Homeಅಂಕಣಗಳುಸ್ವಾತಂತ್ರ್ಯ ಸಂಗ್ರಾಮ ಮತ್ತು ಭಾರತದ ಮುಸ್ಲಿಂ ವೀರರು

ಸ್ವಾತಂತ್ರ್ಯ ಸಂಗ್ರಾಮ ಮತ್ತು ಭಾರತದ ಮುಸ್ಲಿಂ ವೀರರು

- Advertisement -
- Advertisement -

ಭಾರತದ ಸ್ವಾತಂತ್ರö್ಯ ಸಂಗ್ರಾಮದ ಚರಿತ್ರೆಯಲ್ಲಿ ಬ್ರಿಟಿಷರ ವಿರುದ್ಧ ತೊಡೆತಟ್ಟಿ ನಿಂತು ಬಡಿದಾಡಿದ ವೀರಕಲಿಗಳ ಬಗ್ಗೆ ನಾವೆಲ್ಲರೂ ಪಠ್ಯಪುಸ್ತಕಗಳಲ್ಲಿ ಓದಿದ್ದೆÃವೆ. ಗಾಂಧಿ, ನೆಹರೂ, ನೇತಾಜಿ ಇನ್ನಿತ್ಯಾದಿ ಜನಪ್ರಿಯ ಸ್ವಾತಂತ್ರö್ಯ ಹೋರಾಟಗಾರರ ಬಗ್ಗೆ ನಮಗೆಲ್ಲರಿಗೂ ಗೊತ್ತು. ಆದರೆ ಬ್ರಿಟಿಶರ ವಿರುದ್ಧದ ಹೋರಾಟಗಳಲ್ಲಿ ಭಾಗವಹಿಸಿಯೂ ನೇಪಥ್ಯಕ್ಕೆ ಸರಿಸಲ್ಪಟ್ಟ ಇದೇ ನೆಲದ ಮುಸ್ಲಿಂ ಹೋರಾಟಗಾರರ ಬಗ್ಗೆ ಭಾರತದ ಚರಿತ್ರಕಾರರು ಹೆಚ್ಚಾನೆಚ್ಚು ಬರೆದಿರುವುದು ದಾಖಲಿಸಿರುವುದು ತೀರಾ ಕಡಿಮೆ. ಜೊತೆಗೆ ಸಂಘ ಪರಿವಾರದ ಹಿನ್ನೆಲೆಯ ಪ್ರಕಟಣಾ ಸಂಸ್ಥೆಗಳು ಮುನ್ನೆಲೆಗೆ ಬಂದು ಪ್ರಕಟಿಸಿದ ಇತಿಹಾಸದ ಪುಸ್ತಕಗಳಲ್ಲಿ ಸ್ವಾತಂತ್ರö್ಯ ಹೋರಾಟಗಾರರೆಂದರೆ ಹಿಂದೂ ಸಂಘಟನೆಗಳ ಜೊತೆಗೆ ಗುರುತಿಸಿಕೊಂಡವರೆಂದು ತಪ್ಪಾಗಿ ತಿರುಚಿದ್ದೂ ಮುಸ್ಲಿಂ ಹೋರಾಟಗಾರರು ಹಿನ್ನೆಲೆಗೆ ಸರಿಯಲು ಕಾರಣವಾಗಿದೆ. ಹೀಗೆ ಹಿನ್ನೆಲೆಗೆ ಒತ್ತಲ್ಪಟ್ಟ ಮುಸ್ಲಿಂ ಸ್ವಾತಂತ್ರö್ಯ ಹೋರಾಟಗಾರರು ಮತ್ತು ಅವರು ಸ್ವಾತಂತ್ರö್ಯ ಸಂಗ್ರಾಮಕ್ಕೆ ಕೊಟ್ಟ ಕೊಡುಗೆಗಳು ಕಡಿಮೆಯೇನಲ್ಲ.
ಬಂಗಾಲದ ಮುಸ್ಲಿಂ ಅರಸ ಸಿರಾಜ್ ಉದ್ ದೌಲನ 1757ರ ಪ್ಲಾಸಿ ಕದನದಿಂದ ಶುರುವಾಗುವ ಬ್ರಿಟಿಶರ ವಿರುದ್ಧದ ಬಂಡಾಯವು ನಂತರದ ಕಾಲಘಟ್ಟದಲ್ಲಿ ಹಲವು ಕವಲುಗಳಾಗಿ ಬ್ರಿಟಿಶರೊಡನೆ ನಡೆದ ಸಂಘರ್ಷಗಳಿಗೆ ಮುನ್ನುಡಿ ಬರೆಯುತ್ತದೆ. 