯತ್ ಮತ್ತು ನಗರಸಭೆ ಸೇರಿದಂತೆ ಇದುವರೆಗೆ ಒಟ್ಟು 1361 ಕ್ಷೇತ್ರಗಳಲ್ಲಿ ಕಾಂಗ್ರೆಸ್ 562 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದರೆ ಬಿಜೆಪಿ 406 ಕಡೆ ಗೆಲುವಿನ ನಗೆ ಬೀರಿದೆ. ಇನ್ನು ಜೆಡಿಎಸ್ 202 ಬಿಎಸ್‍ಪಿ 04, ಸಿಪಿಎಂ 02 ಮತ್ತು ಇತರರು 172 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದಾರೆ.

 

ಲೋಕಸಭಾ ಚುನಾವಣೆಯ ಫಲಿತಾಂಶ ಬಂದು ಒಂದು ಕೆಲವು ದಿನಗಳಷ್ಟೇ ಆಗಿದೆ. ಬಿಜೆಪಿ ಭರ್ಜರಿ ಜಯದ, ನೂತನ ಸಚಿವರ ಪ್ರಮಾಣ ವಚನದ ಸಂಭ್ರಮದಲ್ಲಿದ್ದರೆ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಇನ್ನು ಸೋಲಿನ ಸುಳಿಯಿಂದ ಹೊರಬಂದಿಲ್ಲ. ಇದರ ನಡುವೆಯೇ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಫಲಿತಾಂಶ ಹೊರಬಿದಿದ್ದು ಅಚ್ಚರಿಯ ರೀತಿಯಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದರೆ ಬಿಜೆಪಿ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ.

ಮೇ 23ರಂದು ಲೋಕಸಭಾ ಚುನಾವಣಾ ಫಲಿತಾಂಶ ಬಂದ ನಂತರ ಬಿಜೆಪಿ ಕಾರ್ಯಕರ್ತರ ಉತ್ಸಾಹ ಮುಗಿಲು ಮುಟ್ಟಿತ್ತು. ಕಾಂಗ್ರೆಸ್ ಮುಕ್ತ ಭಾರತಕ್ಕೆ ಎರಡೇ ಗೇಣು ಎಂಬ ಖುಷಿಯಲ್ಲಿರುವಾಗಲೇ ಈ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಅವರಿಗೆ ಸಣ್ಣ ಮಟ್ಟಿಗಿನ ಶಾಕ್ ಕೊಟ್ಟಾಂತಾಗಿದೆ.

ಒಟ್ಟಾರೆ ನೋಡಿದರೆ ಕಾಂಗ್ರೆಸ್ ಹೆಚ್ಚು ಸ್ಥಾನಗಳಲ್ಲಿ ಜಯಗಳಿಸಿದೆ. ಜೆಡಿಎಸ್ ಸಹ ಗಮನಾರ್ಹ ಸಾಧನೆ ಮಾಡಿದೆ. ಇದು ಒಂದು ರೀತಿಯಲ್ಲಿ ಸಾಮಾನ್ಯ ಸಂಗತಿಯೇ ಹೌದು ಇದರಲ್ಲಿ ಆಶ್ಚರ್ಯಪಡಬೇಕಾದುದ್ದೇನು ಇಲ್ಲ. ಏಕೆಂದರೆ ಜನ ಯೋಚಿಸುವ, ಮತ ಹಾಕುವ ರೀತಿಯೇ ಹಾಗೆ.

ರಾಜಸ್ಥಾನ ಅಸೆಂಬ್ಲಿಯಲ್ಲಿ ಒಟ್ಟು 199 ಸ್ಥಾನಗಳಲ್ಲಿ ಹೆಚ್ಚು ಕಮ್ಮಿ 100 ಸ್ಥಾನಗಳನ್ನು ಕಾಂಗ್ರೆಸ್ ಗೆದ್ದು ಅಧಿಕಾರ ಹಿಡಿದಿದೆ. ಆದರೆ ಲೋಕಸಭಾ ಚುನಾವಣೆಯಲ್ಲಿ ಒಟ್ಟು 25 ಕ್ಷೇತ್ರಗಳಲ್ಲಿ ಒಂದನ್ನು ಗೆಲ್ಲಲಾಗಲಿಲ್ಲ. ಗುಜರಾತ್, ಮಧ್ಯಪ್ರದೇಶದಲ್ಲಿಯೂ ಹೆಚ್ಚು ಕಡಿಮೆ ಅದೇ ಪರಿಸ್ಥಿತಿ ಇದೆ.

