Homeಸಾಹಿತ್ಯ-ಸಂಸ್ಕೃತಿಕಥೆಸ್ವರ್ಗಕ್ಕೆ ಸ್ವಾಗತ.

ಸ್ವರ್ಗಕ್ಕೆ ಸ್ವಾಗತ.

- Advertisement -
- Advertisement -

ಭಾರತದ ರಾಜಕಾರಣಿಯೊಬ್ಬ ವಾಯುವಿಹಾರಕ್ಕಾಗಿ ರಸ್ತೆಯಲ್ಲಿ ನಡೆಯುತ್ತಿರುವಾಗ ಕಾರೊಂದು ಗುದ್ದಿ ಸಾವನ್ನಪ್ಪಿದರು. ಅವರ ಆತ್ಮವು ಸ್ವರ್ಗದೊಳಗೆ ಆಗಮಿಸುತ್ತದೆ. ಪ್ರವೇಶ ದ್ವಾರದ ಬಳಿ ಚಿತ್ರಗುಪ್ತ ಅವರನ್ನು ಬರಮಾಡಿಕೊಂಡರು.  “ಸ್ವರ್ಗಕ್ಕೆ ಸ್ವಾಗತ” ಎಂದು ಹೇಳಿ, “ಇಲ್ಲಿ ನೀವು ನೆಲೆಗೊಳ್ಳುವುದಕ್ಕಿಂತ ಮುಂಚೆ ಇಲ್ಲಿನ ಎಲ್ಲವೂ ಅಧಿಕೃತವಾಗಿ ಹೆಚ್ಚು ವ್ಯವಸ್ಥಿತವಾಗಿ ನಡೆಯುತ್ತಿವೆಯೇ ಎಂದು ನೀವೊಮ್ಮೆ ಪರೀಕ್ಷಿಸಿಕೊಳ್ಳಬೇಕಿದೆ, ಅದಕ್ಕಾಗಿ ಒಂದು ದಿನ ಸ್ವರ್ಗದಲ್ಲಿಯೂ, ಇನ್ನೊಂದು ನರಕದಲ್ಲಿಯೂ ಇದ್ದು ನಿಮಗೆ ಸೂಕ್ತವಾದುದ್ದನ್ನು ಆರಿಸಿಕೊಳ್ಳಬಹುದೆಂದು ಚಿತ್ರಗುಪ್ತ ಹೇಳಿದರು. ಆಗ ರಾಜಕಾರಣಿ “ಸಮಸ್ಯೆ ಇಲ್ಲ, ಇಲ್ಲಿ ಎಲ್ಲ ಚೆನ್ನಾಗಿದೆ, ನನಗೆ ಇಷ್ಟ ಆಯಿತು. ನರಕ ನೋಡುವ ಅಗತ್ಯವಿಲ್ಲ, ಸ್ವರ್ಗದಲ್ಲೇ ಇರುತ್ತೇನೆ ಒಳಗೆ ಹೋಗೋಣ” ಎಂದು ಹೇಳಿದರು.

ಆಗ ಚಿತ್ರಗುಪ್ತ “ಕ್ಷಮಿಸಿ, ನಮಗೆ ನಮ್ಮದೇ ಆದ ನಿಯಮಗಳಿವೆ, ನಾನು ಮೇಲಿನವರಿಂದ ಆದೇಶಗಳನ್ನು ಹೊಂದಿದ್ದೇನೆ, ಹಾಗಾಗಿ ನೀವು ಇದನ್ನು ಪಾಲಿಸಲೇಬೇಕೆಂದು ಮನವಿ ಮಾಡಿದನು. ಆಗ ರಾಜಕಾರಣಿ ಇರಲಿ ಒಂದು ದಿನ ತಾನೇ ನರಕ ಹೇಗಿರುತ್ತೆ ಅಂತ ನೋಡೇ ಬಿಡೋಣ ಎಂದು ಒಪ್ಪಿಕೊಂಡರು. ಆಗ ಚಿತ್ರಗುಪ್ತ ಮತ್ತೆ ಕೇಳಿದನು ಮೊದಲು ನರಕಕ್ಕೆ ಹೋಗೋಣವೋ ಅಥವಾ ಸ್ವರ್ಗಕ್ಕೆ ಹೋಗೋಣವೋ ಅಂದಾಗ, ರಾಜಕಾರಣಿ ಮೊದಲು ನರಕವೇ ಇರಲಿ ಎಂದನು.