1857ರಿಂದ 58ರವರೆಗೆ ದೆಹಲಿ ಪ್ರಾಂತ್ಯದಲ್ಲಿ ಬ್ರಿಟಿಶರೆದುರು ಬಂಡೆದ್ದ ‘ಅಸ್ಗರಿ ಬೇಗಂ’ ಎಂಬ ಮುಸ್ಲಿಂ ಮಹಿಳೆ ಬ್ರಿಟಿಶರ ವಿರುದ್ಧ ಸಾರಿದ ವೀರೋಚಿತÀ ಯುದ್ಧದಲ್ಲಿ ಜೀವತ್ಯಾಗ ಮಾಡುತ್ತಾಳೆ. ಸೆರೆಸಿಕ್ಕ ‘ಅಸ್ಗರಿ ಬೇಗಂ’ಳನ್ನು ಬ್ರಿಟಿಶರು ಜೀವಂತವಾಗಿ ಸುಟ್ಟು ಹಾಕುತ್ತಾರೆ. ಈ ಯುದ್ಧದಲ್ಲಿ 27 ಸಾವಿರಕ್ಕೂ ಹೆಚ್ಚು ಮುಸ್ಲಿಂ ಬಂಡಾಯಗಾರರನ್ನು ಬ್ರಿಟಿಶರ ಸೇನೆ ಕೊಲ್ಲುತ್ತದೆ.
1857ರಲ್ಲಿ ‘ದೆಹಲಿ ಅಖಬಾರ್’ ಪತ್ರಿಕೆಯಲ್ಲಿ ಬ್ರಿಟಿಶರ ದಬ್ಬಾಳಿಕೆಗಳ ಬಗ್ಗೆ ಬರೆಯುತ್ತ ಸ್ವಾತಂತ್ರö್ಯ ಹೋರಾಟಕ್ಕೆ ಪ್ರೊÃತ್ಸಾಹ ನೀಡುತ್ತಿದ್ದ ಆ ಪತ್ರಿಕೆಯ ಸಂಪಾದಕ ‘ಮಹಮ್ಮದ್ ಬಖಾರ್’ ಎಷ್ಟರಮಟ್ಟಿಗೆ ಬ್ರಿಟಿಶರ ನಿದ್ದೆಗೆಡಿಸಿದ್ದರೆಂದರೆ ಅವರನ್ನು ನಿವಾರಿಸಿಕೊಳ್ಳದೆ ದೆಹಲಿಯಲ್ಲಿ ಉಳಿಯುವುದೇ ಬ್ರಿಟಿಶರಿಗೆ ಅಸಾಧ್ಯವೆನ್ನುವಷ್ಟರ ಮಟ್ಟಿಗೆ. ಕೊನೆಗೆ ಮಹಮ್ಮದ್ ಬಖಾರ್‌ರನ್ನು ‘ಜನರಲ್ ಹಡ್ಸನ್’ ಎಂಬ ಬ್ರಿಟಿಶ್ ಅಧಿಕಾರಿ ಮರಾಮೋಸದಿಂದ ಬಂಧಿಸಿ ಜೈಲಿಗೆ ಹಾಕುತ್ತಾನೆ. ‘ಬಖಾರ್’ ಬಿಡುಗಡೆಗೆ ಸ್ವಾತಂತ್ರö್ಯ ಸೇನಾನಿಗಳಿಂದ ಆಗ್ರಹ ಜಾಸ್ತಿಯಾದಾಗ ‘ಹಡ್ಸನ್’ ಬಖಾರ್‌ರನ್ನು ಜೈಲಿನಲ್ಲೆÃ ಗುಂಡಿಟ್ಟು ಕೊಲ್ಲುತ್ತಾನೆ. ಬ್ರಿಟಿಶರಿಗೆ ತಮ್ಮ ಲೇಖನಿ, ಲೇಖನಗಳಿಂದಲೇ ಸಿಂಹಸ್ವಪ್ನವಾಗಿದ್ದ ಬಖಾರ್ ಹೀಗೆ ಹುತಾತ್ಮರಾಗುತ್ತಾರೆ. ಇದೇ ಸಮಯದಲ್ಲಿ ದೇಶಾದ್ಯಂತ ಮುಸ್ಲಿಮ್ ಅರಸೊತ್ತಿಗೆಗಳು ಮತ್ತು ಹೋರಾಟಗಾರರು ಬ್ರಿಟಿಶರ ವಿರುದ್ಧ ಬಂಡಾಯದ ಬಾವುಟ ಹಾರಿಸಿ ಬ್ರಿಟಿಶರ ಸೈನ್ಯ, ಆಯುಧಾಗಾರ, ಅಧಿಕಾರಿಗಳ ಮೇಲೆ ಒಂದು ಕಡೆಯಿಂದ ಧಾಳಿಯಿಡಲು ಶುರುವಿಡುತ್ತಾರೆ. ಬ್ರಿಟಿಶರು ಈ ಕಾಲಘಟ್ಟದ ಬಂಡಾಯವನ್ನು ಮುಸ್ಲಿಂದಂಗೆಯೆಂದೇ ಕರೆಯುತ್ತಾರೆ.