2014ರ ಲೋಕಸಭಾ ಚುನಾವಣೆಯಲ್ಲಿ ದೆಹಲಿಯಲ್ಲಿ 7ಕ್ಕೆ 7ಸೀಟುಗಳನ್ನು ಬಿಜೆಪಿ ಗೆದ್ದ 8 ತಿಂಗಳಲ್ಲೇ ದೆಹಲಿಯ 70 ವಿಧಾನಸಭಾ ಕ್ಷೇತ್ರಗಳ ಪೈಕಿ ಆಮ್ ಆದ್ಮಿ ಪಕ್ಷ 67ನ್ನು ಗೆದ್ದುಕೊಂಡು ಅಪೂರ್ವ ಸಾಧನೆ ಮಾಡಿತು. ಅಲ್ಲಿ ಬಿಜೆಪಿ ಕೇವಲ 03 ಸ್ಥಾನಕಷ್ಟೇ ಸೀಮಿತವಾಯಿತು. ಮತ್ತೆ 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅದೇ ಸಾಧನೆ ಮಾಡಿ 7ಕ್ಕೆ 7ಸೀಟುಗಳನ್ನು ತನ್ನ ಬುಟ್ಟಿಗೆ ಹಾಕಿಕೊಂಡಿದೆ. ಇನ್ನು 8 ತಿಂಗಳಲ್ಲೇ ವಿಧಾನಸಭಾ ಚುನಾವಣೆಯಿದೆ. ಅಲ್ಲಿಯ ಮತದಾರರು ವಿಧಾನಸಭೆಯ ಚುನಾವಣೆಯಲ್ಲಿ ಆಪ್ ಗೆ ಮತ ಹಾಕುತ್ತೇವೆ, ಆದರೆ ಲೋಕಸಭೆಯಲ್ಲಿ ಮಾತ್ರ ನಮ್ಮ ಮತ ಬಿಜೆಪಿಗೆ ಎಂದು ಬಹಿರಂಗವಾಗಿ ಹೇಳುತ್ತಾರೆ.

ಪ್ರತಿ ಚುನಾವಣೆಗಳಿಗೂ ವ್ಯತ್ಯಾಸವಿರುತ್ತದೆ ಮತ್ತು ಬೇರೆ ಬೇರೆ ಸಂದರ್ಭಕ್ಕನುಗುಣವಾಗಿ ಚುನಾವಣೆಗಳಿಗೆ ಮತದಾರರು ಪ್ರತಿಕ್ರಿಯಿಸುತ್ತಾರೆ. ಲೋಕಸಭಾ ಚುನಾವಣೆ ರಾಷ್ಟ್ರೀಯ ಚುನಾವಣೆಯಾದ್ದರಿಂದ ಜನ ಅಲ್ಲಿನ ಬಲಿಷ್ಠ ನಾಯಕತ್ವ, ಅವರ ಘೋಷಣೆಗಳಿಗೆ ಮಾರು ಹೋಗುತ್ತಾರೆ. ವಿಧಾನ ಸಭಾ ಚುನಾವಣೆಗಳಲ್ಲಿ ರಾಜ್ಯದ ಹಿತಾಸಕ್ತಿಗೆ ಯಾರು ಪೂರಕ ಎಂಬುದರ ಜೊತೆಗೆ ಚುನಾವಣೆಗಳು ನಡೆದರೆ ಸ್ಥಳೀಯ ಸಂಸ್ಥೆಗಳ ಚುನಾವಣೆ ಸ್ಥಳೀಯ ನಾಯಕತ್ವದ ಆಧಾರದಲ್ಲಿ ನಡೆಯುತ್ತದೆ. ಇಲ್ಲಿ ಪರಸ್ಪರರ ಸಂಬಂಧಗಳು, ಜಾತಿ, ಹಣ, ಪ್ರಭಾವ ಕೆಲಸ ಮಾಡುತ್ತದೆ.

ಇನ್ನು ಕೆಲವು ಮಾಧ್ಯಮಗಳು ಬೆಳಿಗ್ಗೆ ಇಂದಿನ ಫಲಿತಾಂಶ ತೋರಿಸಲು ನಿರಾಸಕ್ತಿ ವಹಿಸಿದ್ದವು. ಬೆಳಿಗ್ಗೆ ಸ್ಕ್ರೋಲ್ ಗಳಲ್ಲಿ ಈ ಸುದ್ದಿ ಕಾಣಿಸಿಕೊಂಡರು, ಕಾಂಗ್ರೆಸ್ ಹೆಚ್ಚು ಸೀಟು ಗಳಿಸುತ್ತಿದ್ದಂತೆ ನಿಧಾನಕ್ಕೆ ಸುಮ್ಮನಾಗಿವೆ. ಕೆಲ ಕಾಂಗ್ರೆಸ್ ಕಾರ್ಯಕರ್ತರು ಈ ಫಲಿತಾಂಶದಿಂದ ವಿಶ್ವಾಸ ಪಡೆದುಕೊಂಡು ನಮ್ಮ ಕಾಲ ಮುಗಿದಿಲ್ಲ ಎಂದು ಉಚ್ಛರಿಸಿದ್ದಾರೆ. ಬ್ಯಾಲೆಟ್ ಪೇಪರ್ ನಲ್ಲಿ ಮತದಾನ ನಡೆದರೆ ಬಿಜೆಪಿ ಸೋಲುತ್ತದೆ. ಇವಿಎಂನಲ್ಲಿ ಮತದಾನ ನಡೆದರೆ ಬಿಜೆಪಿಯೇ ಗೆಲ್ಲುತ್ತದೆ ಹಾಗಾಗಿ ಇವಿಎಂ ಬ್ಯಾನ್ ಮಾಡಬೇಕು ಎಂಬ ವಾದವೂ ಸೋಷಿಯಲ್ ಮಿಡೀಯಾದಲ್ಲಿ ಜೋರಾಗಿ ಕೇಳಿ ಬಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...