Homeಅಂಕಣಗಳುಸ್ವಾತಂತ್ರ್ಯ ಸಂಗ್ರಾಮ ಮತ್ತು ಭಾರತದ ಮುಸ್ಲಿಂ ವೀರರು

ಸ್ವಾತಂತ್ರ್ಯ ಸಂಗ್ರಾಮ ಮತ್ತು ಭಾರತದ ಮುಸ್ಲಿಂ ವೀರರು

- Advertisement -
- Advertisement -

ಭಾರತದ ಸ್ವಾತಂತ್ರö್ಯ ಸಂಗ್ರಾಮದ ಚರಿತ್ರೆಯಲ್ಲಿ ಬ್ರಿಟಿಷರ ವಿರುದ್ಧ ತೊಡೆತಟ್ಟಿ ನಿಂತು ಬಡಿದಾಡಿದ ವೀರಕಲಿಗಳ ಬಗ್ಗೆ ನಾವೆಲ್ಲರೂ ಪಠ್ಯಪುಸ್ತಕಗಳಲ್ಲಿ ಓದಿದ್ದೆÃವೆ. ಗಾಂಧಿ, ನೆಹರೂ, ನೇತಾಜಿ ಇನ್ನಿತ್ಯಾದಿ ಜನಪ್ರಿಯ ಸ್ವಾತಂತ್ರö್ಯ ಹೋರಾಟಗಾರರ ಬಗ್ಗೆ ನಮಗೆಲ್ಲರಿಗೂ ಗೊತ್ತು. ಆದರೆ ಬ್ರಿಟಿಶರ ವಿರುದ್ಧದ ಹೋರಾಟಗಳಲ್ಲಿ ಭಾಗವಹಿಸಿಯೂ ನೇಪಥ್ಯಕ್ಕೆ ಸರಿಸಲ್ಪಟ್ಟ ಇದೇ ನೆಲದ ಮುಸ್ಲಿಂ ಹೋರಾಟಗಾರರ ಬಗ್ಗೆ ಭಾರತದ ಚರಿತ್ರಕಾರರು ಹೆಚ್ಚಾನೆಚ್ಚು ಬರೆದಿರುವುದು ದಾಖಲಿಸಿರುವುದು ತೀರಾ ಕಡಿಮೆ. ಜೊತೆಗೆ ಸಂಘ ಪರಿವಾರದ ಹಿನ್ನೆಲೆಯ ಪ್ರಕಟಣಾ ಸಂಸ್ಥೆಗಳು ಮುನ್ನೆಲೆಗೆ ಬಂದು ಪ್ರಕಟಿಸಿದ ಇತಿಹಾಸದ ಪುಸ್ತಕಗಳಲ್ಲಿ ಸ್ವಾತಂತ್ರö್ಯ ಹೋರಾಟಗಾರರೆಂದರೆ ಹಿಂದೂ ಸಂಘಟನೆಗಳ ಜೊತೆಗೆ ಗುರುತಿಸಿಕೊಂಡವರೆಂದು ತಪ್ಪಾಗಿ ತಿರುಚಿದ್ದೂ ಮುಸ್ಲಿಂ ಹೋರಾಟಗಾರರು ಹಿನ್ನೆಲೆಗೆ ಸರಿಯಲು ಕಾರಣವಾಗಿದೆ. ಹೀಗೆ ಹಿನ್ನೆಲೆಗೆ ಒತ್ತಲ್ಪಟ್ಟ ಮುಸ್ಲಿಂ ಸ್ವಾತಂತ್ರö್ಯ ಹೋರಾಟಗಾರರು ಮತ್ತು ಅವರು ಸ್ವಾತಂತ್ರö್ಯ ಸಂಗ್ರಾಮಕ್ಕೆ ಕೊಟ್ಟ ಕೊಡುಗೆಗಳು ಕಡಿಮೆಯೇನಲ್ಲ.
