Homeಅಂಕಣಗಳುಸ್ವಾತಂತ್ರ್ಯ ಸಿಗಲು ನೆಹರು ಕೊಡುಗೆಯೇ ಇಲ್ಲವೇ ಮೋದೀಜಿ?

ಸ್ವಾತಂತ್ರ್ಯ ಸಿಗಲು ನೆಹರು ಕೊಡುಗೆಯೇ ಇಲ್ಲವೇ ಮೋದೀಜಿ?

- Advertisement -
- Advertisement -

ಮಿಥ್ಯ: ಸ್ವಾತಂತ್ರಯ ಸಿಗಲು ನೆಹರೂ ಕೊಡುಗೆ ಏನಿಲ್ಲ ಎಂದು ಪ್ರಧಾನಿ ಮೋದಿ ಸಂಸತ್ತಿನಲ್ಲಿ ಹೇಳಿದ್ದರು. ಬಿಜೆಪಿಯ ಐಟಿ ಸೆಲ್ ಕೂಡ ನೆಹರು ಕುರಿತು ಸಾಕಷ್ಟು ಫೇಕ್ ಸ್ಟೋರಿಗಳನ್ನು ಹರಡುತ್ತಲೇ ಬಂದಿದೆ.

ಸತ್ಯ: ಇವತ್ತು ಖರೀದಿಸಿದ ಮಾಧ್ಯಮಗಳ ಮೂಲಕ ಪ್ರಧಾನಿ ನರೇಂದ್ರ ಮೋದಿಯವರು, ಜವಾಹರಲಾಲ್ ನೆಹರೂ ಕುರಿತು ಏನೆಲ್ಲ ಸುಳ್ಳುಗಳನ್ನು ಹಬ್ಬಿಸಲು ಯತ್ನಿಸುತ್ತಿದ್ದರೂ, ನೆಹರೂ ಕೊಡುಗೆ ಈ ದೇಶಕ್ಕೆ ಅಪಾರ ಎಂಬುದನ್ನು ಅವರಿಂದ ಮುಚ್ಚಿಡಲಾಗುತ್ತಿಲ್ಲ. 1964ರಲ್ಲಿ ನೆಹರೂ ಮಡಿದಾಗ ‘ನ್ಯೂಯಾರ್ಕ್ ಟೈಮ್ಸ್’ ಪತ್ರಿಕೆಯು ‘ಆಧುನಿಕ ಭಾರತದ ನಿಮ್ರಾತೃ’ ಎಂದು ಬಣ್ಣಿಸುತ್ತದೆ. ‘ದಿ ಎಕನಾಮಿಸ್ಟ್’ ಪತ್ರಿಕೆಯು ‘ನೆಹರೂ ಇಲ್ಲದ ಜಗತ್ತು’ ಎಂಬ ಕವರ್ಸ್ಟೋರಿಯನ್ನು ಪ್ರಕಟಿಸುತ್ತದೆ. ಆ ಹೊತ್ತಿಗಾಗಲೇ ನೆಹರೂ ತೃತೀಯ ರಾಷ್ಟ್ರಗಳಲ್ಲಿ ಹೊಸ ಭರವಸೆ ಮೂಡಿಸಿದ್ದರು.