ನಂತರ ಚಿತ್ರಗುಪ್ತ ಅವರನ್ನು ಲಿಫ್ಟಿಗೆ ಹತ್ತಿಸಿಕೊಂಡನು. ಲಿಪ್ಟು ಅವರನ್ನು ಹೊತ್ತು ಕೆಳಕ್ಕೆ ಹೋಯಿತು. ಅದು ಎಷ್ಟು ಆಳಕ್ಕೆ ಹೋಗುತ್ತಿದೆ ಎಂದು ಗಾಬರಿಗೊಳ್ಳುವಷ್ಟರಲ್ಲೇ ಅವರು ನರಕದಲ್ಲಿದ್ದರು. ಬಾಗಿಲು ತೆರೆದಾಗ ರಾಜಕಾರಣಿ ಸುತ್ತಲೂ ವಿಶಾಲವಾದ ಗಾಲ್ಫ್ ಮೈದಾನವಿತ್ತು. ದೂರದಲ್ಲಿ ಕಾಣುತ್ತಿದ್ದ ಅಂಗಳದಲ್ಲಿ ಅವನ ಸ್ನೇಹಿತರು ಮತ್ತು ಜತೆಗೆ ಕೂಡಿ ಕೆಲಸ ಮಾಡಿದ್ದ ರಾಜಕಾರಣಿಗಳು ಸಾಲಾಗಿ ನಿಂತಿದ್ದರು. ಎಲ್ಲರ ಮೊಗದಲ್ಲೂ ಮಂದಹಾಸ, ಶುಭ್ರ ಬಟ್ಟೆಗಳು ಮನ ತಣಿಸುತ್ತಿದ್ದವು. ಅವರೆಲ್ಲರೂ ಓಡಿಬಂದು ತಮ್ಮ ಗೆಳೆಯನಿಗೆ ಶುಭ ಕೋರಿ, ಕೈಕುಲುಕಿದರು. ಬದುಕಿದ್ದಾಗ ಜನರನ್ನು ತುಳಿದು ತಾವು ಹೇಗೆ ಸಿರಿವಂತರಾದೆವು ಎಂಬ ನೆನಪುಗಳನ್ನು ಮೆಲುಕು ಹಾಕಿದರು.

ಎಲ್ಲರೂ ಸೇರಿ ಒಂದು ಸುತ್ತು ಗಾಲ್ಫ್ ಆಡಿ, ಅಲ್ಲಿದ್ದ ಬಗೆಬಗೆಯ ಕಡಲ ತಿನಿಸುಗಳನ್ನು ಸವಿದರು. ಬಳಿಕ, ದ್ರಾಕ್ಷಾರಸ ಅವರೆಲ್ಲರನ್ನು ಉಲ್ಲಸಿತರನ್ನಾಗಿ ಮಾಡಿತು. ಔತಣಕೂಟದಲ್ಲಿ ವಿದೂಷಕನೊಬ್ಬನು ಥರೇವಹಾರಿ ಜೋಕ್ಸ್ ಮಾಡುತ್ತಾ ನಗುತ್ತಾ, ನಗಿಸುತ್ತಾ ಅವರೊಡನೆ ಸಂತಸದ ಕ್ಷಣಗಳಿಗೆ ಸಾಕ್ಷಿಯಾದನು. ಇವರೆಲ್ಲರೂ ಸಂತೋಷ ಕೂಟದಲ್ಲಿ ಮೈಮರೆತಿದ್ದಾಗ, ರಾಜಕಾರಣಿಗೆ ಅರಿವಾಯಿತು. “ಒಂದು ದಿನ ಮುಗೀತು ಇದು ಹೊರಡುವ ಸಮಯ”. ಪ್ರತಿಯೊಬ್ಬರು ಅವರಿಗೆ ಆತ್ಮೀಯವಾಗಿ ಬೀಳ್ಕೊಟ್ಟರು, ಲಿಫ್ಟ್ ಮೇಲಕ್ಕೆ ಹೋಯಿತು.

