Homeಅಂಕಣಗಳುಸ್ವಾತಂತ್ರ್ಯ ಸಿಗಲು ನೆಹರು ಕೊಡುಗೆಯೇ ಇಲ್ಲವೇ ಮೋದೀಜಿ?

ಸ್ವಾತಂತ್ರ್ಯ ಸಿಗಲು ನೆಹರು ಕೊಡುಗೆಯೇ ಇಲ್ಲವೇ ಮೋದೀಜಿ?

- Advertisement -
- Advertisement -

ಮಿಥ್ಯ: ಸ್ವಾತಂತ್ರಯ ಸಿಗಲು ನೆಹರೂ ಕೊಡುಗೆ ಏನಿಲ್ಲ ಎಂದು ಪ್ರಧಾನಿ ಮೋದಿ ಸಂಸತ್ತಿನಲ್ಲಿ ಹೇಳಿದ್ದರು. ಬಿಜೆಪಿಯ ಐಟಿ ಸೆಲ್ ಕೂಡ ನೆಹರು ಕುರಿತು ಸಾಕಷ್ಟು ಫೇಕ್ ಸ್ಟೋರಿಗಳನ್ನು ಹರಡುತ್ತಲೇ ಬಂದಿದೆ.

ಸತ್ಯ: ಇವತ್ತು ಖರೀದಿಸಿದ ಮಾಧ್ಯಮಗಳ ಮೂಲಕ ಪ್ರಧಾನಿ ನರೇಂದ್ರ ಮೋದಿಯವರು, ಜವಾಹರಲಾಲ್ ನೆಹರೂ ಕುರಿತು ಏನೆಲ್ಲ ಸುಳ್ಳುಗಳನ್ನು ಹಬ್ಬಿಸಲು ಯತ್ನಿಸುತ್ತಿದ್ದರೂ, ನೆಹರೂ ಕೊಡುಗೆ ಈ ದೇಶಕ್ಕೆ ಅಪಾರ ಎಂಬುದನ್ನು ಅವರಿಂದ ಮುಚ್ಚಿಡಲಾಗುತ್ತಿಲ್ಲ. 1964ರಲ್ಲಿ ನೆಹರೂ ಮಡಿದಾಗ ‘ನ್ಯೂಯಾರ್ಕ್ ಟೈಮ್ಸ್’ ಪತ್ರಿಕೆಯು ‘ಆಧುನಿಕ ಭಾರತದ ನಿಮ್ರಾತೃ’ ಎಂದು ಬಣ್ಣಿಸುತ್ತದೆ. ‘ದಿ ಎಕನಾಮಿಸ್ಟ್’ ಪತ್ರಿಕೆಯು ‘ನೆಹರೂ ಇಲ್ಲದ ಜಗತ್ತು’ ಎಂಬ ಕವರ್ಸ್ಟೋರಿಯನ್ನು ಪ್ರಕಟಿಸುತ್ತದೆ. ಆ ಹೊತ್ತಿಗಾಗಲೇ ನೆಹರೂ ತೃತೀಯ ರಾಷ್ಟ್ರಗಳಲ್ಲಿ ಹೊಸ ಭರವಸೆ ಮೂಡಿಸಿದ್ದರು.

