Homeಅಂಕಣಗಳುಸ್ವಚ್ಛ ಭಾರತ: ಎಲ್ಲರೂ ಉತ್ತರದಾಯಿಗಳೇ.....

ಸ್ವಚ್ಛ ಭಾರತ: ಎಲ್ಲರೂ ಉತ್ತರದಾಯಿಗಳೇ…..

- Advertisement -
- Advertisement -

ನರೇಂದ್ರ ಮೋದಿ ಸ್ವಚ್ಛ ಭಾರತ ಅಭಿಯಾನ ಆರಂಭಿಸಿದಾಗ ಹೊಗಳಿದವರೂ ಇದ್ದರು; ಆಡಿಕೊಂಡವರೂ ಇದ್ದರು. ಮೋದಿಯ ಪರ ಅಥವಾ ವಿರುದ್ಧ ನಿಲ್ಲದೇ ಸ್ವಚ್ಛತೆಯ ಪ್ರಶ್ನೆಯನ್ನು ಪಕ್ಷಾತೀತವಾಗಿ ನೋಡೋಣ. ನಗರೀಕರಣ ಹೆಚ್ಚಾದಂತೆಲ್ಲಾ ಕಸದ ಸಮಸ್ಯೆ ತೀವ್ರವಾಗಿ ಹೆಚ್ಚುತ್ತಲೇ ಹೋಗುತ್ತದೆ. ಗ್ರಾಮೀಣ ಭಾಗದಲ್ಲೂ ಬಯಲೇ ಶೌಚಾಲಯವಾಗಿರುವ ಕೋಟ್ಯಂತರ ಕುಟುಂಬಗಳು ಇಂದಿಗೂ ಇವೆ. ಹಾಗಾಗಿ ದೇಶಕ್ಕೆ ದೇಶವೇ ತಲೆ ಕೆಡಿಸಿಕೊಳ್ಳಬೇಕಾಗಿರುವ ವಿಷಯ ಇದು. ಕಸವೆಂಬುದು ನೈರ್ಮಲ್ಯದ, ಆರೋಗ್ಯದ, ಘನತೆಯ ಜೀವನದ, ನಾಗರಿಕ ಶಿಸ್ತಿನ ಜೊತೆ ತಳುಕು ಹಾಕಿಕೊಂಡಿರುವ ಸಂಗತಿ. ತೀರಾ ಇತ್ತೀಚೆಗೆ ಇದು ಹಣತರುವ ಬಾಬ್ತಾಗಿಯೂ ಕಂಡು, ಅದಕ್ಕಾಗಿ ಏಜೆನ್ಸಿಗಳು ಹುಟ್ಟಿಕೊಂಡಿವೆ. ಕಸ ತೆಗೆಯಲು ಜನರಿಂದ ತೆರಿಗೆಯನ್ನೂ ಸಂಗ್ರಹಿಸಲಾಗುತ್ತಿದೆ. ಇಷ್ಟಾಗಿಯೂ ನಮ್ಮ ಸರ್ಕಾರಗಳು ಇದನ್ನು ಏಕೆ ನಿಭಾಯಿಸಲಾಗುತ್ತಿಲ್ಲ?
‘ದೆಹಲಿಯ ಲೆ.ಗವರ್ನರ್ ಮನೆ ಮುಂದೆ ಕಸ ಸುರಿಯಿರಿ’
ಇದನ್ನು ಹೇಳಿದ್ದು ಸುಪ್ರೀಂ ಕೋರ್ಟು. ಹೌದು ಮೂರು ದಿನದ ಕೆಳಗೆ ಸುಪ್ರೀಂ ಕೋರ್ಟಿನ ಇಬ್ಬರು ನ್ಯಾಯಮೂರ್ತಿಗಳು ‘ಕಸವನ್ನು ತೆಗೆದುಕೊಂಡು ಹೋಗಿ ರಾಜ್‍ನಿವಾಸ್ ಮಾರ್ಗ್‍ದಲ್ಲಿ ಸುರಿಯಿರಿ’ ಎಂದು ತೆರೆದ ಕೋರ್ಟಿನಲ್ಲೇ ಹೇಳಿದರು. ಅವರು ಲೆಫ್ಟಿನೆಂಟ್ ಗವರ್ನರ್ ಮನೆಯ ಕುರಿತೇ ಮಾತಾಡುತ್ತಿದ್ದಾರೆಂದು ಗೊತ್ತಾಗಿ ಕೋರ್ಟಿನಲ್ಲಿದ್ದವರು