Homeಕರ್ನಾಟಕಸ್ಥಳೀಯ ಸಂಸ್ಥೆಗಳ ಚುನಾವಣೆ: ಮೇಲುಗೈ ಕಾಯ್ದುಕೊಂಡ ಕಾಂಗ್ರೆಸ್

ಸ್ಥಳೀಯ ಸಂಸ್ಥೆಗಳ ಚುನಾವಣೆ: ಮೇಲುಗೈ ಕಾಯ್ದುಕೊಂಡ ಕಾಂಗ್ರೆಸ್

ಸ್ಥಳೀಯ ಸಂಸ್ಥೆಗಳ ಚುನಾವಣೆ ಸ್ಥಳೀಯ ನಾಯಕತ್ವದ ಆಧಾರದಲ್ಲಿ ನಡೆಯುತ್ತದೆ

- Advertisement -
- Advertisement -

| ನಾನುಗೌರಿ ಡೆಸ್ಕ್ |

ಎರಡು ಹಂತದ ಮತ ಎಣಿಕೆ ಮುಕ್ತಾಯವಾಗಿದ್ದು ಕಾಂಗ್ರೆಸ್ ಅತಿ ಹೆಚ್ಚು ಸ್ಥಾನಗಳಲ್ಲಿ ಜಯಗಳಿಸಿದೆ. ಪುರಸಭೆ, ಪಟ್ಟಣ ಪಂಚಾಯತ್ ಮತ್ತು ನಗರಸಭೆ ಸೇರಿದಂತೆ ಇದುವರೆಗೆ ಒಟ್ಟು 1361 ಕ್ಷೇತ್ರಗಳಲ್ಲಿ ಕಾಂಗ್ರೆಸ್ 562 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದರೆ ಬಿಜೆಪಿ 406 ಕಡೆ ಗೆಲುವಿನ ನಗೆ ಬೀರಿದೆ. ಇನ್ನು ಜೆಡಿಎಸ್ 202 ಬಿಎಸ್‍ಪಿ 04, ಸಿಪಿಎಂ 02 ಮತ್ತು ಇತರರು 172 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದಾರೆ.

 

ಲೋಕಸಭಾ ಚುನಾವಣೆಯ ಫಲಿತಾಂಶ ಬಂದು ಒಂದು ಕೆಲವು ದಿನಗಳಷ್ಟೇ ಆಗಿದೆ. ಬಿಜೆಪಿ ಭರ್ಜರಿ ಜಯದ, ನೂತನ ಸಚಿವರ ಪ್ರಮಾಣ ವಚನದ ಸಂಭ್ರಮದಲ್ಲಿದ್ದರೆ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಇನ್ನು ಸೋಲಿನ ಸುಳಿಯಿಂದ ಹೊರಬಂದಿಲ್ಲ. ಇದರ ನಡುವೆಯೇ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಫಲಿತಾಂಶ ಹೊರಬಿದಿದ್ದು ಅಚ್ಚರಿಯ ರೀತಿಯಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದರೆ ಬಿಜೆಪಿ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ.

ಮೇ 23ರಂದು ಲೋಕಸಭಾ ಚುನಾವಣಾ ಫಲಿತಾಂಶ ಬಂದ ನಂತರ ಬಿಜೆಪಿ ಕಾರ್ಯಕರ್ತರ ಉತ್ಸಾಹ ಮುಗಿಲು ಮುಟ್ಟಿತ್ತು. ಕಾಂಗ್ರೆಸ್ ಮುಕ್ತ ಭಾರತಕ್ಕೆ ಎರಡೇ ಗೇಣು ಎಂಬ ಖುಷಿಯಲ್ಲಿರುವಾಗಲೇ ಈ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಅವರಿಗೆ ಸಣ್ಣ ಮಟ್ಟಿಗಿನ ಶಾಕ್ ಕೊಟ್ಟಾಂತಾಗಿದೆ.