ಲಿಫ್ಟ್ ಮೇಲಕ್ಕೆ, ಮತ್ತಷ್ಟು ಮೇಲಕ್ಕೆ ಹೋಗಿ ಸ್ವರ್ಗದಲ್ಲಿ ಬಾಗಿಲು ತೆರೆದುಕೊಳ್ಳುತ್ತದೆ. ಅಲ್ಲಿ ಪ್ರಶಾಂತತೆ ಇರುತ್ತದೆ. ಅವರು ಮೋಡಗಳಿಂದ ಮೋಡಕ್ಕೆ ನೆಗೆಯುತ್ತಾರೆ, ತಂತಿವಾದ್ಯಗಳನ್ನು ನುಡಿಸುತ್ತಾರೆ, ಗಿಟಾರ್‍ರನ್ನು ಬಾರಿಸುತ್ತಾರೆ, ಹಾಡು ಹೇಳುತ್ತಾರೆ. ಅವರು ಬಹಳ ಸಂತೋಷದಿಂದ ಸಮಯವನ್ನು ಕಳೆಯುತ್ತಾರೆ ಮತ್ತು ಆಗಷ್ಟೇ ಅವರಿಗೆ ಹೊಳೆಯುತ್ತದೆ 24 ಗಂಟೆಗಳು ಮುಗಿದು ಹೋಗಿದೆ ಎಂದು. ಮತ್ತೆ ಚಿತ್ರಗುಪ್ತ ರಾಜಕಾರಣಿಯ ಬಳಿ ಬರುತ್ತಾರೆ, “ನೀವು ಒಂದು ದಿನ ನರಕದಲ್ಲೂ ಮತ್ತೊಂದು ದಿನ ಸ್ವರ್ಗದಲ್ಲೂ ಕಳೆದಿದ್ದೀರಾ. ಈಗ ನಿಮ್ಮ ಶಾಶ್ವತ ನೆಲೆಯನ್ನು ಆಯ್ಕೆ ಮಾಡಿ”.

ರಾಜಕಾರಣಿ ಒಂದು ನಿಮಿಷ ಯೋಚಿಸಿ ಉತ್ತರ ನೀಡುತ್ತಾರೆ: “ನಾನು ಮುಂಚೆ ಸ್ವರ್ಗ ಸುಖಕರವಾಗಿಯೂ ನರಕ ಭಯಾನಕವಾಗಿಯೂ ಇರುತ್ತದೆ ಎಂದು ತಪ್ಪು ತಿಳಿದಿದ್ದೆ. ಆದರೆ ಇಲ್ಲಿ ಬಂದು ನೋಡಿದ ನಂತರ ಸ್ವರ್ಗಕ್ಕಿಂತ ನರಕವೇ ಅದ್ಭುತವಾಗಿದೆ ಅನ್ನಿಸುತ್ತಿದೆ. ಹಾಗಾಗಿ ನಾನು ನರಕವನ್ನೇ ಆಯ್ಕೆ ಮಾಡಿಕೊಳ್ಳುತ್ತೇನೆ ಎಂದನು. ಇಂದು ಅಂತಿಮ ನಿರ್ಧಾರವೇ ಎಂದು ಚಿತ್ರಗುಪ್ತ ಕೇಳಿದರೆ ರಾಜಕಾರಣಿ ಯೆಸ್ 100% ಎಂದನು. ಸರಿ ಎಂದು ಚಿತ್ರಗುಪ್ತ ರಾಜಕಾರಣಿಯನ್ನು ನರಕಕ್ಕೆ ತಂದು ಬಿಡುತ್ತಾನೆ.