ಅವಾಕ್ಕಾದರು. ಕಾರಣ ಇಷ್ಟೇ. ದಕ್ಷಿಣ ದೆಹಲಿಯ ಮುನಿಸಿಪಾಲಿಟಿ (ಎಸ್‍ಡಿಎಂಸಿ)ಯ ವ್ಯಾಪ್ತಿಯಲ್ಲಿ ಪ್ರತಿದಿನ 3,600 ಟನ್ ಕಸ ಸಂಗ್ರಹವಾಗುತ್ತಿದ್ದು, ಅದರಲ್ಲಿ 1,800 ಟನ್‍ಗಳನ್ನು ಸೋನಿಯಾ ವಿಹಾರ್ ಎಂಬ ಬಡಜನರೇ ಹೆಚ್ಚು ವಾಸಿಸುವ ಕಡೆ ಸುರಿಯಲಾಗುತ್ತಿದೆ. ಅಲ್ಲಿನ ನಿವಾಸಿಗಳು ನಾನಾ ಕೋರ್ಟ್‍ಗಳನ್ನು ಸುತ್ತಾಡಿ, ಅಂತಿಮವಾಗಿ ಸುಪ್ರೀಂಕೋರ್ಟಿನ ಕದ ತಟ್ಟಿದಾಗ, ಮುನಿಸಿಪಾಲಿಟಿಯ ಪರ ವಾದ ಮಾಡಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಪಿಂಕಿ ಆನಂದ್ ‘ಇದು ಅನಿವಾರ್ಯ, ಅವರು ಪ್ರಶ್ನಿಸಬಾರದು’ ಎಂದಿದ್ದಾರೆ. ಆಗ ಸಿಟ್ಟಿಗೆದ್ದ ನ್ಯಾಯಮೂರ್ತಿಗಳ ಪ್ರತಿಕ್ರಿಯೆ ಇದಾಗಿತ್ತು.
ಈ ಮುನಿಸಿಪಾಲಿಟಿಯಲ್ಲಿ ಬಿಜೆಪಿ ಪಕ್ಷವು ಅಧಿಕಾರದಲ್ಲಿದೆ. ತಾವು ಈಗಷ್ಟೇ ಅಧಿಕಾರಕ್ಕೆ ಬಂದೆವು ಎಂದು ಹೇಳುವ ಹಾಗಿಲ್ಲ; ಇದರ ಹಿಂದಿನ ಅವಧಿಯಲ್ಲೂ ಅವರೇ ಇದ್ದರು. ಅದು ದೆಹಲಿ. ನರೇಂದ್ರ ಮೋದಿಯವರು ತಮ್ಮ ಕೈಯ್ಯಾರೆ ಸ್ವಚ್ಛ ಭಾರತ ಆಂದೋಲನವನ್ನು ಉದ್ಘಾಟಿಸಿದ ದೇಶದ ರಾಜಧಾನಿ. ಈಗ ಹೇಳಿ? ಏನು ಮಾಡುವುದು? ಮೋದಿಯವರು ಸ್ವಚ್ಛತೆಗಾಗಿ ಇದ್ದ ಅನುದಾನವನ್ನು ಕಡಿಮೆ ಮಾಡಿ, ಅದರಲ್ಲೂ ಹೆಚ್ಚಿನ ಹಣವನ್ನು ತಮ್ಮ ಜಾಹೀರಾತಿಗಾಗಿ ಬಳಸಿದರು ಎಂಬ ಆರೋಪ ನಿಜವಾಯಿತಲ್ಲವೇ?
ಪ್ರಧಾನಿ ಏನೇ ಗಿಮಿಕ್ ಮಾಡಿದ್ದರೂ, ಅವರ ಚರಿಷ್ಮಾ ಈ ಅಭಿಯಾನದಿಂದ ಹೆಚ್ಚಾದರೂ ಅದನ್ನೆಲ್ಲಾ ದೊಡ್ಡ ವಿಚಾರ ಮಾಡುವುದು ಬೇಡ; ಸ್ವಚ್ಛತೆ ಹೆಚ್ಚಾಗಿದ್ದರೆ ಅಷ್ಟೇ ಸಾಕು. ಆಗಿದೆಯೆ? ಖಂಡಿತ ಇಲ್ಲ.

ಸಿದ್ದರಾಮಯ್ಯನವರಿಂದ ಪೌರಕಾರ್ಮಿಕರಿಗೆ ಒಳಿತಾಯಿತೇ?