ಒಟ್ಟಾರೆ ನೋಡಿದರೆ ಕಾಂಗ್ರೆಸ್ ಹೆಚ್ಚು ಸ್ಥಾನಗಳಲ್ಲಿ ಜಯಗಳಿಸಿದೆ. ಜೆಡಿಎಸ್ ಸಹ ಗಮನಾರ್ಹ ಸಾಧನೆ ಮಾಡಿದೆ. ಇದು ಒಂದು ರೀತಿಯಲ್ಲಿ ಸಾಮಾನ್ಯ ಸಂಗತಿಯೇ ಹೌದು ಇದರಲ್ಲಿ ಆಶ್ಚರ್ಯಪಡಬೇಕಾದುದ್ದೇನು ಇಲ್ಲ. ಏಕೆಂದರೆ ಜನ ಯೋಚಿಸುವ, ಮತ ಹಾಕುವ ರೀತಿಯೇ ಹಾಗೆ.

ರಾಜಸ್ಥಾನ ಅಸೆಂಬ್ಲಿಯಲ್ಲಿ ಒಟ್ಟು 199 ಸ್ಥಾನಗಳಲ್ಲಿ ಹೆಚ್ಚು ಕಮ್ಮಿ 100 ಸ್ಥಾನಗಳನ್ನು ಕಾಂಗ್ರೆಸ್ ಗೆದ್ದು ಅಧಿಕಾರ ಹಿಡಿದಿದೆ. ಆದರೆ ಲೋಕಸಭಾ ಚುನಾವಣೆಯಲ್ಲಿ ಒಟ್ಟು 25 ಕ್ಷೇತ್ರಗಳಲ್ಲಿ ಒಂದನ್ನು ಗೆಲ್ಲಲಾಗಲಿಲ್ಲ. ಗುಜರಾತ್, ಮಧ್ಯಪ್ರದೇಶದಲ್ಲಿಯೂ ಹೆಚ್ಚು ಕಡಿಮೆ ಅದೇ ಪರಿಸ್ಥಿತಿ ಇದೆ.

2014ರ ಲೋಕಸಭಾ ಚುನಾವಣೆಯಲ್ಲಿ ದೆಹಲಿಯಲ್ಲಿ 7ಕ್ಕೆ 7ಸೀಟುಗಳನ್ನು ಬಿಜೆಪಿ ಗೆದ್ದ 8 ತಿಂಗಳಲ್ಲೇ ದೆಹಲಿಯ 70 ವಿಧಾನಸಭಾ ಕ್ಷೇತ್ರಗಳ ಪೈಕಿ ಆಮ್ ಆದ್ಮಿ ಪಕ್ಷ 67ನ್ನು ಗೆದ್ದುಕೊಂಡು ಅಪೂರ್ವ ಸಾಧನೆ ಮಾಡಿತು. ಅಲ್ಲಿ ಬಿಜೆಪಿ ಕೇವಲ 03 ಸ್ಥಾನಕಷ್ಟೇ ಸೀಮಿತವಾಯಿತು. ಮತ್ತೆ 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅದೇ ಸಾಧನೆ ಮಾಡಿ 7ಕ್ಕೆ 7ಸೀಟುಗಳನ್ನು ತನ್ನ ಬುಟ್ಟಿಗೆ ಹಾಕಿಕೊಂಡಿದೆ. ಇನ್ನು 8 ತಿಂಗಳಲ್ಲೇ ವಿಧಾನಸಭಾ ಚುನಾವಣೆಯಿದೆ. ಅಲ್ಲಿಯ ಮತದಾರರು ವಿಧಾನಸಭೆಯ ಚುನಾವಣೆಯಲ್ಲಿ ಆಪ್ ಗೆ ಮತ ಹಾಕುತ್ತೇವೆ, ಆದರೆ ಲೋಕಸಭೆಯಲ್ಲಿ ಮಾತ್ರ ನಮ್ಮ ಮತ ಬಿಜೆಪಿಗೆ ಎಂದು ಬಹಿರಂಗವಾಗಿ ಹೇಳುತ್ತಾರೆ.