ಆಗ ರಾಜಕಾರಣಿ ಅವನ ಕಣ್ಣನ್ನು ಅವನೇ ನಂಬಲು ಸಿದ್ದವಿಲ್ಲ. ಏಕೆಂದರೆ ಅವನು ಬಂಜರು ಭೂಮಿಯ ಮಧ್ಯ ಭಾಗದಲ್ಲಿ ನಿಂತಿರುತ್ತಾನೆ. ಸುತ್ತಲೂ ತ್ಯಾಜ್ಯ, ಕಸ ತುಂಬಿ ಹೋಗಿರುತ್ತದೆ. ತನ್ನ ಎಲ್ಲಾ ಸ್ನೇಹಿತರು ಚಿಂದಿಬಟ್ಟೆ ತೊಟ್ಟು ಕಸ ಆಯ್ದು ಕಪ್ಪು ಚೀಲದಲ್ಲಿ ತುಂಬುತ್ತಿರುತ್ತಾರೆ. ಮೇಲಿನಿಂದ ಇನ್ನಷ್ಟು ಕಸ ಬೀಳುತ್ತಿರುತ್ತದೆ. ರೋಧನೆ, ನೋವಿನ ವಾತವರಣವಿರುತ್ತದೆ.

ಆತನ ಸ್ನೇಹಿತರು ಅವನನ್ನು ಕೂಗಿ, ಏನು ನೋಡುತ್ತಿದ್ದೀಯ ಬಾ ಕೆಲಸ ಮಾಡು ಅನ್ನುತ್ತಾರೆ. ಆಗ ರಾಜಕಾರಣಿ ಕಣ್ಣುಜ್ಜಿಕೊಂಡು “ನನಗೆ ಏನೊಂದು ಅರ್ಥವಾಗುತ್ತಿಲ್ಲ” ಎಂದು ತೊದಲುತ್ತಾ ಹೇಳುತ್ತಾನೆ.“ಮೊನ್ನೆ ದಿನ ನಾನು ಇಲ್ಲಿಗೆ ಬಂದಿದ್ದೆ. ಇಲ್ಲಿ ಗಾಲ್ಫ್ ಕೋರ್ಟ್, ಕ್ಲಬ್ ಹೌಸ್ ಇತ್ತು. ನಾವು ಕಡಲನಳ್ಳಿ, ಮೀನಿನ ಚಟ್ನಿ, ದ್ರಾಕ್ಷಿಯ ಮದ್ಯವನ್ನು ಸೇವಿಸಿದ್ದೆವು. ನಾವೆಲ್ಲಾರೂ ಒಟ್ಟಿಗೆ ಕುಣಿದು, ತುಂಬಾ ಸಂತೋಷದಿಂದ ಸಮಯವನ್ನು ಕಳೆದಿದ್ದೆವು. ಆದರೆ ಈಗ ಕೇವಲ ಪಾಳು ಭೂಮಿ ಮಾತ್ರ ಇದೆ. ಕಸದಿಂದ ತುಂಬಿ ಹೋಗಿದೆ, ನನ್ನ ಸ್ನೇಹಿತರು ಶೋಚನೀಯವಾಗಿ ಕಾಣುತ್ತಿದ್ದಾರೆ. ಏನು ಆಯಿತು?” ಎಂದು ವಿದೂಷಕನನ್ನು ಕೇಳುತ್ತಾನೆ.

ಆಗ ವಿದೂಷಕ ಅವನ ಕಡೆಗೆ ನಗೆ ಬೀರುತ್ತಾ  “ಮೊನ್ನೆ ದಿನ ನೀನು ಬಂದಾಗ ನಾವು ಚುನಾವಣಾ ಪ್ರಚಾರ ಮಾಡುತ್ತಿದ್ದೆವು. ಇವತ್ತು ನೀನು ನಮಗೆ ಓಟ್ ಮಾಡಿದೆ ಅಷ್ಟೇ” ಎಂದರು.

ನೀವೂ ಮೋಸಹೋಗಬೇಡಿ 2019ರ ಚುನಾವಣೆಯಲ್ಲಿ ಬುದ್ಧಿವಂತಿಕೆಯಿಂದ ಓಟ್ ಮಾಡಿ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...