Homeಅಂಕಣಗಳುಸ್ವಾತಂತ್ರ್ಯ ಸಿಗಲು ನೆಹರು ಕೊಡುಗೆಯೇ ಇಲ್ಲವೇ ಮೋದೀಜಿ?

ಸ್ವಾತಂತ್ರ್ಯ ಸಿಗಲು ನೆಹರು ಕೊಡುಗೆಯೇ ಇಲ್ಲವೇ ಮೋದೀಜಿ?

- Advertisement -
- Advertisement -

ಮಿಥ್ಯ: ಸ್ವಾತಂತ್ರಯ ಸಿಗಲು ನೆಹರೂ ಕೊಡುಗೆ ಏನಿಲ್ಲ ಎಂದು ಪ್ರಧಾನಿ ಮೋದಿ ಸಂಸತ್ತಿನಲ್ಲಿ ಹೇಳಿದ್ದರು. ಬಿಜೆಪಿಯ ಐಟಿ ಸೆಲ್ ಕೂಡ ನೆಹರು ಕುರಿತು ಸಾಕಷ್ಟು ಫೇಕ್ ಸ್ಟೋರಿಗಳನ್ನು ಹರಡುತ್ತಲೇ ಬಂದಿದೆ.

ಸತ್ಯ: ಇವತ್ತು ಖರೀದಿಸಿದ ಮಾಧ್ಯಮಗಳ ಮೂಲಕ ಪ್ರಧಾನಿ ನರೇಂದ್ರ ಮೋದಿಯವರು, ಜವಾಹರಲಾಲ್ ನೆಹರೂ ಕುರಿತು ಏನೆಲ್ಲ ಸುಳ್ಳುಗಳನ್ನು ಹಬ್ಬಿಸಲು ಯತ್ನಿಸುತ್ತಿದ್ದರೂ, ನೆಹರೂ ಕೊಡುಗೆ ಈ ದೇಶಕ್ಕೆ ಅಪಾರ ಎಂಬುದನ್ನು ಅವರಿಂದ ಮುಚ್ಚಿಡಲಾಗುತ್ತಿಲ್ಲ. 1964ರಲ್ಲಿ ನೆಹರೂ ಮಡಿದಾಗ ‘ನ್ಯೂಯಾರ್ಕ್ ಟೈಮ್ಸ್’ ಪತ್ರಿಕೆಯು ‘ಆಧುನಿಕ ಭಾರತದ ನಿಮ್ರಾತೃ’ ಎಂದು ಬಣ್ಣಿಸುತ್ತದೆ. ‘ದಿ ಎಕನಾಮಿಸ್ಟ್’ ಪತ್ರಿಕೆಯು ‘ನೆಹರೂ ಇಲ್ಲದ ಜಗತ್ತು’ ಎಂಬ ಕವರ್ಸ್ಟೋರಿಯನ್ನು ಪ್ರಕಟಿಸುತ್ತದೆ. ಆ ಹೊತ್ತಿಗಾಗಲೇ ನೆಹರೂ ತೃತೀಯ ರಾಷ್ಟ್ರಗಳಲ್ಲಿ ಹೊಸ ಭರವಸೆ ಮೂಡಿಸಿದ್ದರು.