ಸಂಸತ್ತಿನಲ್ಲಿ ಇಂತಹ ನೆಹರೂ ಕುರಿತು ಮಾತನಾಡುವ ನಮ್ಮ ದಿ ಗ್ರೇಟ್ ಪ್ರಧಾನ ಮಂತ್ರಿಯವರು, ‘ಸ್ವಾಂತಂತ್ರ್ಯ ಹೋರಾಟಕ್ಕೆ ನೆಹರೂ ಕೊಡುಗೆ ಏನಿಲ್ಲ’ ಎಂದು ಮೂರ್ಖನಂತೆ ಮಾತಾಡುತ್ತಾರೆ. ಹಾಗಾದರೆ ಮೋದಿಯವರ ಆದರ್ಶಗಳಾದ ಹೆಡಗೆವಾರ್, ಸಾವರ್ಕರ್, ಗೋಳ್ವಾಲ್ಕರ್-ಈ ತರಿವಳಿಗಳ ಕೊಡುಗೆ ಏನು? ಇವರು ಪುಟ್ಟಾಪೂರಾ ಬ್ರಿಟಿಷರ ಚೇಲಾಗಳಂತೆ ವರ್ತಿಸಿದ್ದಕ್ಕೆ ಇತಿಹಾಸದಲ್ಲಿ ದಾಖಲೆಗಳಿವೆ. ಅದಿರಲಿ, ಇವರ ಕುರಿತು ಮೋದಿ ಸಾಹೇಬರೇಕೆ ಮಾತೇ ಆಡಲ್ಲ? ಈ ತ್ರಿವಳಿಗಳನ್ನು ಆರೆಸ್ಸೆಸ್ ಆರಾಧಿಸುತ್ತದೆ, ಮೋದಿಗೂ ಕೂಡ ಈ ಮೂವರು ಆದರ್ಶರೇ. ಬಟ್, ಬಾಹ್ಯವಾಗಿ ಮೋದಿ ಎಂದೂ ಇವರ ಪರ ಮಾತಾಡುತ್ತಿಲ್ಲ. ಮಾತಾಡುವ ಧಮ್ಮೂ ಇಲ್ಲ. ಯಾಕೆಂದರೆ ಈ ಮೂವರೂ ಮೋದಿಯಷ್ಟೇ ದೇಶದ್ರೋಹಿಗಳಾಗಿದ್ದರು!

ಹೀಗಾಗಿ ಐದು ವರ್ಷಗಳಲ್ಲಿ ನೀವೇನು ಮಾಡಿದಿರಾ ಎಂಬ ಪ್ರಶ್ನೆಗೆ ಉತ್ತರಿಸುವ ಯೋಗ್ಯತೆಯನ್ನೇ ಕಳೆದುಕೊಂಡಿರುವ ಪ್ರಧಾನಿ, ನೆಹರೂ ಈ ದೇಶಕ್ಕೆ ಏನು ಮಾಡಿದರು, ಕಾಂಗ್ರೆಸ್ ಈ ದೇಶಕ್ಕೆ ಏನು ಮಾಡಿತು ಎಂದು ವಿಷಯಾಂತರ ಮಾಡುತ್ತಿದ್ದಾರೆ. ನೆಹರು ವ್ಯಕ್ತಿತ್ವವನ್ನು ಮಸುಕಾಗಿಸುವ ಉದ್ದೇಶದಿಂದಲೇ ಹಲವಾರು ಮಿಥ್ಯಗಳನ್ನು, ಮತ್ತೆ ಕೆಲವು ತಪ್ಪು ವಿಶ್ಲೇಷಣೆಗಳನ್ನು ಮಾಡಲಾಗುತ್ತಿದೆ.