ಈ ಮುಸ್ಲಿಂದಾಳಿಗಳಿಂದ ತಪ್ಪಿಸಿಕೊಳ್ಳಲು ಮುಸ್ಲಿಮರನ್ನು ಭಾರತದ ಹಿಂದೂಗಳಿಂದ ಪ್ರತ್ಯೆÃಕಗೊಳಿಸುವುದೇ ಅತ್ಯುತ್ತಮ ಉಪಾಯವೆಂದೆಣಿಸಿದ ಬ್ರಿಟಿಶರು ಮುಸ್ಲಿಮರನ್ನು ಹಿಂದೂಗಳ ವಿರುದ್ಧ ಎತ್ತಿಕಟ್ಟುವ ಮೊದಲ ಪ್ರಯತ್ನಕ್ಕೆ ಕೈಯಿಡುತ್ತಾರೆ. ಬ್ರಿಟಿಶ್ ಅಧಿಕಾರಿ ‘ವಿಲಿಯಂ ಹಂಟ್’ ಈ ನಿಟ್ಟಿನಲ್ಲಿ ಮುಸ್ಲಿಮರು ಮತ್ತವರ ದೊರೆಗಳನ್ನು ಕೆಟ್ಟದಾಗಿ ಚಿತ್ರಿಸಿ ಅವರ ಆಳ್ವಿಕೆಯಲ್ಲಿ ಭಾರತ ನರಳುತ್ತಿತ್ತು, ಅವರಿಂದ ಮುಕ್ತಿ ಕೊಡಿಸಲು ಬ್ರಿಟನ್ನಿನಿಂದ ಬಂದ ದೈವಸಂಭೂತರಾಗಿ ಬ್ರಿಟಿಶರನ್ನು ಚಿತ್ರಿಸಿ ‘ಇಂಡಿಯನ್ ಮುಸ್ಲಿಮ್ಸ್’ ಎಂಬ ಪುಸ್ತಕವೊಂದನ್ನು ಬರೆದು ವಿಲಿಯಂ ಹಂಟ್ ಪ್ರಚಾರಕ್ಕೆ ಬಿಡುತ್ತಾನೆ. ಭಾರತದ ಹಿಂದೂಗಳು ಮತ್ತು ಮುಸ್ಲಿಮರ ನಡುವೆ ದೊಡ್ಡಮಟ್ಟದಲ್ಲಿ ಬಿತ್ತಿದ ಚಾರಿತ್ರಿಕ ಅಪನಂಬಿಕೆಯ ಬೀಜವಿದು. ಇದೇ ವಾದ ಮತ್ತು ವಾದಸರಣಿಯನ್ನು ಬ್ರಿಟಿಶರ ಆಸ್ಥಾನ ಗುಲಾಮರಾಗಿ ಕಂಗೊಳಿಸುತ್ತಿದ್ದ ಸಂಘಿಗಳು ದೊಡ್ಡಮಟ್ಟದಲ್ಲಿ ಜನರ ನಡುವೆ ಹರಿಯಬಿಟ್ಟರು. ಬ್ರಿಟಿಶರ ವಿರುದ್ಧ ಹೋರಾಡಿ ನಿಮ್ಮ ಶಕ್ತಿ ವೇಸ್ಟ್ ಮಾಡಿಕೊಳ್ಳಬೇಡಿ ಅದನ್ನು ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರು-ಕಮ್ಯುನಿಸ್ಟರ ವಿರುದ್ಧ ಹೋರಾಡಲು ಬಳಸಿ ಎಂದು ಬ್ರಿಟಿಶರ ಆಸ್ಥಾನ ಗುಲಾಮರಾಗಿದ್ದ ಸಂಘಿಗಳು ಕರೆಕೊಟ್ಟರು. ಸ್ವಾತಂತ್ರö್ಯ ಹೋರಾಟದೊಳಗೂ ಧರ್ಮದ ಆಧಾರದಲ್ಲಿ ಎರಡು ಗುಂಪಾಗಿ ಒಡೆಯುವಲ್ಲಿ ಬ್ರಿಟಿಶ್ ಮತ್ತವರ ಗುಲಾಮರ ಪಡೆ ಯಶಸ್ವಿಯಾಯಿತು.
ಇವತ್ತು ಇದೇ ಸಂಘಿ ಗುಲಾಮರ ಪಡೆಯು ಹೆಮ್ಮೆಯಿಂದ ಜಪಿಸುವ ರಾಷ್ಟಿçÃಯತೆಯ ದ್ಯೊÃತಕಗಳಾದ ಘೋಷಣೆಗಳನ್ನೂ ಸಹ ಹುಟ್ಟು ಹಾಕಿದ್ದು ಮತ್ತು ಸ್ವಾತಂತ್ರö್ಯ ಹೋರಾಟಗಾರರ ನಡುವೆ ಅದನ್ನು ಜನಪ್ರಿಯಗೊಳಿಸಿದ್ದು ಮುಸ್ಲಿಮರು ಎಂಬುದಕ್ಕೆ ಇತಿಹಾಸದಲ್ಲೆà ಹಲವಾರು ಸಾಕ್ಷಿಗಳಿವೆ. ‘ಜೈ ಹಿಂದ್’ ಈ ಘೋಷಣೆಯಿಲ್ಲದೆ ಅಕ್ಷರಶಃ ಯಾವ ಭಾಷಣವೂ ಮುಕ್ತಾಯವಾಗುವುದಿಲ್ಲ. ಈ ಜೈಹಿಂದ್ ಘೋಷಣೆಯನ್ನು ದೇಶಕ್ಕೆ ಕೊಟ್ಟಿದ್ದು ನೇತಾಜಿ ಸುಭಾಶ್ ಚಂದ್ರ ಬೋಸ್ ಎಂದೇ ಮುಕ್ಕಾಲುಪಾಲು ಭಾರತೀಯರು ನಂಬಿದ್ದಾರೆ. ಆದರೆ ಸತ್ಯ ವಿಷಯ ಬೇರೆಯದೇ ಇದೆ. ಜೈ ಹಿಂದ್ ಘೋಷಣೆಯನ್ನು ದೇಶದ ಸ್ವಾತಂತ್ರö್ಯ ಸಂಗ್ರಾಮಕ್ಕೆ ಕೊಡುಗೆಯಾಗಿ ಕೊಟ್ಟಿದ್ದು ನೇತಾಜಿಯ ‘ಆಜಾದ್ ಹಿಂದ್ ಫೌಜ್’ ಸೇನೆಯಲ್ಲಿದ್ದ ಓರ್ವ ಮುಸ್ಲಿಂ ವ್ಯಕ್ತಿ. ಇವರ ಹೆಸರು ‘ಅಬೀದ್ ಹಸನ್ ಸಫ್ರಾನಿ’. ಜರ್ಮನಿಯಲ್ಲಿ ಎಂಜಿನಿಯರಿಂಗ್ ಕಲಿಯುತ್ತಿದ್ದ ‘ಸಫ್ರಾನಿ’ ಭಾರತದ ಸ್ವಾತಂತ್ರö್ಯ ಹೋರಾಟಕ್ಕೆ ಜರ್ಮನ್ನರ ನೆರವು ಬಯಸಿ ಜರ್ಮನಿಯಲ್ಲಿದ್ದ ನೇತಾಜಿಯವರ ವಿಚಾರಧಾರೆಯನ್ನು ಒಪ್ಪಿ ಓದುತ್ತಿದ್ದ ಎಂಜಿನಿಯರಿಂಗ್ ಪದವಿಯನ್ನು ತ್ಯಜಿಸಿ ನೇತಾಜಿಯವರ ಸೆಕ್ರೆಟರಿ ಮತ್ತು ಭಾಷಾಂತರಕಾರರಾಗಿ ಭಾರತಕ್ಕೆ ಬರುತ್ತಾರೆ. ನಂತರ ನೇತಾಜಿಯವರ ಆಪ್ತವಲಯಕ್ಕೆ ಸೇರುವ ಸಫ್ರಾನಿ ನೇತಾಜಿಯವರ ಸೈನ್ಯದಲ್ಲಿ ಮೇಜರ್ ಆಗಿ ಸೇವೆ ಸಲ್ಲಿಸುತ್ತಾರೆ. ಈ ಸಂದರ್ಭದಲ್ಲಿ ಪರಸ್ಪರರನ್ನು ಗ್ರಿÃಟ್ ಮಾಡಲು ನೇತಾಜಿಯವÀರ ಸೈನ್ಯಕ್ಕೆ ‘ಜೈಹಿಂದ್’ ಘೋಷವನ್ನು ಪರಿಚಯಿಸುತ್ತಾರೆ. ಇದು ನಂತರ ಸ್ವಾತಂತ್ರö್ಯ ಹೋರಾಟಗಾರರ ನೆಚ್ಚಿನ ಘೋಷಪದವಾಗಿ ಜನಪ್ರಿಯಗೊಳ್ಳುತ್ತದೆ. ಇವತ್ತಿಗೂ ಜನಪ್ರಿಯವಾಗಿರುವ ಈ ‘ಜೈಹಿಂದ್’ ಘೋಷಪದದ ಮೂಲಕರ್ತೃ ‘ಅಬಿದ್ ಹಸನ್ ಸಫ್ರಾನಿ.’
‘ಸಾರೇ ಜಹಾಂಸೆ ಅಚ್ಛಾ’ ಯಾರಿಗೆ ತಾನೇ ಗೊತ್ತಿಲ್ಲ. ಧರ್ಮ, ಗಡಿ, ಪ್ರಾಂತ್ಯಗಳಾಚೆಗೂ ಪ್ರತಿಯೊಬ್ಬರೂ ಹಾಡುವ ಗುನುಗುವ ದೇಶಭಕ್ತಿ ಗೀತೆಯಿದು. ಈ ಗೀತೆಯನ್ನು ಬರೆದವರು ‘ಮಹಮ್ಮದ್ ಇಕ್ಬಾಲ್’ ಎಂಬ ಮುಸ್ಲಿಂ ಉರ್ದು ಕವಿ. ಅಲ್ಲಾಮ ಇಕ್ಬಾಲ್ ಎಂದೂ ಹೆಸರಾಗಿರುವ ಈ ಕವಿ ಪರ್ಶಿಯನ್ ಮತ್ತು ಉರ್ದು ಭಾಷೆಯಲ್ಲಿ ಕವಿತೆಗಳನ್ನು ಬರೆಯುತ್ತಿದ್ದವರು. ದೇಶ ವಿಭಜನೆಯಾದ ನಂತರ ಪಾಕಿಸ್ತಾನ ಸರ್ಕಾರವು ಇವರನ್ನು ರಾಷ್ಟಿçÃಯಕವಿ ಎಂದು ಕರೆಯಿತು. 