ಸಂಸತ್ತಿನಲ್ಲಿ ಇಂತಹ ನೆಹರೂ ಕುರಿತು ಮಾತನಾಡುವ ನಮ್ಮ ದಿ ಗ್ರೇಟ್ ಪ್ರಧಾನ ಮಂತ್ರಿಯವರು, ‘ಸ್ವಾಂತಂತ್ರ್ಯ ಹೋರಾಟಕ್ಕೆ ನೆಹರೂ ಕೊಡುಗೆ ಏನಿಲ್ಲ’ ಎಂದು ಮೂರ್ಖನಂತೆ ಮಾತಾಡುತ್ತಾರೆ. ಹಾಗಾದರೆ ಮೋದಿಯವರ ಆದರ್ಶಗಳಾದ ಹೆಡಗೆವಾರ್, ಸಾವರ್ಕರ್, ಗೋಳ್ವಾಲ್ಕರ್-ಈ ತರಿವಳಿಗಳ ಕೊಡುಗೆ ಏನು? ಇವರು ಪುಟ್ಟಾಪೂರಾ ಬ್ರಿಟಿಷರ ಚೇಲಾಗಳಂತೆ ವರ್ತಿಸಿದ್ದಕ್ಕೆ ಇತಿಹಾಸದಲ್ಲಿ ದಾಖಲೆಗಳಿವೆ. ಅದಿರಲಿ, ಇವರ ಕುರಿತು ಮೋದಿ ಸಾಹೇಬರೇಕೆ ಮಾತೇ ಆಡಲ್ಲ? ಈ ತ್ರಿವಳಿಗಳನ್ನು ಆರೆಸ್ಸೆಸ್ ಆರಾಧಿಸುತ್ತದೆ, ಮೋದಿಗೂ ಕೂಡ ಈ ಮೂವರು ಆದರ್ಶರೇ. ಬಟ್, ಬಾಹ್ಯವಾಗಿ ಮೋದಿ ಎಂದೂ ಇವರ ಪರ ಮಾತಾಡುತ್ತಿಲ್ಲ. ಮಾತಾಡುವ ಧಮ್ಮೂ ಇಲ್ಲ. ಯಾಕೆಂದರೆ ಈ ಮೂವರೂ ಮೋದಿಯಷ್ಟೇ ದೇಶದ್ರೋಹಿಗಳಾಗಿದ್ದರು!

ಹೀಗಾಗಿ ಐದು ವರ್ಷಗಳಲ್ಲಿ ನೀವೇನು ಮಾಡಿದಿರಾ ಎಂಬ ಪ್ರಶ್ನೆಗೆ ಉತ್ತರಿಸುವ ಯೋಗ್ಯತೆಯನ್ನೇ ಕಳೆದುಕೊಂಡಿರುವ ಪ್ರಧಾನಿ, ನೆಹರೂ ಈ ದೇಶಕ್ಕೆ ಏನು ಮಾಡಿದರು, ಕಾಂಗ್ರೆಸ್ ಈ ದೇಶಕ್ಕೆ ಏನು ಮಾಡಿತು ಎಂದು ವಿಷಯಾಂತರ ಮಾಡುತ್ತಿದ್ದಾರೆ. ನೆಹರು ವ್ಯಕ್ತಿತ್ವವನ್ನು ಮಸುಕಾಗಿಸುವ ಉದ್ದೇಶದಿಂದಲೇ ಹಲವಾರು ಮಿಥ್ಯಗಳನ್ನು, ಮತ್ತೆ ಕೆಲವು ತಪ್ಪು ವಿಶ್ಲೇಷಣೆಗಳನ್ನು ಮಾಡಲಾಗುತ್ತಿದೆ.