ಸ್ವಾತಂತ್ರ್ಯ ಹೋರಾಟದಲ್ಲಿ ನೆಹರು ಪಾಲು ಏನಿಲ್ಲ ಎಂಬುದು ತೀರಾ ಬಾಲಿಶತನದ ಹೇಳಿಕೆಯಷ್ಟೇ. 1921ರಿಂದ 1945ರ ಅವಧಿಯಲ್ಲಿ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡ ಕಾರಣಕ್ಕೆ ನೆಹರು 9 ಸಲ ಜೈಲಿಗೆ ತಳ್ಳಲ್ಪಡುತ್ತಾರೆ. 12 ದಿನಗಳಿಂದ ಹಿಡಿದು, 1041ಗಳ ಅವಧಿಯ ಜೈಲು ಶಿಕ್ಷೆ ಅನುಭವಿಸಿದರು. ಒಟ್ಟು 3,259 ದಿನಗಳನ್ನು ನೆಹರು ಜೈಲಿನಲ್ಲಿ ಕಳೆದರು. ಅಂದರೆ ತಮ್ಮ ಜೀವನದ ಒಂಭತ್ತು ವರ್ಷಗಳಷ್ಟು ಅವಧಿಯನ್ನು ನೆಹರು ಜೈಲಿನಲ್ಲೇ ಕಳೆದರು. ಜೈಲು ಶಿಕ್ಷೆಯನ್ನು ನೆಹರು ತಮ್ಮ ಓದಿಗೆ ಬಳಸಿಕೊಂಡರು. ಸಾಕಷ್ಟು ವೈವಿಧ್ಯಮಯ ಪುಸ್ತಕಗಳನ್ನು ಓದುತ್ತ ನಿಜವಾದ ಭಾರತದ ರೂಪುರೇಷೆ ಹೇಗಿರಬೇಕೆಂಬುದನ್ನು ಅರಿಯುತ್ತ ಹೋದರು. ಫೆಬ್ರುವರಿ 1934 ಮತ್ತು ಸೆಪ್ಟೆಂಬರ್ 1935- ಈ ಅವಧಿಯಲ್ಲಿ ನೆಹರು 188 ಪುಸ್ತಕಗಳನ್ನು ಜೈಲಿನಲ್ಲಿ ಓದಿದ್ದರು.

ಆದರೆ ಸಂಘ ಪರಿವಾರದ ಕೇಂದ್ರಸ್ಥಾನದಲ್ಲಿರುವ ಮತ್ತು ಇಡೀ ಸಂಘ ಪರಿವಾರವನ್ನು ನಿರ್ದೇಶಿಸುವ, ನಿಯಂತ್ರಿಸುವ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮಾತ್ರ ಸ್ವಾತಂತ್ರ್ಯ ಚಳವಳಿಯಿಂದ ದೂರ ಉಳಿದಿದ್ದಷ್ಟೇ ಅಲ್ಲ, ಅದು ಬ್ರಿಟಿಷರ ಪರವಾದ ನಿಲುವುಗಳನ್ನು ಹೊಂದಿತ್ತು. ಅದರ ನಾಯಕ ಕೇಶವ ಹೆಡಗೆವಾರ್ ಸ್ವಾತಂತ್ರ್ಯ ಚಳುವಳಿಯಿಂದ ದೂರ ಇರುವಂತೆ ತಮ್ಮ ಕಾರ್ಯಕರ್ತರಿಗೆ ಸೂಚಿಸಿದ್ದರು. ಹಿಂದೂತ್ವದ ಇನ್ನೊಬ್ಬ ನಾಯಕ ಸಾವರ್ಕರ್ ಆರಂಭದಲ್ಲಿ ಬ್ರಿಟಿಷರ ವಿರುದ್ಧ ಹೋರಾಡಿ, ಅಂಡಮಾನ್ ಜೈಲು ಸೇರಿದ್ದು ನಿಜ. ಹಾಗೆಯೇ ಬ್ರಿಟಿಷರೊಂದಿಗೆ ರಾಜಿಯಾಗಿ ಶಿಕ್ಷೆಯಿಂದ ಮುಕ್ತಿ ಪಡೆದಿದ್ದೂ ನಿಜ.

ಸ್ವಾತಂತ್ರ್ಯ ಚಳುವಳಿಯಿಂದ ದೂರವೇ ಉಳಿದ ಸಂಘಟನೆಯಿಂದ ರೂಪುಗೊಂಡ ನರೇಂದ್ರ ಮೋದಿಯವರು, ಸುಮಾರು 9 ವರ್ಷಗಳಷ್ಟು ಕಾಲ ಜೈಲಿನಲ್ಲಿ ಕಳೆದ ನೆಹರುರ ಹೋರಾಟದ ಪಾತ್ರವನ್ನು ಕಡೆಗಣಿಸಿ ಮಾತಾಡುತ್ತಿರುವುದೇ ಹಾಸ್ಯಾಸ್ಪದ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...