ಸಿದ್ದರಾಮಯ್ಯನವರು ಅಧಿಕಾರ ವಹಿಸಿಕೊಂಡ ಆರಂಭದಲ್ಲೇ, ಗುತ್ತಿಗೆ ಪದ್ಧತಿಯ ವಿರುದ್ಧ ಸಂಪುಟದಲ್ಲಿ ಚರ್ಚೆಗಳಾದವು. ಆದರೆ, ಅದನ್ನು ತೆಗೆದುಹಾಕುವುದು ಸುಲಭವಾಗಿರಲಿಲ್ಲ. ಶೋಷಿತ ಸಮುದಾಯದ ಬಗ್ಗೆ ಕಾಳಜಿಯಿದ್ದ ಅವರು ಗುತ್ತಿಗೆ ಪೌರಕಾರ್ಮಿಕರನ್ನಾದರೂ ಖಾಯಂ ಮಾಡಿಕೊಳ್ಳೋಣವೆಂದು ತೀರ್ಮಾನಿಸಿದರು. ಅದೂ ಸಾಧ್ಯವಿಲ್ಲ ಎಂದು ಗೊತ್ತಾಯಿತು. ಇರುವವರನ್ನೇ ಖಾಯಂ ಮಾಡಿಕೊಳ್ಳುವುದು ಅಸಾಧ್ಯ ಎಂದಾದರೆ, ಹೊಸದಾಗಿ ನೇಮಕಾತಿ ಆರಂಭಿಸಿ ಇರುವವರಿಗೇ ಆ ಉದ್ಯೋಗ ಸಿಗುವ ಹಾಗೆ ನೇಮಕಾತಿ ನಿಯಮ ರೂಪಿಸಲಾಯಿತು. ಇದೊಂದು ಸಕಾರಾತ್ಮಕ ನಡೆಯಾಗಿತ್ತು. ಆದರೆ, ಇವತ್ತಿನವರೆಗೂ ಆ ಪ್ರಕ್ರಿಯೆ ಪೂರ್ಣಗೊಂಡಿಲ್ಲ. ಆಗ ಗುತ್ತಿಗೆ ಪೌರಕಾರ್ಮಿಕರ ಪರವಾಗಿ ಎರಡು ಮಹತ್ವದ ತೀರ್ಮಾನಗಳನ್ನು ಸಿದ್ದರಾಮಯ್ಯನವರು ತೆಗೆದುಕೊಂಡರು. ಒಂದು, ಅವರ ವೇತನವನ್ನು ಎರಡು ಪಟ್ಟು ಹೆಚ್ಚಿಸಿದರು; ಗುತ್ತಿಗೆದಾರರ ಮಧ್ಯಸ್ಥಿಕೆಯಿಲ್ಲದೇ ನೇರವಾಗಿ ಗುತ್ತಿಗೆ ಪೌರಕಾರ್ಮಿಕರ ಅಕೌಂಟಿಗೇ ವೇತನ ಹೋಗಲಿ ಎಂದು ಆದೇಶಿಸಿದರು.
ಅದಾಗಿ, ಹಲವು ತಿಂಗಳಾದ ನಂತರ ಹೊಸ ಸರ್ಕಾರ ಬಂತು. ಸುಬ್ರಮಣಿ ಎಂಬ ಗುತ್ತಿಗೆ ಪೌರಕಾರ್ಮಿಕ ಬೆಂಗಳೂರಿನಲ್ಲೇ ಆತ್ಮಹತ್ಯೆ ಮಾಡಿಕೊಂಡರು. ಕಾರಣ ಏನು ಎಂದು ನೋಡಿದರೆ, 5 ತಿಂಗಳಿಂದ ಆತನ ಅಕೌಂಟಿಗೆ ವೇತನ ಬಂದಿರಲಿಲ್ಲ. ಅಂದರೆ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ, ಹಣಕಾಸು ಮಂತ್ರಿಯಾಗಿದ್ದ ಸಂದರ್ಭದಿಂದಲೂ ವೇತನ ಪಾವತಿಯಾಗಿರಲಿಲ್ಲ. ಈ ಸುಬ್ರಮಣಿಯ ಆತ್ಮಹತ್ಯೆಯ ನಂತರ ಕಾಂಗ್ರೆಸ್ ಪಕ್ಷದ, ದಲಿತ ಸಮುದಾಯಕ್ಕೆ ಸೇರಿದ ಮೇಯರ್ ಎಚ್ಚೆತ್ತುಕೊಂಡರು.