1906ನೇ ಇಸವಿಯಲ್ಲಿ ಯೂನಿವರ್ಸಿಟಿ ಆಫ್ ಕೇಂಬ್ರಿಡ್ಜ್ನಲ್ಲಿ ಆರ್ಟ್ಸ್ ವ್ಯಾಸಂಗ ಮುಗಿಸಿದ್ದ ಇಕ್ಬಾಲರು ನಂತರ ಲುಡ್ವಿಗ್‌ನ ಮ್ಯಾಕ್ಸ್ ಮಿಲನ್ ವಿವಿಯಲ್ಲಿ ಡಾಕ್ಟರ್ ಆಫ್ ಫಿಲಾಸಫಿ ವ್ಯಾಸಂಗ ಮಾಡಿದವರು. ವ್ಯಾಸಂಗ ಮುಗಿದ ನಂತರ ಭಾರತಕ್ಕೆ ಬಂದ ಇಕ್ಬಾಲ್ ಸಾಗರೋಪಾದಿಯಲ್ಲಿ ನಡೆಯುತ್ತಿದ್ದ ಸ್ವಾತಂತ್ರö್ಯ ಹೋರಾಟವನ್ನು ಉತ್ತೆÃಜಿಸುವ ಹಲವಾರು ಗೀತೆಗಳನ್ನು ಬರೆದು ಜನರ ನಡುವೆ ಜನಪ್ರಿಯಗೊಳಿಸಿದರು. ಅವುಗಳಲ್ಲಿ ಮುಖ್ಯವಾದ ಕವಿತೆಯೇ ‘ಸಾರೇ ಜಹಾಂಸೆ ಅಚ್ಛ, ಹಿಂದೂಸ್ಥಾನ್ ಹಮಾರ’ ಕವಿತೆ.
ಇವರಷ್ಟೆÃ ಅಲ್ಲದೆ ತಾವು ಬದುಕಿದ್ದ 95 ವರ್ಷಗಳಲ್ಲಿ 45 ವರ್ಷ ಬ್ರಿಟಿಶರ ಜೈಲುಗಳಲ್ಲೆÃ ಸೆರೆಯಾಳಾಗಿ ಕಳೆದ ಖಾನ್ ಅಬ್ದುಲ್ ಗಫಾರ್ ಖಾನ್, ಸ್ವಾತಂತ್ರö್ಯ ಹೋರಾಟದ ಹಣಕಾಸಿನ ನೆರವಿಗೆಂದು ಗಾಂಧಿಗೆ ತಮಗೆ ಎಷ್ಟು ಹಣದ ಅವಶ್ಯಕತೆಯಿದೆಯೋ ಅಷ್ಟು ಹಣವನ್ನು ಬರೆದುಕೊಳ್ಳಿ ಎಂದು ಬ್ಲಾಂಕ್ ಚೆಕ್ ಕೊಟ್ಟಿದ್ದ ಅಂದಿನ ಬಾಂಬೆಯ ಉದ್ಯಮಿ ಮತ್ತು ಕೋಟ್ಯಧಿಪತಿ ಉಮರ್ ಸುಭಾನಿ, ಹಲವಾರು ಸ್ವಾತಂತ್ರö್ಯ ಹೋರಾಟದ ಗೀತೆಗಳನ್ನು ಬರೆದ ಮೌಲಾನ ಹಸರತ್ ಮೊಹಾನಿ, ಮಜ್ನು ಷಾ ಫಕೀರ್ ನೇತೃತ್ವದಲ್ಲಿ ‘ಫಕೀರ್-ಸನ್ಯಾಸಿ ದಂಗೆ’ಯ ಮೂಲಕ ಬ್ರಿಟಿಶರ ವಿರುದ್ದ ಹೋರಾಡಿದ ಬೆಂಗಾಲಿ ಫಕೀರರು, 1921ರಲ್ಲಿ ಇಂಕ್ವಿಲಾಬ್ ಜಿಂದಾಬಾದ್ ಘೋಷಣೆ ಕೊಟ್ಟ ‘ಹಸ್ರತ್ ಮೊಹಾನಿ’, ಬ್ರಿಟಿಶರೇ ಭಾರತ ಬಿಟ್ಟು ತೊಲಗಿ ಘೋಷಣೆ ಪರಿಚಯಿಸಿದ ‘ಯೂಸುಫ್ ಮೆಹರ್ ಅಲಿ’, ಹೀಗೆ ನೂರಾರು-ಸಾವಿರಾರು ಹೆಸರುಗಳನ್ನು ಭಾರತ ಸ್ವಾತಂತ್ರö್ಯ ಸಂಗ್ರಾಮದಲ್ಲಿ ನಿಂತು ಬಡಿದಾಡಿದವರ ಹೆಸರುಗಳನ್ನು ಉಲ್ಲೆÃಖಿಸಬಹುದು. ಈ ಎಲ್ಲ ಮುಸ್ಲಿಂ ಹೋರಾಟಗಾರರ ವೀರೋಚಿತ ಹೋರಾಟ ಮತ್ತು ಅವರು ನೀಡಿದ ಸಾಹಿತ್ಯಿಕ ಕೊಡುಗೆಗಾಗಿ ನಾವು ಇವರೆಲ್ಲರನ್ನೂ ನೆನೆಯಲೇಬೇಕು.