ಪ್ರತಿ ಚುನಾವಣೆಗಳಿಗೂ ವ್ಯತ್ಯಾಸವಿರುತ್ತದೆ ಮತ್ತು ಬೇರೆ ಬೇರೆ ಸಂದರ್ಭಕ್ಕನುಗುಣವಾಗಿ ಚುನಾವಣೆಗಳಿಗೆ ಮತದಾರರು ಪ್ರತಿಕ್ರಿಯಿಸುತ್ತಾರೆ. ಲೋಕಸಭಾ ಚುನಾವಣೆ ರಾಷ್ಟ್ರೀಯ ಚುನಾವಣೆಯಾದ್ದರಿಂದ ಜನ ಅಲ್ಲಿನ ಬಲಿಷ್ಠ ನಾಯಕತ್ವ, ಅವರ ಘೋಷಣೆಗಳಿಗೆ ಮಾರು ಹೋಗುತ್ತಾರೆ. ವಿಧಾನ ಸಭಾ ಚುನಾವಣೆಗಳಲ್ಲಿ ರಾಜ್ಯದ ಹಿತಾಸಕ್ತಿಗೆ ಯಾರು ಪೂರಕ ಎಂಬುದರ ಜೊತೆಗೆ ಚುನಾವಣೆಗಳು ನಡೆದರೆ ಸ್ಥಳೀಯ ಸಂಸ್ಥೆಗಳ ಚುನಾವಣೆ ಸ್ಥಳೀಯ ನಾಯಕತ್ವದ ಆಧಾರದಲ್ಲಿ ನಡೆಯುತ್ತದೆ. ಇಲ್ಲಿ ಪರಸ್ಪರರ ಸಂಬಂಧಗಳು, ಜಾತಿ, ಹಣ, ಪ್ರಭಾವ ಕೆಲಸ ಮಾಡುತ್ತದೆ.

ಇನ್ನು ಕೆಲವು ಮಾಧ್ಯಮಗಳು ಬೆಳಿಗ್ಗೆ ಇಂದಿನ ಫಲಿತಾಂಶ ತೋರಿಸಲು ನಿರಾಸಕ್ತಿ ವಹಿಸಿದ್ದವು. ಬೆಳಿಗ್ಗೆ ಸ್ಕ್ರೋಲ್ ಗಳಲ್ಲಿ ಈ ಸುದ್ದಿ ಕಾಣಿಸಿಕೊಂಡರು, ಕಾಂಗ್ರೆಸ್ ಹೆಚ್ಚು ಸೀಟು ಗಳಿಸುತ್ತಿದ್ದಂತೆ ನಿಧಾನಕ್ಕೆ ಸುಮ್ಮನಾಗಿವೆ. ಕೆಲ ಕಾಂಗ್ರೆಸ್ ಕಾರ್ಯಕರ್ತರು ಈ ಫಲಿತಾಂಶದಿಂದ ವಿಶ್ವಾಸ ಪಡೆದುಕೊಂಡು ನಮ್ಮ ಕಾಲ ಮುಗಿದಿಲ್ಲ ಎಂದು ಉಚ್ಛರಿಸಿದ್ದಾರೆ. ಬ್ಯಾಲೆಟ್ ಪೇಪರ್ ನಲ್ಲಿ ಮತದಾನ ನಡೆದರೆ ಬಿಜೆಪಿ ಸೋಲುತ್ತದೆ. ಇವಿಎಂನಲ್ಲಿ ಮತದಾನ ನಡೆದರೆ ಬಿಜೆಪಿಯೇ ಗೆಲ್ಲುತ್ತದೆ ಹಾಗಾಗಿ ಇವಿಎಂ ಬ್ಯಾನ್ ಮಾಡಬೇಕು ಎಂಬ ವಾದವೂ ಸೋಷಿಯಲ್ ಮಿಡೀಯಾದಲ್ಲಿ ಜೋರಾಗಿ ಕೇಳಿ ಬಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...