ಸಂಸತ್ತಿನಲ್ಲಿ ಇಂತಹ ನೆಹರೂ ಕುರಿತು ಮಾತನಾಡುವ ನಮ್ಮ ದಿ ಗ್ರೇಟ್ ಪ್ರಧಾನ ಮಂತ್ರಿಯವರು, ‘ಸ್ವಾಂತಂತ್ರ್ಯ ಹೋರಾಟಕ್ಕೆ ನೆಹರೂ ಕೊಡುಗೆ ಏನಿಲ್ಲ’ ಎಂದು ಮೂರ್ಖನಂತೆ ಮಾತಾಡುತ್ತಾರೆ. ಹಾಗಾದರೆ ಮೋದಿಯವರ ಆದರ್ಶಗಳಾದ ಹೆಡಗೆವಾರ್, ಸಾವರ್ಕರ್, ಗೋಳ್ವಾಲ್ಕರ್-ಈ ತರಿವಳಿಗಳ ಕೊಡುಗೆ ಏನು? ಇವರು ಪುಟ್ಟಾಪೂರಾ ಬ್ರಿಟಿಷರ ಚೇಲಾಗಳಂತೆ ವರ್ತಿಸಿದ್ದಕ್ಕೆ ಇತಿಹಾಸದಲ್ಲಿ ದಾಖಲೆಗಳಿವೆ. ಅದಿರಲಿ, ಇವರ ಕುರಿತು ಮೋದಿ ಸಾಹೇಬರೇಕೆ ಮಾತೇ ಆಡಲ್ಲ? ಈ ತ್ರಿವಳಿಗಳನ್ನು ಆರೆಸ್ಸೆಸ್ ಆರಾಧಿಸುತ್ತದೆ, ಮೋದಿಗೂ ಕೂಡ ಈ ಮೂವರು ಆದರ್ಶರೇ. ಬಟ್, ಬಾಹ್ಯವಾಗಿ ಮೋದಿ ಎಂದೂ ಇವರ ಪರ ಮಾತಾಡುತ್ತಿಲ್ಲ. ಮಾತಾಡುವ ಧಮ್ಮೂ ಇಲ್ಲ. ಯಾಕೆಂದರೆ ಈ ಮೂವರೂ ಮೋದಿಯಷ್ಟೇ ದೇಶದ್ರೋಹಿಗಳಾಗಿದ್ದರು!

ಹೀಗಾಗಿ ಐದು ವರ್ಷಗಳಲ್ಲಿ ನೀವೇನು ಮಾಡಿದಿರಾ ಎಂಬ ಪ್ರಶ್ನೆಗೆ ಉತ್ತರಿಸುವ ಯೋಗ್ಯತೆಯನ್ನೇ ಕಳೆದುಕೊಂಡಿರುವ ಪ್ರಧಾನಿ, ನೆಹರೂ ಈ ದೇಶಕ್ಕೆ ಏನು ಮಾಡಿದರು, ಕಾಂಗ್ರೆಸ್ ಈ ದೇಶಕ್ಕೆ ಏನು ಮಾಡಿತು ಎಂದು ವಿಷಯಾಂತರ ಮಾಡುತ್ತಿದ್ದಾರೆ. ನೆಹರು ವ್ಯಕ್ತಿತ್ವವನ್ನು ಮಸುಕಾಗಿಸುವ ಉದ್ದೇಶದಿಂದಲೇ ಹಲವಾರು ಮಿಥ್ಯಗಳನ್ನು, ಮತ್ತೆ ಕೆಲವು ತಪ್ಪು ವಿಶ್ಲೇಷಣೆಗಳನ್ನು ಮಾಡಲಾಗುತ್ತಿದೆ.