ಸ್ವಾತಂತ್ರ್ಯ ಹೋರಾಟದಲ್ಲಿ ನೆಹರು ಪಾಲು ಏನಿಲ್ಲ ಎಂಬುದು ತೀರಾ ಬಾಲಿಶತನದ ಹೇಳಿಕೆಯಷ್ಟೇ. 1921ರಿಂದ 1945ರ ಅವಧಿಯಲ್ಲಿ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡ ಕಾರಣಕ್ಕೆ ನೆಹರು 9 ಸಲ ಜೈಲಿಗೆ ತಳ್ಳಲ್ಪಡುತ್ತಾರೆ. 12 ದಿನಗಳಿಂದ ಹಿಡಿದು, 1041ಗಳ ಅವಧಿಯ ಜೈಲು ಶಿಕ್ಷೆ ಅನುಭವಿಸಿದರು. ಒಟ್ಟು 3,259 ದಿನಗಳನ್ನು ನೆಹರು ಜೈಲಿನಲ್ಲಿ ಕಳೆದರು. ಅಂದರೆ ತಮ್ಮ ಜೀವನದ ಒಂಭತ್ತು ವರ್ಷಗಳಷ್ಟು ಅವಧಿಯನ್ನು ನೆಹರು ಜೈಲಿನಲ್ಲೇ ಕಳೆದರು. ಜೈಲು ಶಿಕ್ಷೆಯನ್ನು ನೆಹರು ತಮ್ಮ ಓದಿಗೆ ಬಳಸಿಕೊಂಡರು. ಸಾಕಷ್ಟು ವೈವಿಧ್ಯಮಯ ಪುಸ್ತಕಗಳನ್ನು ಓದುತ್ತ ನಿಜವಾದ ಭಾರತದ ರೂಪುರೇಷೆ ಹೇಗಿರಬೇಕೆಂಬುದನ್ನು ಅರಿಯುತ್ತ ಹೋದರು. ಫೆಬ್ರುವರಿ 1934 ಮತ್ತು ಸೆಪ್ಟೆಂಬರ್ 1935- ಈ ಅವಧಿಯಲ್ಲಿ ನೆಹರು 188 ಪುಸ್ತಕಗಳನ್ನು ಜೈಲಿನಲ್ಲಿ ಓದಿದ್ದರು.

ಆದರೆ ಸಂಘ ಪರಿವಾರದ ಕೇಂದ್ರಸ್ಥಾನದಲ್ಲಿರುವ ಮತ್ತು ಇಡೀ ಸಂಘ ಪರಿವಾರವನ್ನು ನಿರ್ದೇಶಿಸುವ, ನಿಯಂತ್ರಿಸುವ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮಾತ್ರ ಸ್ವಾತಂತ್ರ್ಯ ಚಳವಳಿಯಿಂದ ದೂರ ಉಳಿದಿದ್ದಷ್ಟೇ ಅಲ್ಲ, ಅದು ಬ್ರಿಟಿಷರ ಪರವಾದ ನಿಲುವುಗಳನ್ನು ಹೊಂದಿತ್ತು. ಅದರ ನಾಯಕ ಕೇಶವ ಹೆಡಗೆವಾರ್ ಸ್ವಾತಂತ್ರ್ಯ ಚಳುವಳಿಯಿಂದ ದೂರ ಇರುವಂತೆ ತಮ್ಮ ಕಾರ್ಯಕರ್ತರಿಗೆ ಸೂಚಿಸಿದ್ದರು. ಹಿಂದೂತ್ವದ ಇನ್ನೊಬ್ಬ ನಾಯಕ ಸಾವರ್ಕರ್ ಆರಂಭದಲ್ಲಿ ಬ್ರಿಟಿಷರ ವಿರುದ್ಧ ಹೋರಾಡಿ, ಅಂಡಮಾನ್ ಜೈಲು ಸೇರಿದ್ದು ನಿಜ. ಹಾಗೆಯೇ ಬ್ರಿಟಿಷರೊಂದಿಗೆ ರಾಜಿಯಾಗಿ ಶಿಕ್ಷೆಯಿಂದ ಮುಕ್ತಿ ಪಡೆದಿದ್ದೂ ನಿಜ.

ಸ್ವಾತಂತ್ರ್ಯ ಚಳುವಳಿಯಿಂದ ದೂರವೇ ಉಳಿದ ಸಂಘಟನೆಯಿಂದ ರೂಪುಗೊಂಡ ನರೇಂದ್ರ ಮೋದಿಯವರು, ಸುಮಾರು 9 ವರ್ಷಗಳಷ್ಟು ಕಾಲ ಜೈಲಿನಲ್ಲಿ ಕಳೆದ ನೆಹರುರ ಹೋರಾಟದ ಪಾತ್ರವನ್ನು ಕಡೆಗಣಿಸಿ ಮಾತಾಡುತ್ತಿರುವುದೇ ಹಾಸ್ಯಾಸ್ಪದ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...