ಬಂಗಾಲದ ಮುಸ್ಲಿಂ ಅರಸ ಸಿರಾಜ್ ಉದ್ ದೌಲನ 1757ರ ಪ್ಲಾಸಿ ಕದನದಿಂದ ಶುರುವಾಗುವ ಬ್ರಿಟಿಶರ ವಿರುದ್ಧದ ಬಂಡಾಯವು ನಂತರದ ಕಾಲಘಟ್ಟದಲ್ಲಿ ಹಲವು ಕವಲುಗಳಾಗಿ ಬ್ರಿಟಿಶರೊಡನೆ ನಡೆದ ಸಂಘರ್ಷಗಳಿಗೆ ಮುನ್ನುಡಿ ಬರೆಯುತ್ತದೆ. 1857ರಿಂದ 58ರವರೆಗೆ ದೆಹಲಿ ಪ್ರಾಂತ್ಯದಲ್ಲಿ ಬ್ರಿಟಿಶರೆದುರು ಬಂಡೆದ್ದ ‘ಅಸ್ಗರಿ ಬೇಗಂ’ ಎಂಬ ಮುಸ್ಲಿಂ ಮಹಿಳೆ ಬ್ರಿಟಿಶರ ವಿರುದ್ಧ ಸಾರಿದ ವೀರೋಚಿತÀ ಯುದ್ಧದಲ್ಲಿ ಜೀವತ್ಯಾಗ ಮಾಡುತ್ತಾಳೆ. ಸೆರೆಸಿಕ್ಕ ‘ಅಸ್ಗರಿ ಬೇಗಂ’ಳನ್ನು ಬ್ರಿಟಿಶರು ಜೀವಂತವಾಗಿ ಸುಟ್ಟು ಹಾಕುತ್ತಾರೆ. ಈ ಯುದ್ಧದಲ್ಲಿ 27 ಸಾವಿರಕ್ಕೂ ಹೆಚ್ಚು ಮುಸ್ಲಿಂ ಬಂಡಾಯಗಾರರನ್ನು ಬ್ರಿಟಿಶರ ಸೇನೆ ಕೊಲ್ಲುತ್ತದೆ.
1857ರಲ್ಲಿ ‘ದೆಹಲಿ ಅಖಬಾರ್’ ಪತ್ರಿಕೆಯಲ್ಲಿ ಬ್ರಿಟಿಶರ ದಬ್ಬಾಳಿಕೆಗಳ ಬಗ್ಗೆ ಬರೆಯುತ್ತ ಸ್ವಾತಂತ್ರö್ಯ ಹೋರಾಟಕ್ಕೆ ಪ್ರೊÃತ್ಸಾಹ ನೀಡುತ್ತಿದ್ದ ಆ ಪತ್ರಿಕೆಯ ಸಂಪಾದಕ ‘ಮಹಮ್ಮದ್ ಬಖಾರ್’ ಎಷ್ಟರಮಟ್ಟಿಗೆ ಬ್ರಿಟಿಶರ ನಿದ್ದೆಗೆಡಿಸಿದ್ದರೆಂದರೆ ಅವರನ್ನು ನಿವಾರಿಸಿಕೊಳ್ಳದೆ ದೆಹಲಿಯಲ್ಲಿ ಉಳಿಯುವುದೇ ಬ್ರಿಟಿಶರಿಗೆ ಅಸಾಧ್ಯವೆನ್ನುವಷ್ಟರ ಮಟ್ಟಿಗೆ. ಕೊನೆಗೆ ಮಹಮ್ಮದ್ ಬಖಾರ್‌ರನ್ನು ‘ಜನರಲ್ ಹಡ್ಸನ್’ ಎಂಬ ಬ್ರಿಟಿಶ್ ಅಧಿಕಾರಿ ಮರಾಮೋಸದಿಂದ ಬಂಧಿಸಿ ಜೈಲಿಗೆ ಹಾಕುತ್ತಾನೆ. ‘ಬಖಾರ್’ ಬಿಡುಗಡೆಗೆ ಸ್ವಾತಂತ್ರö್ಯ ಸೇನಾನಿಗಳಿಂದ ಆಗ್ರಹ ಜಾಸ್ತಿಯಾದಾಗ ‘ಹಡ್ಸನ್’ ಬಖಾರ್‌ರನ್ನು ಜೈಲಿನಲ್ಲೆÃ ಗುಂಡಿಟ್ಟು ಕೊಲ್ಲುತ್ತಾನೆ. ಬ್ರಿಟಿಶರಿಗೆ ತಮ್ಮ ಲೇಖನಿ, ಲೇಖನಗಳಿಂದಲೇ ಸಿಂಹಸ್ವಪ್ನವಾಗಿದ್ದ ಬಖಾರ್ ಹೀಗೆ ಹುತಾತ್ಮರಾಗುತ್ತಾರೆ. ಇದೇ ಸಮಯದಲ್ಲಿ ದೇಶಾದ್ಯಂತ ಮುಸ್ಲಿಮ್ ಅರಸೊತ್ತಿಗೆಗಳು ಮತ್ತು ಹೋರಾಟಗಾರರು ಬ್ರಿಟಿಶರ ವಿರುದ್ಧ ಬಂಡಾಯದ ಬಾವುಟ ಹಾರಿಸಿ ಬ್ರಿಟಿಶರ ಸೈನ್ಯ, ಆಯುಧಾಗಾರ, ಅಧಿಕಾರಿಗಳ ಮೇಲೆ ಒಂದು ಕಡೆಯಿಂದ ಧಾಳಿಯಿಡಲು ಶುರುವಿಡುತ್ತಾರೆ. ಬ್ರಿಟಿಶರು ಈ ಕಾಲಘಟ್ಟದ ಬಂಡಾಯವನ್ನು ಮುಸ್ಲಿಂದಂಗೆಯೆಂದೇ ಕರೆಯುತ್ತಾರೆ.