ಸ್ವಾತಂತ್ರ್ಯ ಹೋರಾಟದಲ್ಲಿ ನೆಹರು ಪಾಲು ಏನಿಲ್ಲ ಎಂಬುದು ತೀರಾ ಬಾಲಿಶತನದ ಹೇಳಿಕೆಯಷ್ಟೇ. 1921ರಿಂದ 1945ರ ಅವಧಿಯಲ್ಲಿ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡ ಕಾರಣಕ್ಕೆ ನೆಹರು 9 ಸಲ ಜೈಲಿಗೆ ತಳ್ಳಲ್ಪಡುತ್ತಾರೆ. 12 ದಿನಗಳಿಂದ ಹಿಡಿದು, 1041ಗಳ ಅವಧಿಯ ಜೈಲು ಶಿಕ್ಷೆ ಅನುಭವಿಸಿದರು. ಒಟ್ಟು 3,259 ದಿನಗಳನ್ನು ನೆಹರು ಜೈಲಿನಲ್ಲಿ ಕಳೆದರು. ಅಂದರೆ ತಮ್ಮ ಜೀವನದ ಒಂಭತ್ತು ವರ್ಷಗಳಷ್ಟು ಅವಧಿಯನ್ನು ನೆಹರು ಜೈಲಿನಲ್ಲೇ ಕಳೆದರು. ಜೈಲು ಶಿಕ್ಷೆಯನ್ನು ನೆಹರು ತಮ್ಮ ಓದಿಗೆ ಬಳಸಿಕೊಂಡರು. ಸಾಕಷ್ಟು ವೈವಿಧ್ಯಮಯ ಪುಸ್ತಕಗಳನ್ನು ಓದುತ್ತ ನಿಜವಾದ ಭಾರತದ ರೂಪುರೇಷೆ ಹೇಗಿರಬೇಕೆಂಬುದನ್ನು ಅರಿಯುತ್ತ ಹೋದರು. ಫೆಬ್ರುವರಿ 1934 ಮತ್ತು ಸೆಪ್ಟೆಂಬರ್ 1935- ಈ ಅವಧಿಯಲ್ಲಿ ನೆಹರು 188 ಪುಸ್ತಕಗಳನ್ನು ಜೈಲಿನಲ್ಲಿ ಓದಿದ್ದರು.

ಆದರೆ ಸಂಘ ಪರಿವಾರದ ಕೇಂದ್ರಸ್ಥಾನದಲ್ಲಿರುವ ಮತ್ತು ಇಡೀ ಸಂಘ ಪರಿವಾರವನ್ನು ನಿರ್ದೇಶಿಸುವ, ನಿಯಂತ್ರಿಸುವ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮಾತ್ರ ಸ್ವಾತಂತ್ರ್ಯ ಚಳವಳಿಯಿಂದ ದೂರ ಉಳಿದಿದ್ದಷ್ಟೇ ಅಲ್ಲ, ಅದು ಬ್ರಿಟಿಷರ ಪರವಾದ ನಿಲುವುಗಳನ್ನು ಹೊಂದಿತ್ತು. ಅದರ ನಾಯಕ ಕೇಶವ ಹೆಡಗೆವಾರ್ ಸ್ವಾತಂತ್ರ್ಯ ಚಳುವಳಿಯಿಂದ ದೂರ ಇರುವಂತೆ ತಮ್ಮ ಕಾರ್ಯಕರ್ತರಿಗೆ ಸೂಚಿಸಿದ್ದರು. ಹಿಂದೂತ್ವದ ಇನ್ನೊಬ್ಬ ನಾಯಕ ಸಾವರ್ಕರ್ ಆರಂಭದಲ್ಲಿ ಬ್ರಿಟಿಷರ ವಿರುದ್ಧ ಹೋರಾಡಿ, ಅಂಡಮಾನ್ ಜೈಲು ಸೇರಿದ್ದು ನಿಜ. ಹಾಗೆಯೇ ಬ್ರಿಟಿಷರೊಂದಿಗೆ ರಾಜಿಯಾಗಿ ಶಿಕ್ಷೆಯಿಂದ ಮುಕ್ತಿ ಪಡೆದಿದ್ದೂ ನಿಜ.

ಸ್ವಾತಂತ್ರ್ಯ ಚಳುವಳಿಯಿಂದ ದೂರವೇ ಉಳಿದ ಸಂಘಟನೆಯಿಂದ ರೂಪುಗೊಂಡ ನರೇಂದ್ರ ಮೋದಿಯವರು, ಸುಮಾರು 9 ವರ್ಷಗಳಷ್ಟು ಕಾಲ ಜೈಲಿನಲ್ಲಿ ಕಳೆದ ನೆಹರುರ ಹೋರಾಟದ ಪಾತ್ರವನ್ನು ಕಡೆಗಣಿಸಿ ಮಾತಾಡುತ್ತಿರುವುದೇ ಹಾಸ್ಯಾಸ್ಪದ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...