ಸಿದ್ದರಾಮಯ್ಯನವರಿಗೆ ಕಾಳಜಿ ಇರಲಿಲ್ಲ ಎಂದು ಹೇಳುವುದು ತಪ್ಪಾಗುತ್ತದೆ. ಏಕೆಂದರೆ, ಹೇಗಾದರೂ ಪೌರಕಾರ್ಮಿಕರಿಗೆ ಒಳ್ಳೆಯದಾಗಲಿ ಎಂಬ ಭಾವನೆ ಇದ್ದುದರಿಂದಲೇ ಒಂದಾದ ಮೇಲೆ ಒಂದರಂತೆ ಕ್ರಮಗಳನ್ನು ತೆಗೆದುಕೊಂಡರು. ಆದರೆ ಆ ಭಾವನೆ ಮತ್ತು ಕ್ರಮಗಳು ಅಂತಿಮವಾಗಿ ಕಟ್ಟಕಡೆಯ ಸಮುದಾಯಕ್ಕೆ ಅನುಕೂಲ ಮಾಡಿಕೊಡಲು ಒಬ್ಬ ವ್ಯಕ್ತಿ ‘ಹುತಾತ್ಮ’ನಾಗಬೇಕಾಯಿತು. ಈ ಸದ್ಯ ಮೇಯರ್ ತೋರಿರುವ ಕಾಳಜಿಯೂ ಎಷ್ಟು ತಿಂಗಳ ಕಾಲ ವೇತನ ಪಾವತಿಯ ನಿರಂತರತೆಯಾಗಿ ಉಳಿದುಕೊಳ್ಳುತ್ತದೆ ಎಂದು ಹೇಳುವುದು ಕಷ್ಟ. ಇದೂ ಸ್ವಚ್ಛ ಭಾರತಕ್ಕೆ ಸಂಬಂಧಿಸಿದ ವಿಷಯವೇ ಆಗಿದೆ.

ಮ್ಯಾನ್‍ಹೋಲ್ ಸಾವು ಮತ್ತು ಕುಮಾರಸ್ವಾಮಿ
ಈ ವಾರದಲ್ಲೇ ಶಿವಮೊಗ್ಗ ನಗರದ ಚರಂಡಿಯ ಮ್ಯಾನ್‍ಹೋಲ್‍ನಲ್ಲಿ ಇಳಿದ ಇಬ್ಬರು ಗುತ್ತಿಗೆ ನೌಕರರು ಸಾವನ್ನಪ್ಪಿದ್ದಾರೆ. ಎಷ್ಟೋ ಕಾಲದಿಂದ ಆಗುತ್ತಿರುವ ಈ ಸಾವುಗಳಿಗೆ ಈಗಷ್ಟೇ ಮುಖ್ಯಮಂತ್ರಿಯಾಗಿರುವ ಕುಮಾರಸ್ವಾಮಿಯವರು ಹೇಗೆ ಹೊಣೆಗಾರರಾಗುತ್ತಾರೆ ಎಂದು ಕೇಳಬಹುದು. ಅವರೊಬ್ಬರೇ ಹೊಣೆಗಾರರಲ್ಲ. ಆದರೆ, ಪ್ರಾಣವನ್ನು ಪಣಕ್ಕೊಡ್ಡಿ ಸರ್ಕಾರೀ ಕೆಲಸಗಳನ್ನು ಸುಸೂತ್ರವಾಗಿ ಸಾಗಿಸುತ್ತಿರುವ ಸಾವಿರಾರು ನೌಕರರು ಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಸಂತೇಮರಳ್ಳಿಯಲ್ಲಿ ಚೆಸ್ಕಾಂ ನೌಕರನೊಬ್ಬ ಕೆಲಸದಲ್ಲಿದ್ದಾಗ ವಿದ್ಯುತ್ ತಗುಲಿ ತೀವ್ರ ಆಘಾತಕ್ಕೊಳಪಟ್ಟ ಮತ್ತು ಶರೀರ ಸುಟ್ಟಿತು. ಇವತ್ತಿನವರೆಗೂ ಒಂದು ರೂಪಾಯಿ ಪರಿಹಾರವೂ ಸಿಕ್ಕಿಲ್ಲ. ಇದೇ ವಾರದಲ್ಲಿ ಕುಮಾರಸ್ವಾಮಿಯವರ ಬೀಗರಾದ ಡಿ.ಸಿ.ತಮ್ಮಣ್ಣನವರ ಕ್ಷೇತ್ರದ ಪ್ರಾಥಮಿಕ ಆರೋಗ್ಯಕೇಂದ್ರದಲ್ಲಿ ಕೆಲಸದ ಅವಧಿಯಲ್ಲೇ ಗುತ್ತಿಗೆ ನರ್ಸ್ ಒಬ್ಬರು ಅಸುನೀಗಿದರು. ಪರಿಹಾರವೆಲ್ಲಾ ದೂರದ ಮಾತು.