– ಪರಿಮಳಾ ವಾರಿಯರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಪೃಶ್ಯ ಅಲೆಮಾರಿ ಸಮುದಾಯಗಳನ್ನು ಪ್ರವರ್ಗ ಸಿಗೆ ಸೇರಿಸಿದ್ದನ್ನು ಕೋರ್ಟ್‌ನಲ್ಲಿ ಸಮರ್ಥಿಸಿಕೊಂಡ ರಾಜ್ಯ ಸರ್ಕಾರ

ಆಗಸ್ಟ್‌ 18 2025ರಂದು ರಾಜ್ಯ ಸರ್ಕಾರ ಒಳಮೀಸಲಾತಿ ವರ್ಗೀಕರಣ ಆದೇಶ ಹೊರಡಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟವು ಕರ್ನಾಟಕ ಹೈಕೋರ್ಟ್‌ನಲ್ಲಿ ರಿಟ್‌ ಅರ್ಜಿಯನ್ನು ದಾಖಲಿಸಿತ್ತು. ರಾಜ್ಯ ಸರ್ಕಾರ...

ಐದು ವರ್ಷಗಳಲ್ಲಿ ಸುಮಾರು ಒಂಬತ್ತು ಲಕ್ಷ ಜನರು ಪೌರತ್ವ ತ್ಯಜಿಸಿದ್ದಾರೆ: ಎಂಇಎ

ಕಳೆದ ಐದು ವರ್ಷಗಳಲ್ಲಿ ಸುಮಾರು ಒಂಬತ್ತು ಲಕ್ಷ ಜನರು ತಮ್ಮ ಭಾರತೀಯ ಪೌರತ್ವವನ್ನು ತ್ಯಜಿಸಿದ್ದಾರೆ. ಜಾಗತಿಕ ಚಲನಶೀಲತೆ ಹೆಚ್ಚಾದಂತೆ ಮತ್ತು ವೈಯಕ್ತಿಕ ಆಯ್ಕೆಗಳು ವಲಸೆ ಪ್ರವೃತ್ತಿಯನ್ನು ರೂಪಿಸುತ್ತಿರುವುದರಿಂದ ವಾರ್ಷಿಕವಾಗಿ ಸಂಖ್ಯೆಗಳು ಗಮನಾರ್ಹವಾಗಿ ಬದಲಾಗಿವೆ...