ಈ ಮುಸ್ಲಿಂದಾಳಿಗಳಿಂದ ತಪ್ಪಿಸಿಕೊಳ್ಳಲು ಮುಸ್ಲಿಮರನ್ನು ಭಾರತದ ಹಿಂದೂಗಳಿಂದ ಪ್ರತ್ಯೆÃಕಗೊಳಿಸುವುದೇ ಅತ್ಯುತ್ತಮ ಉಪಾಯವೆಂದೆಣಿಸಿದ ಬ್ರಿಟಿಶರು ಮುಸ್ಲಿಮರನ್ನು ಹಿಂದೂಗಳ ವಿರುದ್ಧ ಎತ್ತಿಕಟ್ಟುವ ಮೊದಲ ಪ್ರಯತ್ನಕ್ಕೆ ಕೈಯಿಡುತ್ತಾರೆ. ಬ್ರಿಟಿಶ್ ಅಧಿಕಾರಿ ‘ವಿಲಿಯಂ ಹಂಟ್’ ಈ ನಿಟ್ಟಿನಲ್ಲಿ ಮುಸ್ಲಿಮರು ಮತ್ತವರ ದೊರೆಗಳನ್ನು ಕೆಟ್ಟದಾಗಿ ಚಿತ್ರಿಸಿ ಅವರ ಆಳ್ವಿಕೆಯಲ್ಲಿ ಭಾರತ ನರಳುತ್ತಿತ್ತು, ಅವರಿಂದ ಮುಕ್ತಿ ಕೊಡಿಸಲು ಬ್ರಿಟನ್ನಿನಿಂದ ಬಂದ ದೈವಸಂಭೂತರಾಗಿ ಬ್ರಿಟಿಶರನ್ನು ಚಿತ್ರಿಸಿ ‘ಇಂಡಿಯನ್ ಮುಸ್ಲಿಮ್ಸ್’ ಎಂಬ ಪುಸ್ತಕವೊಂದನ್ನು ಬರೆದು ವಿಲಿಯಂ ಹಂಟ್ ಪ್ರಚಾರಕ್ಕೆ ಬಿಡುತ್ತಾನೆ. ಭಾರತದ ಹಿಂದೂಗಳು ಮತ್ತು ಮುಸ್ಲಿಮರ ನಡುವೆ ದೊಡ್ಡಮಟ್ಟದಲ್ಲಿ ಬಿತ್ತಿದ ಚಾರಿತ್ರಿಕ ಅಪನಂಬಿಕೆಯ ಬೀಜವಿದು. ಇದೇ ವಾದ ಮತ್ತು ವಾದಸರಣಿಯನ್ನು ಬ್ರಿಟಿಶರ ಆಸ್ಥಾನ ಗುಲಾಮರಾಗಿ ಕಂಗೊಳಿಸುತ್ತಿದ್ದ ಸಂಘಿಗಳು ದೊಡ್ಡಮಟ್ಟದಲ್ಲಿ ಜನರ ನಡುವೆ ಹರಿಯಬಿಟ್ಟರು. ಬ್ರಿಟಿಶರ ವಿರುದ್ಧ ಹೋರಾಡಿ ನಿಮ್ಮ ಶಕ್ತಿ ವೇಸ್ಟ್ ಮಾಡಿಕೊಳ್ಳಬೇಡಿ ಅದನ್ನು ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರು-ಕಮ್ಯುನಿಸ್ಟರ ವಿರುದ್ಧ ಹೋರಾಡಲು ಬಳಸಿ ಎಂದು ಬ್ರಿಟಿಶರ ಆಸ್ಥಾನ ಗುಲಾಮರಾಗಿದ್ದ ಸಂಘಿಗಳು ಕರೆಕೊಟ್ಟರು. ಸ್ವಾತಂತ್ರö್ಯ ಹೋರಾಟದೊಳಗೂ ಧರ್ಮದ ಆಧಾರದಲ್ಲಿ ಎರಡು ಗುಂಪಾಗಿ ಒಡೆಯುವಲ್ಲಿ ಬ್ರಿಟಿಶ್ ಮತ್ತವರ ಗುಲಾಮರ ಪಡೆ ಯಶಸ್ವಿಯಾಯಿತು.