ಇಂತಹವರೆಲ್ಲರಿಗೂ ಸೇವಾಭದ್ರತೆ ಮತ್ತು ಸಮಾನವೇತನ ಕಲ್ಪಿಸುತ್ತೇನೆಂದು ಚುನಾವಣೆಗೆ ಮುಂಚೆ ಕುಮಾರಸ್ವಾಮಿ ಭರವಸೆ ನೀಡಿದ್ದರು. ಈಗ ‘ಇದೆಲ್ಲಾ ಅಷ್ಟು ಸುಲಭವಲ್ಲ; ಹಿಂದಿನ ಸರ್ಕಾರಗಳ ಅವಧಿಯಲ್ಲಿ ಏನೇನೋ ಆಗಿರುತ್ತದೆ, ಎಲ್ಲದಕ್ಕೂ ನಾನೇ ತಲೆಕೊಡಬೇಕಾ?’ ಎನ್ನುತ್ತಿದ್ದಾರೆ. ಹೀಗಿರುವಾಗ ಗುತ್ತಿಗೆ ಪೌರಕಾರ್ಮಿಕರಿಗೆ, ಗ್ರಾಮೀಣ ನೈರ್ಮಲ್ಯ ಮತ್ತು ಕುಡಿಯುವ ನೀರು ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ಗುತ್ತಿಗೆ ನೌಕರರಿಗೆ ಇವರಿಂದ ನ್ಯಾಯ ಸಿಗಬಹುದಾ?

ಬನ್ನಿ, ಕಸ ಬಾಚೋಣ
ಎಲ್ಲೆಂದರಲ್ಲಿ ಕಸ ಚೆಲ್ಲಾಡುವ ಪ್ರವೃತ್ತಿ ನಾಗರಿಕರಲ್ಲೂ ಸಾಕಷ್ಟಿದೆ. ಯಾವುದೇ ಪ್ರವಾಸಿ ತಾಣದಲ್ಲೂ ಗಲೀಜು ರಾಚುತ್ತದೆ. ಜಾತ್ರೆ, ಹಬ್ಬ, ರಾಜಕಾರಣಿಗಳ ಕಾರ್ಯಕ್ರಮಗಳು, ಸಂಘಟನೆಗಳು ನಡೆಸುವ ಪ್ರತಿಭಟನೆಗಳು, ಮದುವೆ ಇತ್ಯಾದಿ ಖಾಸಗಿ ಕಾರ್ಯಕ್ರಮಗಳು ಮುಗಿದ ನಂತರ ಕಸದ ರಾಶಿ ಇಟ್ಟಾಡುತ್ತದೆ. ಹಸಿ ಕಸ, ಒಣ ಕಸ ವಿಂಗಡಿಸಲು ಸೋಮಾರಿತನ ತೋರುವ ‘ನಾಗರಿಕರು’, ಮನೆಯಲ್ಲಿ ಶೌಚಾಲಯ ಕಟ್ಟಿಸಲು ಹಿಂಜರಿಯುವ ಹಳ್ಳಿಗರು ಎಲ್ಲರೂ ಇದರಲ್ಲಿ ಪಾಲುದಾರರಾಗಿದ್ದೇವೆ.
ತೋರಿಕೆಗೆ ಕಸ ಗುಡಿಸುವ ನಾಟಕವಾಡಿ, ಅದರ ಜಾಹೀರಾತಿಗೇ ಹೆಚ್ಚು ಹಣ ಖರ್ಚು ಮಾಡಿಸುವ ಪ್ರಧಾನಿಯಿಂದ ಹಿಡಿದು ಸಾಮಾನ್ಯ ನಾಗರಿಕರವರೆಗೆ ಎಲ್ಲರೂ ಕಸಕ್ಕೆ ಜವಾಬ್ದಾರರು. ಆದರೆ, ಕಸ ಬಳಿಯುವ ಜನರ ಬದುಕನ್ನು ಇನ್ನಷ್ಟು ಘನತೆಯುಳ್ಳದ್ದನ್ನಾಗಿ ಮಾಡುವ ಪರಿಣಾಮಕಾರಿ ಪ್ರಯತ್ನವಾದರೂ ಈ ಸಮಾಜದಲ್ಲಿ ಜಾರಿಯಾಗುತ್ತಿಲ್ಲ.
ಇನ್ನಾದರೂ ಕಸ ಬಳಿಯೋಣ; ಸ್ವಚ್ಛ ಭಾರತ ಕಟ್ಟೋಣ.

.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...