ನಟ ದಿಲೀಪ್ ಖುಲಾಸೆ: ನ್ಯಾಯಾಲಯದ ಕಲಾಪವನ್ನು ವಿರೂಪಗೊಳಿಸಬೇಡಿ ಎಂದು ಮಾಧ್ಯಮ ಮತ್ತು ವಕೀಲರಿಗೆ ಎಚ್ಚರಿಕೆ ನೀಡಿದ ನ್ಯಾಯಾದೀಶೆ ಹನಿ ವರ್ಗೀಸ್ 

2017 ರಲ್ಲಿ ದಕ್ಷಿಣ ಭಾರತದ ನಟಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಲಯಾಳಂ ನಟ ದಿಲೀಪ್ ಅವರನ್ನು ಖುಲಾಸೆಗೊಳಿಸಿದ ಎರ್ನಾಕುಲಂ ಪ್ರಧಾನ ಸೆಷನ್ಸ್ ನ್ಯಾಯಾಧೀಶೆ ಹನಿ ಎಂ ವರ್ಗೀಸ್, ತಮ್ಮ ತೀರ್ಪಿನ...

ರಾಜ್‌ಕೋಟ್‌ ಬಾಲಕಿ ಅತ್ಯಾಚಾರ ಪ್ರಕರಣ; ಆಕ್ರೋಶ ಹೊರಹಾಕಿದ ಶಾಸಕ ಜಿಗ್ನೇಶ್‌ ಮೇವಾನಿ; ಕಠಿಣ ಶಿಕ್ಷೆಗೆ ಆಗ್ರಹ

ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಏಳು ವರ್ಷದ ಬಾಲಕಿ ಅತ್ಯಾಚಾರ ಹಾಗೂ ಗಂಭೀರ ಹಲ್ಲೆ ಪ್ರಕರಣಕ್ಕೆ ಸಂಬಧಿಸಿದಂತೆ ಆಕ್ರೋಶ ಹೊರಹಾಕಿರುವ ಕಾಂಗ್ರೆಸ್ ಶಾಸಕ ಜಿಗ್ನೇಶ್‌ ಮೇವಾನಿ; ಆರೋಪಿಯನ್ನು ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಆಗ್ರಹಿಸಿದ್ದಾರೆ. ಘಟನೆ ಕುರಿತು...

ಯುವ ರೈತರನ್ನು ಮದುವೆಯಾಗುವ ಯುವತಿಯರಿಗೆ ₹5 ಲಕ್ಷ ಪ್ರೋತ್ಸಾಹಧನ ನೀಡಲು BJP ಕಾರ್ಯಕರ್ತರ ಮನವಿ

ಮಂಡ್ಯ:  ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ‘ಶಾದಿ ಭಾಗ್ಯ’ದಂತೆ ರೈತರನ್ನು ಮದುವೆಯಾಗುವ ಯುವತಿಯರಿಗೆ ಸರ್ಕಾರದ ವತಿಯಿಂದ ರೂ.5ಲಕ್ಷ ಪ್ರೋತ್ಸಾಹಧನ ನೀಡಬೇಕು ಎಂದು ಬಿಜೆಪಿ ಕಾರ್ಯಕರ್ತರು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಸಿ. ಶಿವಾನಂದಮೂರ್ತಿ ಅವರ ಮೂಲಕ...

ನಿವೃತ್ತಿ ನಿರ್ಧಾರ ಹಿಂತೆಗೆದುಕೊಂಡ ವಿನೇಶ್ ಫೋಗಟ್; ಲಾಸ್ ಏಂಜಲೀಸ್ ಒಲಿಂಪಿಕ್ಸ್‌ಗೆ ತಯಾರಿ

ಕುಸ್ತಿಪಟು ವಿನೇಶ್ ಫೋಗಟ್ ಸ್ಪರ್ಧಾತ್ಮಕ ಕ್ರೀಡೆಗೆ ಮರಳುವುದಾಗಿ ಘೋಷಿಸುವ ಮೂಲಕ ತಮ್ಮ ನಿವೃತ್ತಿ ನಿರ್ಧಾರವನ್ನು ಹಿಂತೆಗೆದುಕೊಂಡಿದ್ದಾರೆ. 2028 ರ ಲಾಸ್ ಏಂಜಲೀಸ್ ಒಲಿಂಪಿಕ್ಸ್ ಅನ್ನು ಗುರಿಯಾಗಿಸಿಕೊಂಡಿರುವುದಾಗಿ ತಿಳಿಸಿದ್ದಾರೆ. ಈ ಕುರಿತ ಹೇಳಿಕೆ ಬಿಡುಗಡೆ ಮಾಡಿರುವ...