ಇವತ್ತು ಇದೇ ಸಂಘಿ ಗುಲಾಮರ ಪಡೆಯು ಹೆಮ್ಮೆಯಿಂದ ಜಪಿಸುವ ರಾಷ್ಟಿçÃಯತೆಯ ದ್ಯೊÃತಕಗಳಾದ ಘೋಷಣೆಗಳನ್ನೂ ಸಹ ಹುಟ್ಟು ಹಾಕಿದ್ದು ಮತ್ತು ಸ್ವಾತಂತ್ರö್ಯ ಹೋರಾಟಗಾರರ ನಡುವೆ ಅದನ್ನು ಜನಪ್ರಿಯಗೊಳಿಸಿದ್ದು ಮುಸ್ಲಿಮರು ಎಂಬುದಕ್ಕೆ ಇತಿಹಾಸದಲ್ಲೆà ಹಲವಾರು ಸಾಕ್ಷಿಗಳಿವೆ. ‘ಜೈ ಹಿಂದ್’ ಈ ಘೋಷಣೆಯಿಲ್ಲದೆ ಅಕ್ಷರಶಃ ಯಾವ ಭಾಷಣವೂ ಮುಕ್ತಾಯವಾಗುವುದಿಲ್ಲ. ಈ ಜೈಹಿಂದ್ ಘೋಷಣೆಯನ್ನು ದೇಶಕ್ಕೆ ಕೊಟ್ಟಿದ್ದು ನೇತಾಜಿ ಸುಭಾಶ್ ಚಂದ್ರ ಬೋಸ್ ಎಂದೇ ಮುಕ್ಕಾಲುಪಾಲು ಭಾರತೀಯರು ನಂಬಿದ್ದಾರೆ. ಆದರೆ ಸತ್ಯ ವಿಷಯ ಬೇರೆಯದೇ ಇದೆ. ಜೈ ಹಿಂದ್ ಘೋಷಣೆಯನ್ನು ದೇಶದ ಸ್ವಾತಂತ್ರö್ಯ ಸಂಗ್ರಾಮಕ್ಕೆ ಕೊಡುಗೆಯಾಗಿ ಕೊಟ್ಟಿದ್ದು ನೇತಾಜಿಯ ‘ಆಜಾದ್ ಹಿಂದ್ ಫೌಜ್’ ಸೇನೆಯಲ್ಲಿದ್ದ ಓರ್ವ ಮುಸ್ಲಿಂ ವ್ಯಕ್ತಿ. ಇವರ ಹೆಸರು ‘ಅಬೀದ್ ಹಸನ್ ಸಫ್ರಾನಿ’. ಜರ್ಮನಿಯಲ್ಲಿ ಎಂಜಿನಿಯರಿಂಗ್ ಕಲಿಯುತ್ತಿದ್ದ ‘ಸಫ್ರಾನಿ’ ಭಾರತದ ಸ್ವಾತಂತ್ರö್ಯ ಹೋರಾಟಕ್ಕೆ ಜರ್ಮನ್ನರ ನೆರವು ಬಯಸಿ ಜರ್ಮನಿಯಲ್ಲಿದ್ದ ನೇತಾಜಿಯವರ ವಿಚಾರಧಾರೆಯನ್ನು ಒಪ್ಪಿ ಓದುತ್ತಿದ್ದ ಎಂಜಿನಿಯರಿಂಗ್ ಪದವಿಯನ್ನು ತ್ಯಜಿಸಿ ನೇತಾಜಿಯವರ ಸೆಕ್ರೆಟರಿ ಮತ್ತು ಭಾಷಾಂತರಕಾರರಾಗಿ ಭಾರತಕ್ಕೆ ಬರುತ್ತಾರೆ. ನಂತರ ನೇತಾಜಿಯವರ ಆಪ್ತವಲಯಕ್ಕೆ ಸೇರುವ ಸಫ್ರಾನಿ ನೇತಾಜಿಯವರ ಸೈನ್ಯದಲ್ಲಿ ಮೇಜರ್ ಆಗಿ ಸೇವೆ ಸಲ್ಲಿಸುತ್ತಾರೆ. ಈ ಸಂದರ್ಭದಲ್ಲಿ ಪರಸ್ಪರರನ್ನು ಗ್ರಿÃಟ್ ಮಾಡಲು ನೇತಾಜಿಯವÀರ ಸೈನ್ಯಕ್ಕೆ ‘ಜೈಹಿಂದ್’ ಘೋಷವನ್ನು ಪರಿಚಯಿಸುತ್ತಾರೆ. ಇದು ನಂತರ ಸ್ವಾತಂತ್ರö್ಯ ಹೋರಾಟಗಾರರ ನೆಚ್ಚಿನ ಘೋಷಪದವಾಗಿ ಜನಪ್ರಿಯಗೊಳ್ಳುತ್ತದೆ. ಇವತ್ತಿಗೂ ಜನಪ್ರಿಯವಾಗಿರುವ ಈ ‘ಜೈಹಿಂದ್’ ಘೋಷಪದದ ಮೂಲಕರ್ತೃ ‘ಅಬಿದ್ ಹಸನ್ ಸಫ್ರಾನಿ.’
‘ಸಾರೇ ಜಹಾಂಸೆ ಅಚ್ಛಾ’ ಯಾರಿಗೆ ತಾನೇ ಗೊತ್ತಿಲ್ಲ. ಧರ್ಮ, ಗಡಿ, ಪ್ರಾಂತ್ಯಗಳಾಚೆಗೂ ಪ್ರತಿಯೊಬ್ಬರೂ ಹಾಡುವ ಗುನುಗುವ ದೇಶಭಕ್ತಿ ಗೀತೆಯಿದು. ಈ ಗೀತೆಯನ್ನು ಬರೆದವರು ‘ಮಹಮ್ಮದ್ ಇಕ್ಬಾಲ್’ ಎಂಬ ಮುಸ್ಲಿಂ ಉರ್ದು ಕವಿ. ಅಲ್ಲಾಮ ಇಕ್ಬಾಲ್ ಎಂದೂ ಹೆಸರಾಗಿರುವ ಈ ಕವಿ ಪರ್ಶಿಯನ್ ಮತ್ತು ಉರ್ದು ಭಾಷೆಯಲ್ಲಿ ಕವಿತೆಗಳನ್ನು ಬರೆಯುತ್ತಿದ್ದವರು. ದೇಶ ವಿಭಜನೆಯಾದ ನಂತರ ಪಾಕಿಸ್ತಾನ ಸರ್ಕಾರವು ಇವರನ್ನು ರಾಷ್ಟಿçÃಯಕವಿ ಎಂದು ಕರೆಯಿತು. 1906ನೇ ಇಸವಿಯಲ್ಲಿ ಯೂನಿವರ್ಸಿಟಿ ಆಫ್ ಕೇಂಬ್ರಿಡ್ಜ್ನಲ್ಲಿ ಆರ್ಟ್ಸ್ ವ್ಯಾಸಂಗ ಮುಗಿಸಿದ್ದ ಇಕ್ಬಾಲರು ನಂತರ ಲುಡ್ವಿಗ್‌ನ ಮ್ಯಾಕ್ಸ್ ಮಿಲನ್ ವಿವಿಯಲ್ಲಿ ಡಾಕ್ಟರ್ ಆಫ್ ಫಿಲಾಸಫಿ ವ್ಯಾಸಂಗ ಮಾಡಿದವರು. ವ್ಯಾಸಂಗ ಮುಗಿದ ನಂತರ ಭಾರತಕ್ಕೆ ಬಂದ ಇಕ್ಬಾಲ್ ಸಾಗರೋಪಾದಿಯಲ್ಲಿ ನಡೆಯುತ್ತಿದ್ದ ಸ್ವಾತಂತ್ರö್ಯ ಹೋರಾಟವನ್ನು ಉತ್ತೆÃಜಿಸುವ ಹಲವಾರು ಗೀತೆಗಳನ್ನು ಬರೆದು ಜನರ ನಡುವೆ ಜನಪ್ರಿಯಗೊಳಿಸಿದರು. ಅವುಗಳಲ್ಲಿ ಮುಖ್ಯವಾದ ಕವಿತೆಯೇ ‘ಸಾರೇ ಜಹಾಂಸೆ ಅಚ್ಛ, ಹಿಂದೂಸ್ಥಾನ್ ಹಮಾರ’ ಕವಿತೆ.