ಗುಜರಾತ್‌ನ ವಲ್ಸಾದ್‌ನಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿದು ಐವರು ಕಾರ್ಮಿಕರಿಗೆ ಗಾಯ

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಔರಂಗ ನದಿಗೆ ನಿರ್ಮಾಣ ಹಂತದಲ್ಲಿರುವ ಸೇತುವೆಯ ಮೇಲಿನ ಗಿರ್ಡರ್ ಕುಸಿದಿದ್ದು, ಐವರು ಕಾರ್ಮಿಕರು ಗಾಯಗೊಂಡಿದ್ದಾರೆ.  ಹಳೆಯ ಸೇತುವೆಗೆ ಸಮಾನಾಂತರವಾಗಿ ಹೊಸ ಸೇತುವೆಯನ್ನು ನಿರ್ಮಿಸಲಾಗುತ್ತಿರುವ ಕೈಲಾಶ್ ರಸ್ತೆಯಲ್ಲಿ ಶುಕ್ರವಾರ ಬೆಳಿಗ್ಗೆ 8...

ಆಮದು ಸುಂಕ ಹೆಚ್ಚಿಸಿದ ಮೆಕ್ಸಿಕೊ: ಭಾರತದ ವಾಹನ-ಉಕ್ಕು ರಫ್ತಿನ ವೆಚ್ಚ ಹೆಚ್ಚಳ ಸಾಧ್ಯತೆ

ಸ್ಥಳೀಯ ಕೈಗಾರಿಕೆಗಳನ್ನು ರಕ್ಷಿಸುವ ಗುರಿಯ ಭಾಗವಾಗಿ, ಭಾರತ, ಚೀನಾ ಮತ್ತು ದಕ್ಷಿಣ ಕೊರಿಯಾ ಸೇರಿದಂತೆ ಏಷ್ಯಾದ ದೇಶಗಳಿಂದ ಆಮದು ಮಾಡಿಕೊಳ್ಳುವ ವಸ್ತುಗಳ ಮೇಲಿನ ಹೆಚ್ಚಿನ ಸುಂಕ ಹೆಚ್ಚಳ ನಿರ್ಧಾರವನ್ನು ಮೆಕ್ಸಿಕೋ ಅನುಮೋದಿಸಿದೆ. ಮೆಕ್ಸಿಕನ್...

Cognizant ಕಂಪನಿಗೆ 99 ಪೈಸೆಗೆ ಒಂದು ಎಕರೆ ಭೂಮಿ: ವಿಶಾಖಪಟ್ಟಣದಲ್ಲಿ ತಾತ್ಕಾಲಿಕ ಕಛೇರಿ ಉದ್ಘಾಟನೆ

ಕಳೆದ ಜೂನ್‌ ನಲ್ಲಿ ಸುದ್ದಿಗೆ ಗ್ರಾಸವಾಗಿದ್ದ ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿ Cognizant ಕಂಪನಿಯು 1582 ಕೋಟಿ ಹೂಡಿಕೆ ಮಾಡಿ 8 ಸಾವಿರ ಉದ್ಯೋಗ ಸೃಷ್ಠಿ ಮಾಡಲಾಗುವುದೆಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಸರ್ಕಾರ ಘೋಷಿಸಿತ್ತು....

ಅಲ್ಪಸಂಖ್ಯಾತ ಶಾಲೆಗಳಿಗೆ ಆರ್.ಟಿ.ಇ ಕಾಯ್ದೆಯಿಂದ ವಿನಾಯಿತಿ ತೀರ್ಪಿನ ವಿರುದ್ಧ ಅರ್ಜಿ; ಎನ್.ಜಿ.ಒಗೆ ದಂಡ ವಿಧಿಸಿದ ಸುಪ್ರೀಂ  

ಶಿಕ್ಷಣ ಹಕ್ಕು ಕಾಯ್ದೆಯ (ಆರ್‌ಟಿಇ) ನಿಬಂಧನೆಗಳಿಂದ ಅಲ್ಪಸಂಖ್ಯಾತ ಶಾಲೆಗಳಿಗೆ ವಿನಾಯಿತಿ ನೀಡಿದ್ದ, ತನ್ನ ಹಿಂದಿನ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ರಿಟ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತೀವ್ರವಾಗಿ ಖಂಡಿಸಿದೆ.  ಜಸ್ಟೀಸ್ ಬಿ.ವಿ. ನಾಗರತ್ನ ಮತ್ತು...