ಇವರಷ್ಟೆÃ ಅಲ್ಲದೆ ತಾವು ಬದುಕಿದ್ದ 95 ವರ್ಷಗಳಲ್ಲಿ 45 ವರ್ಷ ಬ್ರಿಟಿಶರ ಜೈಲುಗಳಲ್ಲೆÃ ಸೆರೆಯಾಳಾಗಿ ಕಳೆದ ಖಾನ್ ಅಬ್ದುಲ್ ಗಫಾರ್ ಖಾನ್, ಸ್ವಾತಂತ್ರö್ಯ ಹೋರಾಟದ ಹಣಕಾಸಿನ ನೆರವಿಗೆಂದು ಗಾಂಧಿಗೆ ತಮಗೆ ಎಷ್ಟು ಹಣದ ಅವಶ್ಯಕತೆಯಿದೆಯೋ ಅಷ್ಟು ಹಣವನ್ನು ಬರೆದುಕೊಳ್ಳಿ ಎಂದು ಬ್ಲಾಂಕ್ ಚೆಕ್ ಕೊಟ್ಟಿದ್ದ ಅಂದಿನ ಬಾಂಬೆಯ ಉದ್ಯಮಿ ಮತ್ತು ಕೋಟ್ಯಧಿಪತಿ ಉಮರ್ ಸುಭಾನಿ, ಹಲವಾರು ಸ್ವಾತಂತ್ರö್ಯ ಹೋರಾಟದ ಗೀತೆಗಳನ್ನು ಬರೆದ ಮೌಲಾನ ಹಸರತ್ ಮೊಹಾನಿ, ಮಜ್ನು ಷಾ ಫಕೀರ್ ನೇತೃತ್ವದಲ್ಲಿ ‘ಫಕೀರ್-ಸನ್ಯಾಸಿ ದಂಗೆ’ಯ ಮೂಲಕ ಬ್ರಿಟಿಶರ ವಿರುದ್ದ ಹೋರಾಡಿದ ಬೆಂಗಾಲಿ ಫಕೀರರು, 1921ರಲ್ಲಿ ಇಂಕ್ವಿಲಾಬ್ ಜಿಂದಾಬಾದ್ ಘೋಷಣೆ ಕೊಟ್ಟ ‘ಹಸ್ರತ್ ಮೊಹಾನಿ’, ಬ್ರಿಟಿಶರೇ ಭಾರತ ಬಿಟ್ಟು ತೊಲಗಿ ಘೋಷಣೆ ಪರಿಚಯಿಸಿದ ‘ಯೂಸುಫ್ ಮೆಹರ್ ಅಲಿ’, ಹೀಗೆ ನೂರಾರು-ಸಾವಿರಾರು ಹೆಸರುಗಳನ್ನು ಭಾರತ ಸ್ವಾತಂತ್ರö್ಯ ಸಂಗ್ರಾಮದಲ್ಲಿ ನಿಂತು ಬಡಿದಾಡಿದವರ ಹೆಸರುಗಳನ್ನು ಉಲ್ಲೆÃಖಿಸಬಹುದು. ಈ ಎಲ್ಲ ಮುಸ್ಲಿಂ ಹೋರಾಟಗಾರರ ವೀರೋಚಿತ ಹೋರಾಟ ಮತ್ತು ಅವರು ನೀಡಿದ ಸಾಹಿತ್ಯಿಕ ಕೊಡುಗೆಗಾಗಿ ನಾವು ಇವರೆಲ್ಲರನ್ನೂ ನೆನೆಯಲೇಬೇಕು.

– ಪರಿಮಳಾ ವಾರಿಯರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...